Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:32 - ಕನ್ನಡ ಸಮಕಾಲಿಕ ಅನುವಾದ

32 ಯೂದ ಮತ್ತು ಸೀಲರು ಸ್ವತಃ ಪ್ರವಾದಿಗಳಾಗಿದ್ದುದರಿಂದ ಅಲ್ಲಿದ್ದ ವಿಶ್ವಾಸಿಗಳನ್ನು ಅನೇಕ ಬುದ್ಧಿವಾದಗಳಿಂದ ಬಲಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಯೂದನೂ, ಸೀಲನೂ ತಾವೇ ಪ್ರವಾದಿಗಳಾಗಿದ್ದುದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಉತ್ತೇಜಿಸಿ ದೃಢಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಸೀಲ ಮತ್ತು ಯೂದ ಸ್ವತಃ ಪ್ರವಾದಿಗಳಾದುದರಿಂದ ಸುದೀರ್ಘ ಮಾತುಕತೆಗಳಿಂದ ಭಕ್ತರಲ್ಲಿ ಧೈರ್ಯಸ್ಥೈರ್ಯವನ್ನು ಉಂಟುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಪ್ರಬೋಧಿಸಿ ದೃಢಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೂದ ಸೀಲರು ಸಹ ಪ್ರವಾದಿಗಳಾಗಿದ್ದರು. ಅವರು ಅನೇಕ ಸಂಗತಿಗಳನ್ನು ಸಹೋದರರಿಗೆ ತಿಳಿಸಿ ಅವರನ್ನು ಬಲಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಜುದ್ ಅನಿ ಸಿಲಾಸ್ ಮನ್ತಲೆ ಪ್ರವಾದಿ ಹೊವ್ನ್ ಹೊತ್ತೆ, ತೆನಿ ಭಾವಾಕ್ನಿ ಅನಿ ಭೆನಿಯಾಕ್ನಿ ಲೈ ಸಂಗ್ತಿಯಾ ಸಾಂಗುನ್ ಉಮ್ಮೆದ್ ಭರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:32
39 ತಿಳಿವುಗಳ ಹೋಲಿಕೆ  

ಅವನು ಅಲ್ಲಿಗೆ ಬಂದು ದೇವರ ಕೃಪೆಯನ್ನು ಕಂಡು ಹರ್ಷಭರಿತನಾಗಿ, ಅವರೆಲ್ಲರೂ ಕರ್ತನಿಗೆ ಹೃದಯಪೂರ್ವಕವಾಗಿ ಭಯಭಕ್ತಿ ಉಳ್ಳವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸಿದನು.


ಅಲ್ಲಿದ್ದ ಶಿಷ್ಯರು ವಿಶ್ವಾಸದಲ್ಲಿ ಮುಂದುವರಿಯಲು, “ನಾವು ಅನೇಕ ಸಂಕಟಗಳಿಂದ ದೇವರ ರಾಜ್ಯದೊಳಗೆ ಸೇರಬೇಕು,” ಎಂದು ಹೇಳಿ ದೃಢಪಡಿಸಿದರು.


ಅಂತಿಯೋಕ್ಯದ ಸಭೆಯಲ್ಲಿ, ಪ್ರವಾದಿಗಳೂ ಬೋಧಕರೂ ಇದ್ದರು. ಅವರು ಯಾರೆಂದರೆ ಬಾರ್ನಬನು, ನೀಗರ ಎಂದು ಕರೆಯಲಾಗುತ್ತಿದ್ದ ಸಿಮೆಯೋನ, ಕುರೇನೆದ ಲೂಕ್ಯ, ಚತುರಾಧಿಪತಿ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಮುಂತಾದವರೇ.


ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಿಮಗೆ ನಂಬಿಗಸ್ತ ಆಗಿರುವ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಸಹಾಯದಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.


ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.


ಜೊತೆ ಹಿರಿಯನೂ ಕ್ರಿಸ್ತ ಯೇಸುವಿನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಮಹಿಮೆಯಲ್ಲಿ ಪಾಲುಗಾರನೂ ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಬೇಡಿಕೊಳ್ಳುವುದು.


ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು.


ಎಲ್ಲದಕ್ಕಿಂತ ಮೊದಲು ಮನುಷ್ಯರೆಲ್ಲರಿಗೋಸ್ಕರವೂ ಅರಸರುಗಳಿಗಾಗಿಯೂ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಬಿನ್ನಹಗಳನ್ನೂ ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಪ್ರಬೋಧಿಸುತ್ತೇನೆ.


ಅಂಥವರು ಶಾಂತವಾಗಿ ಕೆಲಸಮಾಡಿ ತಮ್ಮ ಸ್ವಂತ ಆಹಾರವನ್ನೇ ಊಟ ಮಾಡಬೇಕೆಂದು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.


ಪ್ರವಾದನೆಗಳನ್ನು ಹೀನೈಸಬೇಡಿರಿ.


ಪ್ರಿಯರೇ, ಶಿಸ್ತು ಇಲ್ಲದವರನ್ನು ಎಚ್ಚರಿಸಿರಿ. ಮನಗುಂದಿದವರನ್ನು ಆದರಿಸಿರಿ. ಬಲಹೀನರಿಗೆ ಆಧಾರವಾಗಿರಿ. ಎಲ್ಲರೊಂದಿಗೂ ತಾಳ್ಮೆಯುಳ್ಳವರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ಪ್ರಿಯರೇ, ನೀವು ಹೇಗೆ ನಡೆದುಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿದಂತೆಯೇ ಜೀವಿಸುತಿರುವಿರಿ. ಇದರಲ್ಲಿ ನೀವು ಹೆಚ್ಚೆಚ್ಚಾಗಿ ಮಾಡಬೇಕೆಂದು ನಾವು ಕಡೆಯದಾಗಿ ನಮಗೆ ಕರ್ತ ಆಗಿರುವ ಯೇಸುವಿನಲ್ಲಿ ನಿಮ್ಮನ್ನು ಪ್ರಬೋಧಿಸುತ್ತೇವೆ ಮತ್ತು ಉತ್ತೇಜಿಸುತ್ತೇವೆ.


ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ನಿಮ್ಮನ್ನು ಉತ್ತೇಜಿಸುವುದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಯೇಸುಕ್ರಿಸ್ತರ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.


ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನನ್ನು ನಡೆಸಿದೆವು.


ಈ ರಹಸ್ಯವು ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ದೇವರಾತ್ಮರ ಮೂಲಕ ಈಗ ಪ್ರಕಟಿಸಿದಂತೆ, ಬೇರೆ ತಲೆಮಾರುಗಳಲ್ಲಿದ್ದ ಜನರಿಗೆ ತಿಳಿಸಿರಲಿಲ್ಲ.


ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿವೆ.


ಪ್ರವಾದಿಗಳು ಇಬ್ಬರಾಗಲಿ, ಮೂವರಾಗಲಿ ಮಾತಾಡಲಿ, ಇತರರರು ವಿವೇಚನೆ ಮಾಡಲಿ.


ಪ್ರವಾದಿಸುವವನಾದರೋ, ಜನರ ಭಕ್ತಿವೃದ್ಧಿಗಾಗಿ, ಪ್ರೋತ್ಸಾಹಕ್ಕಾಗಿ, ಸಂತೈಸುವಿಕೆಗಾಗಿ ಮಾತನಾಡುತ್ತಾನೆ.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ದಿನದಲ್ಲಿ ನೀವು ನಿರ್ದೋಷಿಗಳಾಗಿರುವಂತೆ ಅವರು ಕೊನೆಯತನಕವೂ ನಿಮ್ಮನ್ನು ಬಲಪಡಿಸಿ ಕಾಯುವರು.


ಅದು ಪ್ರೋತ್ಸಾಹಗೊಳಿಸುವುದಾಗಿದ್ದರೆ, ಅವನು ಪ್ರೋತ್ಸಾಹಗೊಳಿಸಲಿ. ದಾನಕೊಡುವ ವರವಾಗಿದ್ದರೆ, ಅವನು ಧಾರಾಳವಾಗಿ ಕೊಡಲಿ. ನಾಯಕತ್ವ ವಹಿಸುವ ವರವಾಗಿದ್ದರೆ, ಅವನು ಶ್ರದ್ಧೆಯಿಂದ ಮಾಡಲಿ ದಯೆ ತೋರಿಸುವ ವರವಾಗಿದ್ದರೆ ಅದನ್ನು ಅವನು ಸಂತೋಷದಿಂದ ಮಾಡಲಿ.


ನಮಗೆ ಕೊಟ್ಟಿರುವ ದೇವರ ಕೃಪೆಗೆ ಅನುಸಾರವಾಗಿ ನಮಗೆ ಬೇರೆ ಬೇರೆ ವರಗಳಿರುತ್ತವೆ. ಒಬ್ಬನಿಗೆ ಪ್ರವಾದನಾ ವರವಾಗಿದ್ದರೆ, ಅದನ್ನು ಅವನ ವಿಶ್ವಾಸದ ಅಳತೆಗೆ ತಕ್ಕ ರೀತಿಯಲ್ಲಿ ಉಪಯೋಗಿಸಲಿ.


ಆ ಪ್ರದೇಶದಲ್ಲೆಲ್ಲಾ ಜನರಿಗೆ ಅನೇಕ ಪ್ರೋತ್ಸಾಹದ ಮಾತುಗಳನ್ನು ಹೇಳುತ್ತಾ ಪ್ರಯಾಣಮಾಡಿ ಗ್ರೀಸ್ ತಲುಪಿದನು.


ಅಲ್ಲಿ ಸ್ವಲ್ಪ ಸಮಯ ಕಳೆದನಂತರ ಅವನು ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಮತ್ತು ಫ್ರುಗ್ಯ ಪ್ರದೇಶದಲ್ಲೆಲ್ಲಾ ಸಂಚರಿಸುತ್ತಾ ಶಿಷ್ಯರಲ್ಲಿ ವಿಶ್ವಾಸವನ್ನು ಬಲಪಡಿಸಿದನು.


ಪೌಲನು ಸಿರಿಯ ಮತ್ತು ಕಿಲಿಕ್ಯ ಸೀಮೆಗಳನ್ನು ಹಾದುಹೋಗುತ್ತಾ, ಅಲ್ಲಿದ್ದ ಸಭೆಗಳ ನಂಬಿಕೆಯನ್ನು ಬಲಪಡಿಸಿದನು.


ಆಗ ಅಪೊಸ್ತಲರು ಮತ್ತು ಹಿರಿಯರು ಇಡೀ ಸಭೆಯ ಸಮ್ಮತಿ ಪಡೆದು, ಸಹೋದರರಲ್ಲಿ ನಾಯಕರಾಗಿದ್ದ ಬಾರ್ಸಬನೆಂದು ಕರೆಯಲಾದ ಯೂದ ಮತ್ತು ಸೀಲ ಎಂಬಿಬ್ಬರನ್ನು ಆಯ್ದುಕೊಂಡರು. ಅವರನ್ನು ಪೌಲ ಮತ್ತು ಬಾರ್ನಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಲು ನಿರ್ಧರಿಸಿದರು.


ಕೆಲವು ಜನರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು ಅಲ್ಲಿಯ ಸಹೋದರರಿಗೆ, “ಮೋಶೆ ಬೋಧಿಸಿದ ಪದ್ಧತಿಯಂತೆ ನೀವು ಸುನ್ನತಿ ಹೊಂದದಿದ್ದರೆ ನೀವು ರಕ್ಷಣೆ ಹೊಂದಲಾರಿರಿ,” ಎಂದು ಬೋಧಿಸತೊಡಗಿದರು.


ಈ ಸಮಯದಲ್ಲಿ ಯೆರೂಸಲೇಮಿನಿಂದ ಕೆಲವು ಪ್ರವಾದಿಗಳು ಅಂತಿಯೋಕ್ಯಕ್ಕೆ ಬಂದರು.


ಪೇತ್ರನು ಇನ್ನೂ ಅನೇಕ ಮಾತುಗಳಿಂದ ಅವರನ್ನು ಎಚ್ಚರಿಸಿ, ಸಾಕ್ಷಿ ನುಡಿದು, “ಈ ಕೆಟ್ಟ ಸಂತತಿಯಿಂದ ನಿಮ್ಮನ್ನು ರಕ್ಷಿಸಿಕೊಳ್ಳಿರಿ,” ಎಂದು ಹೇಳಿದನು.


ಈ ಕಾರಣದಿಂದ, ದೇವರ ಜ್ಞಾನವು ಸಹ ಹೇಳಿರುವುದೇನೆಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸೆಪಡಿಸುವರು.’


ಆದ್ದರಿಂದ ನೋಡಿರಿ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ನಿಯಮ ಬೋಧಕರನ್ನೂ ನಿಮ್ಮ ಬಳಿಗೆ ಕಳುಹಿಸುತ್ತೇನೆ. ಅವರಲ್ಲಿ ಕೆಲವರನ್ನು ಕೊಲ್ಲುವಿರಿ, ಶಿಲುಬೆಗೆ ಏರಿಸುವಿರಿ. ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸುವಿರಿ.


ಮೇದ್ಯರ ಅರಸನಾದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅವರಿಗೆ ಸಹಾಯಮಾಡಿ, ಅವನನ್ನು ರಕ್ಷಿಸಲು ನಾನು ನಿಂತುಕೊಂಡೆನು.


ಆದ್ದರಿಂದ ಸಭೆಯವರು ಅವರನ್ನು ಸಾಗಕಳುಹಿಸಲು, ಅವರು ಫೊಯಿನಿಕೆಯ ಮತ್ತು ಸಮಾರ್ಯದ ಮಾರ್ಗವಾಗಿ ಪ್ರಯಾಣ ಮಾಡುವಾಗ, ಯೆಹೂದ್ಯರಲ್ಲದವರ ಪರಿವರ್ತನೆಯನ್ನು ವಿವರವಾಗಿ ಅಲ್ಲಿಯವರೆಗೆ ತಿಳಿಸುತ್ತಾ ಸಹೋದರರೆಲ್ಲರಿಗೂ ಮಹಾಸಂತೋಷವನ್ನುಂಟುಮಾಡಿದರು.


ಆದ್ದರಿಂದ ನಾವು ಈ ಸಂಗತಿಗಳನ್ನು ಬಾಯಿಮಾತುಗಳಿಂದ ಪ್ರಕಟಿಸುವುದಕ್ಕಾಗಿ ಯೂದ ಮತ್ತು ಸೀಲರನ್ನು ಕಳುಹಿಸುತ್ತಿದ್ದೇವೆ.


ಸಭೆಯವರು ಅದನ್ನು ಓದಿ ಅದರಲ್ಲಿದ್ದ ಆದರಣೆ ಮಾತುಗಳಿಗಾಗಿ ಸಂತೋಷಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು