Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:18 - ಕನ್ನಡ ಸಮಕಾಲಿಕ ಅನುವಾದ

18 ವಿಶ್ವಾಸವಿಟ್ಟವರಲ್ಲಿ ಅನೇಕರು ಅಲ್ಲಿಗೆ ಬಂದು ತಮ್ಮ ಕೃತ್ಯಗಳನ್ನು ಅರಿಕೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆತನನ್ನು ನಂಬಿದವರಲ್ಲಿ ಅನೇಕರು ಪಶ್ಚಾತ್ತಾಪದಿಂದ ಬಂದು ತಮ್ಮ ತಮ್ಮ ಪಾಪಕೃತ್ಯಗಳನ್ನು ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಭಕ್ತವಿಶ್ವಾಸಿಗಳಾದ ಅನೇಕರು ಮುಂದೆ ಬಂದು ತಮ್ಮ ದುಷ್ಕೃತ್ಯಗಳನ್ನು ಬಹಿರಂಗವಾಗಿ ಒಪ್ಪಿಕೊಂಡು ನಿವೇದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮತ್ತು ಕರ್ತನಾದ ಯೇಸುವಿನ ಹೆಸರು ಪ್ರಖ್ಯಾತಿಗೆ ಬಂತು. ಆತನನ್ನು ನಂಬಿದವರಲ್ಲಿ ಅನೇಕರು ಬಂದು ತಮ್ಮ ಕೃತ್ಯಗಳನ್ನು ಒಪ್ಪಿಕೊಂಡು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ವಿಶ್ವಾಸಿಗಳಲ್ಲಿ ಅನೇಕರು ತಾವು ಮಾಡಿದ ಪಾಪಗಳನ್ನು ಒಪ್ಪಿಕೊಂಡು ಅರಿಕೆ ಮಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೆಜ್ಯಾರ್ ವಿಶ್ವಾಸ್ ಕರಲ್ಲ್ಯಾ ಲೈ ಲೊಕಾನಿ ಯೆವ್ನ್ ಲೊಕಾಂಚ್ಯಾ ಫಿಡ್ಯಾತ್ ಅಪ್ನಿ ಕರಲಿ ಚುಕೆಚಿ ಕಾಮಾ ಸಗ್ಳಿ ಮಾಳಾಕ್ ಹಾನುನ್ ಸಾಂಗುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:18
14 ತಿಳಿವುಗಳ ಹೋಲಿಕೆ  

ನೀನು ನಿನ್ನ ಹೃದಯದಿಂದ ನಂಬಿ ನೀತಿವಂತನೆಂದು ಎಣಿಸಿಕೊಳ್ಳುವಿ ಮತ್ತು ನಿನ್ನ ಬಾಯಿಂದ ನಿನ್ನ ವಿಶ್ವಾಸವನ್ನು ಅರಿಕೆ ಮಾಡಿದಾಗ ರಕ್ಷಣೆ ಹೊಂದುತ್ತಿ.


ಅವರು ತಮ್ಮ ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ನನ್ನ ಪಾಪವನ್ನು ನಿಮಗೆ ತಿಳಿಸಿ, ನನ್ನ ಅನ್ಯಾಯವನ್ನು ಮರೆಮಾಡದೆ, “ನನ್ನ ಉಲ್ಲಂಘನೆಗಳನ್ನು ಯೆಹೋವ ದೇವರಿಗೆ ಅರಿಕೆ ಮಾಡುವೆನು,” ಎಂದು ಹೇಳಿದೆನು; ಆಗ, ನೀವು ನನ್ನ ಪಾಪದ ಅಪರಾಧವನ್ನು ಪರಿಹರಿಸಿದಿರಿ.


ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.


ಆಮೇಲೆ ನೀವು ನಿಮ್ಮ ನಿಮ್ಮ ದುರ್ಮಾರ್ಗಗಳನ್ನೂ ದುರಾಚಾರಗಳನ್ನೂ ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.


ಆಗ ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದುಕೊಂಡು, ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದು ಎಂದು ನಿನ್ನ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ನಿನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡಿ, ಒಂದೊಂದು ಹಸುರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯ ದೇವರುಗಳಿಗೆ ಚದರಿಸಿ, ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆ ಮಾಡು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ. ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.


“ ‘ಆದರೆ ಅವರು ನನಗೆ ಮಾಡಿದ ತಮ್ಮ ದುಷ್ಕೃತ್ಯದಲ್ಲಿರುವ ತಮ್ಮ ಅಕ್ರಮವನ್ನೂ, ತಮ್ಮ ಪಿತೃಗಳ ಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದುಕೊಂಡದ್ದನ್ನೂ,


ಆರೋನನು ಆ ಜೀವವುಳ್ಳ ಹೋತದ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು, ಅದರ ಮೇಲೆ ಇಸ್ರಾಯೇಲರ ಎಲ್ಲಾ ಅಕ್ರಮಗಳನ್ನೂ, ಅವರ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆಮಾಡಿ ಅವುಗಳನ್ನು ಹೋತದ ತಲೆಯ ಮೇಲೆ ಇರಿಸಿ, ನೇಮಕವಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು.


ಎಫೆಸದಲ್ಲಿ ವಾಸಿಸುತ್ತಿದ್ದ ಯೆಹೂದ್ಯರಿಗೂ ಗ್ರೀಕರಿಗೂ ಈ ವಿಷಯ ತಿಳಿದಾಗ, ಅವರೆಲ್ಲರೂ ಬಹಳ ಭಯಗೊಂಡರು. ಹೀಗೆ ಕರ್ತ ಯೇಸುವಿನ ಹೆಸರಿಗೆ ಅತ್ಯಂತ ಮಹಿಮೆಯಾಯಿತು.


ಮಾಟಮಂತ್ರ ಮಾಡುತ್ತಿದ್ದವರು ತಮ್ಮ ಗ್ರಂಥಗಳನ್ನು ತೆಗೆದುಕೊಂಡು ಬಂದು ಎಲ್ಲರ ಮುಂದೆ ಸುಟ್ಟು ಹಾಕಿದರು. ಅವುಗಳ ಒಟ್ಟು ಮೌಲ್ಯ ಐವತ್ತು ಸಾವಿರ ಬೆಳ್ಳಿನಾಣ್ಯಗಳಷ್ಟಾಯಿತು.


ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು