Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:39 - ಕನ್ನಡ ಸಮಕಾಲಿಕ ಅನುವಾದ

39 ಆದುದರಿಂದ ನ್ಯಾಯಾಧಿಪತಿಗಳು ಬಂದು ಶಾಂತಪಡಿಸಿ ಸೆರೆಮನೆಯಿಂದ ಅವರನ್ನು ಹೊರಗೆ ಕರೆದುಕೊಂಡು ಹೋಗಿ, ಪಟ್ಟಣವನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಪೌಲ ಮತ್ತು ಸೀಲರ ಬಳಿಗೆ ಹೋಗಿ ವಿನಯವಾಗಿ ಮಾತನಾಡಿ ಅವರನ್ನು ಹೊರಕ್ಕೆ ಕರೆದುಕೊಂಡು ಬಂದು; ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಆದುದರಿಂದ ಅವರೇ ಬಂದು ಕ್ಷಮೆಕೋರಿ, ಸೆರೆಮನೆಯಿಂದ ಬಿಡುಗಡೆಮಾಡಿ, ನಗರವನ್ನು ಬಿಟ್ಟು ಹೋಗಬೇಕೆಂದು ವಿನಂತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಮತ್ತು ಅವರ ಬಳಿಗೆ ಹೋಗಿ ವಿನಯವಾಗಿ ಮಾತಾಡಿ ಹೊರಕ್ಕೆ ಕರೆದುಕೊಂಡು ಬಂದು - ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಆದ್ದರಿಂದ ಅವರು ಪೌಲ ಸೀಲರ ಬಳಿಗ ಬಂದು ಕ್ಷಮೆ ಕೇಳಿದರು. ಅಲ್ಲದೆ ಅವರನ್ನು ಸೆರೆಮನೆಯಿಂದ ಹೊರಗೆ ಕರೆದುಕೊಂಡು ಹೋದರು ಮತ್ತು ತಮ್ಮ ಪಟ್ಟಣವನ್ನು ಬಿಟ್ಟುಹೋಗಬೇಕೆಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತಸೆ ಹೊವ್ನ್ ತೆನಿ ಪಾವ್ಲು ಅನಿ ಸಿಲಾಸಾಕ್ಡೆ ಯೆವ್ನ್ ಚುಕ್ ಮಾಗ್ಲ್ಯಾನಿ, ಅನಿ ತೆಂಕಾ ಬಂದಿಖಾನ್ಯಾತ್ನಾ ಭಾಯ್ರ್ ಬಲ್ವುನ್ ನ್ಹೆವ್ನ್ ಅಪ್ಲ್ಯಾ ಶಾರಾತ್ನಾ ತುಮಿ ಜಾವಾ ಮನುನ್ ಮಾಗುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:39
10 ತಿಳಿವುಗಳ ಹೋಲಿಕೆ  

ಆಗ ಪಟ್ಟಣದವರೆಲ್ಲರೂ ಯೇಸುವನ್ನು ಕಾಣುವುದಕ್ಕೆ ಹೊರಗೆ ಬಂದರು. ಅವರು ಯೇಸುವನ್ನು ಕಂಡು, ತಮ್ಮ ಪ್ರಾಂತವನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.


ಆಗ ಅವರು ಯೇಸುವಿಗೆ, ತಮ್ಮ ಪ್ರಾಂತವನ್ನು ಬಿಟ್ಟು ಹೊರಟುಹೋಗಬೇಕೆಂದು ಕೇಳಿಕೊಂಡರು.


ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆಮಾಡಿದನು. ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಅವನು ದೃಢವಾದ ಭರವಸೆ ಇಟ್ಟಿದ್ದರಿಂದ ಯಾವ ಹಾನಿಯೂ ಆಗಿರಲಿಲ್ಲ.


ಆಗ ರಾಜನು ಆಜ್ಞಾಪಿಸಲು, ಅವರು ದಾನಿಯೇಲನನ್ನು ತಂದು ಸಿಂಹದ ಗುಹೆಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ, “ನೀನು ಯಾವಾಗಲೂ ಸೇವಿಸುವ ನಿನ್ನ ದೇವರು ನಿನ್ನನ್ನು ಕಾಪಾಡಲಿ!” ಎಂದು ಹೇಳಿದನು.


ಆಗ ನಿನ್ನನ್ನು ಕುಗ್ಗಿಸಿದವರು, ಬಗ್ಗಿಕೊಂಡು ನಿನ್ನ ಬಳಿಗೆ ಬರುವರು. ನಿನ್ನನ್ನು ಅಸಹ್ಯಿಸಿದವರೆಲ್ಲರೂ ನಿನ್ನ ಪಾದಗಳಿಗೆ ಅಡ್ಡಬಿದ್ದು, ನಿನ್ನನ್ನು ಯೆಹೋವ ದೇವರ ಪಟ್ಟಣವೆಂದೂ, ಇಸ್ರಾಯೇಲಿನ ಪರಿಶುದ್ಧನ ಚೀಯೋನೆಂದೂ ಕರೆಯುವರು.


ಅರಸರು ನಿನಗೆ ಸಾಕು ತಂದೆಗಳು. ಅವರ ರಾಣಿಯರು ನಿನಗೆ ದಾದಿಗಳಾಗುವರು. ಅವರು ಭೂಮಿಯ ಕಡೆಗೆ ತಮ್ಮ ಮುಖವನ್ನು ಬಾಗಿಸಿ, ಅಡ್ಡಬಿದ್ದು, ನಿನ್ನ ಪಾದದ ಧೂಳನ್ನು ನೆಕ್ಕುವರು. ಆಗ ನಾನೇ ಯೆಹೋವ ಎಂದು ನೀನು ತಿಳಿದುಕೊಳ್ಳುವೆ. ಏಕೆಂದರೆ ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿಕೆಗೆ ಈಡಾಗರು.”


ಯೆಹೋವ ದೇವರು ಹೇಳುವುದೇನೆಂದರೆ: “ಈಜಿಪ್ಟಿನ ಆದಾಯವೂ, ಇಥಿಯೋಪಿಯದ ವ್ಯಾಪಾರವೂ, ಎತ್ತರದ ಮನುಷ್ಯರಾದ ಶೆಬದವರೂ ನಿಮ್ಮಲ್ಲಿಗೆ ಸೇರಿ, ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು, ನಿಮ್ಮ ಮುಂದೆ ಅಡ್ಡಬಿದ್ದು, ‘ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊಬ್ಬನಿಲ್ಲ; ಬೇರೆ ದೇವರು ಇಲ್ಲವೇ ಇಲ್ಲ.’ ”


ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು, ನನಗೆ ಅಡ್ಡಬಿದ್ದು, ನನಗೆ ನೀನೂ, ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ, ‘ಹೊರಗೆ ಹೋಗಿರಿ,’ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು,” ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.


ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದಿಂದ ಕೆಲವರು ಬಂದು ನಿನ್ನ ಪಾದಕ್ಕೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳಿಯುವಂತೆಯೂ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು