Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:20 - ಕನ್ನಡ ಸಮಕಾಲಿಕ ಅನುವಾದ

20 ಅವರನ್ನು ನ್ಯಾಯಾಧಿಪತಿಗಳ ಮುಂದೆ ನಿಲ್ಲಿಸಿ, “ಯೆಹೂದ್ಯರಾಗಿರುವ ಇವರು, ನಮ್ಮ ಪಟ್ಟಣದಲ್ಲಿ ಬಹು ಗಲಿಬಿಲಿ ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರನ್ನು ಅಧಿಕಾರಿಗಳ ಮುಂದೆ ತಂದು; “ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕದಡುತ್ತಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅಲ್ಲಿದ್ದ ರೋಮಿನ ನ್ಯಾಯಾಧಿಪತಿಗಳ ಮುಂದೆ ನಿಲ್ಲಿಸಿ, “ಇವರು ನಮ್ಮ ಪಟ್ಟಣದಲ್ಲಿ ಗಲಭೆ ಎಬ್ಬಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರನ್ನು ಅಧಿಪತಿಗಳ ಮುಂದೆ ತಂದು - ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಗಲಿಬಿಲಿ ಮಾಡುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆ ಜನರು ಪೌಲ ಸೀಲರನ್ನು ನ್ಯಾಯಾಧೀಶರ ಬಳಿಗೆ ತಂದು, “ಈ ಜನರು ಯೆಹೂದ್ಯರು. ಇವರು ನಮ್ಮ ಪಟ್ಟಣದಲ್ಲಿ ಗಲಭೆ ಎಬ್ಬಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತ್ಯಾ ಲೊಕಾನಿ ಪಾವ್ಲು ಅನಿ ಸಿಲಾಸಾಕ್ ಝಡ್ತಿ ಕರ್‍ತಲ್ಯಾ ಅಧಿಕಾರಿಕ್ಡೆ ಬಲ್ವುನ್ ಹಾನುನ್ ಹೆನಿ ಜುದೆವಾಂಚಿ ಲೊಕಾ ಅಮ್ಚ್ಯಾ ಶಾರಾತ್ ಧಾಂದಲ್ ಉಟ್ವುಲಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:20
14 ತಿಳಿವುಗಳ ಹೋಲಿಕೆ  

ವ್ಯಭಿಚಾರಿಗಳೇ, ಇಹಲೋಕ ಸ್ನೇಹವು ದೇವರೊಂದಿಗಿರುವ ಶತ್ರುತ್ವ ಎಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರಬೇಕೆಂಬುವವನು ದೇವರಿಗೆ ಶತ್ರುವಾಗಿದ್ದಾನೆ.


ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.


ಆದರೆ ನಿನ್ನ ಅಭಿಪ್ರಾಯಗಳೇನೆಂಬುದನ್ನು ಕೇಳಲು ನಮಗೆ ಮನಸ್ಸಿದೆ. ಏಕೆಂದರೆ ಈ ಪಂಥದ ವಿರುದ್ಧವಾಗಿ ಎಲ್ಲಾ ಕಡೆಗಳಲ್ಲಿ ಜನರು ಮಾತನಾಡುತ್ತಿರುವುದನ್ನು ನಾವು ಬಲ್ಲೆವು,” ಎಂದರು.


ಆದರೆ ಅವನು ಯೆಹೂದ್ಯನೆಂದು ಜನರು ತಿಳಿದಾಗ, “ಎಫೆಸದ ಅರ್ತೆಮೀ ದೇವಿ ಮಹಾದೇವಿ!” ಎಂದು ಒಕ್ಕೊರಲಿನಿಂದ ಎರಡು ತಾಸುಗಳವರೆಗೆ ಆರ್ಭಟಿಸುತ್ತಲೇ ಇದ್ದರು.


ಅಲ್ಲಿ ಅಕ್ವಿಲ ಎಂಬ ಯೆಹೂದ್ಯನನ್ನು ಕಂಡನು. ಅವನು ಪೊಂತ ಎಂಬ ಊರಿನ ನಿವಾಸಿ. ಎಲ್ಲಾ ಯೆಹೂದ್ಯರು ರೋಮ್ ಪಟ್ಟಣ ಬಿಟ್ಟು ಹೊರಟುಹೋಗಬೇಕೆಂದು ಚಕ್ರವರ್ತಿ ಕ್ಲೌದ್ಯನು ಆಜ್ಞೆ ಹೊರಡಿಸಿದ್ದರಿಂದ, ಅವನು ತನ್ನ ಹೆಂಡತಿ ಪ್ರಿಸ್ಕಿಲ್ಲಳೊಂದಿಗೆ ಇತ್ತೀಚೆಗೆ ಇಟಲಿಯನ್ನು ಬಿಟ್ಟು ಬಂದಿದ್ದನು. ಪೌಲನು ಅವರನ್ನು ನೋಡಲು ಹೋದನು.


ಇದನ್ನು ಕೇಳಿ ಹೆರೋದ ರಾಜನು ಮತ್ತು ಯೆರೂಸಲೇಮಿನ ಜನರೆಲ್ಲರು ಕಳವಳಗೊಂಡರು.


ಆಗ ಆ ಪ್ರಧಾನರು ಅರಸನಿಗೆ, “ಈ ಮನುಷ್ಯನು ಸಾಯಬೇಕು; ಇವನು ಅವರ ಸಂಗಡ ಇಂಥಾ ಮಾತುಗಳನ್ನು ಆಡಿ, ಈ ಪಟ್ಟಣದಲ್ಲಿ ಉಳಿದ ಎಲ್ಲಾ ಸೈನಿಕರನ್ನೂ, ಎಲ್ಲಾ ಜನರನ್ನೂ ಎದೆಗುಂದುವಂತೆ ಮಾಡುತ್ತಿದ್ದಾನೆ. ಈ ಮನುಷ್ಯನು ಈ ಜನರ ಕ್ಷೇಮವನ್ನಲ್ಲ, ಅವರ ಹಾನಿಯನ್ನೇ ಹಾರೈಸುತ್ತಾನೆ,” ಎಂದು ಹೇಳಿದರು.


ಅವಳ ಯಜಮಾನರು ತಾವು ಹಣ ಸಂಪಾದಿಸುವ ನಿರೀಕ್ಷೆಯೇ ಹೋಯಿತೆಂದು ತಿಳಿದು, ಪೌಲ ಸೀಲರನ್ನು ಹಿಡಿದು ಸಂತೆಸ್ಥಳದಲ್ಲಿದ್ದ ಅಧಿಕಾರಿಗಳ ಮುಂದೆ ವಿಚಾರಣೆಗಾಗಿ ಎಳೆದುಕೊಂಡು ಹೋದರು.


ರೋಮನವರಾದ ನಾವು ಸ್ವೀಕರಿಸಲೂ ಇಲ್ಲವೆ ಅನುಸರಿಸಲೂ ಆಗದಂಥಾ ಆಚಾರಗಳನ್ನು ಪ್ರಕಟಿಸುತ್ತಿದ್ದಾರೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು