Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:33 - ಕನ್ನಡ ಸಮಕಾಲಿಕ ಅನುವಾದ

33 ಆದ್ದರಿಂದ ಯೇಸು ದೇವರ ಬಲಗಡೆಗೆ ಏರಿಹೋಗಿ ವಾಗ್ದಾನಮಾಡಿದ ಪವಿತ್ರಾತ್ಮ ದೇವರನ್ನು ತಂದೆಯಿಂದ ಪಡೆದುಕೊಂಡರು. ಈಗ ನೀವು ಕಂಡು ಕೇಳಿರುವ ಆ ಪವಿತ್ರಾತ್ಮ ವರವನ್ನು ಯೇಸುವೇ ಇವರ ಮೇಲೆ ಸುರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೇಸು ಪರಲೋಕಕ್ಕೆ ಎತ್ತಲ್ಪಟ್ಟನು. ಈಗ ಯೇಸು ದೇವರೊಂದಿಗಿದ್ದಾನೆ, ದೇವರ ಬಲಗಡೆಯಲ್ಲಿದ್ದಾನೆ. ಈಗ ತಂದೆಯು (ದೇವರು) ಪವಿತ್ರಾತ್ಮನನ್ನು ಯೇಸುವಿಗೆ ಕೊಟ್ಟಿದ್ದಾನೆ. ಪವಿತ್ರಾತ್ಮನನ್ನು ಕೊಡುವುದಾಗಿ ದೇವರು ವಾಗ್ದಾನ ಮಾಡಿದ್ದನು. ಆದ್ದರಿಂದ ಯೇಸು ಈಗ ಆ ಆತ್ಮನನ್ನು ಸುರಿಸಿದ್ದಾನೆ. ನೀವು ನೋಡುತ್ತಿರುವುದು ಮತ್ತು ಕೇಳುತ್ತಿರುವುದು ಇದನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಜೆಜು ಸರ್ಗಾರ್ ಜಾವ್ನ್ ದೆವಾಚ್ಯಾ ಉಜ್ವ್ಯಾ ಭಾಜುಕ್ ಬಸ್ಲ್ಯಾ, ಅನಿ ತೆಚ್ಯಾ ಬಾಬಾನ್ ಗೊಸ್ಟ್ ದಿಲ್ಲ್ಯಾ ಸಾರ್ಕೆ ಪವಿತ್ರ್ ಆತ್ಮೊ ತೆಕಾ ದಿಲ್ಯಾನ್, ತಸೆ ಹೊವ್ನ್ ಜೆಜುನ್ ತೊ ಆತ್ಮೊ ಅಮ್ಚ್ಯಾ ವರ್‍ತಿ ಘಾಟ್ಲಾ, ತುಮಿ ತೆ ಬಗುಕ್ ಲಾಗ್ಲ್ಯಾಸಿ ಅನಿ ಆಯ್ಕುಕ್ ಲಾಗ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:33
32 ತಿಳಿವುಗಳ ಹೋಲಿಕೆ  

ಒಮ್ಮೆ ಯೇಸು ಶಿಷ್ಯರೊಂದಿಗೆ ಊಟಮಾಡುತ್ತಿದ್ದಾಗ ಶಿಷ್ಯರಿಗೆ, “ನೀವು ಯೆರೂಸಲೇಮನ್ನು ಬಿಟ್ಟು ಹೋಗಬೇಡಿರಿ, ನಾನು ನಿಮಗೆ ತಿಳಿಸಿದಂತೆ ನನ್ನ ತಂದೆ ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ.


ಯೇಸು ಇಸ್ರಾಯೇಲಿಗೆ ಪಶ್ಚಾತ್ತಾಪವನ್ನೂ ಪಾಪಗಳ ಕ್ಷಮಾಪಣೆಯನ್ನೂ ಕೊಡಲು ಸಾಧ್ಯವಾಗುವಂತೆ ದೇವರು ಯೇಸುವನ್ನು ತಮ್ಮ ಬಲಗಡೆಯಲ್ಲಿ ಅಧಿಪತಿಯನ್ನಾಗಿಯೂ ರಕ್ಷಕನನ್ನಾಗಿಯೂ ಉನ್ನತಿಗೇರಿಸಿದ್ದಾರೆ.


“ದೇವರು ಹೇಳುವುದೇನೆಂದರೆ: ‘ಅಂತ್ಯ ದಿನಗಳಲ್ಲಿ ನನ್ನ ಆತ್ಮವನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು, ನಿಮ್ಮ ಯುವಜನರಿಗೆ ದರ್ಶನಗಳು ಕಾಣುವವು, ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು.


ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಸಹಾಯಕ ‘ಪವಿತ್ರಾತ್ಮರು’ ಎಲ್ಲವನ್ನೂ ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.


ಕರ್ತ ಯೇಸು ಅವರೊಂದಿಗೆ ಮಾತನಾಡಿದ ನಂತರ, ಅವರು ಪರಲೋಕಕ್ಕೆ ಏರಿ ದೇವರ ಬಲಪಾರ್ಶ್ವದಲ್ಲಿ ಕುಳಿತುಕೊಂಡರು.


ಕ್ರಿಸ್ತ ಯೇಸು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾರೆ, ದೇವದೂತರೂ ಪ್ರಭುತ್ವಗಳೂ ಅಧಿಕಾರಗಳೂ ಅವರಿಗೆ ಅಧೀನವಾಗಿವೆ.


ಅಬ್ರಹಾಮನ ಆಶೀರ್ವಾದವು ಕ್ರಿಸ್ತ ಯೇಸುವಿನ ಮೂಲಕ ಯೆಹೂದ್ಯರಲ್ಲದವರಿಗೆ ಉಂಟಾಗಿ, ನಂಬಿಕೆಯ ಮೂಲಕ ವಾಗ್ದಾನದ ಪವಿತ್ರಾತ್ಮರನ್ನು ನಾವು ಪಡೆದುಕೊಳ್ಳುವುದಕ್ಕಾಗಿಯೇ ದೇವರು ನಮ್ಮನ್ನು ವಿಮೋಚಿಸಿದರು.


ಯೆಹೂದ್ಯರಲ್ಲದವರ ಮೇಲೆಯೂ ಪವಿತ್ರಾತ್ಮ ದೇವರು ವರವನ್ನು ಸುರಿಸಿದ್ದಕ್ಕೆ ಪೇತ್ರನೊಂದಿಗೆ ಸುನ್ನತಿಯಾದ ವಿಶ್ವಾಸಿಗಳು ಅತ್ಯಾಶ್ಚರ್ಯಪಟ್ಟರು.


ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ.


ನಾನು ತಂದೆಯನ್ನು ಕೇಳಿಕೊಳ್ಳುವೆನು. ಆಗ ತಂದೆ ನಿಮಗೆ ಬೇರೊಬ್ಬ ಸಹಾಯಕರನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕೊಡುವರು.


ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿ ಅವರಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಕ್ರಿಸ್ತ ಯೇಸುವಿನ ಮೂಲಕ ವಿಶ್ವಾಸವಿಟ್ಟಿದ್ದೀರಿ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರಲಿ.


ಕ್ರಿಸ್ತ ಯೇಸುವು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡರು.


ಈ ನಿರೀಕ್ಷೆಯು ನಮ್ಮನ್ನು ನಿರಾಶೆ ಪಡಿಸುವುದಿಲ್ಲ. ಏಕೆಂದರೆ ದೇವರು ನಮಗೆ ಅನುಗ್ರಹಿಸಿರುವ ಪವಿತ್ರಾತ್ಮ ಮೂಲಕ ನಮ್ಮ ಹೃದಯಗಳಲ್ಲಿ ತಮ್ಮ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾರೆ.


ಆದ್ದರಿಂದ ನಾನು ಆತನಿಗೋಸ್ಕರ ದೊಡ್ಡವರೊಂದಿಗೆ ಪಾಲನ್ನು ಕೊಡುವೆನು ಮತ್ತು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲು ಹಂಚಿಕೊಳ್ಳುವನು. ಏಕೆಂದರೆ ಆತನು ತನ್ನ ಪ್ರಾಣವನ್ನು ಮರಣದವರೆಗೂ ಹೊಯ್ದುಬಿಟ್ಟು, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡನು. ಅನೇಕರ ಪಾಪವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾಪನೆ ಮಾಡಿದನು.


ನನ್ನ ನಂಬಿಗಸ್ತಿಕೆಯೂ ಪ್ರೀತಿಯೂ ಅವನ ಸಂಗಡ ಇರುವುವು. ನನ್ನ ಹೆಸರಿನಲ್ಲಿ ಅವನ ಬಲವೆಂಬ ಕೊಂಬು ಉನ್ನತವಾಗುವುದು.


ಆ ಕಾಲದಲ್ಲಿ ನೀವು ದರ್ಶನದಲ್ಲಿ ನಿಮ್ಮ ಭಕ್ತರಿಗೆ ಹೇಳಿದ್ದೇನೆಂದರೆ: “ಒಬ್ಬ ಶೂರನಿಗೆ ನಾನು ಬಲವನ್ನು ಅನುಗ್ರಹಿಸಿದ್ದೇನೆ. ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತ ಸ್ಥಾನದಲ್ಲಿಟ್ಟಿದ್ದೇನೆ.


ನಮಗೆ ರಕ್ಷಕರಾದ ಕ್ರಿಸ್ತ ಯೇಸುವಿನ ಮೂಲಕ ದೇವರು ಪವಿತ್ರಾತ್ಮ ದೇವರನ್ನು ನಮ್ಮ ಮೇಲೆ ಸಮೃದ್ಧವಾಗಿ ಸುರಿಸಿದರು.


ಆದ್ದರಿಂದ ಪವಿತ್ರ ವೇದದಲ್ಲಿ ಹೀಗೆ ಹೇಳಲಾಗಿದೆ: “ಅವರು ಉನ್ನತಸ್ಥಾನಕ್ಕೆ ಏರಿಹೋದಾಗ, ಸೆರೆಯಾಳಾಗಿದ್ದ ಅನೇಕರನ್ನು ಕೊಂಡೊಯ್ದು ತಮ್ಮ ಜನರಿಗೆ ವರದಾನಗಳನ್ನು ಕೊಟ್ಟರು!”


ತಂದೆಯೇ, ಲೋಕವು ಉಂಟಾಗುವದಕ್ಕಿಂತ ಮುಂಚೆ ನಿಮ್ಮೊಡನೆ ನನಗಿದ್ದ ಮಹಿಮೆಯಿಂದ ಈಗ ನೀವು ನನ್ನನ್ನು ಮಹಿಮೆಪಡಿಸಿರಿ.


“ಆದರೂ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆ ಸಹಾಯಕರೊಬ್ಬರು ನಿಮ್ಮ ಬಳಿಗೆ ಬರುವರು. ಆಗ ತಂದೆಯಿಂದ ಬರುವ ಆ ಸತ್ಯದ ಆತ್ಮವಾಗಿರುವವರೇ ನನ್ನ ವಿಷಯವಾಗಿ ಸಾಕ್ಷಿಕೊಡುವರು.


ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮಗೆ ಕಳುಹಿಸುವೆನು; ಆದರೆ ನೀವು ಪರಲೋಕದ ಶಕ್ತಿಯನ್ನು ಹೊದಿಸುವ ತನಕ, ಈ ಪಟ್ಟಣದಲ್ಲಿಯೇ ಕಾದುಕೊಂಡಿರಿ,” ಎಂದರು.


ನನ್ನ ಸೇವಕನು ವಿವೇಕಿಯಾಗಿ ಕಾರ್ಯವನ್ನು ಸಾಧಿಸಿ, ಅವನು ಉನ್ನತನಾಗಿ ಮೇಲೆಕ್ಕೇರಿ ಮಹೋನ್ನತನಾಗಿರುವನು.


ಯೆಹೋವ ದೇವರ ಬಲಗೈ ಎತ್ತರವಾಗಿ ಎತ್ತಲಾಗಿದೆ; ಯೆಹೋವ ದೇವರ ಬಲಗೈ ಪರಾಕ್ರಮವನ್ನು ನಡೆಸಿದೆ.


ನೀವು ಸಹ ನಿಮ್ಮ ರಕ್ಷಣೆಯ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿದ ಮೇಲೆ ಕ್ರಿಸ್ತನಲ್ಲಿ ನಂಬಿಕೆಯಿಟ್ಟು ವಾಗ್ದಾನದ ಪವಿತ್ರಾತ್ಮರಿಂದ ಮುದ್ರೆಹೊಂದಿದ್ದೀರಿ.


ಆದರೂ ದೇವದೂತರಿಗಿಂತ ಸ್ವಲ್ಪಕಾಲ ಕಡಿಮೆಯಾಗಿ ಮಾಡಲಾದ ಆ ಒಬ್ಬಾತನು ಯೇಸುವೇ. ಈ ಯೇಸು ಬಾಧೆಪಟ್ಟು ಮೃತಪಟ್ಟಿದ್ದರಿಂದಲೇ ಮಹಿಮೆಯನ್ನೂ ಮಾನವನ್ನೂ ಕಿರೀಟವಾಗಿ ಹೊಂದಿದರೆಂದು ಎಂದು ನಾವು ಕಾಣುತ್ತೇವೆ. ದೇವರ ಕೃಪೆಯಿಂದಲೇ ಎಲ್ಲರಿಗೋಸ್ಕರ ಮರಣವನ್ನು ಈ ಯೇಸು ಅನುಭವಿಸಬೇಕಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು