Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:5 - ಕನ್ನಡ ಸಮಕಾಲಿಕ ಅನುವಾದ

5 ಯೆಹೂದ್ಯರೂ ಯೆಹೂದ್ಯರಲ್ಲದವರೂ ತಮ್ಮ ನಾಯಕರನ್ನು ಕೂಡಿಕೊಂಡು ಪೌಲ, ಬಾರ್ನಬರನ್ನು ಅವಮಾನ ಮಾಡಿ ಅವರ ಮೇಲೆ ಕಲ್ಲೆಸೆಯಬೇಕೆಂದು ನುಗ್ಗಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅನ್ಯಜನರೂ, ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಪೀಡಿಸುವುದಕ್ಕೂ, ಕಲ್ಲೆಸೆದು ಕೊಲ್ಲುವುದಕ್ಕೂ ಪ್ರಯತ್ನಿಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅನ್ಯಧರ್ಮದವರು ಮತ್ತು ಯೆಹೂದ್ಯರು ತಮ್ಮ ಅಧಿಕಾರಿಗಳೊಡನೆ ಸೇರಿ ಪ್ರೇಷಿತರಿಗೆ ಕಿರುಕುಳಕೊಡಲು ಹಾಗೂ ಅವರ ಮೇಲೆ ಕಲ್ಲು ತೂರಲು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೂದ್ಯರಲ್ಲದವರಲ್ಲಿ ಮತ್ತು ಯೆಹೂದ್ಯರಲ್ಲಿ ಕೆಲವರು ತಮ್ಮ ನಾಯಕರೊಡನೆ ಸೇರಿಕೊಂಡು ಪೌಲ ಬಾರ್ನಬರನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಜುದೆವಾಂಚ್ಯಾ ನ್ಹಯ್ ಹೊಲ್ಲ್ಯಾತ್ಲೆ ಥೊಡೆ ಅನಿ ಜುದೆವಾಂಚೆ ಥೊಢಿ ಲೊಕಾ ಅಪ್ಲ್ಯಾ ಮುಖಂಡಾಂಚ್ಯಾ ವಾಂಗ್ಡಾ ಮಿಳುನ್ ಅಪೊಸ್ತಲಾಂಚ್ಯಾ ವಾಂಗ್ಡಾ ಬರೆ ಚಾಲ್ವುನ್ ಘೆವ್ನ್ ಜಾಯ್‌ನಸ್ತಾನಾ ತೆಂಕಾ ಬುರ್ಶೆ ಕರುಚೆ ಮನುನ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:5
16 ತಿಳಿವುಗಳ ಹೋಲಿಕೆ  

ಅದೇ ಸಮಯದಲ್ಲಿ ಅಂತಿಯೋಕ್ಯ ಮತ್ತು ಇಕೋನ್ಯದಿಂದ ಕೆಲವು ಜನ ಯೆಹೂದ್ಯರು ಬಂದು ಜನಸಮೂಹವನ್ನು ತಮ್ಮ ಕಡೆಗೆ ಒಲಿಸಿಕೊಂಡು, ಪೌಲನ ಮೇಲೆ ಕಲ್ಲೆಸೆಯಲು, ಅವನು ಸತ್ತನೆಂದು ಭಾವಿಸಿ ಅವನನ್ನು ಊರ ಹೊರಗೆ ಎಳೆದು ಹಾಕಿದರು.


ನಾನು ಎಂತೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬುದನ್ನೂ ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಕಷ್ಟಾನುಭವಗಳನ್ನೂ ನನಗುಂಟಾದ ಎಲ್ಲಾ ಹಿಂಸೆಗಳನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಕರ್ತದೇವರು ನನ್ನನ್ನು ಇವೆಲ್ಲವುಗಳಿಂದ ಬಿಡಿಸಿದರು.


ಆದರೆ ಯೆಹೂದ್ಯರು ಮತ್ಸರದಿಂದ ಕೂಡಿ, ಬೀದಿಗಳಲ್ಲಿ ತಿರುಗಾಡುವ ಕೆಲವು ದುಷ್ಟವ್ಯಕ್ತಿಗಳನ್ನು ಕೂಡಿಸಿ ಪಟ್ಟಣದಲ್ಲಿ ಗಲಭೆ ಎಬ್ಬಿಸಿದರು. ಜನಸಮೂಹದ ಮುಂದೆ ಪೌಲ, ಸೀಲರನ್ನು ಎಳೆದು ತರುವಂತೆ ಅವರನ್ನು ಹುಡುಕುತ್ತಾ ಯಾಸೋನ ಎಂಬುವನ ಮನೆಯನ್ನು ಮುತ್ತಿದರು.


ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ, ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.


ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಿಂಸಿಸುವವರಿಗೋಸ್ಕರ ಪ್ರಾರ್ಥಿಸಿರಿ.


ಅವರು ಏಕ ಮನಸ್ಕರಾಗಿ ಆಲೋಚನೆ ಮಾಡಿಕೊಂಡಿದ್ದಾರೆ. ನಿಮಗೆ ವಿರೋಧವಾಗಿ ಒಡಂಬಟ್ಟಿದ್ದಾರೆ.


ಜನಸಮೂಹಗಳನ್ನು ಯೆಹೂದ್ಯರು ಕಂಡಾಗ ಅಸೂಯೆಗೊಂಡು ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.


ಆದರೆ ಯೆಹೂದ್ಯರು, ಆರಾಧಕರಾಗಿದ್ದ ಮಾನ್ಯರಾದ ಸ್ತ್ರೀಯರನ್ನೂ ನಗರದ ಗಣ್ಯ ನಾಯಕರನ್ನೂ ಪ್ರೇರೇಪಿಸಿ, ಪೌಲ, ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ತಮ್ಮ ಪ್ರದೇಶದಿಂದ ಹೊರಗೋಡಿಸಿದರು.


ಆದರೆ ನಂಬಲು ನಿರಾಕರಿಸಿದ ಯೆಹೂದ್ಯರು ಯೆಹೂದ್ಯರಲ್ಲದವರ ಮನಸ್ಸನ್ನು ಕೆಡಿಸಿ, ಸಹೋದರರ ಮೇಲೆ ವಿರೋಧ ಭಾವನೆ ಹುಟ್ಟಿಸಿದರು.


ಆದರೆ ಪಟ್ಟಣದ ಜನರಲ್ಲಿ ಭಿನ್ನಾಭಿಪ್ರಾಯಗಳಾದವು. ಕೆಲವರು ಯೆಹೂದ್ಯರ ಪರವಾದರು, ಇನ್ನೂ ಕೆಲವರು ಅಪೊಸ್ತಲರ ಪರವಾದರು.


ಊರಿಂದೂರಿಗೆ ಪ್ರಯಾಣ ಮಾಡುತ್ತಲೇ ಇದ್ದೆನು, ನದಿಗಳಿಂದ ಅಪಾಯ, ದಾರಿಗಳ್ಳರಿಂದ ಅಪಾಯ, ನನ್ನ ಸ್ವಂತ ಜನರಿಂದ ಅಪಾಯ, ಯೆಹೂದ್ಯರಲ್ಲದವರಿಂದ ಅಪಾಯ, ಪಟ್ಟಣಗಳಲ್ಲಿ ಅಪಾಯ, ಹೊರ ಪ್ರದೇಶಗಳಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ ಮತ್ತು ಸುಳ್ಳು ಸಹೋದರರಿಂದ ಅಪಾಯಗಳನ್ನೆಲ್ಲಾ ನಾನು ಎದುರಿಸಿದೆನು.


ಫಿಲಿಪ್ಪಿ ಪಟ್ಟಣದಲ್ಲಿ ಮುಂಚೆ ನಮಗೆ ಹಿಂಸೆ ಮತ್ತು ಅವಮಾನವು ಸಂಭವಿಸಿದ್ದನ್ನು ನೀವು ಬಲ್ಲಿರಿ. ಹಾಗಿದ್ದರೂ ನಾವು ನಮ್ಮ ದೇವರ ಸಹಾಯದಿಂದ ಧೈರ್ಯಗೊಂಡು ಬಹು ವಿರೋಧದ ನಡುವೆ ನಿಮಗೆ ಸುವಾರ್ತೆಯನ್ನು ತಿಳಿಸಿದೆವು.


ಪ್ರಿಯರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನೇ ನೀವೂ ಸಹ ನಿಮ್ಮ ಸ್ವದೇಶಿಯರಿಂದ ಅನುಭವಿಸಿದಿರಿ.


ಯೆಹೂದ್ಯರಲ್ಲದವರಿಗೆ ರಕ್ಷಣೆಯಾಗುವಂತೆ ಮಾತನಾಡುವ ನಮಗೆ ಅವರು ಅಡ್ಡಿ ಮಾಡುತ್ತಾರೆ. ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಹೆಚ್ಚೆಚ್ಚಾಗಿ ಕೂಡಿಸಿಕೊಳ್ಳುತ್ತಾ ಹೋಗುತ್ತಾರೆ. ಕೊನೆಗೆ ಕೋಪಾಗ್ನಿಯೂ ಅವರ ಮೇಲೆ ಬರಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು