Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:26 - ಕನ್ನಡ ಸಮಕಾಲಿಕ ಅನುವಾದ

26 ಆಗ ತಕ್ಷಣವೇ ಭೀಕರವಾದ ಭೂಕಂಪವಾಗಿ ಸೆರೆಮನೆಯ ಅಸ್ತಿವಾರವು ಕದಲಿತು. ಕೂಡಲೇ ಸೆರೆಮನೆಯ ಎಲ್ಲಾ ಬಾಗಿಲುಗಳು ತೆರೆದವು. ಎಲ್ಲರನ್ನು ಬಂಧಿಸಿದ್ದ ಸರಪಣಿಗಳು ಸಡಿಲಗೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇದ್ದಕ್ಕಿದ್ದಂತೆ ಭೀಕರ ಭೂಕಂಪ ಉಂಟಾಯಿತು. ಸೆರೆಮನೆಯ ಅಸ್ತಿವಾರವೇ ಕದಲಿತು. ಆ ಕ್ಷಣವೇ ಕದಗಳೆಲ್ಲಾ ತೆರೆದುವು. ಕೈದಿಗಳೆಲ್ಲರ ಬಂಧನಗಳು ಕಳಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಇದ್ದಕ್ಕಿದ್ದಂತೆ ದೊಡ್ಡ ಭೂಕಂಪವಾಯಿತು. ಭೀಕರವಾಗಿದ್ದ ಅದು ಸೆರೆಮನೆಯ ಅಡಿಪಾಯವನ್ನೇ ನಡುಗಿಸಿತು. ಆಗ ಸೆರೆಮನೆಯ ಬಾಗಿಲುಗಳೆಲ್ಲಾ ತೆರೆದುಕೊಂಡವು. ಎಲ್ಲಾ ಕೈದಿಗಳ ಸರಪಣಿಗಳು ಕಳಚಿಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಬಗುನ್ಗೆತ್ ರ್‍ಹಾತಾನಾಚ್ ಮೊಟೊ ಭುಕಂಪ್ ಹೊಲೊ, ತೊ ಭುಕಂಪ್ ಲೈ ಮೊಟೊ ಹೊಲ್ಲ್ಯಾ ಸಾಟ್ನಿ ಬಂಧಿಖಾನ್ಯಾಚಿ ಪಾಯಾ ಸಗ್ಳಿ ಹಾಲ್ಲಿ, ಅನಿ ದಾರಾ ಸಗ್ಳಿ ಉಗ್ಡುನ್ ಸಗ್ಳಿ ಚೊರಾಂಚಿ ಬಾಂಧಲಿ ಸರ್ಪಳಿಯಾ ಸುಟುನ್ ಪಡ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:26
15 ತಿಳಿವುಗಳ ಹೋಲಿಕೆ  

ಹೀಗೆ ಪ್ರಾರ್ಥನೆ ಮಾಡಿದ ತರುವಾಯ ಅವರು ನೆರೆದಿದ್ದ ಸ್ಥಳವು ಕಂಪನಗೊಂಡಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ಧೈರ್ಯದಿಂದ ದೇವರ ವಾಕ್ಯವನ್ನು ಸಾರತೊಡಗಿದರು.


ಆದರೆ ರಾತ್ರಿಯಲ್ಲಿ ಕರ್ತದೇವರ ದೂತನೊಬ್ಬನು ಸೆರೆಮೆನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಗೆ ನಡೆಸಿಕೊಂಡು ಬಂದು,


ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣದೊಳಗೆ ನಡೆಸುವ ಕಬ್ಬಿಣದ ದ್ವಾರಕ್ಕೆ ಅವರು ಬಂದರು. ಅದು ತನ್ನಷ್ಟಕ್ಕೆ ತಾನೇ ತೆರೆಯಲು ಅವರು ಅದನ್ನು ದಾಟಿ ಹೊರಗೆ ಬಂದರು. ಒಂದು ಬೀದಿಯನ್ನು ದಾಟುವವರೆಗೆ ನಡೆದು ಬಂದ ನಂತರ ಫಕ್ಕನೆ ದೇವದೂತನು ಪೇತ್ರನನ್ನು ಬಿಟ್ಟುಹೋದನು.


ಫಕ್ಕನೆ ದೇವದೂತನೊಬ್ಬನು ಪ್ರತ್ಯಕ್ಷನಾಗಲು ಕೋಣೆಯೆಲ್ಲಾ ಪ್ರಕಾಶಮಯವಾಯಿತು. ಅವನು ಪೇತ್ರನನ್ನು ತಟ್ಟಿ ಎಬ್ಬಿಸಿ, “ಬೇಗ ಎದ್ದೇಳು!” ಎಂದನು. ಪೇತ್ರನ ಕೈಗಳಿಗೆ ಬಂಧಿಸಿದ್ದ ಸರಪಣಿಗಳು ಕಳಚಿಬಿದ್ದವು.


ಅವರು ದಬ್ಬಾಳಿಕೆಯಾದ ನ್ಯಾಯತೀರಿಸುತ್ತಾರೆ, ಹಸಿದವರಿಗೆ ಆಹಾರವನ್ನು ಕೊಡುತ್ತಾರೆ. ಯೆಹೋವ ದೇವರು ಸೆರೆಯವರನ್ನು ಬಿಡಿಸುತ್ತಾರೆ.


ಆಗ ಮಹಾ ಭೂಕಂಪವಾಯಿತು. ಕರ್ತನ ದೂತನು ಪರಲೋಕದಿಂದ ಇಳಿದುಬಂದು, ಬಾಗಿಲಿನಿಂದ ಬಂಡೆಯನ್ನು ಉರುಳಿಸಿ ಅದರ ಮೇಲೆ ಕುಳಿತುಕೊಂಡನು.


ಅವರು ಸೆರೆಯವರ ಗೋಳಾಟವನ್ನು ಕೇಳಿ, ಮರಣದಂಡನೆಗೆ ಪಾತ್ರನಾದವರನ್ನು ಬಿಡಿಸುವರು,


ಅದೇ ಗಳಿಗೆಯಲ್ಲಿ, ಮಹಾ ಭೂಕಂಪ ಉಂಟಾಗಿ ಆ ಪಟ್ಟಣದ ಹತ್ತರಲ್ಲೊಂದು ಭಾಗವು ಬಿದ್ದುಹೋಯಿತು. ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರಿಗೆ ಮಹಿಮೆಯನ್ನು ಸಲ್ಲಿಸಿದರು.


ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ. ಏಕೆಂದರೆ ಯೆಹೋವ ದೇವರು ನನ್ನನ್ನು ಬಡವರಿಗೆ ಶುಭಸಂದೇಶವನ್ನು ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಮುರಿದ ಹೃದಯಗಳನ್ನು ಕಟ್ಟುವುದಕ್ಕೂ, ಬಂಧಿತರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಮತ್ತು ಕೈದಿಗಳಿಗೆ ಕತ್ತಲೆಯಿಂದ ಬಿಡುಗಡೆ ಮಾಡಲು


ಸೆರೆಯವರ ನಿಟ್ಟುಸಿರು ನಿಮ್ಮ ಮುಂದೆ ಬರಲಿ. ನಿಮ್ಮ ಮಹಾಶಕ್ತಿಯ ಪ್ರಕಾರ ಸಾಯುವುದಕ್ಕಿರುವವರನ್ನು ಕಾಪಾಡಿರಿ.


ಕುರಿಮರಿ ಆಗಿರುವವರು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾ ಭೂಕಂಪವಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.


ದೇವರು ಒಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾರೆ. ಸೆರೆಯವರನ್ನು ಹರ್ಷಗೊಳಿಸಿ ಬಿಡುಗಡೆ ಮಾಡುತ್ತಾರೆ. ಆದರೆ ಎದುರು ಬೀಳುವವರು ಒಣಭೂಮಿಯಲ್ಲಿ ವಾಸಿಸುತ್ತಾರೆ.


ಅವನು ಹೋಗಿ ಇವನ ಹೆಣವು ದಾರಿಯಲ್ಲಿ ಬಿದ್ದಿರುವುದನ್ನೂ, ಕತ್ತೆಯೂ, ಸಿಂಹವೂ ಹೆಣದ ಬಳಿಯಲ್ಲಿ ನಿಂತಿರುವುದನ್ನೂ ಕಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು