Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:5 - ಕನ್ನಡ ಸಮಕಾಲಿಕ ಅನುವಾದ

5 ಮಕೆದೋನ್ಯದಿಂದ ಸೀಲ ಮತ್ತು ತಿಮೊಥೆ ಬಂದ ತರುವಾಯ, ಪೌಲನು ವಾಕ್ಯವನ್ನು ಬೋಧಿಸುವುದರಲ್ಲಿಯೇ ಸಮರ್ಪಿಸಿಕೊಂಡವನಾಗಿ ಯೇಸುವೇ ಕ್ರಿಸ್ತ ಎಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸೀಲ ಮತ್ತು ತಿಮೊಥೇಯ ಮಕೆದೋನಿಯದಿಂದ ಬಂದ ಮೇಲೆ ಪೌಲನು ಶುಭಸಂದೇಶವನ್ನು ಸಾರುವುದರಲ್ಲೂ ಯೇಸುವೇ ಬರಬೇಕಾದ ಲೋಕೋದ್ಧಾರಕ ಎಂದು ಯೆಹೂದ್ಯರಿಗೆ ರುಜುವಾತುಪಡಿಸುವುದರಲ್ಲೂ ತನ್ನ ಸಮಯವನ್ನು ಕಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸೀಲನೂ ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಬರಬೇಕಾದ ಕ್ರಿಸ್ತನೆಂದು ಯೆಹೂದ್ಯರಿಗೆ ಖಂಡಿತವಾಗಿ ಸಾಕ್ಷಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕೊರಿಂಥದಲ್ಲಿದ್ದ ಪೌಲನ ಬಳಿಗೆ ಸೀಲ ತಿಮೊಥೆಯರು ಮಕೆದೋನಿಯದಿಂದ ಬಂದರು. ಅನಂತರ, ಜನರಿಗೆ ಸುವಾರ್ತೆಯನ್ನು ತಿಳಿಸುವುದರಲ್ಲೇ ಪೌಲನು ತನ್ನ ಸಮಯವನ್ನೆಲ್ಲ ಕಳೆದನು. ಯೇಸುವೇ ಕ್ರಿಸ್ತನೆಂಬುದನ್ನು ಅವನು ಯೆಹೂದ್ಯರಿಗೆ ತೋರಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಸಿಲಾಸ್, ತಿಮೊಥಿ ಅನಿ ಪಾವ್ಲು ಮೆಸೆದೊನಿಯಾತ್ನಾ ಯೆಲೆ, ಪಾವ್ಲುನ್ ಅಪ್ಲೊ ಯೆಳ್ ಸಗ್ಳೊ ತ್ಯಾ ಲೊಕಾಕ್ನಿ ದೆವಾಚಿ ಖಬರ್ ಕಳ್ವುನ್ ದಿಲ್ಯಾನ್, ಅನಿ ಜೆಜುಚ್ ಕ್ರಿಸ್ತ್ ಮನುನ್ ಜುದೆವಾಂಚ್ಯಾ ಮದ್ದಿ ಸಾಕ್ಷಿ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:5
33 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ. ಏಕೆಂದರೆ, ಎಲ್ಲರಿಗೋಸ್ಕರ ಕ್ರಿಸ್ತ ಯೇಸು ಸತ್ತದ್ದರಿಂದ, ಎಲ್ಲರೂ ಸತ್ತಂತಾಯಿತು.


ಯೇಸುವೇ ಬರತಕ್ಕ ಕ್ರಿಸ್ತ ಆಗಿದ್ದಾರೆ ಎಂದು ಪವಿತ್ರ ವೇದಗಳಿಂದ ಸಿದ್ಧಾಂತಪಡಿಸಿ ತೋರಿಸುತ್ತಾ ಅಲ್ಲಿಯ ಯೆಹೂದ್ಯರೊಂದಿಗೆ ಬಹಿರಂಗವಾಗಿ ಚರ್ಚೆ ಮಾಡಿದನು.


ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ನಮ್ಮ ಕರ್ತ ಯೇಸುವಿನಲ್ಲಿ ವಿಶ್ವಾಸವಿಡಬೇಕೆಂದು ಯೆಹೂದ್ಯರಿಗೂ ಗ್ರೀಕರಿಗೂ ಖಚಿತವಾಗಿ ಸಾಕ್ಷಿ ಹೇಳಿದ್ದೇನೆ.


ಕ್ರಿಸ್ತ ಯೇಸು ಯಾತನೆಯನ್ನು ಅನುಭವಿಸಿ, ಸತ್ತವರೊಳಗಿಂದ ಜೀವಂತವಾಗಿ ಎದ್ದು ಬರಬೇಕಾಗಿತ್ತೆಂಬುದನ್ನು ವಿವರಿಸಿ, “ನಾನು ನಿಮಗೆ ಪ್ರಕಟಿಸುತ್ತಿರುವ ಯೇಸುವೇ ಆ ಕ್ರಿಸ್ತ,” ಎಂದು ಅವನು ಅವರ ಮುಂದೆ ಬಹಿರಂಗಪಡಿಸಿದನು.


ಆದರೂ ಸೌಲನು ಹೆಚ್ಚೆಚ್ಚು ಸಾಮರ್ಥ್ಯವುಳ್ಳವನಾಗಿ ಯೇಸುವೇ ಕ್ರಿಸ್ತ ಆಗಿದ್ದಾರೆಂದು ರುಜುವಾತುಪಡಿಸುತ್ತಾ ದಮಸ್ಕದ ನಿವಾಸಿಗಳಾದ ಯೆಹೂದ್ಯರನ್ನು ಗಲಿಬಿಲಿಗೆ ಒಳಪಡಿಸಿದನು.


ಹೀಗೆ ದೇವರಾತ್ಮರು ನನ್ನನ್ನು ಎತ್ತಿಕೊಂಡು ಹೋದರು. ನಾನು ಕಹಿತನ ಮತ್ತು ಕೋಪದ ಆತ್ಮದಿಂದ ಮುನ್ನಡೆದೆನು. ಆದರೆ ಯೆಹೋವ ದೇವರ ಕೈ ನನ್ನ ಮೇಲೆ ಬಲವಾಗಿತ್ತು.


“ಆಗ ನಾನು ಆತನನ್ನು ಕುರಿತು ಏನೂ ಹೇಳುವುದಿಲ್ಲ. ಆತನ ಹೆಸರಿನಲ್ಲಿ ಇನ್ನು ಮಾತನಾಡುವುದೇ ಇಲ್ಲ,” ಎಂದು ಅಂದುಕೊಂಡೆನು. ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲಾಗಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು. ಬಿಗಿ ಹಿಡಿದು ದಣಿದೆನು. ನನ್ನಿಂದ ಆಗದೆ ಹೋಯಿತು.


ಆದ್ದರಿಂದ ಯೆಹೋವ ದೇವರ ಕೋಪದಿಂದ ನಾನು ತುಂಬಿದ್ದೇನೆ. ಅದನ್ನು ನನ್ನೊಳಗೆ ಹಿಡಿಯುವುದು ನನಗೆ ಸಾಕಾಯಿತು. “ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ಏಕೆಂದರೆ, ನಿಶ್ಚಯವಾಗಿ ಗಂಡನ, ಹೆಂಡತಿಯ ಸಂಗಡ, ವೃದ್ಧನ, ದಿನತುಂಬಿದವನ ಸಂಗಡ ಹಿಡಿಯಲಾಗುವರು.


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ. ಇಲ್ಲಿಂದ ಹೊರಟು ಕ್ರಿಸ್ತನೊಡನೆ ಇರಬೇಕೆಂಬ ಆಶೆಯಿದೆ. ಅದು ಬಹು ಉತ್ತಮವಾಗಿರುವುದು.


“ಆದ್ದರಿಂದ ನೀವು ಶಿಲುಬೆಗೇರಿಸಿದ ಈ ಯೇಸುವನ್ನೇ ದೇವರು ಕರ್ತ ಹಾಗೂ ಕ್ರಿಸ್ತ ಆಗಿಯೂ ಮಾಡಿದ್ದಾರೆ ಎಂಬುದು ಎಲ್ಲಾ ಇಸ್ರಾಯೇಲ್ ಮನೆತನದವರಿಗೆ ಸ್ಪಷ್ಟವಾಗಿ ತಿಳಿದಿರಲಿ,” ಎಂದನು.


ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಿಮಗೆ ನಂಬಿಗಸ್ತ ಆಗಿರುವ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಸಹಾಯದಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.


ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ನಿಮ್ಮನ್ನು ಉತ್ತೇಜಿಸುವುದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಯೇಸುಕ್ರಿಸ್ತರ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.


ಆ ರಾತ್ರಿಯಲ್ಲಿ ಪೌಲನಿಗೆ ಒಂದು ದರ್ಶನವಾಯಿತು. ಅದರಲ್ಲಿ ಮಕೆದೋನ್ಯದವನೊಬ್ಬನು ನಿಂತುಕೊಂಡು, “ಮಕೆದೋನ್ಯ ದಾಟಿ ಬಂದು ನಮಗೆ ಸಹಾಯಮಾಡು,” ಎಂದು ಅವನನ್ನು ಬೇಡಿಕೊಂಡನು.


ಪೌಲನು ದೆರ್ಬೆಗೂ ಲುಸ್ತ್ರಕ್ಕೂ ಬಂದನು. ಅಲ್ಲಿ, ತಿಮೊಥೆಯನೆಂಬ ಹೆಸರಿನ ಒಬ್ಬ ಶಿಷ್ಯನಿದ್ದನು. ಅವನ ತಾಯಿ ವಿಶ್ವಾಸಿಯಾಗಿದ್ದ ಯೆಹೂದ್ಯ ಸ್ತ್ರೀ. ಆದರೆ ಅವನ ತಂದೆ ಒಬ್ಬ ಗ್ರೀಕನಾಗಿದ್ದನು.


ಆಗ ಅಪೊಸ್ತಲರು ಮತ್ತು ಹಿರಿಯರು ಇಡೀ ಸಭೆಯ ಸಮ್ಮತಿ ಪಡೆದು, ಸಹೋದರರಲ್ಲಿ ನಾಯಕರಾಗಿದ್ದ ಬಾರ್ಸಬನೆಂದು ಕರೆಯಲಾದ ಯೂದ ಮತ್ತು ಸೀಲ ಎಂಬಿಬ್ಬರನ್ನು ಆಯ್ದುಕೊಂಡರು. ಅವರನ್ನು ಪೌಲ ಮತ್ತು ಬಾರ್ನಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಲು ನಿರ್ಧರಿಸಿದರು.


ಜೀವಿಸುವವರಿಗೂ ಸತ್ತವರಿಗೂ ನ್ಯಾಯಾಧೀಶರಾಗಿ ದೇವರಿಂದ ನೇಮಕವಾದವರು ಯೇಸುವೇ ಎಂದು ನಾವು ಜನರಿಗೆ ಬೋಧಿಸಿ ಸಾಕ್ಷಿ ಕೊಡಬೇಕೆಂದೂ ಕ್ರಿಸ್ತ ಯೇಸು ನಮಗೆ ಆಜ್ಞಾಪಿಸಿದ್ದಾರೆ.


ಏಕೆಂದರೆ ಕಂಡಿದ್ದನ್ನೂ ಕೇಳಿದ್ದನ್ನೂ ಕುರಿತು ನಾವು ಮಾತನಾಡದೆ ಇರಲಾರೆವು,” ಎಂದು ಉತ್ತರಕೊಟ್ಟರು.


ನೀವು ಪ್ರಾರಂಭದಿಂದಲೂ ನನ್ನ ಸಂಗಡ ಇದ್ದುದರಿಂದ ನೀವು ಸಹ ನನಗೆ ಸಾಕ್ಷಿಗಳಾಗಿದ್ದೀರಿ.


ಆಗ ಯೆಹೂದ್ಯರು ಯೇಸುವನ್ನು ಸುತ್ತುವರೆದು, “ಇನ್ನೆಷ್ಟು ಕಾಲ ನಮ್ಮನ್ನು ಸಂಶಯದಲ್ಲಿರಿಸುವೆ? ನೀನು ಕ್ರಿಸ್ತನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು,” ಎಂದರು.


‘ನಾನು ಕ್ರಿಸ್ತನಲ್ಲ, ಆದರೆ ಅವರ ಮುಂದೂತನೆಂದು,’ ಹೇಳಿದ್ದಕ್ಕೆ ನೀವೇ ಸಾಕ್ಷಿ.


ಅಂದ್ರೆಯನು ಮೊದಲು ತನ್ನ ಸಹೋದರ ಸೀಮೋನನನ್ನು ಕಂಡು, “ನಾವು ಮೆಸ್ಸೀಯ ಆಗಿರುವವರನ್ನು ಕಂಡೆವು,” ಎಂದು ಹೇಳಿ,


ಆದರೆ ನಾನು ಪಡೆಯಲಿರುವ ಒಂದು ದೀಕ್ಷಾಸ್ನಾನ ಉಂಟು, ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!


ಆದರೆ ನಿಶ್ಚಯವಾಗಿ ನಾನು ಯಾಕೋಬಿನ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವುದಕ್ಕೆ ಯೆಹೋವ ದೇವರ ಆತ್ಮದ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.


ನನಗೆ ಐದು ಮಂದಿ ಸಹೋದರರಿದ್ದಾರೆ. ಅವರೂ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಲಾಜರನು ಅವರನ್ನು ಎಚ್ಚರಿಸಲಿ,’ ಎಂದನು.


ಅಲ್ಲಿಂದ ಮಕೆದೋನ್ಯ ಪ್ರಾಂತದ ಪ್ರಮುಖ ಪಟ್ಟಣವಾದ ಫಿಲಿಪ್ಪಿಗೆ ಬಂದೆವು. ಇದು ರೋಮಿನ ಪ್ರವಾಸ ಸ್ಥಳವಾಗಿತ್ತು. ನಾವು ಆ ಪಟ್ಟಣದಲ್ಲಿ ಕೆಲವು ದಿನ ಉಳಿದುಕೊಂಡೆವು.


ಪ್ರತಿಯೊಂದು ಪಟ್ಟಣದಲ್ಲಿ ಸೆರೆಮನೆಯೂ ಬಾಧೆಯೂ ನನಗಾಗಿ ಕಾದಿವೆಯೆಂದು ಪವಿತ್ರಾತ್ಮ ದೇವರು ಎಚ್ಚರಿಸಿದ್ದಾರೆ.


ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.


ನಾನು, ಸಿಲ್ವಾನ ಮತ್ತು ತಿಮೊಥೆಯನು ನಿಮ್ಮಲ್ಲಿ ಬೋಧಿಸಿದ ದೇವರ ಪುತ್ರನಾದ ಯೇಸು ಕ್ರಿಸ್ತನು ಒಮ್ಮೆ “ಹೌದು,” ಒಮ್ಮೆ “ಅಲ್ಲ” ಎಂದಾಗಿರುವುದಿಲ್ಲ. ಯಾವಾಗಲೂ ಅದು ಕ್ರಿಸ್ತನಲ್ಲಿ ಹೌದು ಎಂದೇ ಆಗಿರುತ್ತಾನೆ.


ನಾನು ನಿಮ್ಮಲ್ಲಿದ್ದಾಗ, ನನಗೆ ಕೊರತೆಯಾದಾಗ, ನಾನು ನಿಮ್ಮಲ್ಲಿ ಯಾರಿಗೂ ಭಾರವಾಗಲಿಲ್ಲ. ಏಕೆಂದರೆ, ಮಕೆದೋನ್ಯದಿಂದ ಬಂದಿದ್ದ ಸಹೋದರರು ನನ್ನ ಅವಶ್ಯಕತೆಯನ್ನು ಪೂರೈಸಿದರು. ಹೀಗೆ ನಾನು ನಿಮ್ಮಲ್ಲಿ ಯಾರಿಗೂ ಭಾರವಾಗಲಿಲ್ಲ. ಇನ್ನು ಮುಂದೆಯೂ ಭಾರವಾಗಿರುವುದಿಲ್ಲ.


ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಹಾಗೂ ಪ್ರೀತಿಯ ವಿಷಯವಾಗಿ ಒಳ್ಳೆಯ ವರ್ತಮಾನವನ್ನು ತಂದಿದ್ದಾನೆ. ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ನೆನಪಿಸಿಕೊಂಡು, ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವುದಕ್ಕೆ ಹಾರೈಸುತ್ತೀರೆಂಬುದನ್ನು ತಿಳಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು