ಅಪೊಸ್ತಲರ ಕೃತ್ಯಗಳು 15:11 - ಕನ್ನಡ ಸಮಕಾಲಿಕ ಅನುವಾದ11 ಆದರೆ ನಾವು ರಕ್ಷಣೆ ಹೊಂದಿದ್ದು ನಮ್ಮ ಕರ್ತ ಯೇಸುವಿನ ಕೃಪೆಯಿಂದಲೇ, ಹಾಗೆಯೇ ಅವರೂ ಹೊಂದುವರು ಎಂಬುದು ನಮ್ಮ ನಂಬಿಕೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬುದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇಲ್ಲ, ಇದು ಸರಿಯಲ್ಲ. ನಮಗೇ ಆಗಲಿ, ಅವರಿಗೇ ಆಗಲಿ, ಜೀವೋದ್ಧಾರ ದೊರಕುವುದು ಪ್ರಭು ಯೇಸುವಿನ ಅನುಗ್ರಹದಿಂದಲೇ. ಇದೇ ನಮ್ಮ ವಿಶ್ವಾಸ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕರ್ತನಾದ ಯೇಸುವಿನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದ್ದರಿಂದ ನಾವಾಗಲಿ ಇವರಾಗಲಿ ರಕ್ಷಣೆ ಹೊಂದುವುದು ಪ್ರಭುವಾದ ಯೇಸುವಿನ ಕೃಪೆಯಿಂದಲೇ ಎಂದು ನಾವು ನಂಬುತ್ತೇವೆ!” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತಸೆ ಹೊವ್ನ್ ಅಮ್ಕಾ ಹೊಂವ್ದಿ ಹೆಂಕಾ ಹೊಂವ್ದಿ ರಾಕ್ವನ್ ಹೊತಲಿ ಧನಿಯಾ ಜೆಜುಚ್ಯಾ ಕುರ್ಪೆನುಚ್ ಮನುನ್ ಅಮಿ ವಿಶ್ವಾಸ್ ಕರ್ತಾಂವ್ ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಒಬ್ಬ ವ್ಯಕ್ತಿ ಮೋಶೆಯ ನಿಯಮದ ಕ್ರಿಯೆಗಳಿಂದ ನೀತಿವಂತನಾಗುವುದಿಲ್ಲ. ಆದರೆ ಕ್ರಿಸ್ತ ಯೇಸುವನ್ನು ನಂಬುವುದರಿಂದಲೇ ನೀತಿವಂತನಾಗುತ್ತಾನೆ ಎಂದು ನಮಗೆ ತಿಳಿದಿದೆ. ನಾವು ಸಹ ಮೋಶೆಯ ನಿಯಮದ ಕ್ರಿಯೆಗಳಿಂದಲ್ಲ, ಕ್ರಿಸ್ತ ಯೇಸುವಿನ ನಂಬಿಕೆಯ ಮೂಲಕ ನೀತಿವಂತರಾವುದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟೆವು. ಏಕೆಂದರೆ, ಮೋಶೆಯ ನಿಯಮದ ಕ್ರಿಯೆಗಳಿಂದ ಯಾರೂ ನೀತಿವಂತರಾಗುವುದಿಲ್ಲ.