Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:19 - ಕನ್ನಡ ಸಮಕಾಲಿಕ ಅನುವಾದ

19 “ಆದ್ದರಿಂದ, ದೇವರ ಕಡೆಗೆ ತಿರುಗುತ್ತಿರುವ ಯೆಹೂದ್ಯರಲ್ಲದವರಿಗೆ ನಾವು ತೊಂದರೆ ಮಾಡಬಾರದು ಎಂಬುದೇ ನನ್ನ ತೀರ್ಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಹೀಗಿರಲಾಗಿ ನನ್ನ ಅಭಿಪ್ರಾಯ ಏನೆಂದರೆ; ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಆದುದರಿಂದ ನನ್ನ ತೀರ್ಮಾನವೇನೆಂದರೆ : ದೇವರ ಕಡೆಗೆ ತಿರುಗುತ್ತಿರುವ ಅನ್ಯಧರ್ಮೀಯರನ್ನು ತೊಂದರೆಗೆ ಈಡುಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೀಗಿರಲಾಗಿ ನನ್ನ ಅಭಿಪ್ರಾಯ ಏನಂದರೆ - ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಆದ್ದರಿಂದ, ದೇವರ ಕಡೆಗೆ ತಿರುಗಿಕೊಂಡ ಯೆಹೂದ್ಯರಲ್ಲದ ಸಹೋದರರಿಗೆ ನಾವು ತೊಂದರೆ ಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತಸೆ ಹೊವ್ನ್ ಜುದೆವ್ ನ್ಹಯ್ ಹೊಲ್ಲ್ಯಾ ದೆವಾಕ್ಡೆ ಪರ್ತುನ್ ಯೆಲ್ಲ್ಯಾ ಲೊಕಾಕ್ನಿ ಅಮಿ ತರಾಸ್ ದಿತಲೆ ನಕ್ಕೊ, ಹಿ ಮಾಜೆ ಸಲಹಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:19
12 ತಿಳಿವುಗಳ ಹೋಲಿಕೆ  

ಈ ಅಗತ್ಯವಾದವುಗಳನ್ನು ಬಿಟ್ಟು ಬೇರೆಯವುಗಳನ್ನು ನಿಮ್ಮ ಮೇಲೆ ಹೊರೆಯಾಗಿ ಹಾಕಬಾರದೆಂಬುದು, ಪವಿತ್ರಾತ್ಮರಿಗೂ ನಮಗೂ ಒಳ್ಳೆಯದೆಂದು ತೋಚಿತು.


ಏಕೆಂದರೆ ನೀವು ನಮ್ಮನ್ನು ಹೇಗೆ ಸ್ವೀಕರಿಸಿದ್ದಿರೆಂಬುದನ್ನೂ ನೀವು ಹೇಗೆ ದೇವರಲ್ಲದವುಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬುದನ್ನೂ ಅವರು ತಾವೇ ವಿವರಿಸುತ್ತಾರೆ.


ನಮ್ಮಿಂದ ಕೆಲವರು ನಮ್ಮ ಅಪ್ಪಣೆಯಿಲ್ಲದೆ ತಮ್ಮ ಮಾತುಗಳಿಂದ ನಿಮ್ಮ ಮನಸ್ಸಿಗೆ ತೊಂದರೆ ಕೊಟ್ಟರೆಂದು ನಾವು ಕೇಳಿದೆವು.


ಆದರೆ ಮೊದಲು ದಮಸ್ಕದಲ್ಲಿದ್ದವರಿಗೂ ಆಮೇಲೆ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಗಳಲ್ಲಿ ಇದ್ದವರಿಗೂ ಯೆಹೂದ್ಯರಲ್ಲದವರಿಗೂ ನಾನು ಬೋಧಿಸಿದೆನು. ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು, ಪಶ್ಚಾತ್ತಾಪಕ್ಕೆ ಯೋಗ್ಯ ಕೃತ್ಯಗಳನ್ನು ನಡೆಸಬೇಕೆಂದು ನಾನು ಘೋಷಿಸಿದೆನು.


ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು, ಯೆಹೋವ ದೇವರ ಕಡೆಗೆ ತಿರುಗಿಕೊಂಡು, ಅವರಿಗೆ ಹೇಳಿರಿ: “ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸಿ, ನಮ್ಮಲ್ಲಿ ಒಳ್ಳೆಯದನ್ನು ಸ್ವೀಕರಿಸಿರಿ. ಆಗ ನಮ್ಮ ಸ್ತೋತ್ರ ಬಲಿಯನ್ನು ನಿಮಗೆ ಅರ್ಪಿಸುವೆವು.


ದುಷ್ಟನು ತನ್ನ ದುರ್ಮಾರ್ಗವನ್ನೂ, ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು, ಯೆಹೋವ ದೇವರ ಕಡೆಗೆ ಹಿಂದಿರುಗಲಿ. ಅವರು ಅವರ ಮೇಲೆ ಕರುಣೆ ಇಡುವರು. ನಮ್ಮ ದೇವರ ಬಳಿಗೂ ಹಿಂದಿರುಗಲಿ. ಏಕೆಂದರೆ ಅವರು ಹೇರಳವಾಗಿ ಕ್ಷಮಿಸುವರು.


ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ವಿಶ್ವಾಸಿಗಳು ನಮ್ಮನ್ನು ದಾಸತ್ವದಲ್ಲಿ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.


ಆದ್ದರಿಂದ ನಾವಾಗಲಿ, ನಮ್ಮ ಪಿತೃಗಳಾಗಲಿ, ಹೊರಲಾರದ ನೊಗವನ್ನು ಯೆಹೂದ್ಯರಲ್ಲದ ಶಿಷ್ಯರ ಹೆಗಲ ಮೇಲೆ ಹಾಕಿ, ಈಗ ಏಕೆ ದೇವರನ್ನು ಪರೀಕ್ಷಿಸಲು ಪ್ರಯತ್ನಿಸುತ್ತೀರಿ?


ನೀನು ಯೆಹೂದ್ಯರಲ್ಲದವರ ಮಧ್ಯದಲ್ಲಿ ವಾಸಿಸುತ್ತಿರುವ ಯೆಹೂದ್ಯರಿಗೆ, ‘ನೀವು ಮೋಶೆಯ ನಿಯಮವನ್ನು ಅನುಸರಿಸಬೇಡಿರಿ, ನಿಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಬೇಡಿರಿ,’ ಎಂದು ಬೋಧಿಸುವುದಾಗಿ ನಿನ್ನ ವಿಷಯದಲ್ಲಿ ಅವರಿಗೆ ತಿಳಿದು ಬಂದಿದೆ.


ಯೆಹೂದ್ಯರಲ್ಲದವರಿಂದ ಬಂದ ವಿಶ್ವಾಸಿಗಳಿಗಾದರೋ, ಅವರು ದೇವರಲ್ಲದವುಗಳಿಗೆ ಅರ್ಪಿತವಾದ ಮಲಿನ ಆಹಾರದಿಂದಲೂ ರಕ್ತದಿಂದಲೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ಅನೈತಿಕತೆಯಿಂದಲೂ ದೂರವಿರಬೇಕೆಂದು ನಾವು ಬರೆದ ನಮ್ಮ ತೀರ್ಮಾನವನ್ನು ತಿಳಿಸಿದ್ದೇವೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು