Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:10 - ಕನ್ನಡ ಸಮಕಾಲಿಕ ಅನುವಾದ

10 ರಾತ್ರಿಯಾದ ಕೂಡಲೇ, ಸಹೋದರರು ಪೌಲ, ಸೀಲರನ್ನು ಬೆರೋಯಕ್ಕೆ ಕಳುಹಿಸಿದರು. ಅಲ್ಲಿಗೆ ಅವರು ತಲುಪಿದಾಗ ಅಲ್ಲಿಯೂ ಯೆಹೂದ್ಯರ ಸಭಾಮಂದಿರಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ಸಹೋದರರು ರಾತ್ರಿಯಲ್ಲಿ ಪೌಲ ಮತ್ತು ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಭಕ್ತವಿಶ್ವಾಸಿಗಳು ಪೌಲ ಮತ್ತು ಸೀಲರನ್ನು ರಾತ್ರೋರಾತ್ರಿಯಲ್ಲೇ ಬೆರೋಯ ಎಂಬ ಊರಿಗೆ ಕಳುಹಿಸಿಬಿಟ್ಟರು. ಇವರು ಆ ಊರನ್ನು ತಲುಪಿದ್ದೇ, ಯೆಹೂದ್ಯರ ಪ್ರಾರ್ಥನಾಮಂದಿರಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕೂಡಲೇ ಸಹೋದರರು ರಾತ್ರಿಯಲ್ಲಿ ಪೌಲ ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅದೇ ರಾತ್ರಿಯಲ್ಲಿ ವಿಶ್ವಾಸಿಗಳು ಪೌಲ ಸೀಲರನ್ನು ಬೆರೋಯ ಎಂಬ ಮತ್ತೊಂದು ಪಟ್ಟಣಕ್ಕೆ ಕಳುಹಿಸಿದರು. ಬೆರೋಯದಲ್ಲಿ ಪೌಲ ಸೀಲರು ಯೆಹೂದ್ಯರ ಸಭಾಮಂದಿರಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತ್ಯಾ ದಿಸಾ ರಾತ್ತಿನಿ ದೆವಾಚ್ಯಾ ತಾಂಡ್ಯಾಚ್ಯಾ ಲೊಕಾನಿ ಪಾವ್ಲುಕ್ ಅನಿ ಸಿಲಾಸಾಕ್ ಬೆರೊಯಾಕ್ ಧಾಡ್ಲ್ಯಾನಿ, ಥೈ ಹೆನಿ ದೊಗಾ ಜುದೆವಾಂಚ್ಯಾ ಲೊಕಾಂಚ್ಯಾ ಸಿನಾಗೊತ್ ಗೆಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:10
16 ತಿಳಿವುಗಳ ಹೋಲಿಕೆ  

ಫಿಲಿಪ್ಪಿ ಪಟ್ಟಣದಲ್ಲಿ ಮುಂಚೆ ನಮಗೆ ಹಿಂಸೆ ಮತ್ತು ಅವಮಾನವು ಸಂಭವಿಸಿದ್ದನ್ನು ನೀವು ಬಲ್ಲಿರಿ. ಹಾಗಿದ್ದರೂ ನಾವು ನಮ್ಮ ದೇವರ ಸಹಾಯದಿಂದ ಧೈರ್ಯಗೊಂಡು ಬಹು ವಿರೋಧದ ನಡುವೆ ನಿಮಗೆ ಸುವಾರ್ತೆಯನ್ನು ತಿಳಿಸಿದೆವು.


ಪೌಲನು ತನ್ನ ವಾಡಿಕೆಯಂತೆ ಮೂರು ಸಬ್ಬತ್ ದಿನಗಳಂದು ಅವರ ಬಳಿ ಹೋಗಿ, ಅವರಲ್ಲಿ ಪವಿತ್ರ ವೇದಗಳ ಬಗ್ಗೆ ವಾದಿಸಿ,


ಬೆರೋಯದ ಪುರ್ರನ ಮಗ ಸೋಪತ್ರನು, ಥೆಸಲೋನಿಕದ ಅರಿಸ್ತಾರ್ಕ ಮತ್ತು ಸೆಕುಂದ, ದೆರ್ಬೆಯ ಗಾಯ, ತಿಮೊಥೆ ಅಲ್ಲದೆ ಏಷ್ಯಾ ಪ್ರಾಂತದ ತುಖಿಕ ಹಾಗೂ ತ್ರೊಫಿಮ ಅವನೊಂದಿಗೆ ಹೋದರು.


ಆದರೆ ಸೌಲನ ಅನುಯಾಯಿಗಳು ರಾತ್ರಿಯಲ್ಲಿ ಅವನನ್ನು ಕರೆದುಕೊಂಡು ಹೋಗಿ, ಬುಟ್ಟಿಯಲ್ಲಿ ಕುಳ್ಳಿರಿಸಿ, ಗೋಡೆಯ ಕಿಟಿಕಿಯ ಮುಖಾಂತರ ಹೊರಗೆ ಕೆಳಗಿಳಿಸಿದರು.


ಆಗ ಯೋನಾತಾನನು ದಾವೀದನಿಗೆ, “ನೀನು ಸಮಾಧಾನವಾಗಿ ಹೋಗು, ಯೆಹೋವ ದೇವರು ಎಂದೆಂದಿಗೂ ನನಗೂ, ನಿನಗೂ, ನನ್ನ ಸಂತಾನಕ್ಕೂ, ನಿನ್ನ ಸಂತಾನಕ್ಕೂ ಸಾಕ್ಷಿಯಾಗಿರಲೆಂದು ಮಧ್ಯದಲ್ಲಿ ಯೆಹೋವ ದೇವರ ಹೆಸರಿನಿಂದ ಆಣೆಯಿಟ್ಟು ನಾವಿಬ್ಬರೂ ಪ್ರಮಾಣ ಮಾಡಿಕೊಂಡೆವಲ್ಲಾ,” ಎಂದನು. ಆಗ ದಾವೀದನು ಎದ್ದು ಹೋದನು. ಯೋನಾತಾನನು ಪಟ್ಟಣಕ್ಕೆ ಹೋದನು.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಸೇರಿದ್ದರು. ಅವರ ನಡುವೆ ಪೇತ್ರನು ಎದ್ದು ನಿಂತು, ಹೀಗೆಂದನು:


ತಡಮಾಡದೆ, ಯೇಸುವೇ “ದೇವಪುತ್ರ” ಎಂದು ಸಭಾಮಂದಿರಗಳಲ್ಲಿ ಸಾರಲು ಪ್ರಾರಂಭಿಸಿದನು.


ಆಗ ಅಪೊಸ್ತಲರು ಮತ್ತು ಹಿರಿಯರು ಇಡೀ ಸಭೆಯ ಸಮ್ಮತಿ ಪಡೆದು, ಸಹೋದರರಲ್ಲಿ ನಾಯಕರಾಗಿದ್ದ ಬಾರ್ಸಬನೆಂದು ಕರೆಯಲಾದ ಯೂದ ಮತ್ತು ಸೀಲ ಎಂಬಿಬ್ಬರನ್ನು ಆಯ್ದುಕೊಂಡರು. ಅವರನ್ನು ಪೌಲ ಮತ್ತು ಬಾರ್ನಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಲು ನಿರ್ಧರಿಸಿದರು.


ಅವರು ಅಂಫಿಪೊಲಿ ಮತ್ತು ಅಪೊಲೋನ್ಯ ಮಾರ್ಗವಾಗಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.


ಅವರಲ್ಲಿ ಕೆಲವರು ದೇವಭಕ್ತಿಯುಳ್ಳ ಗ್ರೀಕರೂ ಪ್ರಮುಖರಾಗಿದ್ದ ಮಹಿಳೆಯರೂ ದೊಡ್ಡ ಸಂಖ್ಯೆಯಲ್ಲಿ ಒಡಂಬಟ್ಟವರಾಗಿ ಪೌಲ, ಸೀಲರನ್ನು ಸೇರಿಕೊಂಡರು.


ಆದರೆ ಅಲ್ಲಿ ಅವರಿಲ್ಲದಿರುವುದನ್ನು ಕಂಡು ಅವರು ಯಾಸೋನನನ್ನೂ ಕೆಲವು ಸಹೋದರರನ್ನೂ ಎಳೆದುಕೊಂಡು ಬಂದು ಪಟ್ಟಣದ ಅಧಿಕಾರಿಗಳ ಮುಂದೆ ನಿಲ್ಲಿಸಿ, “ಲೋಕವನ್ನು ತಲೆಕೆಳಗೆ ಮಾಡಿರುವ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು