Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:27 - ಕನ್ನಡ ಸಮಕಾಲಿಕ ಅನುವಾದ

27 ಇಲ್ಲಿಗೆ ತಲುಪಿದಾಗ, ಅವರು ಸಭೆಯನ್ನು ಒಟ್ಟುಕೂಡಿಸಿದರು. ದೇವರು ಅವರಿಗೆ ತಮ್ಮ ಮುಖಾಂತರವಾಗಿ ಮಾಡಿದ್ದನ್ನೂ ಯೆಹೂದ್ಯರಲ್ಲದವರಿಗೂ ದೇವರು ವಿಶ್ವಾಸದ ದ್ವಾರವನ್ನು ತೆರೆದಿರುವುದನ್ನೂ ವರದಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇಲ್ಲಿಗೆ ತಲುಪಿದ ಕೂಡಲೇ ಅವರು ಕ್ರೈಸ್ತಸಭೆಯನ್ನು ಒಟ್ಟುಗೂಡಿಸಿದರು. ದೇವರು ತಮ್ಮೊಡನೆ ಇದ್ದು ಸಾಧಿಸಿದ್ದೆಲ್ಲವನ್ನೂ ವರದಿಮಾಡಿದರು; ಅದೂ ಅಲ್ಲದೆ, ದೇವರು ಅನ್ಯಧರ್ಮೀಯರಿಗೆ ವಿಶ್ವಾಸದ ದ್ವಾರವನ್ನು ಹೇಗೆ ತೆರೆದರೆಂದು ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅಲ್ಲಿ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆದದ್ದನ್ನೂ ವಿವರವಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಪಾವ್ಲು ಅನಿ ಬಾರ್ನಾಬಾಸ್ ಹಿತ್ತೆ ಪಾವಲ್ಲ್ಯಾ ತನ್ನಾ ತಾಂಡ್ಯಾಚ್ಯಾ ಲೊಕಾಕ್ನಿ ಸಗ್ಳೆ ಗೊಳಾ ಕರುನ್, ದೆವಾನ್ ಅಪ್ನಾ ವಾಂಗ್ಡಾ ಕರಲ್ಲ್ಯಾ ಸಗ್ಳ್ಯಾ ಕಾಮಾಂಚ್ಯಾ ವಿಶಯಾತ್ ತೆಂಕಾ ಕಳ್ವುಲ್ಯಾನಿ, ಅನಿ “ಜುದೆವಾಂಚೆ ನ್ಹಯ್ ಹೊಲ್ಲ್ಯಾ ಲೊಕಾನಿಬಿ ವಿಶ್ವಾಸ್‍ ಕರಿಸಾರ್ಕೆ ದೆವಾನ್ ದಾರಾ ಉಗಡ್ಲಾ!” ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:27
15 ತಿಳಿವುಗಳ ಹೋಲಿಕೆ  

ಏಕೆಂದರೆ, ಪರಿಣಾಮಕಾರಿಯಾದ ಸೇವೆಗೆ ದೊಡ್ಡದಾಗಿ ಬಾಗಿಲು ನನಗೆ ತೆರೆದಿದೆ, ಬಹಳ ಜನ ವಿರೋಧಿಗಳೂ ಇದ್ದಾರೆ.


ಇದಕ್ಕೆ ಜನರು ಮೌನವಾಗಿದ್ದು, ಯೆಹೂದ್ಯರಲ್ಲದವರ ಮಧ್ಯದಲ್ಲಿ ದೇವರು ತಮ್ಮ ಮೂಲಕ ಮಾಡಿದ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಕುರಿತು ಬಾರ್ನಬ ಮತ್ತು ಪೌಲ ಹೇಳುವುದನ್ನು ಕೇಳಿಸಿಕೊಂಡರು.


ನಾವು ಕ್ರಿಸ್ತ ಯೇಸುವಿನ ರಹಸ್ಯವನ್ನು ಮಾತನಾಡುವಂತೆ ದೇವರು ನಮ್ಮ ಸಂದೇಶಕ್ಕೆ ಬಾಗಿಲನ್ನು ತೆರೆಯುವಂತೆ ನಮಗೋಸ್ಕರವೂ ಪ್ರಾರ್ಥಿಸಿರಿ. ಈ ಸೇವೆಗಾಗಿಯೇ ನಾನು ಸೆರೆಯಲ್ಲಿದ್ದೇನಲ್ಲಾ.


ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದಕ್ಕೆ ನಾನು ತ್ರೋವಕ್ಕೆ ಹೋದಾಗ, ಅಲ್ಲಿ ಕರ್ತ ಯೇಸುವು ನನಗೆ ಬಾಗಿಲು ತೆರೆದಿರುವುದನ್ನು ಕಂಡೆನು.


ನೀವು ಕರ್ತ ಯೇಸುವಿನ ಹೆಸರಿನಲ್ಲಿ ಸಭೆಯಾಗಿ ಬಂದು ಸೇರಿದಾಗ, ನಾನೂ ಆತ್ಮದಲ್ಲಿ ನಿಮ್ಮೊಂದಿಗಿದ್ದು ನಮಗೆ ಕರ್ತ ಆಗಿರುವ ಯೇಸುವಿನ ಸಾನಿಧ್ಯ ಶಕ್ತಿಯೊಂದಿರುವಾಗ,


ಹೇಗೆಂದರೆ, ಮೊದಲನೆಯದು: ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮೊಳಗೆ ಭೇದಗಳಿವೆ ಎಂದು ಕೇಳುತ್ತೇನೆ. ಇದನ್ನು ಸ್ವಲ್ಪಮಟ್ಟಿಗೆ ನಂಬುತ್ತೇನೆ.


ಯೆಹೂದ್ಯರಲ್ಲದವರನ್ನು ದೇವರಿಗೆ ವಿಧೇಯರಾಗುವುದಕ್ಕಾಗಿ ಕ್ರಿಸ್ತನು ನನ್ನ ಮೂಲಕ ಮಾತಿನಿಂದಲೂ ಕೃತ್ಯದಿಂದಲೂ


ಯೆಹೂದಿ ವಿಶ್ವಾಸಿಗಳು ಇದನ್ನು ಕೇಳಿದಾಗ, ಅವರಿಗೆ ಯಾವ ಆಕ್ಷೇಪಣೆಯೂ ಇರಲಿಲ್ಲ. ಹಾಗಾದರೆ ದೇವರು, “ಯೆಹೂದ್ಯರಲ್ಲದವರಿಗೂ ಸಹ ಜೀವಕ್ಕಾಗಿ ಪಶ್ಚಾತ್ತಾಪವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ದೇವರನ್ನು ಕೊಂಡಾಡಿದರು.


ಕೆಲವರು ಅವನಿಗೆ, “ಹಾಗಾದರೆ ನಿನಗೆ ದೃಷ್ಟಿ ಹೇಗೆ ಬಂತು?” ಎಂದು ಕೇಳಲು,


ಆದರೆ ನಾನು ಎಂಥವನಾಗಿದ್ದೇನೋ, ಅದು ದೇವರ ಕೃಪೆಯಿಂದಲೇ ಆಗಿರುತ್ತದೆ. ನನಗುಂಟಾದ ದೇವರ ಕೃಪೆಯು ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.


ಆದಕಾರಣ ಸಭೆಯೆಲ್ಲವೂ ಕೂಡಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ, ಅಜ್ಞಾನಿಗಳು ಇಲ್ಲವೆ ಅವಿಶ್ವಾಸಿಗಳು ಒಳಗೆ ಬಂದು, ನೀವು ಹುಚ್ಚರೆಂದು ಹೇಳುವುದಿಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು