Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:17 - ಕನ್ನಡ ಸಮಕಾಲಿಕ ಅನುವಾದ

17 ಆಗ ಉಳಿದಿರುವ ಜನರಲ್ಲಿ ಯೆಹೂದ್ಯರಲ್ಲದವರೂ ನನ್ನ ಹೆಸರೆತ್ತಿ ಕರೆಯುವವರೂ ಸಹ ಕರ್ತದೇವರನ್ನು ಹುಡುಕುವರು,’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮನುಷ್ಯರಲ್ಲಿ ಉಳಿದ ಜನರು ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವರು ಎಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನನ್ನವರೆಂದು ನಾನು ಕರೆದ ಎಲ್ಲ ಅನ್ಯಧರ್ಮೀಯರು ಉಳಿದೆಲ್ಲ ಮಾನವರು ನನ್ನತ್ತ ಬರಲಿಹರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮನುಷ್ಯಜಾತಿಯ ಉಳಿದ ಜನಗಳೂ ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವವರಾಗಿರಬೇಕೆಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಳಿಕ ಇತರ ಜನರೆಲ್ಲರೂ ಪ್ರಭುವಿಗಾಗಿ ಹುಡುಕುವರು. ಯೆಹೂದ್ಯರಲ್ಲದ ಜನರೆಲ್ಲರೂ ಸಹ ನನ್ನ ಜನರೇ ಆಗಿದ್ದಾರೆ. ಪ್ರಭುವೇ ಇದನ್ನು ಹೇಳಿದ್ದಾನೆ. ಈ ಕಾರ್ಯಗಳನ್ನೆಲ್ಲ ಮಾಡುವವನು ಆತನೇ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಹುರಲ್ಲಿ ಲೊಕಾ ಧನಿಯಾಕ್ಡೆ ಯೆತಾತ್, ಜುದೆವ್ ನ್ಹಯ್ ಹೊಲ್ಲಿ ಲೊಕಾ ಮಾಕಾ ವಳಕ್ತಾತ್ ಮನುನ್ ಹೆ ಸಗ್ಳೆ ಧನಿ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:17
32 ತಿಳಿವುಗಳ ಹೋಲಿಕೆ  

“ಆ ದಿವಸದಲ್ಲಿ ಅನೇಕ ಜನಾಂಗಗಳು ಯೆಹೋವ ದೇವರನ್ನು ಅಂಟಿಕೊಂಡು ನನ್ನ ಜನರಾಗುವರು, ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆಂದು ತಿಳಿದುಕೊಳ್ಳುವೆ.


“ಕೇಳದವರಿಗೂ ನಾನು ನನ್ನನ್ನು ಪ್ರಕಟಿಸಿಕೊಂಡಿದ್ದೇನೆ. ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು. ನನ್ನ ಹೆಸರನ್ನು ಕರೆಯದ ಜನಾಂಗಕ್ಕೆ, ‘ಇಗೋ, ಇದ್ದೇನೆ; ಇಗೋ, ಇದ್ದೇನೆ,’ ಎಂದು ಹೇಳಿದೆನು.


ನಾನು ದೇಶದಲ್ಲಿ ಆಕೆಯನ್ನು ನನಗಾಗಿ ಬಿತ್ತಿಕೊಳ್ಳುವೆನು. ‘ನನ್ನ ಪ್ರಿಯರಲ್ಲ’ ಎಂದು ಕರೆದವರಿಗೆ, ನಾನು ನನ್ನ ಪ್ರೀತಿಯನ್ನು ತೋರಿಸುವೆನು. ನಾನು, ‘ನೀವು ನನ್ನ ಜನರಲ್ಲ’ ಎಂದು ಹೇಳಿದವರನ್ನು, ‘ನೀವು ನನ್ನ ಜನರು,’ ಎಂದು ಹೇಳುವೆನು. ಅವರು, ‘ನೀವು ನಮ್ಮ ದೇವರು’ ” ಎಂದು ಹೇಳುವರು.


ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಓ ಯೆಹೋವ ದೇವರೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಜಗದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಬರುವುವು. “ನಮ್ಮ ಪೂರ್ವಜರು ನಿಶ್ಚಯವಾಗಿ ಸುಳ್ಳಾದದ್ದನ್ನು ಪಾರಂಪರ್ಯವಾಗಿ ಹೊಂದಿದ್ದಾರೆ. ಅವು ವ್ಯರ್ಥವೇ. ಅವುಗಳಲ್ಲಿ ಏನೂ ಪ್ರಯೋಜನವಿಲ್ಲ.


ನನ್ನ ಹೆಸರಿನಿಂದ ಕರೆಯಲಾದ ಪ್ರತಿಯೊಬ್ಬನನ್ನೂ ಬರಮಾಡುವೆನು. ಏಕೆಂದರೆ ಅವರನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ. ನಾನು ಅವರನ್ನು ನಿರ್ಮಿಸಿದ್ದೇನೆ. ಹೌದು, ನಾನು ಅವರನ್ನು ಉಂಟುಮಾಡಿದ್ದೇನೆ.”


ಏಕೆ ಸ್ತಬ್ಧನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವ ದೇವರೇ, ನೀವು ನಮ್ಮ ಮಧ್ಯದಲ್ಲಿರುತ್ತೀರಿ, ನಾವು ನಿಮ್ಮ ಹೆಸರನ್ನು ಹೊಂದಿದ್ದೇವೆ, ನಮ್ಮನ್ನು ಕೈಬಿಡಬೇಡಿರಿ.


ಆ ದಿನದಲ್ಲಿ ಇಷಯನ ವಂಶದಿಂದ ಜನರಿಗೆ ಒಂದು ಬೇರು ಗುರುತಿನ ಧ್ವಜವಾಗಿ ನಿಲ್ಲುವುದು. ಅವರ ವಿಶ್ರಾಂತಿ ಸ್ಥಳವು ಮಹಿಮೆಯುಳ್ಳದ್ದಾಗಿರುವುದು.


ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.


ನೀನು ನನಗೆ ವಿಧೇಯನಾದದ್ದರಿಂದ, ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂದರು.


ಇದಲ್ಲದೆ ಯಾಕೋಬನ ಶೇಷವು ಅನೇಕ ಜನಾಂಗಳ ಮಧ್ಯದಲ್ಲಿ ಯೆಹೋವ ದೇವರಿಂದ ಬಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವುದು. ಅದು ಮನುಷ್ಯರಿಗೋಸ್ಕರ ಆತುಕೊಳ್ಳುವುದಿಲ್ಲ, ಮನುಷ್ಯ ಮಕ್ಕಳಿಗಾಗಿ ಕಾದುಕೊಳ್ಳುವುದಿಲ್ಲ.


ಆಗ ಅವರು ಎದೋಮಿನ ಮಿಕ್ಕ ಭಾಗವನ್ನೂ, ನನ್ನ ಹೆಸರಿನಿಂದ ಕರೆಯಲಾಗುವ ಎಲ್ಲಾ ಜನಾಂಗಗಳನ್ನೂ ಸ್ವಾಧೀನ ಮಾಡಿಕೊಳ್ಳುವೆನು, ಎಂಬುದಾಗಿ ಇದನ್ನು ಮಾಡುವವರಾದ ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು. ಏಕೆಂದರೆ ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಅನೇಕರಿಗೆ ಮುಕ್ತಿ ದೊರಕುವುದು. ಯೆಹೋವ ದೇವರು ಹೇಳಿದ ಪ್ರಕಾರ ಯೆಹೋವ ದೇವರ ಕರೆಹೊಂದಿ ಉಳಿದವರಲ್ಲಿಯೂ ಬಿಡುಗಡೆ ಇರುವುದು.


ಕರ್ತದೇವರೇ ಕೇಳಿರಿ! ಕರ್ತದೇವರೇ ಕ್ಷಮಿಸಿರಿ! ಕರ್ತದೇವರೇ ಲಾಲಿಸಿರಿ ಮತ್ತು ಕಾರ್ಯವನ್ನು ಸಾಧಿಸಿರಿ! ನನ್ನ ದೇವರೇ, ನಿಮ್ಮ ನಿಮಿತ್ತವಾಗಿ ತಡಮಾಡಬೇಡಿರಿ. ಏಕೆಂದರೆ ನಿಮ್ಮ ಪಟ್ಟಣವೂ ನಿಮ್ಮ ಜನರೂ ನಿಮ್ಮ ಹೆಸರನ್ನು ಧರಿಸಿದ್ದಾರೆ.”


ದೇವರ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರೂ ಯಾವ ಮಹತ್ವವಿಲ್ಲದೆ ಶೂನ್ಯರಾಗಿದ್ದಾರೆ. ದೇವರು ಪರಲೋಕದ ಸೈನ್ಯದಲ್ಲಿಯೂ, ಭೂನಿವಾಸಿಗಳಲ್ಲಿಯೂ ತಮ್ಮ ಚಿತ್ತದ ಪ್ರಕಾರವೇ ಮಾಡುತ್ತಾರೆ. ಯಾರೂ ಅವರ ಹಸ್ತವನ್ನು ಹಿಂತೆಗೆಯಲಾರರು. “ನೀವು ಏನು ಮಾಡುತ್ತಿರುವಿರಿ?” ಎಂದು ದೇವರನ್ನು ಯಾರೂ ಕೇಳಲಾರರು.


ಇದಲ್ಲದೆ ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಅಯ್ಯೋ! ದೇವರು ಇದನ್ನು ಮಾಡುವಾಗ ಯಾರು ಬದುಕುವರು?


“ಹೀಗೆ ಅವರು ನನ್ನ ಹೆಸರನ್ನು ಇಸ್ರಾಯೇಲರ ಮೇಲೆ ಉಚ್ಛರಿಸುವರು. ನಾನೇ ಅವರನ್ನು ಆಶೀರ್ವದಿಸುವೆನು.”


ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ಆ ದೇವರ ದೂತ, ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದಲೂ, ನನ್ನ ಪಿತೃಗಳಾದ ಅಬ್ರಹಾಮ, ಇಸಾಕರ ಹೆಸರಿನಿಂದಲೂ ಅವರು ಮುಂದುವರೆಯಲಿ. ಭೂಮಿಯ ಮೇಲೆ ಸಮೂಹವಾಗಿ ಹೆಚ್ಚಲಿ.”


ಆಗ ಭೂಲೋಕದ ಜನರೆಲ್ಲರೂ, ನೀವು ಯೆಹೋವ ದೇವರ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.


ನಾವು ಆದಿಯಿಂದಲೂ ನಿಮ್ಮವರಾಗಿದ್ದೇವೆ. ಅವರ ಮೇಲೆ ನೀವು ದೊರೆತನ ಮಾಡಲಿಲ್ಲ. ಅವರು ನಿಮ್ಮ ಹೆಸರನ್ನು ಧರಿಸಲೂ ಇಲ್ಲ.


ನೀವು ಕರೆಸಿಕೊಳ್ಳುವ ಆ ಯೋಗ್ಯವಾದ ನಾಮವನ್ನು ದೂಷಿಸುವವರು ಅವರಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು