Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:20 - ಕನ್ನಡ ಸಮಕಾಲಿಕ ಅನುವಾದ

20 ಕರ್ತದೇವರ ಮಹಿಮೆಯುಳ್ಳ ಮಹಾದಿನವೂ ಬರುವುದಕ್ಕೆ ಮೊದಲು ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ರವಿ ಕಪ್ಪಾಗುವನು, ಶಶಿ ಕಡುಗೆಂಪಾಗುವನು, ಪ್ರಭುವಿನ ಮಹಿಮಾದಿನಕ್ಕೆ ಮುನ್ನ ಸಂಭವಿಸುವುವು ಇವೆಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತದಂತೆ ಕೆಂಪಾಗುವನು, ಆಗ ಪ್ರಭುವಿನ ಗಂಭೀರವಾದ ಮಹಾದಿನವು ಬರುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತನ್ನಾ ದಿಸ್ ಕಾಳೊ ಹೊತಾ, ಚಂದ್ರಾಮ್ ರಗ್ತಾ ಸಾರ್ಕೊ ತಾಂಬ್ಡೊ ಹೊತಾ, ತನ್ನಾ ಧನಿಯಾಚೊ ಮೊಟೊ ಮಹಿಮೆಚೊ ದಿಸ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:20
25 ತಿಳಿವುಗಳ ಹೋಲಿಕೆ  

ಆದರೂ ಕರ್ತ ಯೇಸುವಿನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.


“ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ, “ಆ ದಿನದಲ್ಲಿ,” ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡುತ್ತೇನೆ.


“ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ, “ ‘ಸೂರ್ಯನು ಕತ್ತಲಾಗುವನು; ಚಂದ್ರನು ಕಾಂತಿಹೀನನಾಗುವನು. ಆಕಾಶದಿಂದ ನಕ್ಷತ್ರಗಳು ಬೀಳುವವು; ಮತ್ತು ಆಕಾಶದ ಶಕ್ತಿಗಳು ಕದಲುವವು.’


ರಾತ್ರಿಯಲ್ಲಿ ಕಳ್ಳನು ಬರುವಂತೆ ಕರ್ತ ಯೇಸುವಿನ ದಿನವು ಬರುವುದೆಂದು ನೀವೇ ಚೆನ್ನಾಗಿ ಬಲ್ಲಿರಿ.


“ಇಗೋ, ಯೆಹೋವ ದೇವರ ಮಹಾ ಭಯಂಕರವಾದ ದಿವಸವು ಬರುವುದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುವೆನು.


ನೀವು ಚೀಯೋನಿನಲ್ಲಿ ಕೊಂಬು ಊದಿರಿ. ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ. ದೇಶದ ನಿವಾಸಿಗಳೆಲ್ಲರು ನಡುಗಲಿ. ಏಕೆಂದರೆ ಯೆಹೋವ ದೇವರ ದಿವಸವು ಬರುತ್ತದೆ. ಅದು ಸಮೀಪವಾಗಿದೆ.


ಆದರೆ ಈಗಿನ ಆಕಾಶವೂ ಭೂಮಿಯೂ ಅದೇ ವಾಕ್ಯದಿಂದ ಬೆಂಕಿಗಾಗಿ ಕಾದಿರಿಸಲಾಗಿವೆ. ಅವು ನ್ಯಾಯತೀರ್ಪಿಗಾಗಿ ಮತ್ತು ಭಕ್ತಿಹೀನರ ನಾಶನಕ್ಕಾಗಿ ಇಡಲಾಗಿವೆ.


“ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ಸೂಚನೆಗಳು ಕಾಣಿಸಿಕೊಳ್ಳುವುವು. ಭೂಮಿಯಲ್ಲಾದರೋ, ಮೊರೆಯುವ ತೆರೆಗಳ ಮತ್ತು ಭೋರ್ಗರೆಯುವ ಸಮುದ್ರದ ನಿಮಿತ್ತ ಜನಾಂಗಗಳು ದಿಕ್ಕುತೋಚದೆ ಸಂಕಟಕ್ಕೆ ಒಳಗಾಗುವರು.


“ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ, “ ‘ಸೂರ್ಯನಿಗೆ ಕತ್ತಲು ಮುಸುಕುವುದು; ಚಂದ್ರನು ಕಾಂತಿಹೀನನಾಗುವನು.


ತೀರ್ಮಾನದ ಕಣಿವೆಯಲ್ಲಿ ಗುಂಪು ಗುಂಪುಗಳಾಗಿ ಜನರಿದ್ದಾರೆ! ಏಕೆಂದರೆ ಯೆಹೋವ ದೇವರ ದಿವಸವು ನಿರ್ಣಯದ ತಗ್ಗಿನಲ್ಲಿ ಸಮೀಪವಾಗಿದೆ.


ನಾಲ್ಕನೆಯ ದೇವದೂತನು ತನ್ನ ಬೋಗುಣಿಯೊಳಗಿರುವುದನ್ನು ಸೂರ್ಯನ ಮೇಲೆ ಸುರಿಯಲು, ಸೂರ್ಯನಿಗೆ ಮನುಷ್ಯರನ್ನು ಬೆಂಕಿಯಿಂದ ಕಂದಿಸುವ ಅಧಿಕಾರ ಕೊಡಲಾಯಿತು.


ಕುರಿಮರಿ ಆಗಿರುವವರು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾ ಭೂಕಂಪವಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.


ಕರ್ತ ಯೇಸುವಿನ ಪುನರಾಗಮನ ದಿನದಲ್ಲಿ ಆ ಮನುಷ್ಯನ ಆತ್ಮವು ರಕ್ಷಣೆ ಹೊಂದುವಂತೆಯೂ ಅವನ ಪಾಪಭರಿತ ಶರೀರವು ನಾಶವಾಗುವಂತೆಯೂ ಅವನನ್ನು ಸೈತಾನನಿಗೆ ಒಪ್ಪಿಸಿ ಬಿಡುತ್ತೇನೆ.


ಆಗ ಮಧ್ಯಾಹ್ನದಿಂದ ಮೂರು ಗಂಟೆಯವರೆಗೆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.


ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ, ಹಾಳಾಗಿಯೂ, ಶೂನ್ಯವಾಗಿಯೂ ಇತ್ತು. ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ.


ಏಕೆಂದರೆ ಅದು ಯೆಹೋವ ದೇವರು ಮುಯ್ಯಿ ತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.


ಆಮೇಲೆ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಹಿರಿಯರ ಮುಂದೆ ಮಹಿಮೆಯಿಂದ ಆಳುವಾಗ, ಚಂದ್ರನಿಗೆ ಅವಮಾನವಾಗುವುದು, ಸೂರ್ಯನು ನಾಚಿಕೆ ಪಡುವನು.


ಸಿಕ್ಕಿದ ಪ್ರತಿಯೊಬ್ಬನೂ ಇರಿತಕ್ಕೆ ಗುರಿಯಾಗುವನು. ಅಟ್ಟಿಹಿಡಿಯಲಾದ ಪ್ರತಿಯೊಬ್ಬನೂ ಖಡ್ಗಕ್ಕೆ ತುತ್ತಾಗುವನು.


ಇಗೋ, ಯೆಹೋವ ದೇವರ ದಿನವು ಬರುತ್ತದೆ. ಅದು ಭೂಮಿಯನ್ನು ಹಾಳು ಮಾಡುವುದಕ್ಕೂ, ಅಲ್ಲಿಂದ ಪಾಪಿಗಳನ್ನು ನಿರ್ಮೂಲ ಮಾಡುವುದಕ್ಕೂ, ಕಡುಕೋಪದಿಂದಲೂ, ತೀಕ್ಷ್ಣರೋಷದಿಂದಲೂ ಕ್ರೂರವಾಗಿರುವುದು.


ಏಕೆಂದರೆ, ಆಕಾಶದ ನಕ್ಷತ್ರಗಳು ಮತ್ತು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವುದಿಲ್ಲ.


ಯೆಹೋವ ದೇವರ ಭಯಂಕರವಾದ ಮಹಾದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ನಾನು ಆಕಾಶದಲ್ಲಿ ಅದ್ಭುತಗಳನ್ನು, ಭೂಮಿಯಲ್ಲಿ ಸೂಚಕಕಾರ್ಯಗಳನ್ನು, ರಕ್ತ, ಬೆಂಕಿ, ಹಬೆಯನ್ನು ತೋರಿಸುವೆನು.


ಆಗ ಕರ್ತದೇವರ ಹೆಸರನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆ ಆಗುವುದು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು