ಅಪೊಸ್ತಲರ ಕೃತ್ಯಗಳು 15:8 - ಕನ್ನಡ ಸಮಕಾಲಿಕ ಅನುವಾದ8 ಹೃದಯವನ್ನು ಬಲ್ಲ ದೇವರು, ನಮಗೆ ಪವಿತ್ರಾತ್ಮ ದೇವರನ್ನು ಕೊಟ್ಟಂತೆಯೇ ಯಹೂದ್ಯರಲ್ಲದವರಿಗೂ ದಯಪಾಲಿಸಿ, ಅವರ ಬಗ್ಗೆ ಸಾಕ್ಷಿಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಸಾಕ್ಷಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮಾನವನ ಅಂತರಂಗವನ್ನು ಅರಿತ ದೇವರು ನಿಮಗೆ ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮ ಅವರನ್ನು ಕೊಟ್ಟರು. ಅವರೂ ತಮ್ಮವರೇ ಎಂದು ವ್ಯಕ್ತಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರನ್ನು ತನ್ನ ಜನರೆಂದು ಸಾಕ್ಷಿಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಎಲ್ಲಾ ಜನರ ಆಲೋಚನೆಗಳನ್ನು ಬಲ್ಲ ದೇವರು ಯೆಹೂದ್ಯರಲ್ಲದ ಜನರನ್ನೂ ಸ್ವೀಕರಿಸಿಕೊಂಡನು. ದೇವರು ನಮಗೆ ಪವಿತ್ರಾತ್ಮನನ್ನು ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮನನ್ನು ಕೊಟ್ಟು ಇದನ್ನು ರುಜುವಾತುಪಡಿಸಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಸಗ್ಳ್ಯಾ ಲೊಕಾಂಚಿ ಯೆವ್ಜನಿಯಾಬಿ ಗೊತ್ತ್ ಹೊತ್ತ್ಯಾ ದೆವಾನ್ ಜುದೆವ್ ನ್ಹಯ್ ಹೊಲ್ಲ್ಯಾ ಲೊಕಾಕ್ನಿ ಅಪ್ಲಿ ಲೊಕಾ ಮನುನ್ ಸಾಕ್ಷಿ ದಿಲ್ಯಾನ್. ದೆವಾನ್ ಅಮ್ಕಾ ದಿಲ್ಲ್ಯಾ ಸಾರ್ಕೆಚ್ ತೆಂಕಾಬಿ ಪವಿತ್ರ್ ಆತ್ಮೊ ದಿವ್ನ್ ಹೆ ಖರೆ ಮನುನ್ ದಾಕ್ವುನ್ ದಿಲ್ಯಾನ್. ಅಧ್ಯಾಯವನ್ನು ನೋಡಿ |
ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.
“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.