Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:21 - ಕನ್ನಡ ಸಮಕಾಲಿಕ ಅನುವಾದ

21 ಆದರೆ ಅವನು ಅಲ್ಲಿಂದ ಹೊರಟು ಹೋಗಲಿಕ್ಕಿದ್ದಾಗ, “ದೇವರ ಚಿತ್ತವಾದರೆ, ನಾನು ಹಿಂದಿರುಗಿ ಬರುವೆ,” ಎಂದನು. ಆಮೇಲೆ ಎಫೆಸದಿಂದ ನೌಕೆಯಲ್ಲಿ ಪ್ರಯಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವರನ್ನು ಬೀಳ್ಕೊಡುತ್ತಾ, “ದೇವರ ಚಿತ್ತವಾದರೆ ನಾನು ನಿಮ್ಮಲ್ಲಿಗೆ ಮರಳಿ ಬರುತ್ತೇನೆ,” ಎಂದು ಹೇಳಿ ಎಫೆಸದಿಂದ ಸಮುದ್ರ ಪ್ರಯಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದೇವರ ಚಿತ್ತವಾದರೆ ತಿರಿಗಿ ನಿಮ್ಮ ಬಳಿಗೆ ಬರುತ್ತೇನೆಂದು ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೋದನು. ಆಮೇಲೆ ಎಫೆಸದಿಂದ ಸಮುದ್ರಪ್ರಯಾಣ ಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಪೌಲನು ಅವರಿಗೆ, “ದೇವರು ಬಯಸುವುದಾದರೆ, ನಾನು ನಿಮ್ಮ ಬಳಿಗೆ ಮತ್ತೆ ಬರುತ್ತೇನೆ” ಎಂದು ಹೇಳಿ ಅಲ್ಲಿಂದ ಹೊರಟನು. ಹೀಗೆ ಪೌಲನು ಎಫೆಸದಿಂದ ನೌಕಾಯಾನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಹೆಚ್ಯಾ ಬದ್ಲಾಕ್ ತೆನಿ ಜಾತಾನಾ ತೆಂಕಾ ದೆವಾಚೊ ಮನ್ ರ್‍ಹಾಲ್ಯಾರ್, ಮಿಯಾ ಪರ್ತುನ್ ತುಮ್ಚ್ಯಾಕ್ಡೆ ಯೆತಾ ಮನುನ್ ಸಾಂಗುನ್ ಢೊನಾತ್ನಾ ಸಮುಂದರಾಚ್ಯಾ ವಾಟೆನ್ ಎಫೆಸಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:21
28 ತಿಳಿವುಗಳ ಹೋಲಿಕೆ  

ಆದರೆ ಕರ್ತದೇವರ ಚಿತ್ತವಿದ್ದರೆ, ನಾನು ಬೇಗ ನಿಮ್ಮ ಬಳಿಗೆ ಬಂದು, ಅಹಂಕಾರಿಗಳ ಮಾತನ್ನಲ್ಲ, ಅವರಿಗೆ ಎಷ್ಟು ಶಕ್ತಿ ಇದೆ ಎಂಬುವುದನ್ನು ಕಂಡುಕೊಳ್ಳುವೆನು.


ಆದ್ದರಿಂದ, “ಕರ್ತದೇವರ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ, ಆ ಕೆಲಸವನ್ನಾಗಲಿ ಮಾಡುವೆವು!” ಎಂದು ನೀವು ಹೇಳುವುದೇ ಸರಿ.


ದೇವರು ಅನುಮತಿಸಿದರೆ ನಾವು ಇದನ್ನು ಮಾಡೋಣ.


ಆಗ ನಾನು ದೇವರ ಚಿತ್ತಾನುಸಾರ ನಿಮ್ಮ ಬಳಿಗೆ ಸಂತೋಷದಿಂದ ಬಂದು, ನಿಮ್ಮ ಸಂಗಡ ವಿಶ್ರಾಂತಿ ಹೊಂದುವೆನು.


ನಾನು ಪ್ರಾರ್ಥನೆ ಮಾಡುವಾಗಲೆಲ್ಲಾ ತಪ್ಪದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತಾ ಇನ್ನು ಮೇಲಾದರೂ ನಿಮ್ಮ ಬಳಿಗೆ ಬರುವುದಕ್ಕೆ ದೇವರ ಚಿತ್ತದಿಂದ ನನಗೆ ಯಾವ ರೀತಿಯಲ್ಲಾದರೂ ಅನುಕೂಲವಾಗಬೇಕೆಂದು ಬೇಡಿಕೊಳ್ಳುತ್ತೇನೆ.


ಸಾಧ್ಯವಾದರೆ, ಪೆಂಟೆಕೋಸ್ಟ್ ಎಂಬ ಐವತ್ತನೆಯ ದಿನದ ಹಬ್ಬಕ್ಕೆ ಯೆರೂಸಲೇಮನ್ನು ತಲುಪಬೇಕೆಂಬ ಅವಸರ ಪೌಲನಿಗಿದ್ದುದ್ದರಿಂದ, ಏಷ್ಯಾ ಪ್ರಾಂತದಲ್ಲಿ ಕಾಲ ಕಳೆಯುವುದನ್ನು ತಪ್ಪಿಸಿ ಎಫೆಸವನ್ನು ದಾಟಿ ಹೋಗಬೇಕೆಂದು ನಿರ್ಧರಿಸಿದ್ದನು.


ಕೆಟ್ಟನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತ ಒಳ್ಳೆಯ ನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವುದು ಲೇಸು.


ಪ್ರಿಯರೇ, ಕಡೆಯ ಮಾತೇನೆಂದರೆ, ಆನಂದಪಡಿರಿ! ನಿಮ್ಮನ್ನು ಪೂರ್ಣ ಪುನಃಸ್ಥಾಪನೆಗಾಗಿ ಕ್ರಮಪಡಿಸಿಕೊಳ್ಳಿರಿ, ಉತ್ತೇಜನಗೊಳ್ಳಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ. ಆಗ ಪ್ರೀತಿ ಹಾಗೂ ಶಾಂತಿಯ ದೇವರು ನಿಮ್ಮ ಸಂಗಡ ಇರುವರು.


ನಾನು ಹಾದುಹೋಗುವಾಗ, ನಿಮ್ಮನ್ನು ಸ್ವಲ್ಪ ಸಮಯ ಮಾತ್ರ ಸಂದರ್ಶಿಸುವುದಕ್ಕೆ ನನಗೆ ಇಷ್ಟವಿಲ್ಲ. ಕರ್ತನು ಅನುಮತಿಸಿದರೆ, ನಿಮ್ಮ ಬಳಿಯಲ್ಲಿ ಬಂದು ಹೆಚ್ಚುಕಾಲ ಇರುವೆನೆಂದು ನಿರೀಕ್ಷಿಸುತ್ತೇನೆ.


ಪೌಲನು ಸಮ್ಮತಿಸದೆ ಇದ್ದ ಕಾರಣ, “ಕರ್ತ ಯೇಸುವಿನ ಚಿತ್ತ ನೆರವೇರಲಿ,” ಎಂದು ಹೇಳಿ ನಾವು ಸುಮ್ಮನಾದೆವು.


ಇದೆಲ್ಲ ಸಂಭವಿಸಿದ ನಂತರ ಮಕೆದೋನ್ಯ ಮತ್ತು ಅಖಾಯ ಮಾರ್ಗವಾಗಿ ಯೆರೂಸಲೇಮಿಗೆ ಹೋಗಲು ಪೌಲನು ಮನಸ್ಸಿನಲ್ಲಿ ನಿರ್ಧರಿಸಿದನು. ಅವನು, “ಅಲ್ಲಿಗೆ ಹೋದ ನಂತರ ನಾನು ರೋಮ್ ಪಟ್ಟಣವನ್ನು ಸಂದರ್ಶಿಸಬೇಕು,” ಎಂದನು.


ದೇವರಲ್ಲದವುಗಳಿಗೆ ಅರ್ಪಿತವಾದ ಮಲಿನ ಆಹಾರದಿಂದಲೂ ರಕ್ತದಿಂದಲೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ಅನೈತಿಕತೆಯಿಂದಲೂ ದೂರವಿರಬೇಕು. ಇವುಗಳಿಂದ ನಿಮ್ಮನ್ನು ಕಾಪಾಡಿಕೊಳ್ಳುವುದರಿಂದ ನಿಮಗೆ ಒಳಿತಾಗುವುದು. ನಿಮಗೆ ಶುಭವಾಗಲಿ.


ಇದಲ್ಲದೆ ಮತ್ತೊಬ್ಬನು ಸಹ, “ಕರ್ತದೇವರೇ, ನಾನು ನಿಮ್ಮನ್ನು ಹಿಂಬಾಲಿಸುವೆನು, ಆದರೆ ನಾನು ಮೊದಲು ಹೋಗಿ ನನ್ನ ಮನೆಯಲ್ಲಿದ್ದವರನ್ನು ಬೀಳ್ಕೊಡುವಂತೆ ನನಗೆ ಅಪ್ಪಣೆಕೊಡಿ,” ಎಂದನು.


ಆಮೇಲೆ ಯೇಸು ಸ್ವಲ್ಪ ಮುಂದಕ್ಕೆ ಹೋಗಿ, ಬೋರಲು ಬಿದ್ದು ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ. ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ,” ಎಂದರು.


ನೀವು ಅಬೀಬ ತಿಂಗಳಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಬೇಕು. ಏಕೆಂದರೆ ಅಬೀಬ ತಿಂಗಳಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ರಾತ್ರಿಯಲ್ಲಿ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು.


ಯೇಸು ಜನಸಮೂಹವನ್ನು ಕಳುಹಿಸಿದ ಮೇಲೆ ಪ್ರಾರ್ಥನೆಮಾಡಲು ಬೆಟ್ಟಕ್ಕೆ ಹೋದರು.


ಎಫೆಸಕ್ಕೆ ತಲುಪಿದಾಗ, ಪೌಲನು ಅವರನ್ನು ಅಲ್ಲಿಯೇ ಬಿಟ್ಟು ಸಭಾಮಂದಿರಕ್ಕೆ ಹೋಗಿ ಯೆಹೂದ್ಯರೊಂದಿಗೆ ಚರ್ಚೆ ನಡೆಸಿದನು.


ಹೆಚ್ಚು ಸಮಯ ತಮ್ಮೊಂದಿಗಿರಬೇಕೆಂದು ಅವರು ಕೇಳಿದಾಗ, ಪೌಲನು ಅದಕ್ಕೆ ಸಮ್ಮತಿಸಲಿಲ್ಲ.


ಅಲೆಕ್ಸಾಂದ್ರಿಯ ನಿವಾಸಿ ಅಪೊಲ್ಲೋಸ ಎಂಬ ಹೆಸರಿನ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದಿದ್ದನು. ಅವನು ವಾಕ್ಚಾತುರ್ಯವುಳ್ಳವನೂ ಪವಿತ್ರ ವೇದದಲ್ಲಿ ಪ್ರವೀಣನೂ ಆಗಿದ್ದನು.


ಅಪೊಲ್ಲೋಸನು ಕೊರಿಂಥದಲ್ಲಿ ಇದ್ದಾಗಲೇ, ಕಾಲ್ನಡಿಗೆಯಾಗಿ ಪೌಲನು ಪ್ರಯಾಣಮಾಡಿ ಎಫೆಸ ಪಟ್ಟಣಕ್ಕೆ ಬಂದನು. ಅಲ್ಲಿ ಕೆಲವು ಶಿಷ್ಯರನ್ನು ಕಂಡು,


ಎಫೆಸದಲ್ಲಿ ವಾಸಿಸುತ್ತಿದ್ದ ಯೆಹೂದ್ಯರಿಗೂ ಗ್ರೀಕರಿಗೂ ಈ ವಿಷಯ ತಿಳಿದಾಗ, ಅವರೆಲ್ಲರೂ ಬಹಳ ಭಯಗೊಂಡರು. ಹೀಗೆ ಕರ್ತ ಯೇಸುವಿನ ಹೆಸರಿಗೆ ಅತ್ಯಂತ ಮಹಿಮೆಯಾಯಿತು.


ಅವರು ಮೊದಲು ಪಟ್ಟಣದಲ್ಲಿ ಪೌಲನೊಂದಿಗೆ ಎಫೆಸದ ತ್ರೊಫಿಮ ಎಂಬವನು ಇದ್ದುದನ್ನು ಕಂಡಿದ್ದರಿಂದ, ಪೌಲನು ಈಗ ಅವನನ್ನು ದೇವಾಲಯದೊಳಗೆ ಕರೆದುಕೊಂಡು ಬಂದಿರಬಹುದೆಂದು ಅವರು ಭಾವಿಸಿದರು.


ನಾನು ಎಫೆಸದಲ್ಲಿ ಕಾಡು ಮೃಗಗಳೊಂದಿಗೆ ಹೋರಾಟ ಮಾಡಿದ್ದು ಕೇವಲ ಮಾನವ ಕಾರಣಗಳಿಂದ ಮಾತ್ರವಾಗಿದ್ದರೆ, ಅದರಿಂದ ನನಗೇನು ಪ್ರಯೋಜನ? ಸತ್ತವರು ಎದ್ದುಬರುವುದಿಲ್ಲವಾದರೆ, “ತಿನ್ನೋಣ, ಕುಡಿಯೋಣ, ನಾಳೆ ಮರಣ ಹೊಂದೋಣ.”


ಆದರೆ ಐವತ್ತು ದಿನಗಳ ಹಬ್ಬದ ತನಕ ಎಫೆಸದಲ್ಲಿರುವೆನು.


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು, ಎಫೆಸದಲ್ಲಿರುವ ಭಕ್ತರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ ಬರೆಯುತ್ತಿರುವುದು:


ಅದು, “ಕಾಣುತ್ತಿರುವುದನ್ನು ಸುರುಳಿಯಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯದಲ್ಲಿರುವ ಏಳು ಸಭೆಗಳಿಗೆ ಕಳುಹಿಸಬೇಕು,” ಎಂದು ನುಡಿಯಿತು.


“ನೀನು ಎಫೆಸದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು, ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವವರು ಹೇಳುವುದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು