Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:4 - ಕನ್ನಡ ಸಮಕಾಲಿಕ ಅನುವಾದ

4 ಅವರಲ್ಲಿ ಕೆಲವರು ದೇವಭಕ್ತಿಯುಳ್ಳ ಗ್ರೀಕರೂ ಪ್ರಮುಖರಾಗಿದ್ದ ಮಹಿಳೆಯರೂ ದೊಡ್ಡ ಸಂಖ್ಯೆಯಲ್ಲಿ ಒಡಂಬಟ್ಟವರಾಗಿ ಪೌಲ, ಸೀಲರನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರಲ್ಲಿ ಕೆಲವರೂ ದೈವಭಕ್ತರಾದ ಗ್ರೀಕರ ದೊಡ್ಡ ಗುಂಪು ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಮತ್ತು ಸೀಲರನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇದು ಸತ್ಯವೆಂದು ಮನವರಿಕೆ ಆದ ಕೆಲವರು ಪೌಲ ಮತ್ತು ಸೀಲರನ್ನು ಸೇರಿಕೊಂಡರು. ಅಂತೆಯೇ ದೈವಭಕ್ತರಾಗಿದ್ದ ಗ್ರೀಕರ ದೊಡ್ಡ ಗುಂಪೂ ಅನೇಕ ಕುಲೀನ ಸ್ತ್ರೀಯರೂ ಅವರನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರಲ್ಲಿ ಕೆಲವರೂ ದೇವಭಕ್ತರಾದ ಗ್ರೀಕರಲ್ಲಿ ದೊಡ್ಡ ಗುಂಪೂ ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಸೀಲರನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿಜದೇವರನ್ನು ಪ್ರೀತಿಸುತ್ತಿದ್ದ ಕೆಲವು ಮಂದಿ ಗ್ರೀಕರು ಮತ್ತು ಕೆಲವು ಮಂದಿ ಪ್ರಮುಖ ಸ್ತ್ರೀಯರು ಅಲ್ಲಿದ್ದರು. ಅವರಲ್ಲಿ ಅನೇಕರಿಗೆ ಮನವರಿಕೆಯಾಗಿ ಪೌಲ ಸೀಲರನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಥೈ ಖರ್ಯ್ಯಾ ದೆವಾಕ್ ಪ್ರೆಮ್ ಕರ್‍ತಲಿ ಗ್ರಿಕಾಂಚಿ ಉಲ್ಲಿ ಲೊಕಾ ಉಲ್ಲಿ ಪ್ರಮುಖ್ಯ್ ಬಾಯ್ಕಾಮಾನ್ಸಾ ಹೊತ್ತಿ, ತೆನಿ ಮನ್ ಪರ್ತುನ್ ಪಾವ್ಲು ಅನಿ ಸಿಲಾಸಾಚ್ಯಾ ತಾಂಡ್ಯಾಕ್ ಮಿಳ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:4
31 ತಿಳಿವುಗಳ ಹೋಲಿಕೆ  

ಆದ್ದರಿಂದ ಅವರಲ್ಲಿ ಅನೇಕರು ವಿಶ್ವಾಸ ಹೊಂದಿದರು. ಅನೇಕ ಗ್ರೀಕ್ ಪುರುಷರೂ ಪ್ರಮುಖ ಸ್ತ್ರೀಯರೂ ವಿಶ್ವಾಸವನ್ನಿಟ್ಟರು.


ಆದರೆ ಪಟ್ಟಣದ ಜನರಲ್ಲಿ ಭಿನ್ನಾಭಿಪ್ರಾಯಗಳಾದವು. ಕೆಲವರು ಯೆಹೂದ್ಯರ ಪರವಾದರು, ಇನ್ನೂ ಕೆಲವರು ಅಪೊಸ್ತಲರ ಪರವಾದರು.


ಸಭೆಯು ಮುಗಿದ ತರುವಾಯ ಅನೇಕ ಯೆಹೂದ್ಯರೂ ದೇವಭಕ್ತಿವುಳ್ಳ ಯೆಹೂದಿ ಮಾರ್ಗದ ವಿಶ್ವಾಸಿಗಳು ಪೌಲ ಬಾರ್ನಬರನ್ನು ಹಿಂಬಾಲಿಸಿದರು. ಪೌಲ ಬಾರ್ನಬರು ತಮ್ಮೊಂದಿಗೆ ಬಂದವರ ಜೊತೆ ಮಾತನಾಡಿ ದೇವರ ಕೃಪೆಯಲ್ಲಿ ಮುಂದುವರಿಯಲು ಅವರನ್ನು ಒಡಂಬಡಿಸಿದರು.


ಇವೆಲ್ಲವನ್ನೂ ನಾವು ನೆನಸಿದ್ದಕ್ಕಿಂತಲೂ ಅವರು ಹೆಚ್ಚಾಗಿಯೇ ಮಾಡಿದರು. ಹೇಗೆಂದರೆ ಮೊದಲು ಅವರು ತಮ್ಮನ್ನೇ ಕರ್ತ ಯೇಸುವಿಗೆ ಒಪ್ಪಿಸಿಕೊಟ್ಟರು. ಅನಂತರ ದೇವರ ಚಿತ್ತಾನುಸಾರವಾಗಿ ತಮ್ಮನ್ನು ನಮಗೂ ಒಪ್ಪಿಸಿಕೊಟ್ಟರು.


ಕೆಲವರಿಗೆ ಅವನು ಹೇಳಿದ್ದರ ಬಗ್ಗೆ ಮನದಟ್ಟಾಯಿತು.


ಆಗ ಅಪೊಸ್ತಲರು ಮತ್ತು ಹಿರಿಯರು ಇಡೀ ಸಭೆಯ ಸಮ್ಮತಿ ಪಡೆದು, ಸಹೋದರರಲ್ಲಿ ನಾಯಕರಾಗಿದ್ದ ಬಾರ್ಸಬನೆಂದು ಕರೆಯಲಾದ ಯೂದ ಮತ್ತು ಸೀಲ ಎಂಬಿಬ್ಬರನ್ನು ಆಯ್ದುಕೊಂಡರು. ಅವರನ್ನು ಪೌಲ ಮತ್ತು ಬಾರ್ನಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಲು ನಿರ್ಧರಿಸಿದರು.


ಆದರೆ ಯೆಹೂದ್ಯರು, ಆರಾಧಕರಾಗಿದ್ದ ಮಾನ್ಯರಾದ ಸ್ತ್ರೀಯರನ್ನೂ ನಗರದ ಗಣ್ಯ ನಾಯಕರನ್ನೂ ಪ್ರೇರೇಪಿಸಿ, ಪೌಲ, ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ತಮ್ಮ ಪ್ರದೇಶದಿಂದ ಹೊರಗೋಡಿಸಿದರು.


“ಇಸ್ರಾಯೇಲರೇ, ನಮಗೆ ಸಹಾಯಮಾಡಿರಿ! ನಮ್ಮ ಜನರಿಗೂ ನಮ್ಮ ನಿಯಮಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲಾ ಜನರಿಗೆ ಬೋಧಿಸುತ್ತಿರುವ ಮನುಷ್ಯನು ಇವನೇ. ಅಷ್ಟೇ ಅಲ್ಲ, ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪವಿತ್ರ ಸ್ಥಳವನ್ನು ಭ್ರಷ್ಟಗೊಳಿಸಿದ್ದಾನೆ,” ಎಂದು ಕೂಗಿ ಹೇಳಿದರು.


ಇದು ಎರಡು ವರ್ಷಗಳ ಕಾಲ ಮುಂದುವರಿಯಿತು. ಇದರಿಂದ ಏಷ್ಯಾ ಪ್ರಾಂತದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ ಗ್ರೀಕರೂ ಕರ್ತ ಯೇಸುವಿನ ವಾಕ್ಯವನ್ನು ಕೇಳಿದರು.


ಪ್ರತಿ ಸಬ್ಬತ್ ದಿನ ಸಭಾಮಂದಿರಕ್ಕೆ ಹೋಗಿ ಯೆಹೂದ್ಯರನ್ನೂ ಗ್ರೀಕರನ್ನೂ ವಿಶ್ವಾಸಿಗಳನ್ನಾಗಿಸಲು ಪ್ರೇರೇಪಿಸುತ್ತಿದ್ದನು.


ಆದರೆ ಕೆಲವರು ಪೌಲನನ್ನು ಅಂಟಿಕೊಂಡು ದೇವರಲ್ಲಿ ವಿಶ್ವಾಸವನ್ನಿಟ್ಟರು. ಅವರಲ್ಲಿ ಅರಿಯೊಪಾಗದ ದಿಯೊನುಸ್ಯನು ಮತ್ತು ದಾಮರಿ ಎಂಬ ಹೆಸರಿನ ಒಬ್ಬ ಮಹಿಳೆ ಹಾಗೂ ಇನ್ನಿತರರೂ ಇದ್ದರು.


ಆದ್ದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರೊಂದಿಗೂ ದೇವಭಕ್ತಿಯುಳ್ಳ ಗ್ರೀಕರೊಂದಿಗೂ ಅಲ್ಲದೆ ಬಹಿರಂಗ ಸಂತೆಪೇಟೆ ಸ್ಥಳದಲ್ಲಿ ದಿನದಿನವೂ ಬರುತ್ತಿದ್ದ ಜನರೊಂದಿಗೂ ಚರ್ಚೆ ಮಾಡುತ್ತಿದ್ದನು.


ತಿಮೊಥೆಯನನ್ನು ಪೌಲನು ತನ್ನೊಂದಿಗೆ ಪ್ರಯಾಣದಲ್ಲಿ ಕರೆದುಕೊಂಡು ಹೋಗಬೇಕೆಂದು ಅಪೇಕ್ಷಿಸಿ, ಆ ಪ್ರದೇಶದಲ್ಲಿ ನೆಲೆಸಿದ ಯೆಹೂದ್ಯರ ನಿಮಿತ್ತ ತಿಮೊಥೆಯನಿಗೆ ಸುನ್ನತಿ ಮಾಡಿಸಿದನು. ಏಕೆಂದರೆ ಅವನ ತಂದೆ ಗ್ರೀಕನು ಎಂಬುದನ್ನು ಅವರೆಲ್ಲರೂ ತಿಳಿದಿದ್ದರು.


ಆದರೆ ಪೌಲನು ಸೀಲನನ್ನು ಆರಿಸಿಕೊಂಡು ಹೋದನು. ವಿಶ್ವಾಸಿಗಳಿಂದ ಅವನನ್ನು ಕರ್ತ ಯೇಸುವಿನ ಕೃಪೆಗೆ ಒಪ್ಪಿಸಿ, ಕಳುಹಿಸಿಕೊಟ್ಟುರು.


ಯೂದ ಮತ್ತು ಸೀಲರು ಸ್ವತಃ ಪ್ರವಾದಿಗಳಾಗಿದ್ದುದರಿಂದ ಅಲ್ಲಿದ್ದ ವಿಶ್ವಾಸಿಗಳನ್ನು ಅನೇಕ ಬುದ್ಧಿವಾದಗಳಿಂದ ಬಲಪಡಿಸಿದರು.


ಆದ್ದರಿಂದ ನಾವು ಈ ಸಂಗತಿಗಳನ್ನು ಬಾಯಿಮಾತುಗಳಿಂದ ಪ್ರಕಟಿಸುವುದಕ್ಕಾಗಿ ಯೂದ ಮತ್ತು ಸೀಲರನ್ನು ಕಳುಹಿಸುತ್ತಿದ್ದೇವೆ.


ಇಕೋನ್ಯದಲ್ಲಿಯೂ ಪೌಲ ಮತ್ತು ಬಾರ್ನಬರು ವಾಡಿಕೆಯಂತೆ ಯೆಹೂದ್ಯರ ಸಭಾಮಂದಿರಕ್ಕೆ ಹೋದರು. ಅವರು ಅಲ್ಲಿ ಪರಿಣಾಮಕಾರಿಯಾಗಿ ಮಾತನಾಡಿದ್ದರಿಂದ ಬಹು ಸಂಖ್ಯೆಯಲ್ಲಿ ಯೆಹೂದ್ಯರೂ ಗ್ರೀಕರೂ ವಿಶ್ವಾಸವನ್ನಿಟ್ಟರು.


ಬಿಡುಗಡೆ ಹೊಂದಿದ, ಪೇತ್ರ ಮತ್ತು ಯೋಹಾನರು ವಿಶ್ವಾಸಿಗಳ ಬಳಿಗೆ ಹೋಗಿ, ತಮಗೆ ಮುಖ್ಯಯಾಜಕರೂ ಹಿರಿಯರೂ ಹೇಳಿದ್ದೆಲ್ಲವನ್ನೂ ವರದಿಮಾಡಿದರು.


ವಿಶ್ವಾಸಿಗಳೆಲ್ಲರೂ ಒಟ್ಟಾಗಿದ್ದು, ತಮ್ಮಲ್ಲಿರುವ ಪ್ರತಿಯೊಂದನ್ನೂ ಹಂಚಿಕೊಳ್ಳುತ್ತಿದ್ದರು.


ಆಗ ಯೆಹೂದಿ ನಾಯಕರು, “ನಾವು ಈತನನ್ನು ಕಾಣದ ಹಾಗೆ ಈತ ಎಲ್ಲಿಗೆ ಹೋಗಲಿದ್ದಾನೆ? ಗ್ರೀಕರ ನಡುವೆ ಚದರಿ ಹೋದವರ ಬಳಿಗೆ ಹೋಗಿ ಗ್ರೀಕರಿಗೆ ಬೋಧಿಸುವನೋ?


ನಿನ್ನ ಪ್ರಿಯನು ಎಲ್ಲಿಗೆ ಹೋದನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಾವು ಅವನನ್ನು ನಿನ್ನ ಸಂಗಡ ಹುಡುಕುವಂತೆ ನಿನ್ನ ಪ್ರಿಯನು ಯಾವ ಕಡೆಗೆ ಹೋಗಿದ್ದಾನೆ?


ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗುವನು; ಆದರೆ ಮೂರ್ಖರ ಜೊತೆಗಾರನು ಸಂಕಟಪಡುವನು.


“ನಿಮ್ಮ ಮೂಢತ್ವವನ್ನು ಬಿಟ್ಟು ಬಾಳಿರಿ ಮತ್ತು ವಿವೇಕದ ಮಾರ್ಗದಲ್ಲಿ ಹೋಗು,” ಎಂದೂ ಕೂಗುತ್ತಾಳೆ.


“ಆ ದಿವಸದಲ್ಲಿ ಅನೇಕ ಜನಾಂಗಗಳು ಯೆಹೋವ ದೇವರನ್ನು ಅಂಟಿಕೊಂಡು ನನ್ನ ಜನರಾಗುವರು, ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆಂದು ತಿಳಿದುಕೊಳ್ಳುವೆ.


ರಾತ್ರಿಯಾದ ಕೂಡಲೇ, ಸಹೋದರರು ಪೌಲ, ಸೀಲರನ್ನು ಬೆರೋಯಕ್ಕೆ ಕಳುಹಿಸಿದರು. ಅಲ್ಲಿಗೆ ಅವರು ತಲುಪಿದಾಗ ಅಲ್ಲಿಯೂ ಯೆಹೂದ್ಯರ ಸಭಾಮಂದಿರಕ್ಕೆ ಹೋದರು.


ಆದ್ದರಿಂದ ಸಹೋದರರು ಕೂಡಲೇ ಪೌಲನನ್ನು ಸಮುದ್ರ ತೀರಕ್ಕೆ ಕಳುಹಿಸಿಬಿಟ್ಟರು. ಆದರೆ ಸೀಲ ಮತ್ತು ತಿಮೊಥೆ ಬೆರೋಯದಲ್ಲಿಯೇ ಉಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು