Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:19 - ಕನ್ನಡ ಸಮಕಾಲಿಕ ಅನುವಾದ

19 ಅವಳ ಯಜಮಾನರು ತಾವು ಹಣ ಸಂಪಾದಿಸುವ ನಿರೀಕ್ಷೆಯೇ ಹೋಯಿತೆಂದು ತಿಳಿದು, ಪೌಲ ಸೀಲರನ್ನು ಹಿಡಿದು ಸಂತೆಸ್ಥಳದಲ್ಲಿದ್ದ ಅಧಿಕಾರಿಗಳ ಮುಂದೆ ವಿಚಾರಣೆಗಾಗಿ ಎಳೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಮತ್ತು ಸೀಲನನ್ನೂ ಹಿಡಿದು ಮಾರುಕಟ್ಟೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹಣ ಗಳಿಸುತ್ತಿದ್ದ ಅವಳ ಯಜಮಾನನಿಗೆ ನಿರಾಶೆಯಾಯಿತು. ಅವರು ಪೌಲ ಮತ್ತು ಸೀಲರನ್ನು ಬಂಧಿಸಿ ಸಾರ್ವಜನಿಕ ನ್ಯಾಯಸ್ಥಾನದಲ್ಲಿದ್ದ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಚಾವಡಿಗೆ ಅಧಿಕಾರಿಗಳ ಬಳಿಗೆ ಎಳಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಇದನ್ನು ಕಂಡ ಅವಳ ಯಜಮಾನರು ಈಗ ಆಕೆಯಿಂದ ಹಣಗಳಿಸಲು ಸಾಧ್ಯವಿಲ್ಲವೆಂದು ಅರಿತುಕೊಂಡರು. ಆದ್ದರಿಂದ ಅವರು ಪೌಲ ಸೀಲರನ್ನು ಹಿಡಿದು ಪಟ್ಟಣದ ನ್ಯಾಯಸ್ಥಾನಕ್ಕೆ ಎಳೆದುಕೊಂಡು ಹೋದರು. ನಗರಾಧಿಕಾರಿಗಳು ಅಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಹೆ ಬಗಟಲ್ಲ್ಯಾ ತಿಜಾ ಯಜಮಾನಾಕ್ ಅತ್ತಾ ತಿಜ್ಯಾಕ್ನಾ ಪೈಸೆ ಖಮ್ವುಕ್ ಹೊಯ್ನಾ ಮನ್ತಲೆ ಕಳುನ್ ಯೆಲೆ, ತಸೆ ಹೊವ್ನ್ ತೆನಿ ಪಾವ್ಲುಕ್ ಅನಿ ಸಿಲಾಸಾಕ್ ಧರುನ್ ಶಾರಾತ್ಲ್ಯಾ ಝಡ್ತಿ ಕರ್‍ತಲ್ಯಾ ಜಾಗ್ಯಾಕ್ ಗಾಂವ್ಚೆ ಅಧಿಕಾರಿ ಹೊತ್ತ್ಯಾಕ್ಡೆ ವಡುನ್ ನ್ಹೆಲ್ಯಾನಿ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:19
24 ತಿಳಿವುಗಳ ಹೋಲಿಕೆ  

ಇಡೀ ಪಟ್ಟಣದಲ್ಲೇ ಕೋಲಾಹಲವೆದ್ದಿತು. ಜನರು ಎಲ್ಲಾ ದಿಕ್ಕುಗಳಿಂದ ಓಡೋಡುತ್ತಾ ಬಂದು. ಪೌಲನನ್ನು ಹಿಡಿದುಕೊಂಡು ದೇವಾಲಯದೊಳಗಿಂದ ಹೊರಗೆಳೆದುಕೊಂಡು ಹೋದರು. ಕೂಡಲೇ ದ್ವಾರಗಳನ್ನು ಮುಚ್ಚಿಬಿಟ್ಟರು.


ಆದರೆ ಅಲ್ಲಿ ಅವರಿಲ್ಲದಿರುವುದನ್ನು ಕಂಡು ಅವರು ಯಾಸೋನನನ್ನೂ ಕೆಲವು ಸಹೋದರರನ್ನೂ ಎಳೆದುಕೊಂಡು ಬಂದು ಪಟ್ಟಣದ ಅಧಿಕಾರಿಗಳ ಮುಂದೆ ನಿಲ್ಲಿಸಿ, “ಲೋಕವನ್ನು ತಲೆಕೆಳಗೆ ಮಾಡಿರುವ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.


ನಾವು ಪೆಟ್ಟು ತಿಂದಿದ್ದೇವೆ, ಸೆರೆವಾಸವಾಗಿದ್ದೇವೆ, ಕಲಹಗಳನ್ನು ಅನುಭವಿಸಿದ್ದೇವೆ, ಶ್ರಮೆಪಟ್ಟು ದುಡಿದಿದ್ದೇವೆ, ರಾತ್ರಿಯಲ್ಲಿ ನಿದ್ರೆಗೆಟ್ಟಿದ್ದೇವೆ, ಊಟವಿಲ್ಲದೆ ಹಸಿದಿದ್ದೇವೆ,


ಒಂದು ದಿನ ನಾವು ಪ್ರಾರ್ಥನೆಯ ಸ್ಥಳಕ್ಕೆ ಹೋಗುತ್ತಿದ್ದೆವು, ಆಗ ಭವಿಷ್ಯ ಹೇಳುವ ದುರಾತ್ಮವುಳ್ಳ ದಾಸಿಯೊಬ್ಬಳು ನಮ್ಮನ್ನು ಭೇಟಿಯಾದಳು. ಭವಿಷ್ಯ ಹೇಳುವುದರಿಂದ ಆಕೆ ತನ್ನ ಯಜಮಾನನಿಗೆ ಬಹಳ ಹಣ ಸಂಪಾದಿಸುತ್ತಿದ್ದಳು.


ಆದರೆ ಸೌಲನು ಸಭೆಯನ್ನು ಹಾಳುಮಾಡಲು ಪ್ರಾರಂಭಿಸಿದನು. ಅವನು ಮನೆಮನೆಗಳಿಗೆ ಹೋಗಿ ಸ್ತ್ರೀಪುರುಷರನ್ನು ಹೊರಗೆಳೆದು ಅವರನ್ನು ಸೆರೆಮನೆಯಲ್ಲಿ ಹಾಕಿಸಿದನು.


ಅವರು ನಮ್ಮ ಕರ್ತ ಕ್ರಿಸ್ತ ಯೇಸುವಿನ ಹೆಸರಿನ ಪರವಾಗಿ ತಮ್ಮ ಪ್ರಾಣಗಳನ್ನೇ ಬಿಟ್ಟು ಕೊಡುವವರಾಗಿದ್ದಾರೆ.


ಅದೇ ಸಮಯದಲ್ಲಿ ಅಂತಿಯೋಕ್ಯ ಮತ್ತು ಇಕೋನ್ಯದಿಂದ ಕೆಲವು ಜನ ಯೆಹೂದ್ಯರು ಬಂದು ಜನಸಮೂಹವನ್ನು ತಮ್ಮ ಕಡೆಗೆ ಒಲಿಸಿಕೊಂಡು, ಪೌಲನ ಮೇಲೆ ಕಲ್ಲೆಸೆಯಲು, ಅವನು ಸತ್ತನೆಂದು ಭಾವಿಸಿ ಅವನನ್ನು ಊರ ಹೊರಗೆ ಎಳೆದು ಹಾಕಿದರು.


ಯೆಹೂದ್ಯರೂ ಯೆಹೂದ್ಯರಲ್ಲದವರೂ ತಮ್ಮ ನಾಯಕರನ್ನು ಕೂಡಿಕೊಂಡು ಪೌಲ, ಬಾರ್ನಬರನ್ನು ಅವಮಾನ ಮಾಡಿ ಅವರ ಮೇಲೆ ಕಲ್ಲೆಸೆಯಬೇಕೆಂದು ನುಗ್ಗಿದಾಗ,


ನನ್ನ ಹೆಸರಿನ ನಿಮಿತ್ತವಾಗಿ ಅವನು ಎಷ್ಟು ಕಷ್ಟಪಡಬೇಕೆಂಬುದನ್ನು ನಾನು ಅವನಿಗೆ ತೋರಿಸುವೆನು,” ಎಂದು ಹೇಳಿದರು.


“ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು, ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ನನ್ನ ನಿಮಿತ್ತವಾಗಿ ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಿಸುವರು. ಹೀಗೆ ಇದು ಅವರಿಗೆ ಸಾಕ್ಷಿಯಾಗಿರುವುದು.


“ಆಗ ಜನರು ನಿಮ್ಮನ್ನು ಹಿಂಸೆಪಡಿಸುವುದಕ್ಕಾಗಿ ಒಪ್ಪಿಸಿ ನಿಮ್ಮನ್ನು ಕೊಲ್ಲುವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗದವರು ನಿಮ್ಮನ್ನು ದ್ವೇಷಮಾಡುವರು.


ನೀವಾದರೋ ಬಡವರನ್ನು ಅವಮಾನ ಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?


ಆಗ ಅಪೊಸ್ತಲರು ಮತ್ತು ಹಿರಿಯರು ಇಡೀ ಸಭೆಯ ಸಮ್ಮತಿ ಪಡೆದು, ಸಹೋದರರಲ್ಲಿ ನಾಯಕರಾಗಿದ್ದ ಬಾರ್ಸಬನೆಂದು ಕರೆಯಲಾದ ಯೂದ ಮತ್ತು ಸೀಲ ಎಂಬಿಬ್ಬರನ್ನು ಆಯ್ದುಕೊಂಡರು. ಅವರನ್ನು ಪೌಲ ಮತ್ತು ಬಾರ್ನಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಲು ನಿರ್ಧರಿಸಿದರು.


ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಬೇರಾಗಿದೆ. ಕೆಲವರು ಹಣಕ್ಕಾಗಿ ಆತುರಪಟ್ಟು ನಂಬಿಕೆಯಿಂದ ದೂರಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.


ಅನಂತರ ಅವರು ಅರಸನ ಮುಂದೆ ಬಂದು ರಾಜಾಜ್ಞೆಯ ವಿಷಯವಾಗಿ: “ಅರಸನೇ ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ, ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡುವರೋ, ಅವರನ್ನು ಸಿಂಹದ ಗವಿಯಲ್ಲಿ ಹಾಕಲಾಗುವುದು ಎಂಬ ಶಾಸನಕ್ಕೆ ನೀನು ರುಜು ಹಾಕಲಿಲ್ಲವೇ?” ಎಂದರು. ಅದಕ್ಕೆ ಅರಸನು ಉತ್ತರವಾಗಿ, “ಮೇದ್ಯ, ಪಾರಸಿಯರ ಬದಲಾಗದಂಥ ಧರ್ಮವಿಧಿಗಳ ಪ್ರಕಾರ ಅದು ಸ್ಥಿರವಾದ ನಿಬಂಧನೆ” ಎಂದನು.


ಆದರೆ ಪೌಲನು ಸೀಲನನ್ನು ಆರಿಸಿಕೊಂಡು ಹೋದನು. ವಿಶ್ವಾಸಿಗಳಿಂದ ಅವನನ್ನು ಕರ್ತ ಯೇಸುವಿನ ಕೃಪೆಗೆ ಒಪ್ಪಿಸಿ, ಕಳುಹಿಸಿಕೊಟ್ಟುರು.


ಅವರನ್ನು ನ್ಯಾಯಾಧಿಪತಿಗಳ ಮುಂದೆ ನಿಲ್ಲಿಸಿ, “ಯೆಹೂದ್ಯರಾಗಿರುವ ಇವರು, ನಮ್ಮ ಪಟ್ಟಣದಲ್ಲಿ ಬಹು ಗಲಿಬಿಲಿ ಮಾಡುತ್ತಿದ್ದಾರೆ.


ಸುಮಾರು ಮಧ್ಯರಾತ್ರಿಯಲ್ಲಿ ಪೌಲ, ಸೀಲರು ಪ್ರಾರ್ಥನೆ ಮಾಡುವವರಾಗಿ ಸ್ತುತಿಗೀತೆಯಿಂದ ದೇವರಿಗೆ ಸ್ತೋತ್ರ ಮಾಡುತ್ತಿದ್ದರು. ಸೆರೆಮನೆಯಲ್ಲಿ ಇತರ ಕೈದಿಗಳು ಅದನ್ನು ಆಲಿಸುತ್ತಿದ್ದರು.


ಅವನು ದೀಪ ತರಬೇಕೆಂದು ಹೇಳಿ ಓಡಿಹೋಗಿ ಭಯದಿಂದ ನಡುಗುತ್ತಾ ಪೌಲ, ಸೀಲರ ಮುಂದೆ ಅಡ್ಡಬಿದ್ದನು.


ನೀವು ನನ್ನಲ್ಲಿ ಕಂಡು, ಈಗ ನನ್ನಲ್ಲಿರುವುದೆಂದು ಕೇಳುತ್ತಿರುವ ಅದೇ ಹೋರಾಟದ ಅನುಭವವೇ ನಿಮಗೂ ಇದೆ.


ಫಿಲಿಪ್ಪಿ ಪಟ್ಟಣದಲ್ಲಿ ಮುಂಚೆ ನಮಗೆ ಹಿಂಸೆ ಮತ್ತು ಅವಮಾನವು ಸಂಭವಿಸಿದ್ದನ್ನು ನೀವು ಬಲ್ಲಿರಿ. ಹಾಗಿದ್ದರೂ ನಾವು ನಮ್ಮ ದೇವರ ಸಹಾಯದಿಂದ ಧೈರ್ಯಗೊಂಡು ಬಹು ವಿರೋಧದ ನಡುವೆ ನಿಮಗೆ ಸುವಾರ್ತೆಯನ್ನು ತಿಳಿಸಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು