Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:5 - ಕನ್ನಡ ಸಮಕಾಲಿಕ ಅನುವಾದ

5 ಆದರೆ ಯೆಹೂದ್ಯರು ಮತ್ಸರದಿಂದ ಕೂಡಿ, ಬೀದಿಗಳಲ್ಲಿ ತಿರುಗಾಡುವ ಕೆಲವು ದುಷ್ಟವ್ಯಕ್ತಿಗಳನ್ನು ಕೂಡಿಸಿ ಪಟ್ಟಣದಲ್ಲಿ ಗಲಭೆ ಎಬ್ಬಿಸಿದರು. ಜನಸಮೂಹದ ಮುಂದೆ ಪೌಲ, ಸೀಲರನ್ನು ಎಳೆದು ತರುವಂತೆ ಅವರನ್ನು ಹುಡುಕುತ್ತಾ ಯಾಸೋನ ಎಂಬುವನ ಮನೆಯನ್ನು ಮುತ್ತಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೆ ಯೆಹೂದ್ಯರು ಮತ್ಸರದಿಂದ ಕೂಡಿ, ಪುಂಡಪೋಕರಿಗಳನ್ನು ಎತ್ತಿಕಟ್ಟಿ, ಒಂದು ಗುಂಪನ್ನು ಕೂಡಿಸಿದರು. ಪಟ್ಟಣದಲ್ಲೆಲ್ಲಾ ದೊಂಬಿ ಎಬ್ಬಿಸಿದರು. ಪೌಲ ಮತ್ತು ಸೀಲರನ್ನು ಜನರ ಮುಂದೆ ಎಳೆದುತರುವ ಉದ್ದೇಶದಿಂದ ಅವರನ್ನು ಹುಡುಕುತ್ತಾ ಯಾಸೋನ ಎಂಬವನ ಮನೆಯನ್ನು ಮುತ್ತಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೂದ್ಯರು ಹೊಟ್ಟೇಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪೋಕರನ್ನು ಕರೆದುಕೊಂಡು ಬಂದು ಗುಂಪುಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಸೀಲರನ್ನು ಪಟ್ಟಣದ ಸಭೆಗೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ನಂಬದೆಹೋದ ಯೆಹೂದ್ಯರು ಅಸೂಯೆಗೊಂಡರು. ಅವರು ಪಟ್ಟಣದಲ್ಲಿದ್ದ ಕೆಲವು ಕೆಡುಕರಿಗೆ ಹಣಕೊಟ್ಟು ಕರೆದುಕೊಂಡು ಬಂದರು. ಈ ಕೆಡುಕರು ಅನೇಕ ಜನರನ್ನು ಒಟ್ಟುಗೂಡಿಸಿ, ಪಟ್ಟಣದಲ್ಲಿ ಗಲಭೆ ಮಾಡಿದರು. ಜನರು ಪೌಲ ಸೀಲರನ್ನು ಹುಡುಕುತ್ತಾ ಯಾಸೋನನ ಮನೆಗೆ ಹೋದರು. ಅವರು ಪೌಲ ಸೀಲರನ್ನು ಜನರ ಮುಂದೆ ಹೊರಗೆ ಎಳೆದುಕೊಂಡು ಬರಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ಜುದೆವಾಂಚ್ಯಾ ಲೊಕಾಕ್ನಿ ಹೆ ಬಗುನ್ ಕುಸ್ಡೆಪಾನ್ ಹೊಲೆ, ತೆನಿ ಶಾರಾತ್ಲ್ಯಾ ಥೊಡ್ಯಾ ಪಿಧುಡ್ಯಾ ಲೊಕಾಕ್ನಿ ಪೈಸೆ ದಿವ್ನ್ ಬಲ್ವುನ್ ಹಾನುನ್ ಥೈ ಧಾಂದಲ್ ಉಟ್ವುಲ್ಯಾನಿ, ತಿ ಲೊಕಾ ಪಾವ್ಲುಕ್ ಅನಿ ಸಿಲಾಸಾಕ್ ಹುಕ್ಡುನ್ಗೆತ್ ಯೊಸೊನಾಚ್ಯಾ ಘರಾಕ್ ಜಾವ್ನ್ ತೆಂಕಾ ವಡುನ್ ಲೊಕಾಂಚ್ಯಾ ಫಿಡ್ಯಾತ್ ಹಾನುಚೆ ಮನುನ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:5
26 ತಿಳಿವುಗಳ ಹೋಲಿಕೆ  

ನಾವು ಅಹಂಕಾರಿಗಳಾಗಿರಬಾರದು. ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಮತ್ಸರಗೊಳ್ಳದೆಯೂ ಇರೋಣ.


ಆದರೆ ಪೌಲನು ದೇವರ ವಾಕ್ಯವನ್ನು ಬೆರೋಯದಲ್ಲಿ ಬೋಧಿಸುತ್ತಿದ್ದಾನೆಂಬುದು ಥೆಸಲೋನಿಕದಲ್ಲಿದ್ದ ಯೆಹೂದ್ಯರಿಗೆ ತಿಳಿದುಬಂದಾಗ ಅವರು ಅಲ್ಲಿಗೂ ಬಂದು, ಜನಸಮೂಹವನ್ನು ಪ್ರಚೋದಿಸಿ ಗಲಭೆ ಎಬ್ಬಿಸಿದರು.


ಮತ್ಸರ, ಕುಡಿಕತನ, ದುಂದೌತಣ ಈ ಮೊದಲಾದವುಗಳೇ. ಇಂಥ ಕೃತ್ಯಗಳನ್ನು ನಡೆಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.


ನನ್ನ ಜೊತೆ ಕೆಲಸದವನಾಗಿರುವ ತಿಮೊಥೆಯನು ನಿಮಗೆ ವಂದನೆಗಳನ್ನು ತಿಳಿಸುತ್ತಾನೆ. ಹಾಗೆಯೇ ನನ್ನ ಬಂಧುಗಳಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ತಿಳಿಸುತ್ತಾರೆ.


ಯಾಸೋನನು ಅವರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡಿದ್ದಾನೆ. ಅವರು ಯೇಸು ಎಂಬ ಬೇರೊಬ್ಬ ಅರಸನಿದ್ದಾನೆ ಎಂದು ಹೇಳುತ್ತಾ ಕೈಸರನ ವಿರುದ್ಧವಾಗಿ ನಡೆಯುತ್ತಾರೆ,” ಎಂದು ಗಟ್ಟಿಯಾಗಿ ಕೂಗಿದರು.


ಆದರೆ ನಂಬಲು ನಿರಾಕರಿಸಿದ ಯೆಹೂದ್ಯರು ಯೆಹೂದ್ಯರಲ್ಲದವರ ಮನಸ್ಸನ್ನು ಕೆಡಿಸಿ, ಸಹೋದರರ ಮೇಲೆ ವಿರೋಧ ಭಾವನೆ ಹುಟ್ಟಿಸಿದರು.


ಏಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ಹೇಗೆಂದರೆ, ನಿಮ್ಮೊಳಗೆ ಅಸೂಯೆ, ಜಗಳಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದೀರಲ್ಲದೆ ಕೇವಲ ಮಾನವರಂತೆ ನಡೆಯುತ್ತೀರಲ್ಲವೇ?


ಈಗ ಇದ್ದ ಪರಿಸ್ಥಿತಿಯಲ್ಲಿ ಇಂದಿನ ಘಟನೆಯಿಂದ ನಾವು ದಂಗೆಯೆದ್ದಿದ್ದೇವೆ ಎಂಬ ಅಪರಾಧ ನಮ್ಮ ಮೇಲೆ ಬರುವ ಆಸ್ಪದವಿದೆ. ಈ ಗಲಭೆಗೆ ಕಾರಣವೇನೆಂದು ವಿವರಿಸಲು ನಮಗೆ ಸಾಧ್ಯವಾಗುವುದಿಲ್ಲ. ಏಕೆಂದರೆ ಇದು ಕಾರಣವಿಲ್ಲದೇ ಎದ್ದ ದಂಗೆ,” ಎಂದನು.


ಗಲ್ಲಿಯೋನ ಎಂಬುವನು ಅಖಾಯದ ರಾಜ್ಯಪಾಲನಾಗಿದ್ದನು. ಯೆಹೂದ್ಯರು ಒಟ್ಟುಗೂಡಿ ಪೌಲನನ್ನು ವಿರೋಧಿಸಿ, ಅವನನ್ನು ನ್ಯಾಯಸ್ಥಾನಕ್ಕೆ ಕರೆದುಕೊಂಡು ಬಂದು,


ಅದೇ ಸಮಯದಲ್ಲಿ ಅಂತಿಯೋಕ್ಯ ಮತ್ತು ಇಕೋನ್ಯದಿಂದ ಕೆಲವು ಜನ ಯೆಹೂದ್ಯರು ಬಂದು ಜನಸಮೂಹವನ್ನು ತಮ್ಮ ಕಡೆಗೆ ಒಲಿಸಿಕೊಂಡು, ಪೌಲನ ಮೇಲೆ ಕಲ್ಲೆಸೆಯಲು, ಅವನು ಸತ್ತನೆಂದು ಭಾವಿಸಿ ಅವನನ್ನು ಊರ ಹೊರಗೆ ಎಳೆದು ಹಾಕಿದರು.


ಜನಸಮೂಹಗಳನ್ನು ಯೆಹೂದ್ಯರು ಕಂಡಾಗ ಅಸೂಯೆಗೊಂಡು ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.


ಯೇಸುವನ್ನು ಅವರು ಹೊಟ್ಟೆಕಿಚ್ಚಿನಿಂದ ಒಪ್ಪಿಸಿಕೊಟ್ಟಿದ್ದರೆಂದು ಪಿಲಾತನಿಗೆ ತಿಳಿದಿತ್ತು.


ಅವರು ಬಾಳ್ ಬೆರೀತಿನ ಮನೆಯೊಳಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ಪುಂಡಪೋಕರಿಗಳನ್ನು ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು.


ಅಥವಾ ದೇವರು ನಮ್ಮಲ್ಲಿ ವಾಸವಾಗಿರಲು ನಮಗೆ ಕೊಟ್ಟಿರುವ ಪವಿತ್ರಾತ್ಮ ದೇವರು, ನಾವು ಅವರಿಗೆ ಮಾತ್ರ ಸೇರಿದವರಾಗಿರಬೇಕೆಂದು ಬಲವಾದ ಬಯಕೆ ಉಳ್ಳವರಾಗಿದ್ದಾರೆಂದು ಪವಿತ್ರ ವೇದವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸುತ್ತೀರೋ?


“ಈ ಪಿತೃಗಳು ಯೋಸೇಫನ ಮೇಲೆ ಮತ್ಸರ ತಾಳಿ ಅವನನ್ನು ಈಜಿಪ್ಟಿನವರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಅವನೊಂದಿಗಿದ್ದು,


ಶಾಂತ ಹೃದಯವು ದೇಹಕ್ಕೆ ಜೀವ; ಆದರೆ ಮತ್ಸರವು ಎಲುಬುಗಳಿಗೆ ಕ್ಷಯ.


ಊರುಬಾಗಿಲಲ್ಲಿ ಕೂತುಕೊಳ್ಳುವವರು ಪರಿಹಾಸ್ಯ ಮಾಡುತ್ತಾರೆ. ನಾನು ಮದ್ಯಪಾನಿಗಳಿಗೆ ಗಾಯನ ವಿಷಯವಾಗಿದ್ದೇನೆ.


ಆದರೆ ನಾನು ಎಡವಿದಾಗ ಅವರು ಸಂತೋಷಿಸುತ್ತಾ ಕೂಡಿಕೊಂಡರು; ಹೌದು, ದೂಷಕರು ನನಗೆ ತಿಳಿಯದೆ ನನ್ನ ವಿರೋಧವಾಗಿ ಕೂಡಿಕೊಂಡರು. ಅವರು ನನ್ನನ್ನು ದೂಷಿಸುವುದನ್ನು ನಿಲ್ಲಿಸಲೇ ಇಲ್ಲ.


ಯೆಹೋವ ದೇವರೇ, ನಿಮ್ಮ ಕೈ ಮೇಲಕ್ಕೆ ಎತ್ತಲಾಗಿದೆ. ಆದರೆ ಅವರು ಅದನ್ನು ಕಾಣುವುದಿಲ್ಲ. ನಿಮ್ಮ ಜನರಿಗಾಗಿ ನಿಮ್ಮ ಉತ್ಸಾಹವನ್ನು ಅವರು ನೋಡಲಿ ಮತ್ತು ನಾಚಿಕೆಪಡಲಿ; ನಿನ್ನ ವಿರೋಧಿಗಳಿಗಾಗಿದ್ದ ಅಗ್ನಿಯು ಅದನ್ನು ದಹಿಸಿಬಿಡಲಿ.


ಆದರೆ ಅಲ್ಲಿ ಅವರಿಲ್ಲದಿರುವುದನ್ನು ಕಂಡು ಅವರು ಯಾಸೋನನನ್ನೂ ಕೆಲವು ಸಹೋದರರನ್ನೂ ಎಳೆದುಕೊಂಡು ಬಂದು ಪಟ್ಟಣದ ಅಧಿಕಾರಿಗಳ ಮುಂದೆ ನಿಲ್ಲಿಸಿ, “ಲೋಕವನ್ನು ತಲೆಕೆಳಗೆ ಮಾಡಿರುವ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.


ಆಮೇಲೆ ಯಾಸೋನನಿಂದಲೂ ಮತ್ತಿತರರಿಂದಲೂ ಜಾಮೀನು ಪಡೆದು ಅವರನ್ನು ಬಿಡುಗಡೆ ಮಾಡಿದರು.


ಊರಿಂದೂರಿಗೆ ಪ್ರಯಾಣ ಮಾಡುತ್ತಲೇ ಇದ್ದೆನು, ನದಿಗಳಿಂದ ಅಪಾಯ, ದಾರಿಗಳ್ಳರಿಂದ ಅಪಾಯ, ನನ್ನ ಸ್ವಂತ ಜನರಿಂದ ಅಪಾಯ, ಯೆಹೂದ್ಯರಲ್ಲದವರಿಂದ ಅಪಾಯ, ಪಟ್ಟಣಗಳಲ್ಲಿ ಅಪಾಯ, ಹೊರ ಪ್ರದೇಶಗಳಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ ಮತ್ತು ಸುಳ್ಳು ಸಹೋದರರಿಂದ ಅಪಾಯಗಳನ್ನೆಲ್ಲಾ ನಾನು ಎದುರಿಸಿದೆನು.


ನೀವು ಬಹು ಹಿಂಸೆಯಿಂದಲೂ ಪವಿತ್ರಾತ್ಮ ಪ್ರೇರಿತ ಆನಂದದಿಂದಲೂ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತ ಯೇಸುವನ್ನೂ ಅನುಸರಿಸುವವರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು