Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:14 - ಕನ್ನಡ ಸಮಕಾಲಿಕ ಅನುವಾದ

14 ಪೌಲನು ಮಾತನಾಡಬೇಕೆಂದಿದ್ದಾಗ, ಗಲ್ಲಿಯೋನನು ಯೆಹೂದ್ಯರಿಗೆ, “ಯೆಹೂದ್ಯರೇ, ಅಪರಾಧ ಇಲ್ಲವೆ ದುಷ್ಕಾರ್ಯದ ಬಗ್ಗೆ ನಿಮಗೇನಾದರು ಹೇಳುವುದು ಇದ್ದರೆ, ಅದನ್ನು ಸಹನೆಯಿಂದ ಕೇಳುವುದು ನನಗೆ ಯೋಗ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಪೌಲನು ಪ್ರತಿವಾದ ಮಾಡಬೇಕೆಂದಿದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ; “ಎಲೈ ಯೆಹೂದ್ಯರೇ, ಅನ್ಯಾಯವು, ದುಷ್ಕರ್ಮವು ಇಂಥದೇನಾದರೂ ಇದ್ದಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನೆಯಿಂದ ಕೇಳುವುದು ನ್ಯಾಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪೌಲನು ಮಾತನಾಡಬೇಕೆಂದಿರುವಾಗ, ಗಲ್ಲಿಯೋ ಯೆಹೂದ್ಯರನ್ನು ಸಂಬೋಧಿಸಿ, “ಯೆಹೂದ್ಯರೇ, ಅನ್ಯಾಯವಾಗಲಿ, ಅಕ್ರಮವಾಗಲಿ ನಡೆದಿದ್ದ ಪಕ್ಷದಲ್ಲಿ, ನಿಮ್ಮ ಅಪಾದನೆಗಳನ್ನು ತಾಳ್ಮೆಯಿಂದ ಕೇಳಬೇಕಾದುದು ಸರಿಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಪೌಲನು ಪ್ರತಿವಾದ ಮಾಡಬೇಕೆಂದಿದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ - ಎಲೈ ಯೆಹೂದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದೇನಾದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನದಿಂದ ಕೇಳುವದು ನ್ಯಾಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪೌಲನು ಮಾತಾಡುವುದಕ್ಕೆ ಸಿದ್ಧನಾಗಿದ್ದನು. ಆದರೆ ಗಲ್ಲಿಯೋನ ಯೆಹೂದ್ಯರಿಗೆ, “ಯೆಹೂದ್ಯರೇ, ಅಪರಾಧವಾಗಲಿ ದುಷ್ಕೃತ್ಯವಾಗಲಿ ನಡೆದಿದ್ದರೆ ನಾನು ನಿಮ್ಮ ದೂರು ಕೇಳುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಪಾವ್ಲುನ್ ಬೊಲುಚೆ ಮನುನ್ ತಯಾರ್ ಹೊವ್ನ್ಗೆತ್ ರ್‍ಹಾತಾನಾಚ್ ಗೆಲ್ಲಿಯೊನ್ ಜುದೆವಾಂಚ್ಯಾ ಲೊಕಾಕ್ನಿ, ಹೊ ಮಾನುಸ್ ಎಕ್ ಎಳಾರ್ ಚುಕ್ ಕರಲ್ಲೊ ಅನಿ ಮೊಟೊ ಅಪರಾದ್ ಕರಲ್ಲೊ ಹೊಲ್ಲ್ಯಾರ್ ಮಿಯಾ ಹೆ ಜವಾಬ್ದಾರಿನ್ ಆಯ್ಕುಕ್ ಹೊಯ್ ಹೊತ್ತೆ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:14
17 ತಿಳಿವುಗಳ ಹೋಲಿಕೆ  

ಮಹಾಯಾಜಕನು ತಾನೂ ಬಲಹೀನ ಆಗಿರುವುದರಿಂದ ಆತನು ಅಜ್ಞಾನಿಗಳನ್ನೂ ಮಾರ್ಗ ತಪ್ಪಿದವರನ್ನೂ ಕುರಿತು ಕನಿಕರ ತೋರಿಸಬಲ್ಲನು.


ಏಕೆಂದರೆ ಯಾವನಾದರೂ ನಿಮ್ಮ ಬಳಿಗೆ ಬಂದು ನಾನು ನಿಮಗೆ ಬೋಧಿಸದೆ ಇರುವ ಬೇರೊಬ್ಬ ಯೇಸುವಿನ ವಿಷಯ ಬೋಧಿಸಿದರೆ, ನೀವು ಸ್ವೀಕರಿಸುವಿರಿ. ನೀವು ಹೊಂದಿದ ಆತ್ಮನ ಬದಲಿಗೆ ಬೇರೊಂದು ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನೀವು ಕೇಳಿರುವ ಸುವಾರ್ತೆಯ ಬದಲು ಬೇರೊಂದು ಸುವಾರ್ತೆಯನ್ನು ಯಾರಾದರೂ ಬೋಧಿಸಿದರೆ, ನೀವು ಬೇಗನೇ ಒಪ್ಪಿಕೊಳ್ಳುತ್ತೀರಿ.


ನನ್ನ ಬುದ್ಧಿಹೀನತೆಯನ್ನು ನೀವು ಇನ್ನೂ ಸ್ವಲ್ಪ ಸಹಿಸಿಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಈಗಾಗಲೇ ನೀವು ಸಹಿಸಿಕೊಂಡಿದ್ದೀರಿ.


ಕೆಟ್ಟದ್ದನ್ನು ಮಾಡುವವನಿಗೆ ಅಧಿಪತಿಗಳ ಭಯವಿರುವುದೇ ಹೊರತು, ಒಳ್ಳೆಯದನ್ನು ಮಾಡುವವನಿಗೆ ಅಲ್ಲ. ಅಧಿಕಾರಿಗಳಿಗೆ ಭಯಪಡಬಾರದೇ? ಒಳ್ಳೆಯದನ್ನು ಮಾಡು. ಅದರಿಂದ ನಿನಗೆ ಪ್ರಶಂಸೆ ದೊರಕುವುದು.


ಆದರೂ ಇವನ ಬಗ್ಗೆ ಖಚಿತವಾಗಿ ತಮಗೆ ಬರೆಯಲು ನನಗೇನು ಇಲ್ಲದಿರುವುದರಿಂದ, ಅಗ್ರಿಪ್ಪ ರಾಜನೇ, ಇವನನ್ನು ತಮ್ಮ ಮುಂದೆ ತಂದಿದ್ದೇನೆ. ಹೀಗೆ ಈ ವಿಚಾರಣೆಯ ಮೂಲಕ ಬರೆಯಲು ನನಗೇನಾದರೂ ಸಿಕ್ಕಬಹುದು.


ಆದರೂ ಮರಣಶಿಕ್ಷೆಗೆ ಯೋಗ್ಯವಾದದ್ದೇನಾದರೂ ಮಾಡಿದ ಅಪರಾಧಿ ನಾನಾಗಿದ್ದರೆ, ಸಾಯಲಿಕ್ಕೂ ನಾನು ಹಿಂಜರಿಯುವುದಿಲ್ಲ. ಆದರೆ ಯೆಹೂದ್ಯರು ನನ್ನ ವಿರೋಧವಾಗಿ ತಂದಿರುವ ಆಪಾದನೆಗಳು ಸುಳ್ಳಾದವುಗಳಾದದ್ದರಿಂದ, ನನ್ನನ್ನು ಅವರಿಗೆ ಒಪ್ಪಿಸಲು ಯಾರಿಗೂ ಅಧಿಕಾರವಿಲ್ಲ. ನಾನು ನೇರವಾಗಿ ಕೈಸರನಿಗೇ ಮನವಿ ಮಾಡಿಕೊಳ್ಳುತ್ತೇನೆ,” ಎಂದು ಉತ್ತರಕೊಟ್ಟನು.


ಅದಕ್ಕೆ ಪೌಲನು, “ನಾನೊಬ್ಬ ಯೆಹೂದ್ಯನು, ಕಿಲಿಕ್ಯದ ತಾರ್ಸದವನು, ಪ್ರಸಿದ್ಧ ಪಟ್ಟಣದ ನಾಗರಿಕನು. ದಯವಿಟ್ಟು ಜನರೊಂದಿಗೆ ಮಾತನಾಡಲು ನನಗೆ ಅವಕಾಶ ಕೊಡಬೇಕು,” ಎಂದು ಸಹಸ್ರಾಧಿಪತಿಯನ್ನು ಬೇಡಿಕೊಂಡನು.


ಅರಣ್ಯದಲ್ಲಿ ಸುಮಾರು ನಲವತ್ತು ವರ್ಷ ಅವರ ನಡತೆಯನ್ನು ಸಹಿಸಿಕೊಂಡರು.


ಆಗ ಯೇಸು ಅವರಿಗೆ, “ವಿಶ್ವಾಸವಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.


ಮತ್ತು ಯೇಸು ಅವರಿಗೆ ಉಪದೇಶಿಸಲು ಪ್ರಾರಂಭಿಸಿದರು. ಅವರು ಹೀಗೆ ಹೇಳಿದರು:


“ಎಲೈ ಸೈತಾನನ ಮಗನೇ, ನೀತಿಗೆಲ್ಲಾ ವೈರಿಯೇ, ನಿನ್ನಲ್ಲಿ ಎಲ್ಲಾ ತರದ ಮೋಸವೂ ಕುತಂತ್ರವೂ ತುಂಬಿವೆ. ಕರ್ತದೇವರ ಸನ್ಮಾರ್ಗಗಳಿಗೆ ಅಡ್ಡಿಯಾಗುವುದನ್ನು ನೀನೆಂದೂ ನಿಲ್ಲಿಸುವುದಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು