Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:28 - ಕನ್ನಡ ಸಮಕಾಲಿಕ ಅನುವಾದ

28 ನೀವು ನನಗೆ ಜೀವಮಾರ್ಗಗಳನ್ನು ತಿಳಿಯಪಡಿಸಿರುವಿರಿ; ನಿಮ್ಮ ಸನ್ನಿಧಿಯಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಜೀವದ ಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನನ್ನಾಗಮಾಡುವಿ’ ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅಮರ ಜೀವಮಾರ್ಗವನೆನಗೆ ತೋರ್ಪಡಿಸಿದೆ ನಿನ್ನ ಶ್ರೀಸಾನ್ನಿಧ್ಯ ಸಂತಸದಿಂದೆನ್ನ ಭರಿತನಾಗಿಸುವೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಜೀವಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗಮಾಡುವಿ ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಹೇಗೆ ಜೀವಿಸಬೇಕೆಂಬುದನ್ನು ನೀನು ನನಗೆ ಉಪದೇಶಿಸಿದೆ. ನಿನ್ನ ಪ್ರಸನ್ನತೆಯು ನನ್ನಲ್ಲಿ ಮಹಾ ಆನಂದವನ್ನು ಉಂಟುಮಾಡುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಕಶೆ ಜಿವನ್ ಕರುಚೆ ಮನುನ್ ತಿಯಾ ಮಾಕಾ ದಾಕ್ವುನ್ ದಿಲೆ, ಅನಿ ತಿಯಾ ಮಾಜ್ಯಾ ಇದ್ರಾಕ್ ರ್‍ಹಾತಲೆ ಮಾಕಾ ಉಮ್ಮೆದಿನ್ ಭರಿ ಸಾರ್ಕೆ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:28
14 ತಿಳಿವುಗಳ ಹೋಲಿಕೆ  

ಜೀವಮಾರ್ಗವನ್ನು ನನಗೆ ತಿಳಿಯಪಡಿಸುವಿರಿ. ನಿಮ್ಮ ಸನ್ನಿಧಿಯಲ್ಲಿ ಪರಿಪೂರ್ಣ ಸಂತೋಷವಿದೆ; ನಿಮ್ಮ ಬಲಗಡೆಯಲ್ಲಿ ನಿತ್ಯಾನಂದವೂ ಇರುತ್ತದೆ.


ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ? ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ? ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ. ಹೌದು, ನಾನು ದೇವರನ್ನೇ ಕೊಂಡಾಡುತ್ತಿರುವೆನು.


ಯೆಹೋವ ದೇವರೇ, ನಿಮ್ಮ ಮಾರ್ಗಗಳನ್ನು ನನಗೆ ತೋರಿಸಿರಿ; ನಿಮ್ಮ ದಾರಿಗಳನ್ನು ನನಗೆ ಕಲಿಸಿರಿ.


ನೀವು ನಿಶ್ಚಯವಾಗಿ ಅರಸನಿಗೆ ನಿತ್ಯ ಆಶೀರ್ವಾದ ದಯಪಾಲಿಸಿದ್ದೀರಿ; ನಿಮ್ಮ ಸನ್ನಿಧಿಯಲ್ಲಿ ಆತನು ಅಧಿಕ ಆನಂದಪಡುವಂತೆ ಮಾಡಿದ್ದೀರಿ.


ನಮ್ಮಲ್ಲಿ ನಂಬಿಕೆಯನ್ನು ಹುಟ್ಟಿಸುವವರೂ ಅದನ್ನು ಪರಿಪೂರ್ಣಗೊಳಿಸುವವರೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು, ನಮ್ಮ ಮುಂದೆ ಇಟ್ಟಿರುವ ಓಟವನ್ನು ಸಹನೆಯಿಂದ ಓಡೋಣ. ಯೇಸು ತಮ್ಮ ಮುಂದೆ ಇಟ್ಟಿದ್ದ ಸಂತೋಷಕ್ಕಾಗಿ ಶಿಲುಬೆಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ, ಈಗ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿದ್ದಾರೆ.


ನಾನಾದರೋ ನೀತಿಯಲ್ಲಿ ನಿಮ್ಮ ಮುಖವನ್ನು ನೋಡುವೆನು. ನಾನು ಎಚ್ಚೆತ್ತಾಗ ನಿಮ್ಮ ಹೋಲಿಕೆಯನ್ನೇ ಕಂಡು ತೃಪ್ತನಾಗುವೆನು.


ಅವಳ ಬಳಿಗೆ ಹೋಗುವ ಯಾವನೂ ಹಿಂದಿರುಗುವುದಿಲ್ಲ; ಜೀವಮಾರ್ಗಗಳನ್ನು ಅಂಥವರು ಹಿಡಿಯುವುದೇ ಇಲ್ಲ.


ನೀತಿಯ ಮಾರ್ಗದಲ್ಲಿಯೂ ನ್ಯಾಯದ ದಾರಿ ನಡುವೆಯೂ ನಾನು ನಡೆಯುತ್ತೇನೆ.


ಜೀವವನ್ನು ಅರಸನು ನಿಮ್ಮಿಂದ ಬೇಡಲು, ನೀವು ಆತನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟಿದ್ದೀರಿ.


ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.


ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ, ನಿಮ್ಮ ಪರಿಶುದ್ಧ ವ್ಯಕ್ತಿಯನ್ನು ಕೊಳೆಯುವಂತೆ ಬಿಡುವುದೇ ಇಲ್ಲ.


“ಪ್ರಿಯರೇ, ಮೂಲಪಿತೃ ದಾವೀದನು ಮರಣಹೊಂದಿದನು; ಸಮಾಧಿಮಾಡಲಾಯಿತು. ಇಂದಿಗೂ ಅವನ ಸಮಾಧಿ ನಮ್ಮಲ್ಲಿದೆ ಎಂಬುದನ್ನು ನಾನು ನಿಮಗೆ ಧೈರ್ಯದಿಂದ ಹೇಳಬಲ್ಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು