Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:18 - ಕನ್ನಡ ಸಮಕಾಲಿಕ ಅನುವಾದ

18 ಇನ್ನು ಕೆಲವು ದಿನ ಪೌಲನು ಅಲ್ಲಿಯೇ ಉಳಿದುಕೊಂಡನು. ಅನಂತರ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಕೆಂಖ್ರೆಯ ಎಂಬ ಸ್ಥಳದಲ್ಲಿ ತಲೆ ಕೂದಲನ್ನು ಕ್ಷೌರಮಾಡಿಸಿಕೊಂಡು ತಾನು ಹೊತ್ತ ಹರಕೆ ಪೂರೈಸಿದ ಮೇಲೆ ಸಿರಿಯಕ್ಕೆ ನೌಕೆ ಪ್ರಯಾಣಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲರು ಅವನ ಜೊತೆಯಲ್ಲಿ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇದಾದ ಮೇಲೆ ಪೌಲನು ಕೊರಿಂಥದಲ್ಲಿ ಅನೇಕ ದಿನ ಇದ್ದನು. ಅನಂತರ ಭಕ್ತವಿಶ್ವಾಸಿಗಳನ್ನು ಬೀಳ್ಕೊಟ್ಟು ಅಕ್ವಿಲ ಮತ್ತು ಪ್ರಿಸ್ಸಿಲರೊಡನೆ ಸಿರಿಯಕ್ಕೆ ನೌಕಾಯಾನ ಹೊರಟನು. ತಾನು ಮಾಡಿದ್ದ ಹರಕೆಯ ಪ್ರಕಾರ ಕೆಂಖ್ರೆಯೆಂಬ ಸ್ಥಳದಲ್ಲಿ ಮುಂಡನ ಮಾಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಪೌಲನು ಇನ್ನು ಅನೇಕ ದಿವಸ ಅಲ್ಲಿದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ತನಗೆ ದೀಕ್ಷೆ ಇದ್ದದರಿಂದ ಕೆಂಖ್ರೆಯದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಅಕ್ವಿಲನೂ ಅವನ ಸಂಗಡ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಪೌಲನು ಅನೇಕ ದಿನಗಳವರೆಗೆ ಸಹೋದರರೊಂದಿಗೆ ಇದ್ದನು. ಬಳಿಕ ಅವನು ಅಲ್ಲಿಂದ ಸಿರಿಯಕ್ಕೆ ನೌಕಾಯಾನ ಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲ ಸಹ ಅವನೊಂದಿಗಿದ್ದರು. ಕೆಂಖ್ರೆ ಎಂಬ ಸ್ಥಳದಲ್ಲಿ ಪೌಲನು ತನ್ನ ತಲೆಕೂದಲನ್ನು ಕತ್ತರಿಸಿಕೊಂಡನು. ಅವನು ದೇವರಿಗೆ ಹರಕೆಯನ್ನು ಮಾಡಿಕೊಂಡಿದ್ದನೆಂಬುದನ್ನು ಅದು ಸೂಚಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಪಾವ್ಲು ವಿಶ್ವಾಸಿ ಭಾವಾಚ್ಯಾ ವಾಂಗ್ಡಾ ಕೊರಿಂಥಾತ್ ಉಲ್ಲಿ ದಿಸಾ ರ್‍ಹಾಲೊ ತೆಚ್ಯಾ ಮನಾ ಸಮುಂದ್ರರಾಚ್ಯಾ ವಾಟೆನ್ ಪ್ರಿಸ್ಕಿಲಾ ಅನಿ ಅಕ್ವಿಲ್ ಮನ್ತಲ್ಲ್ಯಾಂಚ್ಯಾ ವಾಂಗ್ಡಾ ಸಿರಿಯಾಕ್ ಜಾವ್ಕ್ ಲಾಗಲ್ಲೊ, ಪ್ರಯಾನ್ ಕರುಚ್ಯಾ ಅದ್ದಿಚ್ ತೆನಿ ಕೆಂಕ್ರೆ ಶಾರಾತ್ ಅಪ್ಲಿ ಕೆಸಾ ಕಾತ್ರುನ್ ಘೆವ್ಕ್ ಗೆಲೊ, ಕಶ್ಯಾಕ್ ಮಟ್ಲ್ಯಾರ್, ತೆನಿ ಶಪತ್ ಕರಲ್ಲೆ ಹೊತ್ತೆ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:18
17 ತಿಳಿವುಗಳ ಹೋಲಿಕೆ  

ನೀನು ಇವರನ್ನು ಕರೆದುಕೊಂಡು ಹೋಗಿ, ಅವರೊಂದಿಗೆ ನಿನ್ನನ್ನು ಶುದ್ಧಿಮಾಡಿಕೊಂಡು, ಅವರು ತಮ್ಮ ಕ್ಷೌರ ಮಾಡಿಸಿಕೊಳ್ಳುವ ಖರ್ಚನ್ನು ನೀನೇ ಪೂರೈಸು. ಆಗ ನಿನ್ನ ವಿಷಯದಲ್ಲಿ ಕೇಳಿರುವ ಸಂಗತಿಗಳು ನಿಜವಲ್ಲ ಮತ್ತು ನೀನು ಮೋಶೆಯ ನಿಯಮಕ್ಕನುಸಾರವಾಗಿ ನಡೆದುಕೊಳ್ಳುತ್ತೀ ಎಂದು ಎಲ್ಲರಿಗೂ ತಿಳಿದುಬರುವುದು.


“ ‘ಇದಲ್ಲದೆ ನಾಜೀರರು ತಮ್ಮ ಸಮರ್ಪಣೆಯನ್ನು ಸಂಕೇತಿಸುವ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಪ್ರತ್ಯೇಕಿಸಿದ ತಮ್ಮ ತಲೆಗೂದಲನ್ನು ತೆಗೆದುಕೊಂಡು, ಸಮಾಧಾನದ ಬಲಿಗಳ ಬಲಿಯ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.


ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ನಿಯಮಕ್ಕೆ ಅಧೀನನಲ್ಲದಿದ್ದರೂ ನಿಯಮಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವಂತೆ ಅವರಿಗಾಗಿ ನಿಯಮಕ್ಕೆ ಅಧೀನನಂತಾದೆನು.


ನಮ್ಮ ಸಹೋದರಿಯೂ ಕೆಂಖ್ರೆಯ ಸಭೆಯ ಸೇವಕಿಯೂ ಆಗಿರುವ ಫೊಯಿಬೆಯನ್ನು ನಿಮಗೆ ಪರಿಚಯಿಸುತ್ತೇನೆ.


ಅಲ್ಲಿ ಅಕ್ವಿಲ ಎಂಬ ಯೆಹೂದ್ಯನನ್ನು ಕಂಡನು. ಅವನು ಪೊಂತ ಎಂಬ ಊರಿನ ನಿವಾಸಿ. ಎಲ್ಲಾ ಯೆಹೂದ್ಯರು ರೋಮ್ ಪಟ್ಟಣ ಬಿಟ್ಟು ಹೊರಟುಹೋಗಬೇಕೆಂದು ಚಕ್ರವರ್ತಿ ಕ್ಲೌದ್ಯನು ಆಜ್ಞೆ ಹೊರಡಿಸಿದ್ದರಿಂದ, ಅವನು ತನ್ನ ಹೆಂಡತಿ ಪ್ರಿಸ್ಕಿಲ್ಲಳೊಂದಿಗೆ ಇತ್ತೀಚೆಗೆ ಇಟಲಿಯನ್ನು ಬಿಟ್ಟು ಬಂದಿದ್ದನು. ಪೌಲನು ಅವರನ್ನು ನೋಡಲು ಹೋದನು.


ಆಮೇಲೆ ಸಿರಿಯಾ ಮತ್ತು ಕಿಲಿಕ್ಯ ಪ್ರಾಂತಗಳಿಗೆ ಬಂದೆನು.


ಅವರ ಕೈಯಿಂದ ಬರೆದು ಕೊಟ್ಟದ್ದೇನೆಂದರೆ: ಅಪೊಸ್ತಲರು ಹಾಗೂ ಹಿರಿಯ ಸಹೋದರರು, ಅಂತಿಯೋಕ್ಯ, ಸಿರಿಯ ಮತ್ತು ಕಿಲಿಕ್ಯದಲ್ಲಿ ವಾಸಿಸುವ ಯೆಹೂದ್ಯರಲ್ಲದವರೊಳಗಿನ ಸಹೋದರರಿಗೆ: ವಂದನೆಗಳು.


“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ: ‘ಪುರುಷನಾದರೂ, ಸ್ತ್ರೀಯಾದರೂ ಯೆಹೋವ ದೇವರಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರ ವ್ರತ ಕೈಗೊಂಡರೆ,


ಸೈಪ್ರಸ್ ಹತ್ತಿರ ಬಂದು ಅದರ ದಕ್ಷಿಣಕ್ಕೆ ಪ್ರಯಾಣಮಾಡಿ ಸಿರಿಯಕ್ಕೆ ಹೋದೆವು. ನಮ್ಮ ನೌಕೆಯಲ್ಲಿದ್ದ ಸರಕುಗಳನ್ನು ಇಳಿಸಬೇಕಾಗಿದ್ದ ಟೈರ್ ಎಂಬಲ್ಲಿ ಬಂದು ಇಳಿದೆವು.


ಇವನು ಸಭಾಮಂದಿರದಲ್ಲಿ ಧೈರ್ಯದಿಂದ ಬೋಧಿಸಲು ಪ್ರಾರಂಭಿಸಿದನು. ಆಗ ಪ್ರಿಸ್ಕಿಲ್ಲ ಮತ್ತು ಅಕ್ವಿಲರು ಅವನು ಮಾತನಾಡುವುದನ್ನು ಕೇಳಿ, ಅವನನ್ನು ತಮ್ಮ ಮನೆಗೆ ಆಮಂತ್ರಿಸಿದರು. ಅವರು ದೇವರ ಮಾರ್ಗವನ್ನು ಇನ್ನೂ ಹೆಚ್ಚಾದ ರೀತಿಯಲ್ಲಿ ಅಪೊಲ್ಲೋಸನಿಗೆ ವಿವರಿಸಿ ಹೇಳಿದರು.


ಪೌಲನು ಸಿರಿಯ ಮತ್ತು ಕಿಲಿಕ್ಯ ಸೀಮೆಗಳನ್ನು ಹಾದುಹೋಗುತ್ತಾ, ಅಲ್ಲಿದ್ದ ಸಭೆಗಳ ನಂಬಿಕೆಯನ್ನು ಬಲಪಡಿಸಿದನು.


ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.


ಯೇಸು ಜನಸಮೂಹವನ್ನು ಕಳುಹಿಸಿದ ಮೇಲೆ ಪ್ರಾರ್ಥನೆಮಾಡಲು ಬೆಟ್ಟಕ್ಕೆ ಹೋದರು.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಸೇರಿದ್ದರು. ಅವರ ನಡುವೆ ಪೇತ್ರನು ಎದ್ದು ನಿಂತು, ಹೀಗೆಂದನು:


ಅಪೊಲ್ಲೋಸನು ಅಖಾಯಕ್ಕೆ ಹೋಗಲು ಬಯಸಿದಾಗ, ಸಹೋದರರು ಅವನನ್ನು ಪ್ರೋತ್ಸಾಹಿಸಿ, ಅವನನ್ನು ಸ್ವೀಕರಿಸುವಂತೆ ಅಲ್ಲಿಯ ಶಿಷ್ಯರಿಗೆ ಪತ್ರವನ್ನು ಬರೆದುಕೊಟ್ಟರು. ಅವನು ಅಲ್ಲಿಗೆ ತಲುಪಿದಾಗ ದೇವರ ಕೃಪೆಯಿಂದ ವಿಶ್ವಾಸವಿಟ್ಟವರಿಗೆ ಅವನು ಬಹಳ ಸಹಾಯಮಾಡಿದನು.


ಆದ್ದರಿಂದ ನಾವು ನಿನಗೆ ಹೇಳುವಂತೆ ಮಾಡು, ಹರಕೆ ಹೊತ್ತ ನಾಲ್ವರು ನಮ್ಮಲ್ಲಿ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು