Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:24 - ಕನ್ನಡ ಸಮಕಾಲಿಕ ಅನುವಾದ

24 ಆದರೆ ದೇವರು ಯೇಸುವನ್ನು ಮರಣ ವೇದನೆಯಿಂದ ಬಿಡಿಸಿ ಜೀವಂತವಾಗಿ ಎಬ್ಬಿಸಿದರು. ಏಕೆಂದರೆ ಯೇಸುವನ್ನು ಹಿಡಿದಿಟ್ಟುಕೊಂಡಿರಲು ಮರಣಕ್ಕೆ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆತನನ್ನು ದೇವರು ಮರಣವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಯಾಕಂದರೆ ಮರಣವು ಆತನನ್ನು ಹಿಡುಕೊಂಡಿರುವದು ಅಸಾಧ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೇಸು ಮರಣವೇದನೆಯನ್ನು ಅನುಭವಿಸಿದನು. ಆದರೆ ದೇವರು ಆತನನ್ನು ಬಿಡಿಸಿದನು. ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಮರಣವು ಯೇಸುವನ್ನು ಹಿಡಿದುಕೊಳ್ಳಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಜೆಜುನ್ ಮರ್ನಾಚೊ ತರಾಸ್ ಸೊಸ್ಲ್ಯಾನ್, ಖರೆ ದೆವಾನ್ ತೆಕಾ ಮರ್‍ನಾತ್ನಾ ಉಟ್ವುಲ್ಯಾನ್, ತಸೆ ಹೊವ್ನ್ ಮರ್ನಾಚ್ಯಾನ್ ಜೆಜುಕ್ ಧರುನ್ ಘೆವ್ಕ್ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:24
45 ತಿಳಿವುಗಳ ಹೋಲಿಕೆ  

ದೇವರು ತಮ್ಮ ಶಕ್ತಿಯಿಂದ ನಮಗೆ ಕರ್ತ ಆಗಿರುವ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರು ಮತ್ತು ನಮ್ಮನ್ನೂ ಎಬ್ಬಿಸುವರು.


ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿ ಅವರಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಕ್ರಿಸ್ತ ಯೇಸುವಿನ ಮೂಲಕ ವಿಶ್ವಾಸವಿಟ್ಟಿದ್ದೀರಿ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರಲಿ.


ದೀಕ್ಷಾಸ್ನಾನದಲ್ಲಿ ಕ್ರಿಸ್ತ ಯೇಸುವಿನೊಂದಿಗೆ ಸಮಾಧಿಯಾದಿರಿ ಮತ್ತು ಕ್ರಿಸ್ತ ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ನೀವು ಕ್ರಿಸ್ತ ಯೇಸುವಿನೊಂದಿಗೆ ಮರಣದಿಂದ ಜೀವಂತವಾಗಿ ಎದ್ದು ಬಂದಿರಿ.


ದೇವರು ಈ ಯೇಸುವನ್ನೇ ಮರಣದಿಂದ ಎಬ್ಬಿಸಿದರು. ಇದಕ್ಕೆ ನಾವೆಲ್ಲರೂ ಸಾಕ್ಷಿಗಳು.


ಈ ಮಹಾಶಕ್ತಿಯನ್ನು ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ,


ಯಾರೂ ನನ್ನ ಪ್ರಾಣವನ್ನು ನನ್ನಿಂದ ತೆಗೆಯುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುವೆನು. ನಾನು ಅದನ್ನು ಕೊಡುವುದಕ್ಕೆ ನನಗೆ ಅಧಿಕಾರವಿದೆ. ಅದನ್ನು ಪುನಃ ತೆಗೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಪಡೆದಿದ್ದೇನೆ,” ಎಂದರು.


ಏಕೆಂದರೆ, ಕರ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರೇ, ನಮ್ಮನ್ನೂ ಸಹ ಯೇಸುವಿನೊಂದಿಗೆ ಎಬ್ಬಿಸಿ, ನಿಮ್ಮ ಜೊತೆಯಲ್ಲಿಯೂ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.


ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮವು ನಿಮ್ಮಲ್ಲಿ ವಾಸಮಾಡುತ್ತಿರುವುದಾದರೆ, ಕ್ರಿಸ್ತ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ವಾಸಿಸುವ ಪವಿತ್ರಾತ್ಮ ದೇವರ ಮೂಲಕವೇ ನಿಮ್ಮ ಸಾಯುತ್ತಿರುವ ದೇಹಗಳಿಗೂ ಜೀವವನ್ನು ಕೊಡುವರು.


ಹೀಗಿರುವಲ್ಲಿ ಯೇಸುವಿರೊಂದಿಗೆ ದೀಕ್ಷಾಸ್ನಾನದ ಮೂಲಕ ಅವರ ಮರಣದಲ್ಲಿ ಹೂಣಲಾದೆವು. ಆದ್ದರಿಂದ ತಂದೆಯ ಮಹಿಮೆಯ ಮೂಲಕ ಕ್ರಿಸ್ತ ಯೇಸು ಸತ್ತವರೊಳಗಿಂದ ಎಬ್ಬಿಸಲಾದಂತೆಯೇ ನಾವು ಹೊಸ ಜೀವವನ್ನು ಜೀವಿಸಬೇಕು.


ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು.


ಇದಲ್ಲದೆ, ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ತಮ್ಮ ಪುತ್ರರಾಗಿರುವ ಯೇಸು ಮುಂದೆ ಬರುವ ಕೋಪದಿಂದ ನಮ್ಮನ್ನು ಬಿಡಿಸುವವರೂ ಆಗಿದ್ದಾರೆ. ಈ ಯೇಸುವನ್ನೇ ಪರಲೋಕದಿಂದ ಬರುವುದನ್ನು ನೀವು ಎದುರು ನೋಡುತ್ತಿದ್ದೀರಿ ಎಂಬುದನ್ನೂ ಅವರು ನಮಗೆ ವಿವರಿಸಿದರು.


ನೀನು, “ಯೇಸುವೇ ಕರ್ತ,” ಎಂದು ಬಾಯಿಂದ ಅರಿಕೆಮಾಡಿ, ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ಹೃದಯದಲ್ಲಿ ನಂಬಿದರೆ ನೀನು ರಕ್ಷಣೆ ಹೊಂದುವೆ.


ನಮಗೋಸ್ಕರವೂ ಅಂದರೆ, ನಮ್ಮ ಕರ್ತ ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿರುವ ದೇವರನ್ನು ನಂಬುವ ನಮ್ಮ ಪಾಲಿಗೂ ನೀತಿಯೆಂದು ಎಣಿಸಲಾಗುವುದು.


ಏಕೆಂದರೆ ದೇವರು ನೇಮಿಸಿದ ಒಬ್ಬರ ಮುಖಾಂತರ ಇಡೀ ಜಗತ್ತಿಗೆ ನೀತಿಗನುಸಾರವಾಗಿ ನ್ಯಾಯತೀರ್ಪು ಮಾಡುವ ಒಂದು ದಿನವನ್ನು ನೇಮಕ ಮಾಡಿದ್ದಾರೆ. ಇದನ್ನು ಎಲ್ಲರಿಗೂ ಖಚಿತ ಪಡಿಸಲೆಂದೇ ಆ ಒಬ್ಬರನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.”


ಆದರೆ ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದರು.


ಜೀವದ ಒಡೆಯನನ್ನು ನೀವು ಕೊಂದಿರಿ. ದೇವರಾದರೋ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.


ಮನುಷ್ಯರಿಂದಾಗಲಿ, ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಕ್ರಿಸ್ತ ಯೇಸುವಿನ ಮುಖಾಂತರವೂ ಅವರನ್ನು ಮರಣದಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ


ದೇವರು ತಮ್ಮ ಸೇವಕರಾದ ಯೇಸುವನ್ನು ಜೀವಂತವಾಗಿ ಎಬ್ಬಿಸಿದಾಗ, ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ದುರ್ಮಾರ್ಗಗಳಿಂದ ತಿರುಗಿಸಿ ನಿಮ್ಮನ್ನು ಮೊಟ್ಟಮೊದಲು ಆಶೀರ್ವದಿಸಲು ಯೇಸುವನ್ನು ನಿಮ್ಮ ಬಳಿಗೆ ಕಳುಹಿಸಿದರು.”


ಅದು ಮಾತ್ರವಲ್ಲ, ದೇವರು ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ದೇವರ ಬಗ್ಗೆ ಸಾಕ್ಷಿಕೊಟ್ಟ ನಾವೂ ಸುಳ್ಳುಸಾಕ್ಷಿಗಳಾಗಿ ಕಂಡುಬರುವೆವು. ದೇವರು ಕ್ರಿಸ್ತನನ್ನು ಎಬ್ಬಿಸದಿದ್ದರೆ ಸತ್ತವರನ್ನೂ ದೇವರು ಎಬ್ಬಿಸುವುದಿಲ್ಲ.


ಆದರೆ ದೇವರು ಮರಣದಿಂದ ಎಬ್ಬಿಸಿದ ಈ ಯೇಸು ಕೊಳೆಯುವ ಅವಸ್ಥೆಯನ್ನು ಕಾಣಲಿಲ್ಲ.


ನಿಮಗೂ ಎಲ್ಲಾ ಇಸ್ರಾಯೇಲ್ ಜನರಿಗೂ ಇದು ತಿಳಿದಿರಲಿ: ನೀವು ಯೇಸುವನ್ನು ಶಿಲುಬೆಗೆ ಹಾಕಿದಿರಿ. ಆದರೆ ದೇವರು ಸತ್ತವರೊಳಗಿಂದ ಎಬ್ಬಿಸಿದ ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಿಂದಲೇ ಈ ಮನುಷ್ಯನು ಪೂರ್ಣ ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುವನು.


ಯೇಸು ಸತ್ತವರೊಳಗಿಂದ ಪುನಃ ಎದ್ದು ಬರಬೇಕು ಎಂಬ ಪವಿತ್ರ ವೇದದ ವಾಕ್ಯವು ಅವರಿಗೆ ಇನ್ನೂ ತಿಳಿದಿರಲಿಲ್ಲ.


ಯೆಹೋವ ದೇವರೇ, ನಿಜವಾಗಿ ನಾನು ನಿಮ್ಮ ಸೇವಕನು; ಹೌದು, ನನ್ನ ತಾಯಿ ನಿಮಗೆ ಸೇವೆಮಾಡಿದಂತೆ ನಾನು ಸಹ ನಿಮ್ಮ ಸೇವಕನು; ನೀವು ನನ್ನ ಬಂಧನಗಳಿಂದ ನನ್ನನ್ನು ಬಿಡಿಸಿದ್ದೀರಿ.


ಸದಾ ಜೀವಿಸುವವನೂ ಆಗಿದ್ದೇನೆ. ಮರಣ ಹೊಂದಿದ್ದೆನು, ಇಗೋ, ಯುಗಯುಗಾಂತರಗಳಲ್ಲಿಯೂ ನಾನು ಬದುಕುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನ ಬಳಿ ಇವೆ.


ಆದರೆ ಕ್ರಿಸ್ತ ಯೇಸು ಸತ್ತವರೊಳಗಿಂದ ಎದ್ದು ಬಂದಿರುತ್ತಾರೆಂದು ಸಾರುತ್ತಿರುವಲ್ಲಿ ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನ ಇಲ್ಲ ಎಂದು ಹೇಳುವುದು ಹೇಗೆ?


ಈ ಕಾರಣಕ್ಕಾಗಿಯೇ, ಜೀವಿಸುವವರಿಗೂ ಸತ್ತವರಿಗೂ ಕರ್ತನಾಗಿರಬೇಕೆಂದು ಕ್ರಿಸ್ತನು ಮರಣಹೊಂದಿ ಪುನರುತ್ಥಾನಗೊಂಡರು.


ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತ ಯೇಸು ಮರಣವನ್ನು ಹೊಂದಿದ್ದಲ್ಲದೆ, ಜೀವಿತರಾಗಿ ಎದ್ದು ದೇವರ ಬಲಗಡೆಯಲ್ಲಿ ಇದ್ದಾರೆ ಮತ್ತು ಅವರೇ ನಮಗೋಸ್ಕರ ವಿಜ್ಞಾಪಿಸುವವರಾಗಿರುತ್ತಾರೆ.


ಅವರು ನಂಬಲಾರದೆ ಹೋದದ್ದರಿಂದ ಯೆಶಾಯನು ಮತ್ತೊಂದು ಕಡೆ ಹೇಳಿದ್ದೇನೆಂದರೆ:


ಆದರೆ ಮೃತರಾದ ನಿನ್ನ ಜನರು ಬದುಕುವರು. ಅವರ ದೇಹಗಳು ಏಳುವುವು. ಧೂಳಿನ ನಿವಾಸಿಗಳೇ, ಎಚ್ಚೆತ್ತು ಹರ್ಷಧ್ವನಿಗೈಯಿರಿ! ಯೆಹೋವ ದೇವರೇ, ನಿಮ್ಮ ಇಬ್ಬನಿ ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಪಡಿಸುವುದು.


ಅವರು ಮರಣವನ್ನು ಜಯದಲ್ಲಿ ನುಂಗಿಬಿಡುವರು. ಸಾರ್ವಭೌಮ ಯೆಹೋವ ದೇವರು ಎಲ್ಲಾ ಮುಖಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವರು. ತಮ್ಮ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕುವರು. ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.


ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ತಮ್ಮ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ, ಸೈತಾನನನ್ನು ನಾಶಮಾಡುವುದಕ್ಕೂ


“ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿರುವಾಗ, ‘ಮೂರು ದಿನಗಳಾದ ಮೇಲೆ ನಾನು ತಿರುಗಿ ಏಳುವೆನು,’ ಎಂದು ಹೇಳಿದ್ದು ನಮಗೆ ನೆನಪಿದೆ.


ಆದರೂ ಆತನನ್ನು ಜಜ್ಜುವುದು ಯೆಹೋವ ದೇವರ ಚಿತ್ತವಾಗಿತ್ತು. ಯೆಹೋವ ದೇವರು ಆತನನ್ನು ಸಂಕಟಕ್ಕೆ ಒಳಪಡಿಸಿದನು. ಯೆಹೋವ ದೇವರು ಆತನ ಪ್ರಾಣವನ್ನು ದೋಷಪರಿಹಾರದ ಬಲಿಯನ್ನಾಗಿ ಮಾಡುವಾಗ, ಆತನು ತನ್ನ ಸಂತಾನವನ್ನು ಕಾಣುವನು. ಆತನು ತನ್ನ ದಿವಸಗಳನ್ನು ಉದ್ದ ಮಾಡಿದ ಮೇಲೆ ಮತ್ತು ಯೆಹೋವ ದೇವರ ಚಿತ್ತವು ಆತನ ಕೈಯಲ್ಲಿ ಸಫಲವಾಗುವುದು.


ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಆತನು ಕರೆದಿರುವುದಾದರೆ, ಪವಿತ್ರ ವೇದವು ಸುಳ್ಳಾಗಲಾರದು.


“ಸಮಾಧಿಯ ಶಕ್ತಿಯಿಂದ ಅವರನ್ನು ಕ್ರಯಕೊಟ್ಟು ವಿಮೋಚಿಸುವೆನು. ಮರಣದಿಂದ ಅವರನ್ನು ಬಿಡಿಸುವೆನು. ಮರಣವೇ ನಿನ್ನ ಉಪದ್ರವ ಎಲ್ಲಿ? ಪಾತಾಳವೇ ನಿನ್ನ ವಿನಾಶವೆಲ್ಲಿ? “ಅನುಕಂಪವು ನನ್ನಿಂದ ದೂರವಾಗಿದೆ.


“ಸಹೋದರ ಸಹೋದರಿಯರೇ, ಬಹಳ ದಿನಗಳ ಹಿಂದೆ ದಾವೀದನ ಮುಖಾಂತರ ಪವಿತ್ರಾತ್ಮರು ಮುಂತಿಳಿಸಿದ ದೇವರ ವಾಕ್ಯ ಯೂದನ ವಿಷಯವಾಗಿ ನೆರವೇರಬೇಕಾಗಿತ್ತು. ಯೂದನು ಯೇಸುವನ್ನು ಬಂಧಿಸಿದವರಿಗೆ ಮಾರ್ಗದರ್ಶಕನಾಗಿದ್ದನು.


ಅದರ ಅಭಿಪ್ರಾಯವೋ ಹಾಗಲ್ಲ. ಅದರ ಹೃದಯವು ಈ ಪ್ರಕಾರ ಆಲೋಚಿಸುವುದಿಲ್ಲ. ಜನಾಂಗಗಳನ್ನು ಕಡಿದುಬಿಡುವುದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವುದು ಅದರ ಹೃದಯದ ಉದ್ದೇಶವು.


ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.


ಹೂಣಿಡಲಾದರು, ಪವಿತ್ರ ವೇದದ ಪ್ರಕಾರವೇ ಮೂರನೆಯ ದಿನದಲ್ಲಿ ಎದ್ದು ಬಂದರು.


ಆದರೆ ಈಗ ಕ್ರಿಸ್ತ ಯೇಸು ಸತ್ತವರೊಳಗಿಂದ ಎದ್ದು ಬಂದೇ ಇದ್ದಾರೆ. ನಿದ್ರೆ ಹೋದವರಲ್ಲಿ ಪ್ರಥಮಫಲವಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು