Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:4 - ಕನ್ನಡ ಸಮಕಾಲಿಕ ಅನುವಾದ

4 ಅವರು ಯೆರೂಸಲೇಮನ್ನು ತಲುಪಿದಾಗ, ಸಭೆಯವರು, ಅಪೊಸ್ತಲರು ಹಾಗೂ ಹಿರಿಯರು ಅವರನ್ನು ಸ್ವಾಗತಿಸಿದರು. ದೇವರು ತಮ್ಮ ಮುಖಾಂತರವಾಗಿ ಮಾಡಿದ್ದನ್ನು ಅವರು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಯೆರೂಸಲೇಮಿಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪೌಲ, ಬಾರ್ನಬ ಮತ್ತು ಸಂಗಡಿಗರು ಜೆರುಸಲೇಮಿಗೆ ಆಗಮಿಸಿದಾಗ, ಅಲ್ಲಿಯ ಕ್ರೈಸ್ತಸಭೆ ಪ್ರೇಷಿತರ ಹಾಗೂ ಪ್ರಮುಖರ ಸಮೇತ ಅವರನ್ನು ಸ್ವಾಗತಿಸಿತು. ಆಗ ಅವರು, ದೇವರು ತಮ್ಮೊಡನೆ ಇದ್ದು, ಸಾಧಿಸಿದ ಎಲ್ಲಾ ಕಾರ್ಯಗಳನ್ನು ವರದಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರು ಯೆರೂಸಲೇವಿುಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪೌಲ ಬಾರ್ನಬರು ಮತ್ತು ಇತರರು ಜೆರುಸಲೇಮನ್ನು ತಲುಪಿದರು. ಅಪೊಸ್ತಲರು, ಹಿರಿಯರು ಮತ್ತು ಸಭೆಯವರು ಇವರನ್ನು ಸ್ವಾಗತಿಸಿದರು. ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಪೌಲ ಬಾರ್ನಬರು ಮತ್ತು ಇತರರು ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಪಾವ್ಲು ಬಾರ್ನಾಬಾಸ್ ಅನಿ ಉಲ್ಲಿ ಲೊಕಾ ಜೆರುಜಲೆಮಾಕ್ ಅಪೊಸ್ತಲಾನಿ, ಜಾಂನ್ತ್ಯಾ ಲೊಕಾನಿ ಅನಿ ತಾಂಡ್ಯಾಚ್ಯಾ ಲೊಕಾನಿ ತೆಂಕಾ ಸ್ವಾಗತ್ ಕರ್‍ಲ್ಯಾನಿ, ತೆನಿ ಸಗ್ಳ್ಯಾನಿ ದೆವಾನ್ ಅಪ್ಲ್ಯಾ ವಾಂಗ್ಡಾ ಕರಲ್ಲ್ಯಾ ಬರ್‍ಯಾ ಕಾಮಾಂಚ್ಯಾ ವಿಶಯಾತ್ ಥೈತ್ಲ್ಯಾ ಲೊಕಾಕ್ನಿ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:4
20 ತಿಳಿವುಗಳ ಹೋಲಿಕೆ  

ಇದಕ್ಕೆ ಜನರು ಮೌನವಾಗಿದ್ದು, ಯೆಹೂದ್ಯರಲ್ಲದವರ ಮಧ್ಯದಲ್ಲಿ ದೇವರು ತಮ್ಮ ಮೂಲಕ ಮಾಡಿದ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಕುರಿತು ಬಾರ್ನಬ ಮತ್ತು ಪೌಲ ಹೇಳುವುದನ್ನು ಕೇಳಿಸಿಕೊಂಡರು.


ಇಲ್ಲಿಗೆ ತಲುಪಿದಾಗ, ಅವರು ಸಭೆಯನ್ನು ಒಟ್ಟುಕೂಡಿಸಿದರು. ದೇವರು ಅವರಿಗೆ ತಮ್ಮ ಮುಖಾಂತರವಾಗಿ ಮಾಡಿದ್ದನ್ನೂ ಯೆಹೂದ್ಯರಲ್ಲದವರಿಗೂ ದೇವರು ವಿಶ್ವಾಸದ ದ್ವಾರವನ್ನು ತೆರೆದಿರುವುದನ್ನೂ ವರದಿಮಾಡಿದರು.


ಆದ್ದರಿಂದ ಸಭೆಯವರು ಅವರನ್ನು ಸಾಗಕಳುಹಿಸಲು, ಅವರು ಫೊಯಿನಿಕೆಯ ಮತ್ತು ಸಮಾರ್ಯದ ಮಾರ್ಗವಾಗಿ ಪ್ರಯಾಣ ಮಾಡುವಾಗ, ಯೆಹೂದ್ಯರಲ್ಲದವರ ಪರಿವರ್ತನೆಯನ್ನು ವಿವರವಾಗಿ ಅಲ್ಲಿಯವರೆಗೆ ತಿಳಿಸುತ್ತಾ ಸಹೋದರರೆಲ್ಲರಿಗೂ ಮಹಾಸಂತೋಷವನ್ನುಂಟುಮಾಡಿದರು.


ಯೆಹೂದ್ಯರಲ್ಲದವರನ್ನು ದೇವರಿಗೆ ವಿಧೇಯರಾಗುವುದಕ್ಕಾಗಿ ಕ್ರಿಸ್ತನು ನನ್ನ ಮೂಲಕ ಮಾತಿನಿಂದಲೂ ಕೃತ್ಯದಿಂದಲೂ


ನಾವು ಯೆರೂಸಲೇಮನ್ನು ತಲುಪಿದಾಗ, ಸಹೋದರರು ನಮ್ಮನ್ನು ಸಂತೋಷದಿಂದ ಸ್ವೀಕರಿಸಿದರು.


ಈ ಬೋಧನೆಯನ್ನು ಒಪ್ಪದಿರುವ ಯಾರಾದರೂ ನಿಮ್ಮ ಬಳಿಗೆ ಬಂದರೆ, ಅವರನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವರಿಗೆ, “ವಂದನೆ” ಎಂದೂ ಹೇಳಬೇಡಿರಿ.


ನನ್ನ ಜೊತೆ ಸೆರೆಯಾಳಾದ ಅರಿಸ್ತಾರ್ಕ, ಬಾರ್ನಬನ ಸಹೋದರಿಯ ಮಗನಾದ ಮಾರ್ಕನು ನಿಮಗೆ ವಂದನೆ ಹೇಳುತ್ತಾರೆ. ಮಾರ್ಕನ ವಿಷಯದಲ್ಲಿ ನೀವು ಮಾರ್ಗದರ್ಶನ ಹೊಂದಿದ್ದೀರಲ್ಲಾ, ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ.


ನೀವು ಹೊಂದಿರುವ ದೇವರ ಕೃಪೆಯನ್ನು ವ್ಯರ್ಥಮಾಡಿಕೊಳ್ಳಬೇಡಿರೆಂದು ದೇವರ ಜೊತೆಕೆಲಸದವರಾದ ನಾವು ನಿಮ್ಮಲ್ಲಿ ಬೇಡಿಕೊಳ್ಳುತ್ತೇವೆ,


ಹೇಗೆಂದರೆ, ದೇವರು ಮನುಷ್ಯರ ಪಾಪಗಳನ್ನು ಅವರಿಗೆ ವಿರೋಧವಾಗಿ ಲೆಕ್ಕಿಸದೆ, ಕ್ರಿಸ್ತ ಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಂದಿಗೆ ಸಮಾಧಾನಪಡಿಸುತ್ತಿದ್ದಾರೆ. ಈ ಸಮಾಧಾನದ ಸಂದೇಶವನ್ನೇ ದೇವರು ನಮಗೊಪ್ಪಿಸಿ ಕೊಟ್ಟಿದ್ದಾರೆ.


ಆದರೆ ನಾನು ಎಂಥವನಾಗಿದ್ದೇನೋ, ಅದು ದೇವರ ಕೃಪೆಯಿಂದಲೇ ಆಗಿರುತ್ತದೆ. ನನಗುಂಟಾದ ದೇವರ ಕೃಪೆಯು ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.


ದೇವರಿಗೆ ಮಹಿಮೆಯಾಗುವುದಕ್ಕಾಗಿ ಕ್ರಿಸ್ತನು ನಿಮ್ಮನ್ನು ಸ್ವೀಕರಿಸಿದಂತೆಯೇ ನೀವು ಒಬ್ಬರನ್ನೊಬ್ಬರು ಸ್ವೀಕರಿಸಿರಿ.


ಪೌಲನು ಅವರನ್ನು ವಂದಿಸಿ, ತನ್ನ ಸೇವೆಯ ಮೂಲಕ ದೇವರು ಯೆಹೂದ್ಯರಲ್ಲದವರ ಮಧ್ಯದಲ್ಲಿ ಮಾಡಿದ ಕಾರ್ಯಗಳನ್ನು ವಿವರಿಸಿದನು.


ಅಪೊಲ್ಲೋಸನು ಅಖಾಯಕ್ಕೆ ಹೋಗಲು ಬಯಸಿದಾಗ, ಸಹೋದರರು ಅವನನ್ನು ಪ್ರೋತ್ಸಾಹಿಸಿ, ಅವನನ್ನು ಸ್ವೀಕರಿಸುವಂತೆ ಅಲ್ಲಿಯ ಶಿಷ್ಯರಿಗೆ ಪತ್ರವನ್ನು ಬರೆದುಕೊಟ್ಟರು. ಅವನು ಅಲ್ಲಿಗೆ ತಲುಪಿದಾಗ ದೇವರ ಕೃಪೆಯಿಂದ ವಿಶ್ವಾಸವಿಟ್ಟವರಿಗೆ ಅವನು ಬಹಳ ಸಹಾಯಮಾಡಿದನು.


“ನಿಮ್ಮನ್ನು ಸ್ವಾಗತಿಸುವವರು ನನ್ನನ್ನು ಸ್ವಾಗತಿಸುತ್ತಾರೆ. ನನ್ನನ್ನು ಸ್ವಾಗತಿಸಿದವರು, ನನ್ನನ್ನು ಕಳುಹಿಸಿದ ತಂದೆಯನ್ನು ಸ್ವಾಗತಿಸುತ್ತಾರೆ.


ಇದಕ್ಕನುಗುಣವಾಗಿ ಬಾರ್ನಬ ಮತ್ತು ಸೌಲರ ಮುಖಾಂತರ ಹಿರಿಯರಿಗೆ ತಮ್ಮ ದೇಣಿಗೆಗಳನ್ನು ಕಳುಹಿಸಿದರು.


ಇದರಿಂದ ಪೌಲ, ಬಾರ್ನಬರು ಅವರೊಂದಿಗೆ ಭಿನ್ನಾಭಿಪ್ರಾಯವುಳ್ಳವರಾಗಿ ತೀವ್ರ ವಿವಾದವುಂಟಾಯಿತು. ಈ ಪ್ರಶ್ನೆಯ ವಿಷಯದಲ್ಲಿ ಅಪೊಸ್ತಲರನ್ನೂ ಹಿರಿಯರನ್ನೂ ಭೇಟಿಯಾಗಲು, ತಮ್ಮಲ್ಲಿ ಬೇರೆ ಕೆಲವರು ಪೌಲ, ಬಾರ್ನಬರೊಂದಿಗೆ ಯೆರೂಸಲೇಮಿಗೆ ಹೋಗಬೇಕೆಂದು ನಿರ್ಣಯಿಸಲಾಯಿತು.


ಅಪೊಸ್ತಲರು ಮತ್ತು ಹಿರಿಯರು ಈ ವಿಷಯದ ಕುರಿತಾಗಿ ವಿಚಾರಿಸಲು ಸಭೆ ಸೇರಿದರು.


ಆಗ ಅಪೊಸ್ತಲರು ಮತ್ತು ಹಿರಿಯರು ಇಡೀ ಸಭೆಯ ಸಮ್ಮತಿ ಪಡೆದು, ಸಹೋದರರಲ್ಲಿ ನಾಯಕರಾಗಿದ್ದ ಬಾರ್ಸಬನೆಂದು ಕರೆಯಲಾದ ಯೂದ ಮತ್ತು ಸೀಲ ಎಂಬಿಬ್ಬರನ್ನು ಆಯ್ದುಕೊಂಡರು. ಅವರನ್ನು ಪೌಲ ಮತ್ತು ಬಾರ್ನಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಲು ನಿರ್ಧರಿಸಿದರು.


ಅವರು ಪಟ್ಟಣಗಳಲ್ಲಿ ಪ್ರಯಾಣಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರು, ಹಿರಿಯರು ತೆಗೆದುಕೊಂಡ ತೀರ್ಮಾನಗಳನ್ನು ಜನರು ಅನುಸರಿಸಿ ನಡೆಯುವಂತೆ ಅವರಿಗೆ ಬೋಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು