Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:36 - ಕನ್ನಡ ಸಮಕಾಲಿಕ ಅನುವಾದ

36 “ದಾವೀದನು ತನ್ನ ಜೀವಮಾನದಲ್ಲಿ ದೇವರ ಉದ್ದೇಶಕ್ಕೆ ಅನುಗುಣವಾಗಿ ಸೇವೆಮಾಡಿ ಮರಣಹೊಂದಿದನು. ಅವನ ಪಿತೃಗಳೊಂದಿಗೆ ಅವನನ್ನು ಸೇರಿಸಿದರು. ಅವನ ದೇಹ ಕೊಳೆತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 “ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 “ದಾವೀದನು ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕೆ ತಲೆಬಾಗಿ ಬಾಳಿದನು; ಸತ್ತಾಗ ಅವನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ದಾವೀದನಾದರೋ ತನ್ನ ಸಕಾಲದವರಿಗೆ ಸೇವೆಮಾಡಿದನಂತರ ದೈವಸಂಕಲ್ಪದಿಂದ ನಿದ್ದೆಹೋಗಿ ತನ್ನ ಪಿತೃಗಳ ಬಳಿಯಲ್ಲಿ ಇಡಲ್ಪಟ್ಟು ಕೊಳೆಯುವ ಅವಸ್ಥೆಯನ್ನು ಅನುಭವಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 “ದಾವೀದನು ತನ್ನ ಜೀವಮಾನಕಾಲದಲ್ಲಿ ದೇವರ ಚಿತ್ತಕ್ಕನುಸಾರವಾಗಿ ಬಾಳಿದನು. ಬಳಿಕ ಅವನು ಸತ್ತುಹೋದನು. ದಾವೀದನನ್ನು ಅವನ ಪಿತೃಗಳೊಂದಿಗೆ ಸಮಾಧಿಮಾಡಲಾಯಿತು. ಅವನ ದೇಹ ಸಮಾಧಿಯಲ್ಲಿ ಕೊಳೆತುಹೋಯಿತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ದಾವಿದಾನ್ ಅಪ್ಲ್ಯಾ ಜಿವ್ ಹೊತ್ತ್ಯಾ ಯೆಳಾರ್ ಫುರಾ ದೆವಾಚ್ಯಾ ಇಚ್ಚ್ಯಾಸಾರ್ಕೆ ಜಿವನ್ ಕರ್‍ಲ್ಯಾನ್, ತೆಚ್ಯಾ ಮಾನಾ ತೊ ಮರುನ್ ಗೆಲೊ ತೆಕಾ ತೆಚ್ಯಾ ಪುರ್ವಜಾಂಚ್ಯಾ ವಾಂಗ್ಡಾ ಮಾಟಿ ಕರುನ್ ಹೊಲೆ ,ತೆಜೆ ಆಂಗ್ ಸಮಾದಿತ್ ಕುಸುನ್ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:36
33 ತಿಳಿವುಗಳ ಹೋಲಿಕೆ  

“ಪ್ರಿಯರೇ, ಮೂಲಪಿತೃ ದಾವೀದನು ಮರಣಹೊಂದಿದನು; ಸಮಾಧಿಮಾಡಲಾಯಿತು. ಇಂದಿಗೂ ಅವನ ಸಮಾಧಿ ನಮ್ಮಲ್ಲಿದೆ ಎಂಬುದನ್ನು ನಾನು ನಿಮಗೆ ಧೈರ್ಯದಿಂದ ಹೇಳಬಲ್ಲೆ.


ಹೀಗೆಯೇ ದಾವೀದನು ಮರಣಹೊಂದಿ ತನ್ನ ಪಿತೃಗಳ ಜೊತೆ ಸೇರಿದನು. ದಾವೀದನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು.


ದೇವರು ಸೌಲನನ್ನು ಅರಸುತನದಿಂದ ತೆಗೆದುಹಾಕಿ, ದೇವರು ದಾವೀದನನ್ನು ಅವರ ಅರಸನನ್ನಾಗಿ ಎಬ್ಬಿಸಿದರು. ಇವನನ್ನು ಕುರಿತು, ‘ಇಷಯನ ಮಗ ದಾವೀದನು ನನಗೆ ಸಿಕ್ಕಿದನು. ನನ್ನ ಹೃದಯಕ್ಕೆ ತಕ್ಕಂಥ ಮನುಷ್ಯನು; ಇವನು ನಾನು ಅಪೇಕ್ಷಿಸುವುದೆಲ್ಲವನ್ನೂ ಮಾಡುವನು,’ ಎಂದು ದೇವರು ತಾವೇ ಸಾಕ್ಷಿಕೊಟ್ಟರು.


ನಿನ್ನ ಆಯುಷ್ಕಾಲವು ಮುಗಿದ ಮೇಲೆ ನೀನು ನಿನ್ನ ಪಿತೃಗಳ ಜೊತೆ ವಿಶ್ರಮಿಸುವಾಗ, ನಾನು ನಿನ್ನ ಸಂತತಿಯಲ್ಲಿ ಒಬ್ಬನನ್ನು ನಿನ್ನ ಉತ್ತರಾಧಿಕಾರಿಯನ್ನಾಗಿ ನೇಮಿಸಿ, ಅವನ ರಾಜ್ಯವನ್ನು ಸ್ಥಿರಮಾಡುವೆನು.


ಹೀಗೆಯೇ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ ತನ್ನ ಸಮಸ್ತ ಜನರಿಗೂ ನೀತಿ ನ್ಯಾಯಗಳಿಂದ ನಡೆಸುತ್ತಿದ್ದನು.


ಅಲ್ಲದೆ, ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಟ್ಟು ನಿದ್ರೆ ಹೋದವರು ಸಹ ನಾಶವಾದರು.


ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚು ಮಂದಿ ಹಿಂಬಾಲಕರಿಗೆ ಕ್ರಿಸ್ತ ಯೇಸು ಕಾಣಿಸಿಕೊಂಡರು. ಅವರಲ್ಲಿ ಕೆಲವರು ಸತ್ತು ಹೋಗಿದ್ದರೂ ಬಹುಜನರು ಇಂದಿಗೂ ಬದುಕಿದ್ದಾರೆ.


ಯೇಸು, “ಆ ಕಲ್ಲನ್ನು ತೆಗೆದುಹಾಕಿರಿ,” ಎಂದರು. ಅದಕ್ಕೆ ಸತ್ತವನ ಸಹೋದರಿ ಮಾರ್ಥಳು ಯೇಸುವಿಗೆ, “ಸ್ವಾಮೀ, ಈಗ ದುರ್ವಾಸನೆ ಇರುವುದು. ಅವನು ಸತ್ತು ನಾಲ್ಕು ದಿನಗಳಾಗಿವೆ,” ಎಂದಳು.


ಅವರು ಕುರಿಗಳಂತೆ ಸಾಯಲು ನೇಮಕವಾಗಿದ್ದಾರೆ. ಮರಣವೇ ಅವರ ಕುರುಬ; ಅವರ ವೈಭವ ನಿವಾಸದಿಂದ ದೂರ ಸಮಾಧಿಯಲ್ಲಿರುವುದು ಅವರ ರೂಪ ಕ್ಷಯವಾಗುವುದು. ಆದರೆ ಯಥಾರ್ಥರು ಬೆಳಿಗ್ಗೆ ಅವರನ್ನು ಬಿಟ್ಟು ಸಾಗುತ್ತಿರುವರು.


ಮನುಷ್ಯರು ಮರಣ ನಾಶವನ್ನು ಕಾಣದೆ, ಶಾಶ್ವತವಾಗಿ ಬದುಕುವಂತೆ ಮಾಡಲು ಯಾರಿಗೂ ಸಾಧ್ಯವಿಲ್ಲ.


ಇವರಿಬ್ಬರೂ ಮಣ್ಣಿಗೆ ಸೇರುತ್ತಾರೆ; ಹುಳುಗಳು ಅವರನ್ನು ಮುತ್ತಿಕೊಳ್ಳುತ್ತವೆ.


ಸಮಾಧಿಗೆ, ‘ನೀನು ನನ್ನ ತಂದೆ’ ಎಂದೂ, ಹುಳಕ್ಕೆ, ‘ನನ್ನ ತಾಯಿ, ನನ್ನ ತಂಗಿ’ ಎಂದೂ ನಾನು ಕರೆಯುವುದಾದರೆ,


ಉಜ್ಜೀಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನು ಕುಷ್ಠರೋಗಿಯಾಗಿದ್ದರಿಂದ, ಅವರು ಅವನ ಶವವನ್ನು ರಾಜಕುಟುಂಬದ ಸ್ಮಶಾನ ಭೂಮಿಯ ಹತ್ತಿರದ ಹೊಲದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.


ಯೆಹೋಷಾಫಾಟನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಪೂರ್ವಜರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಆಗ ಅವನಿಗೆ ಬದಲಾಗಿ ಅವನ ಮಗನಾದ ಯೆಹೋರಾಮನು ಅರಸನಾದನು.


ರೆಹಬ್ಬಾಮನು ಮೃತನಾಗಿ ತನ್ನ ಪಿತೃಗಳ ಬಳಿ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಅಬೀಯನು ಅವನಿಗೆ ಬದಲಾಗಿ ಅರಸನಾದನು.


ಸೊಲೊಮೋನನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ಅವನ ತಂದೆ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ರೆಹಬ್ಬಾಮನು ಅವನಿಗೆ ಬದಲಾಗಿ ಅರಸನಾದನು.


ನಿನ್ನ ಆಯುಷ್ಕಾಲವು ಮುಗಿದ ಮೇಲೆ, ನೀನು ನಿನ್ನ ಪಿತೃಗಳ ಬಳಿಗೆ ಹೋಗಿ ವಿಶ್ರಮಿಸುವಾಗ, ನಾನು ನಿನ್ನ ಸಂತತಿಯಲ್ಲಿ ಒಬ್ಬನನ್ನು ನಿನ್ನ ಉತ್ತರಾಧಿಕಾರಿಯನ್ನಾಗಿ ನೇಮಿಸಿ, ಅವನ ರಾಜ್ಯವನ್ನು ಸ್ಥಿರಮಾಡುವೆನು.


ನೀನು ಪುನಃ ಮಣ್ಣಿಗೆ ಸೇರುವ ತನಕ, ಬೆವರಿಡುತ್ತಾ ಆಹಾರವನ್ನು ಉಣ್ಣುವೆ. ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ. ನೀನು ಪುನಃ ಮಣ್ಣಿಗೆ ಸೇರತಕ್ಕವನು.”


ಪ್ರಿಯರೇ, ನೀವು ನಿರೀಕ್ಷೆಯಿಲ್ಲದೆ ಗೋಳಾಡುವವರಂತೆ ಮರಣ ಹೊಂದಿದ ವಿಶ್ವಾಸಿಗಳ ಬಗ್ಗೆ ಅಜ್ಞಾನಿಗಳಾಗಿರಬಾರದೆಂದು ನಾವು ಅಪೇಕ್ಷಿಸುತ್ತೇವೆ.


ಏಕೆಂದರೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ಬೋಧಿಸುವುದರಲ್ಲಿ ನಾನು ಹಿಂಜರಿಯಲಿಲ್ಲ.


ಅನಂತರ ಮೊಣಕಾಲೂರಿ, “ಕರ್ತ ಯೇಸುವೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡ,” ಎಂದು ಗಟ್ಟಿಯಾಗಿ ಕೂಗಿದನು. ಇದನ್ನು ಹೇಳಿದ ಮೇಲೆ, ಪ್ರಾಣಬಿಟ್ಟನು.


ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ, ನೀನು ದಳಪತಿಯಾಗಿ ಇಸ್ರಾಯೇಲನ್ನು ಹೊರಗೆ ನಡೆಸುವವನಾಗಿಯೂ, ಒಳಗೆ ತರುವವನಾಗಿಯೂ ಇದ್ದವನು. ಆದ್ದರಿಂದ ನಿನ್ನ ದೇವರಾದ ಯೆಹೋವ ದೇವರು ನಿನಗೆ, ‘ನೀನು ನನ್ನ ಜನರಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವೆ,’ ಎಂದು ವಾಗ್ದಾನ ಮಾಡಿದ್ದು ನಿಮ್ಮನ್ನು ಕುರಿತೇ,” ಎಂದು ಹೇಳಿ ವಂದಿಸಿದರು.


ಅವನು ದೀರ್ಘಾಯುಷ್ಯದಿಂದಲೂ, ಐಶ್ವರ್ಯದಿಂದಲೂ, ಘನದಿಂದಲೂ ಕೂಡಿದವನಾಗಿ, ಒಳ್ಳೆಯ ಪ್ರಾಯದಲ್ಲಿ ಮರಣಹೊಂದಿದನು. ಅವನ ಮಗ ಸೊಲೊಮೋನನು ಅವನಿಗೆ ಬದಲಾಗಿ ಅರಸನಾದನು.


ಸೌಲನು ಸ್ತೆಫನನ ಕೊಲೆಗೆ ಸಮ್ಮತಿಸಿದ್ದನು. ಆ ದಿನವೇ ಯೆರೂಸಲೇಮಿನ ಸಭೆಗೆ ವಿರೋಧವಾಗಿ ಮಹಾಹಿಂಸೆ ಪ್ರಾರಂಭವಾಯಿತು, ಅಪೊಸ್ತಲರನ್ನು ಬಿಟ್ಟು ಉಳಿದವರೆಲ್ಲರೂ ಯೂದಾಯ ಮತ್ತು ಸಮಾರ್ಯ ಪ್ರಾಂತಗಳಿಗೆ ಚದರಿಹೋದರು.


ಐದು ಚಿನ್ನದ ನಾಣ್ಯಗಳನ್ನು ಹೊಂದಿದವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ಚಿನ್ನದ ನಾಣ್ಯಗಳನ್ನು ಸಂಪಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು