Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:6 - ಕನ್ನಡ ಸಮಕಾಲಿಕ ಅನುವಾದ

6 ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣಮಾಡಿ ಪಾಫೋಸ್ ಎಂಬಲ್ಲಿಗೆ ಬಂದರು. ಅಲ್ಲಿ ಮಂತ್ರವಾದಿಯೂ ಸುಳ್ಳುಪ್ರವಾದಿಯೂ ಆಗಿದ್ದ “ಬಾರ್ ಯೇಸು” ಎಂಬ ಹೆಸರಿನ ಒಬ್ಬ ಯೆಹೂದ್ಯನನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ, ಮಂತ್ರವಾದಿಯೂ ಆಗಿದ್ದ ‘ಬಾರ್‍ಯೇಸು’ ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣಮಾಡುತ್ತಾ ಪಾಫೊಸ್ ಎಂಬ ಊರಿಗೆ ಹೋದರು. ಅಲ್ಲಿ ‘ಬಾರ್‍ಯೇಸು’ ಎಂಬ ಮಂತ್ರವಾದಿಯನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ ಮಂತ್ರವಾದಿಯೂ ಆಗಿದ್ದ ಬಾರ್‍‍ಯೇಸು ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣ ಮಾಡುತ್ತಾ ಪಾಫೋಸ್ ಎಂಬ ಊರಿಗೆ ಹೋದರು. ಮಂತ್ರತಂತ್ರಗಳನ್ನು ಮಾಡುತ್ತಿದ್ದ ಒಬ್ಬ ಯೆಹೂದ್ಯನನ್ನು ಅವರು ಪಾಫೋಸಿನಲ್ಲಿ ಕಂಡರು. ಅವನ ಹೆಸರು “ಬಾರ್ ಯೇಸು.” ಅವನೊಬ್ಬ ಸುಳ್ಳುಪ್ರವಾದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆನಿ ತ್ಯಾ ದ್ವಿಪಾತ್ ಫಿರುಂಗೆತ್ ಪಾಫೊಸ್ ಮನ್ತಲ್ಯಾ ಗಾಂವಾಕ್ ಜಾವ್ನ್ ಮೊಡಿ ಮಂತ್ರಾ ಕರ್‍ತಲ್ಯಾ ಜುದೆವಾಂಚೊ ಝುಟೊ ಪ್ರವಾದಿ ಹೊಲ್ಲೊ ಬಾರ್ ಜೆಜು ಮನ್ತಲ್ಯಾಕ್ ಬಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:6
24 ತಿಳಿವುಗಳ ಹೋಲಿಕೆ  

“ಕುರಿಯ ವೇಷಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆ. ಏಕೆಂದರೆ ಅವರು ಒಳಗೆ ಕ್ರೂರವಾದ ತೋಳಗಳಾಗಿದ್ದಾರೆ.


ಪ್ರಿಯ ಸ್ನೇಹಿತರೇ, ಅನೇಕ ಸುಳ್ಳು ಪ್ರವಾದಿಗಳು ಲೋಕದೊಳಗೆ ಹೋಗಿರುವುದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಅಂಥಾ ಜನರು ಸುಳ್ಳು ಅಪೊಸ್ತಲರು, ವಂಚಿಸುವ ವರ್ತಕರು, ಕ್ರಿಸ್ತ ಯೇಸುವಿನ ಅಪೊಸ್ತಲರೆಂದು ವೇಷ ಹಾಕಿಕೊಂಡವರೂ ಆಗಿದ್ದಾರೆ.


ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸು ತಮ್ಮ ಶಿಷ್ಯರೊಡನೆಯೂ ಅಸಂಖ್ಯಾತ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗ ಕುರುಡ ಬಾರ್ತಿಮಾಯನು ದಾರಿಯಲ್ಲಿ ಕುಳಿತುಕೊಂಡು ಭಿಕ್ಷೆಬೇಡುತ್ತಿದ್ದನು.


ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಯೇಸು ಅವನಿಗೆ, “ಯೋನನ ಮಗ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದನ್ನು ಪ್ರಕಟಿಸಿದ್ದು ಮಾನವರಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನು ನಿನಗೆ ಪ್ರಕಟಿಸಿದರು.


ಯಾವನಾದರೂ ಇನ್ನು ಪ್ರವಾದಿಸಿದರೆ, ಅವನ ಹೆತ್ತವರಾದ ತಂದೆತಾಯಿಗಳು ಅವನಿಗೆ, ‘ನೀನು ಬದುಕಬಾರದು, ಏಕೆಂದರೆ ಯೆಹೋವ ದೇವರ ಹೆಸರಿನಲ್ಲಿ ಸುಳ್ಳು ಹೇಳುತ್ತೀ,’ ಎಂದು ಹೇಳುವರು. ಅವನು ಪ್ರವಾದಿಸುವಾಗ ಅವನ ತಂದೆತಾಯಿಗಳು ಅವನನ್ನು ಇರಿದುಬಿಡುವರು.


“ಮಾಟಗಾರ್ತಿಯನ್ನು ಬದುಕಲು ಬಿಡಬಾರದು.


ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ, ಈ ಸುಳ್ಳು ಬೋಧಕರು ಸಹ ಸತ್ಯವನ್ನು ವಿರೋಧಿಸುತ್ತಾರೆ. ಇದಲ್ಲದೆ ಇವರು ಬುದ್ಧಿಗೆಟ್ಟವರೂ ವಿಶ್ವಾಸದ ವಿಷಯದಲ್ಲಿ ಭ್ರಷ್ಠರೂ ಆಗಿ, ತಿರಸ್ಕಾರ ಹೊಂದಿರುತ್ತಾರೆ.


ಹೀಗೆಯೇ ಸೌಲನು ಯೆಹೋವ ದೇವರಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಯೆಹೋವ ದೇವರ ವಾಕ್ಯವನ್ನು ಕೈಗೊಳ್ಳದೆ, ಅದಕ್ಕೆ ವಿರೋಧವಾಗಿ ನಡೆದು, ಯೆಹೋವ ದೇವರನ್ನು ವಿಚಾರಿಸದೆ, ಯಕ್ಷಿಣಿಗಾರರನ್ನು ವಿಚಾರಿಸಿದ್ದರಿಂದ,


“ಆಗ ಯೆಹೋವ ದೇವರು, ‘ಅದು ಹೇಗೆ?’ ಎಂದರು. “ಅದಕ್ಕದು, ‘ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳನ್ನಾಡುವ ಆತ್ಮವಾಗಿರುವೆನು,’ ಎಂದಿತು. “ಅದಕ್ಕೆ ಅವರು, ‘ನೀನು ಅವನನ್ನು ಮರುಳುಗೊಳಿಸುವೆ ಮತ್ತು ಜಯಿಸುವೆ. ಹೊರಟುಹೋಗಿ ಹಾಗೆ ಮಾಡು,’ ಎಂದರು.


“ ‘ಇದಲ್ಲದೆ ಮಾಟಗಾರರನ್ನು ಮತ್ತು ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಅಂಥ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.


ಆದರೆ ಮಂತ್ರವಾದಿಯಾದ ಎಲುಮನು ಅವರನ್ನು ವಿರೋಧಿಸಿ ರಾಜ್ಯಪಾಲನು ವಿಶ್ವಾಸಿಯಾಗದಂತೆ ಅಡ್ಡಿಮಾಡಲು ಪ್ರಯತ್ನಿಸಿದನು. ಎಲುಮ ಎಂಬ ಹೆಸರಿಗೆ ಮಂತ್ರವಾದಿ ಎಂಬುದೇ ಅರ್ಥ.


ಪಾಫೋಸಿನಿಂದ, ಪೌಲ ಮತ್ತು ಅವನ ಸಂಗಡಿಗರು ಪಂಫುಲ್ಯಕ್ಕೆ ಸೇರಿದ ಪೆರ್ಗೆ ಎಂಬಲ್ಲಿಗೆ ನೌಕೆಯಲ್ಲಿ ಪ್ರಯಾಣಮಾಡಿದರು, ಅಲ್ಲಿ ಯೋಹಾನನು ಅವರನ್ನು ಬಿಟ್ಟು ಯೆರೂಸಲೇಮಿಗೆ ಹಿಂತಿರುಗಿ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು