Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:15 - ಕನ್ನಡ ಸಮಕಾಲಿಕ ಅನುವಾದ

15 ಆದರೆ ವಾಕ್ಯ, ಹೆಸರುಗಳ ಮತ್ತು ನಿಮ್ಮ ನಿಯಮದ ವಿಷಯವಾಗಿರುವ ಪ್ರಶ್ನೆಗಳಾಗಿದ್ದರೆ, ಈ ಸಂಗತಿಯನ್ನು ನೀವೇ ಬಗೆಹರಿಸಿಕೊಳ್ಳಿ, ಅಂಥ ವಿಷಯಗಳಿಗೆ ನಾನು ನ್ಯಾಯಾಧೀಶನಾಗಿರಲಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ನೀವು ಮಾಡುವ ವಿವಾದವು ಬೋಧನೆಯನ್ನೂ, ಹೆಸರುಗಳನ್ನೂ, ನಿಮ್ಮ ಧರ್ಮಶಾಸ್ತ್ರವನ್ನೂ ಕುರಿತದ್ದಾಗಿರುವುದರಿಂದ ಅವುಗಳನ್ನು ನೀವೇ ನೋಡಿಕೊಳ್ಳಿರಿ. ಇಂಥ ವಿಷಯಗಳನ್ನು ವಿಚಾರಣೆಮಾಡುವುದಕ್ಕೆ ನನಗಂತೂ ಮನಸ್ಸಿಲ್ಲ” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದರೆ ಇದು ನಾಮನೇಮಗಳಿಗೆ ಹಾಗು ನಿಮ್ಮ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ಪ್ರಶ್ನೆ. ಅದನ್ನು ನಿಮ್ಮನಿಮ್ಮಲ್ಲೇ ಇತ್ಯರ್ಥಮಾಡಿಕೊಳ್ಳಿ. ಇಂಥ ವಿಷಯಗಳನ್ನು ವಿಚಾರಣೆಮಾಡಲು ನನಗೆ ಮನಸ್ಸಿಲ್ಲ,” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ನೀವು ಮಾಡುವ ವಿವಾದವು ಬೋಧನೆಯನ್ನೂ ಹೆಸರುಗಳನ್ನೂ ನಿಮ್ಮ ಧರ್ಮಶಾಸ್ತ್ರವನ್ನೂ ಕುರಿತದ್ದಾಗಿರುವದರಿಂದ ಅವುಗಳನ್ನು ನೀವೇ ನೋಡಿಕೊಳ್ಳಿರಿ. ಇಂಥ ವಿಷಯಗಳನ್ನು ವಿಚಾರಣೆಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿಮ್ಮ ಅಪವಾದಗಳು ಕೇವಲ ಪದಗಳಿಗೂ ಹೆಸರುಗಳಿಗೂ ಮತ್ತು ನಿಮ್ಮ ಸ್ವಂತ ಧರ್ಮಶಾಸ್ತ್ರಕ್ಕೂ ಸಂಬಂಧಪಟ್ಟಿವೆ. ಆದ್ದರಿಂದ ನೀವೇ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ಈ ಸಂಗತಿಗಳಿಗೆ ನ್ಯಾಯಾಧೀಶನಾಗಿರಲು ನನಗೆ ಇಷ್ಟವಿಲ್ಲ!” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆ ಹಿ ವಾದ್ ವಿವಾದಾ ಕರ್‍ತಲಿ ಬೊಲ್ನಿಯಾ ಅನಿ ನಾವಾ ತುಮ್ಚ್ಯಾ ಸ್ವತಾಚ್ಯಾ ಖಾಯ್ದ್ಯಾಂಚ್ಯಾ ಪುಸ್ತಕಾಕ್ ಸಂಬದ್ ಪಡಲ್ಲಿ ಹಾತ್, ತಸೆ ತುಮಿಚ್ ಹೆ ಸಮಾ ಕರುನ್ ಘೆವ್ಚೆ, ಹ್ಯಾ ಸಂಗ್ತಿಯಾಕ್ನಿ ಝಡ್ತಿ ಕರ್‍ತಲೊ ಹೊವ್ನ್ ರ್‍ಹಾವ್ಕ್ ಮಾಕಾ ಮನ್ ನಾ! ಮನುನ್ ಸಾಂಗುನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:15
13 ತಿಳಿವುಗಳ ಹೋಲಿಕೆ  

ಇವನ ಮೇಲಿನ ದೋಷಾರೋಪಣೆ ಅವರ ನಿಯಮದ ಪ್ರಶ್ನೆಗಳಿಗೆ ಸಂಬಂಧಪಟ್ಟದ್ದು. ಇವನಲ್ಲಿ ಮರಣದಂಡನೆಗಾಗಲಿ, ಸೆರೆಮನೆಗಾಗಲಿ ಯೋಗ್ಯವಾದ ಯಾವ ಅಪರಾಧಗಳೂ ಇಲ್ಲವೆಂದು ನಾನು ಕಂಡುಕೊಂಡಿದ್ದೇನೆ.


ಆದರೆ ಅವರಿಗೆ ತಮ್ಮ ಸಂಪ್ರದಾಯದ ಬಗ್ಗೆಯೂ ಸತ್ತು ಹೋಗಿದ್ದ ಯೇಸು ಎಂಬ ಮನುಷ್ಯನು ಜೀವಿಸುತ್ತಿದ್ದಾನೆಂದೂ ಪೌಲ ಹೇಳುವಂಥದ್ದರ ಬಗ್ಗೆ ವಾದವಿವಾದವಿತ್ತು.


ಅಂಥವರು ಅಹಂಕಾರಿಯೂ ವಿವೇಕರಹಿತನಾಗಿದ್ದಾರೆ. ಅವರು ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯಪಡುವ ಭ್ರಾಂತರಾಗಿ ಸತ್ಯವನ್ನು ಬಿಟ್ಟು, ಕುತರ್ಕ ವಾಗ್ವಾದಗಳನ್ನು ಮಾಡುವವರಾಗಿದ್ದಾರೆ.


ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನಿಯಮದ ವಿಷಯವಾಗಿರುವ ವಾಗ್ವಾದಗಳಿಗೂ ದೂರವಾಗಿರು. ಏಕೆಂದರೆ ಅವು ನಿಷ್ಪ್ರಯೋಜನವಾದವುಗಳೂ ವ್ಯರ್ಥವಾದವುಗಳೂ ಆಗಿವೆ.


ಬುದ್ಧಿಯಿಲ್ಲದ ಅಯುಕ್ತ ವಾಗ್ವಾದಗಳು ಜಗಳಗಳನ್ನು ಹುಟ್ಟಿಸುತ್ತವೆ ಎಂದು ತಿಳಿದು ಅವುಗಳನ್ನು ನಿರಾಕರಿಸು.


ಕಟ್ಟುಕಥೆಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಕೆಲವರಿಗೆ ಆಜ್ಞಾಪಿಸಬೇಕೆಂದು ನಾನು ನಿನಗೆ ಖಂಡಿತವಾಗಿ ಹೇಳಿದಂತೆ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆಯಿಂದುಂಟಾಗುವ ದೇವರ ಕಾರ್ಯಭಾರವನ್ನು ವೃದ್ಧಿ ಮಾಡುವುದೇ ಇಲ್ಲ.


ಯೆಹೂದ್ಯರ ಎಲ್ಲಾ ಆಚಾರ ವಿಚಾರಗಳನ್ನು, ವಾದವಿವಾದಗಳನ್ನು ತಾವು ಚೆನ್ನಾಗಿ ತಿಳಿದಿದ್ದೀರಿ. ಆದ್ದರಿಂದ, ತಾವು ತಾಳ್ಮೆಯಿಂದ ಆಲಿಸಬೇಕೆಂದು ಕೇಳಿಕೊಳ್ಳುತ್ತೇನೆ.


ಆದರೂ ಮರಣಶಿಕ್ಷೆಗೆ ಯೋಗ್ಯವಾದದ್ದೇನಾದರೂ ಮಾಡಿದ ಅಪರಾಧಿ ನಾನಾಗಿದ್ದರೆ, ಸಾಯಲಿಕ್ಕೂ ನಾನು ಹಿಂಜರಿಯುವುದಿಲ್ಲ. ಆದರೆ ಯೆಹೂದ್ಯರು ನನ್ನ ವಿರೋಧವಾಗಿ ತಂದಿರುವ ಆಪಾದನೆಗಳು ಸುಳ್ಳಾದವುಗಳಾದದ್ದರಿಂದ, ನನ್ನನ್ನು ಅವರಿಗೆ ಒಪ್ಪಿಸಲು ಯಾರಿಗೂ ಅಧಿಕಾರವಿಲ್ಲ. ನಾನು ನೇರವಾಗಿ ಕೈಸರನಿಗೇ ಮನವಿ ಮಾಡಿಕೊಳ್ಳುತ್ತೇನೆ,” ಎಂದು ಉತ್ತರಕೊಟ್ಟನು.


ಪಿಲಾತನು ತನ್ನ ಯತ್ನ ನಡೆಯಲಿಲ್ಲವೆಂದೂ ಅದಕ್ಕೆ ಬದಲಾಗಿ ಗದ್ದಲವೇ ಹೆಚ್ಚಾಗುತ್ತದೆಂದೂ ನೋಡಿ, ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು, “ಈ ನೀತಿವಂತನ ರಕ್ತದ ವಿಷಯದಲ್ಲಿ ನಾನು ನಿರಪರಾಧಿ, ಇದಕ್ಕೆ ನೀವೇ ಜವಾಬ್ದಾರಿ,” ಎಂದನು.


ಆಗ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡುಹೋಗಿ ನಿಮ್ಮ ನಿಯಮದ ಪ್ರಕಾರ ಆತನಿಗೆ ತೀರ್ಪು ಮಾಡಿರಿ,” ಎಂದನು. ಅದಕ್ಕೆ ಯೆಹೂದ್ಯರು ಅವನಿಗೆ, “ಮರಣದಂಡನೆ ವಿಧಿಸುವ ಅಧಿಕಾರ ನಮಗೆ ಇಲ್ಲ,” ಎಂದು ಹೇಳಿದರು.


ಅವನು, “ನಾನು ನಿರಪರಾಧಿಯ ರಕ್ತಕ್ಕೆ ದ್ರೋಹ ಬಗೆದು ಪಾಪಮಾಡಿದ್ದೇನೆ,” ಎಂದನು. ಅದಕ್ಕೆ ಅವರು, “ನಮಗೇನು? ನೀನೇ ಅದನ್ನು ನೋಡಿಕೋ,” ಎಂದರು.


“ಮೋಶೆಯ ನಿಯಮಕ್ಕೆ ವಿರುದ್ಧವಾದ ರೀತಿಯಲ್ಲಿ ದೇವರನ್ನು ಆರಾಧಿಸಬೇಕೆಂದು ಈ ಮನುಷ್ಯನು ಜನರನ್ನು ಪ್ರೇರೇಪಿಸುತ್ತಿದ್ದಾನೆ,” ಎಂದು ದೂರು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು