Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:38 - ಕನ್ನಡ ಸಮಕಾಲಿಕ ಅನುವಾದ

38 ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿ ಒಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ; ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ; ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಪೇತ್ರನು ಅವರಿಗೆ - ನಿಮ್ಮ ಪಾಪಗಳು ಪರಿಹಾರವಾಗುವದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನ ಮೇಲೆ ದೀಕ್ಷಾಸ್ನಾನಮಾಡಿಸಿಕೊಳ್ಳಿರಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಪೇತ್ರನು ಅವರಿಗೆ, “ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ. ಆಗ ದೇವರು ನಿಮ್ಮ ಪಾಪಗಳನ್ನು ಕ್ಷಮಿಸುವನು. ಅಲ್ಲದೆ ದೇವರು ವಾಗ್ದಾನ ಮಾಡಿರುವ ಪವಿತ್ರಾತ್ಮನನ್ನು ಹೊಂದಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತನ್ನಾ ಪೆದ್ರುನ್ ತೆಂಕಾ “ತುಮ್ಚ್ಯಾತ್ಲೊ ಹರ್ ಎಕ್ಲೊಬಿ ಅಪ್ಲ್ಯಾ ಪಾಪಾತ್ನಾ ಪರ್ತುನ್ ದೆವಾಕ್ಡೆ ಯೆವ್ನ್ ಜೆಜು ಕ್ರಿಸ್ತಾಚ್ಯಾ ನಾಂವಾನ್ ಬಾಲ್ತಿಮ್ ಕರುನ್ ಘೆಂವ್ದಿತ್, ತನ್ನಾ ದೆವ್ ತುಮ್ಚ್ಯಾ ಪಾಪಾಕ್ನಿ ಮಾಪ್ ಕರ್‍ತಾ, ಅನಿ ದೆವಾನ್ ಗೊಸ್ಟ್ ದಿಲ್ಲೊ ಪವಿತ್ರ್ ಆತ್ಮೊ ತುಮಿ ಘೆವ್ಕ್ ಹೊತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:38
43 ತಿಳಿವುಗಳ ಹೋಲಿಕೆ  

ಈಗ ನೀನು ತಡಮಾಡುವುದೇಕೆ? ಎದ್ದೇಳು, ಅವರ ಹೆಸರನ್ನು ಕರೆದು, ದೀಕ್ಷಾಸ್ನಾನವನ್ನು ಹೊಂದಿ ನಿನ್ನ ಪಾಪಗಳನ್ನು ತೊಳೆದುಕೋ,’ ಎಂದನು.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ಆದರೆ ಫಿಲಿಪ್ಪನು ದೇವರ ರಾಜ್ಯದ ಶುಭವರ್ತಮಾನವನ್ನೂ ಕ್ರಿಸ್ತ ಯೇಸುವಿನ ಹೆಸರನ್ನೂ ಪ್ರಕಟಿಸಿದಾಗ ಅಲ್ಲಿಯ ಸ್ತ್ರೀ ಪುರುಷರು ಅದನ್ನು ನಂಬಿ ದೀಕ್ಷಾಸ್ನಾನವನ್ನು ಹೊಂದಿದರು.


ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವರೊಳಗೆ ಆತನ ಹೆಸರಿನಲ್ಲಿ ಪಶ್ಚಾತ್ತಾಪಪಟ್ಟು ಮತ್ತು ಪಾಪಗಳ ಕ್ಷಮಾಪಣೆ ಸಾರಬೇಕೆಂತಲೂ ಬರೆಯಲಾಗಿದೆ.


ಈ ನೀರು ದೀಕ್ಷಾಸ್ನಾನವನ್ನು ಸೂಚಿಸುವಂತದ್ದಾಗಿದೆ. ಈ ದೀಕ್ಷಾಸ್ನಾನ ಕ್ರಿಸ್ತ ಯೇಸುವಿನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿಯು ಬೇಕೆಂದು ದೇವರನ್ನು ಬೇಡಿಕೊಳ್ಳುವಂಥದ್ದಾಗಿದೆ.


ಆಗ ಅವರು ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಹೊಂದುವಂತೆ ಆಜ್ಞಾಪಿಸಿದನು. ಅನಂತರ ಕೆಲವು ದಿನ ಅಲ್ಲಿಯೇ ಇರಬೇಕೆಂದು ಅವರು ಪೇತ್ರನನ್ನು ಕೇಳಿಕೊಂಡರು.


ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.


ಅಥವಾ ಕ್ರಿಸ್ತ ಯೇಸುವಿನಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುವ ನಾವು ಅವರ ಮರಣದಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುತ್ತೇವೆಂಬುದು ನಿಮಗೆ ತಿಳಿಯದೋ?


ಅಂದಿನಿಂದ ಯೇಸು, “ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಬೋಧಿಸತೊಡಗಿದರು.


“ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಸಾರುತ್ತಿದ್ದನು.


ಇಂಥಾ ಅಜ್ಞಾನ ಕಾಲವನ್ನು ಹಿಂದಿನ ಕಾಲದಲ್ಲಿ ದೇವರು ತಮ್ಮ ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲಾ ಕಡೆಗಳಲ್ಲಿರುವ ಸರ್ವಮಾನವರೂ ಪಶ್ಚಾತ್ತಾಪ ಪಡಬೇಕೆಂದು ದೇವರು ಆಜ್ಞಾಪಿಸುತ್ತಾರೆ.


ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ನಮ್ಮ ಕರ್ತ ಯೇಸುವಿನಲ್ಲಿ ವಿಶ್ವಾಸವಿಡಬೇಕೆಂದು ಯೆಹೂದ್ಯರಿಗೂ ಗ್ರೀಕರಿಗೂ ಖಚಿತವಾಗಿ ಸಾಕ್ಷಿ ಹೇಳಿದ್ದೇನೆ.


ಆದರೆ ಮೊದಲು ದಮಸ್ಕದಲ್ಲಿದ್ದವರಿಗೂ ಆಮೇಲೆ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಗಳಲ್ಲಿ ಇದ್ದವರಿಗೂ ಯೆಹೂದ್ಯರಲ್ಲದವರಿಗೂ ನಾನು ಬೋಧಿಸಿದೆನು. ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು, ಪಶ್ಚಾತ್ತಾಪಕ್ಕೆ ಯೋಗ್ಯ ಕೃತ್ಯಗಳನ್ನು ನಡೆಸಬೇಕೆಂದು ನಾನು ಘೋಷಿಸಿದೆನು.


ಆದ್ದರಿಂದ ನೀವು ಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ. ಅವರಿಗೆ ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿ,


ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.


ಅವರು ನಮ್ಮನ್ನು ರಕ್ಷಿಸಿದರು. ಹೇಗೆಂದರೆ, ನಾವು ಮಾಡಿದ ಪುಣ್ಯ ಕ್ರಿಯೆಗಳಿಂದಲ್ಲ, ಅವರ ಕರುಣೆಗೆ ಅನುಸಾರವಾಗಿ ಆತ್ಮಿಕವಾಗಿ ಹುಟ್ಟುವಂತೆ ಮಾಡಿ, ನಮ್ಮನ್ನು ತೊಳೆದೂ ಪವಿತ್ರಾತ್ಮ ದೇವರು ನೂತನ ಜೀವನವನ್ನು ಕೊಡುವುದರ ಮೂಲಕವೇ ಅವರು ನಮ್ಮನ್ನು ರಕ್ಷಿಸಿದರು.


“ಕಾಲವು ಪರಿಪೂರ್ಣವಾಗಿದೆ, ದೇವರ ರಾಜ್ಯವು ಸಮೀಪಿಸಿದೆ, ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ,” ಎಂದು ಹೇಳಿದರು.


ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಹೊಂದಿದಾಗ, “ನಾನು ಕರ್ತ ಯೇಸುವಿಗೆ ನಂಬಿಗಸ್ತಳೆಂದು ನೀವು ತೀರ್ಮಾನಿಸಿಕೊಂಡರೆ, ಬಂದು ನನ್ನ ಮನೆಯಲ್ಲಿ ತಂಗಿರಿ,” ಎಂದು ನಮ್ಮನ್ನು ಒತ್ತಾಯ ಮಾಡಿದಳು.


ಅದಕ್ಕೆ ಪೇತ್ರನು, “ದೇವರ ವರವನ್ನು ಹಣಕೊಟ್ಟು ಕೊಂಡುಕೊಳ್ಳಬಹುದೆಂದು ನೀನು ಭಾವಿಸಿದ್ದರಿಂದ ನೀನು ನಿನ್ನ ಹಣದೊಂದಿಗೆ ನಾಶವಾಗಿಹೋಗು!


ಯೇಸು ಇಸ್ರಾಯೇಲಿಗೆ ಪಶ್ಚಾತ್ತಾಪವನ್ನೂ ಪಾಪಗಳ ಕ್ಷಮಾಪಣೆಯನ್ನೂ ಕೊಡಲು ಸಾಧ್ಯವಾಗುವಂತೆ ದೇವರು ಯೇಸುವನ್ನು ತಮ್ಮ ಬಲಗಡೆಯಲ್ಲಿ ಅಧಿಪತಿಯನ್ನಾಗಿಯೂ ರಕ್ಷಕನನ್ನಾಗಿಯೂ ಉನ್ನತಿಗೇರಿಸಿದ್ದಾರೆ.


“ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನು ಮತ್ತು ಮೊರೆಯಿಡುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನು ಅವರು ದೃಷ್ಟಿಸಿನೋಡುವರು. ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ, ಆತನ ನಿಮಿತ್ತ ಗೋಳಾಡುವರು. ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆ ಪಡುವರು.


ಮಾತ್ರವಲ್ಲದೆ, “ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ. ಎಂದು ಯೆಹೋವ ದೇವರು ಹೇಳುತ್ತಾರೆ. ನಿನ್ನ ಮೇಲಿರುವ ನನ್ನ ಆತ್ಮನೂ, ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ, ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ, ನಿನ್ನ ಸಂತಾನದ ಬಾಯಿಂದಲೂ ತೊಲಗುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆದರೆ ದೇವರು ಉನ್ನತಲೋಕದಲ್ಲಿ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು, ಫಲಭರಿತ ಭೂಮಿ ಸಮೃದ್ಧವಾದ ಅರಣ್ಯವಾಗಿ ಮಾರ್ಪಡುವುದು.


ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವುದಿಲ್ಲ. ನಾನು ನನ್ನ ಆತ್ಮವನ್ನು ಇಸ್ರಾಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


“ವಿಮೋಚಕನು ಚೀಯೋನಿಗೂ ಯಾಕೋಬಿನಲ್ಲಿ ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಡುವವರಿಗಾಗಿಯೂ ಬರುವನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವರು ತಮ್ಮ ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ಆಗ ಜನರು, “ಹಾಗಾದರೆ ನಾವೇನು ಮಾಡಬೇಕು?” ಎಂದು ಕೇಳಿದರು.


ಯೇಸುವಿನಲ್ಲಿ ನಂಬಿಕೆಯನ್ನಿಡುವ ಪ್ರತಿಯೊಬ್ಬನು ಅವರ ಹೆಸರಿನ ಮುಖಾಂತರ ಪಾಪಗಳ ಕ್ಷಮಾಪಣೆ ಹೊಂದುವನು ಎಂದು ಅವರ ಬಗ್ಗೆ ಎಲ್ಲಾ ಪ್ರವಾದಿಗಳು ಸಾಕ್ಷಿಕೊಟ್ಟಿದ್ದಾರೆ,” ಎಂದನು.


“ಆದ್ದರಿಂದ, ನನ್ನ ಸಹೋದರರೇ, ಯೇಸುವಿನ ಮೂಲಕವೇ ಪಾಪಕ್ಷಮಾಪಣೆ ಸಾಧ್ಯವೆಂದು ನಿಮಗೆ ಸಾರಲಾಗುತ್ತಿದೆಯೆಂದು ನೀವು ತಿಳಿಯಬೇಕೆಂಬುದೇ ನನ್ನ ಅಪೇಕ್ಷೆ.


ದೇವರ ಕೃಪಾ ಐಶ್ವರ್ಯಕ್ಕೆ ಅನುಸಾರವಾಗಿ ಕ್ರಿಸ್ತನಲ್ಲಿ ನಮಗೆ ಅವರ ರಕ್ತದ ಮೂಲಕ ಪಾಪಗಳ ಕ್ಷಮಾಪಣೆಯಾಗಿ ವಿಮೋಚನೆಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು