Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:25 - ಕನ್ನಡ ಸಮಕಾಲಿಕ ಅನುವಾದ

25 ಇವನು ಕರ್ತ ಯೇಸುವಿನ ಮಾರ್ಗದ ಬಗ್ಗೆ ಉಪದೇಶ ಹೊಂದಿದ್ದನು. ಯೋಹಾನನ ದೀಕ್ಷಾಸ್ನಾನವನ್ನು ಮಾತ್ರವೇ ತಿಳಿದವನಾಗಿದ್ದನು. ಇವನು ಆತ್ಮದಲ್ಲಿ ಉತ್ಸಾಹಭರಿತನಾಗಿ ಯೇಸುವಿನ ವಿಷಯದಲ್ಲಿ ಧೈರ್ಯವಾಗಿ ಬೋಧಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದರೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಪ್ರಭುವಿನ ಮಾರ್ಗದ ಬಗ್ಗೆ ಅವನಿಗೆ ಉಪದೇಶಮಾಡಲಾಗಿತ್ತು. ಸ್ನಾನಿಕ ಯೊವಾನ್ನನ ಸ್ನಾನದೀಕ್ಷೆ ಒಂದನ್ನೇ ಅವನು ಬಲ್ಲವನಾಗಿದ್ದನು. ಆದರೂ ಯೇಸುಸ್ವಾಮಿಯ ಬಗ್ಗೆ ಉತ್ಸಾಹಭರಿತನಾಗಿ ಉಪದೇಶಮಾಡಿ ಚ್ಯುತಿಯಿಲ್ಲದೆ ಬೋಧಿಸುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು; ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದಾಗ್ಯೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅಪೊಲ್ಲೋಸನು ಯಾವಾಗಲೂ ಬಹು ಉತ್ಸುಕತೆಯಿಂದ ಯೇಸುವಿನ ಬಗ್ಗೆ ಜನರಿಗೆ ಉಪದೇಶಿಸುತ್ತಿದ್ದನು. ಯೇಸುವಿನ ಬಗ್ಗೆ ಅಪೊಲ್ಲೋಸನು ಹೇಳಿದ ಸಂಗತಿಗಳು ಸರಿಯಾಗಿದ್ದವು. ಆದರೆ ಸ್ನಾನಿಕ ಯೋಹಾನನ ದೀಕ್ಷಾಸ್ನಾನವೊಂದೇ ಇವನಿಗೆ ಗೊತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಧನಿಯಾಚ್ಯಾ ವಿಶಯಾತ್ ತೆನಿ ಬರೆ ಶಿಕುನ್ ಘೆಟಲ್ಯಾನ್, ಅನಿ ತೊ ಲೈ ಉಮ್ಮೆದಿಚ್ಯಾ ಮನಾನ್ ಜೆಜುಚ್ಯಾ ವಿಶಯಾತ್ ಸಮಾಕರುನ್ ಶಿಕಾಪಾ ಶಿಕ್ವಿತ್ ಹೊತ್ತೊ, ತೆಕಾ ಜುವಾಂವಾಚ್ಯಾ ಬಾಲ್ತಿಮಾಚ್ಯಾ ವಿಶಯಾತ್ ತವ್ಡೆಚ್ ಗೊತ್ತ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:25
27 ತಿಳಿವುಗಳ ಹೋಲಿಕೆ  

“ಹಾಗಾದರೆ ನೀವು ಯಾವ ದೀಕ್ಷಾಸ್ನಾನವನ್ನು ಪಡೆದುಕೊಂಡಿದ್ದೀರಿ?” ಎಂದು ಪೌಲನು ಕೇಳಿದಾಗ ಅವರು, “ಯೋಹಾನನ ದೀಕ್ಷಾಸ್ನಾನವನ್ನು,” ಎಂದರು.


ಉತ್ಸಾಹದಲ್ಲಿ ಆಲಸ್ಯರಾಗದೆ, ಆತ್ಮದಲ್ಲಿ ಬೆಂಕಿಯುಳ್ಳವರಾಗಿ ಕರ್ತನ ಸೇವೆಯನ್ನು ಮಾಡಿರಿ.


ಯಾರು ಬುದ್ಧಿವಂತರು? ಅವರು ಈ ಸತ್ಯಗಳನ್ನು ಅರ್ಥಮಾಡಿಕೊಳ್ಳಲಿ. ಯಾರು ವಿವೇಚನೆಯುಳ್ಳವರು? ಅವರು ಇವುಗಳನ್ನು ತಿಳಿದುಕೊಳ್ಳಲಿ. ಏಕೆಂದರೆ, ಯೆಹೋವ ದೇವರ ಮಾರ್ಗಗಳು ನ್ಯಾಯವಾಗಿವೆ. ನೀತಿವಂತರು ಅದರಲ್ಲಿ ನಡೆಯುವರು. ಆದರೆ ಅಕ್ರಮಗಾರರು ಅವುಗಳಿಂದ ಎಡವಿಬೀಳುವರು.


ಕ್ರಿಸ್ತ ಯೇಸುವಿನ ಮಾರ್ಗದ ವಿಷಯವಾಗಿ ಆ ಸಮಯದಲ್ಲಿ ದೊಡ್ಡ ಗಲಭೆ ಉಂಟಾಯಿತು.


ಆದರೆ ಅವರಲ್ಲಿ ಕೆಲವರು ಕಠಿಣ ಹೃದಯದವರಾಗಿ; ಒಡಂಬಡದೆ ಈ ಮಾರ್ಗವನ್ನು ಬಹಿರಂಗವಾಗಿ ದೂಷಿಸಿದರು. ಆದ್ದರಿಂದ ಪೌಲನು ಅವರನ್ನು ಬಿಟ್ಟು, ಶಿಷ್ಯರನ್ನು ತನ್ನೊಂದಿಗೆ ಕರೆದುಕೊಂಡು ಹೋಗಿ, ಅನುದಿನವೂ ತುರನ್ನನ ತರ್ಕಶಾಲೆಯಲ್ಲಿ ಅವರೊಂದಿಗೆ ಚರ್ಚಿಸುತ್ತಾ ಬಂದನು.


ಈ ಮಾರ್ಗಕ್ಕೆ ಸಂಬಂಧಪಟ್ಟ ಪುರುಷರಾಗಲಿ ಸ್ತ್ರೀಯರಾಗಲಿ ದಮಸ್ಕದಲ್ಲಿದ್ದರೆ ಅವರನ್ನು ತಾನು ಬಂಧಿಸಿ ಯೆರೂಸಲೇಮಿಗೆ ತರಲಿಕ್ಕಾಗುವಂತೆ ದಮಸ್ಕದಲ್ಲಿಯ ಸಭಾಮಂದಿರಗಳಿಗೆ ಕೊಡಲು ಮಹಾಯಾಜಕನಿಂದ ಪತ್ರ ಪಡೆದುಕೊಂಡನು.


ಅವರು ಬಂದು ಯೇಸುವಿಗೆ, “ಬೋಧಕರೇ, ನೀವು ಸತ್ಯವಂತರು ಮತ್ತು ಯಾವ ಮನುಷ್ಯನನ್ನೂ ಲಕ್ಷಿಸದವರೂ ನೀವು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀರಿ ಎಂದೂ ನಾವು ಬಲ್ಲೆವು. ಕೈಸರನಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಇಲ್ಲವೋ?


ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.


ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡ ನಾಯಕನನ್ನು ಮೆಚ್ಚಿಸಬೇಕೆಂದು ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳಲಾರನು.


ಅವಳು, “ಈ ಮನುಷ್ಯರು ಮಹೋನ್ನತ ದೇವರ ದಾಸರು. ರಕ್ಷಣೆಯ ಮಾರ್ಗವನ್ನು ನಿಮಗೆ ಸಾರುತ್ತಾರೆ,” ಎಂದು ಗಟ್ಟಿಯಾಗಿ ಕೂಗುತ್ತಾ ಪೌಲನ ಮತ್ತು ನಮ್ಮ ಹಿಂದೆಯೇ ಬಂದಳು.


“ಎಲೈ ಸೈತಾನನ ಮಗನೇ, ನೀತಿಗೆಲ್ಲಾ ವೈರಿಯೇ, ನಿನ್ನಲ್ಲಿ ಎಲ್ಲಾ ತರದ ಮೋಸವೂ ಕುತಂತ್ರವೂ ತುಂಬಿವೆ. ಕರ್ತದೇವರ ಸನ್ಮಾರ್ಗಗಳಿಗೆ ಅಡ್ಡಿಯಾಗುವುದನ್ನು ನೀನೆಂದೂ ನಿಲ್ಲಿಸುವುದಿಲ್ಲವೋ?


ಯೋಹಾನನಿಂದ ಉಪದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಸಹ, ಯೇಸುವಿನ ಮಾತುಗಳನ್ನು ಕೇಳಿದಾಗ, ದೇವರ ಮಾರ್ಗವು ಸರಿಯಾಗಿದೆಯೆಂದು ಒಪ್ಪಿಕೊಂಡರು, ಏಕೆಂದರೆ ಅವರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರು.


“ ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, ಅವರ ದಾರಿಗಳನ್ನು ಸರಾಗಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವವನ ಸ್ವರವದೆ.”


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ, ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ, ಒಳ್ಳೆಯ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ. ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕುವುದು, ಆದರೆ ಅವರು, ‘ನಾವು ನಡೆಯುವುದಿಲ್ಲ,’ ಎಂದರು.


“ಮರುಭೂಮಿಯಲ್ಲಿ ಯೆಹೋವ ದೇವರ ಮಾರ್ಗವನ್ನು ಸಿದ್ಧಮಾಡಿರಿ. ಅರಣ್ಯದಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆಮಾಡಿರಿ.


ಯೆಹೋವ ದೇವರ ನಿಯಮಕ್ಕೆ ಅನುಸಾರವಾಗಿದ್ದು, ದೋಷರಹಿತ ಮಾರ್ಗದಲ್ಲಿ ನಡೆದುಕೊಳ್ಳುವವರೂ ಧನ್ಯರು.


ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ, ಯೆಹೋವ ದೇವರಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ. ಉತ್ತಮವಾದ, ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.


ಇಸ್ರಾಯೇಲರು ತಮ್ಮ ತಂದೆಗಳು ಕೈಗೊಂಡು ನಡೆದ ಯೆಹೋವ ದೇವರ ಮಾರ್ಗದಲ್ಲಿ ತಾವು ಕೈಗೊಂಡು ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುವ ಹಾಗೆ,


ಏಕೆಂದರೆ, ಅವನು ತನ್ನ ಮಕ್ಕಳಿಗೂ ಅವನ ತರುವಾಯ ಅವನ ಮನೆಯವರಿಗೂ ಯೆಹೋವ ದೇವರ ಮಾರ್ಗವನ್ನು ಕೈಗೊಂಡು, ನೀತಿ ನ್ಯಾಯಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸುವನು. ಆಗ ಯೆಹೋವ ದೇವರಾದ ನಾನು ಅಬ್ರಹಾಮನಿಗೆ ಹೇಳಿದ್ದು ನೆರವೇರುವದು,” ಎಂದುಕೊಂಡರು.


ಆಗ ದೇವರೇ, ನಿಮ್ಮ ಮಾರ್ಗಗಳು ಭೂಮಿಯಲ್ಲಿ ಗೊತ್ತಾಗುವುದು. ನಿಮ್ಮ ರಕ್ಷಣೆಯು ಎಲ್ಲಾ ಜನಾಂಗಗಳಲ್ಲಿ ಪ್ರಸಿದ್ಧವಾಗುವುದು.


ಹೀಗೆ ನಿಮಗೆ ಬೋಧಿಸಿರುವ ವಿಷಯಗಳು ಖಚಿತವೆಂದು ನಿಮಗೆ ತಿಳಿದುಬರುವುದು.


ಇವನು ಸಭಾಮಂದಿರದಲ್ಲಿ ಧೈರ್ಯದಿಂದ ಬೋಧಿಸಲು ಪ್ರಾರಂಭಿಸಿದನು. ಆಗ ಪ್ರಿಸ್ಕಿಲ್ಲ ಮತ್ತು ಅಕ್ವಿಲರು ಅವನು ಮಾತನಾಡುವುದನ್ನು ಕೇಳಿ, ಅವನನ್ನು ತಮ್ಮ ಮನೆಗೆ ಆಮಂತ್ರಿಸಿದರು. ಅವರು ದೇವರ ಮಾರ್ಗವನ್ನು ಇನ್ನೂ ಹೆಚ್ಚಾದ ರೀತಿಯಲ್ಲಿ ಅಪೊಲ್ಲೋಸನಿಗೆ ವಿವರಿಸಿ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು