Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:41 - ಕನ್ನಡ ಸಮಕಾಲಿಕ ಅನುವಾದ

41 ಪೇತ್ರನ ಸಂದೇಶವನ್ನು ಸ್ವೀಕರಿಸಿದವರು ದೀಕ್ಷಾಸ್ನಾನ ಪಡೆದರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಅವನ ಮಾತಿಗೆ ಒಪ್ಪಿಕೊಂಡವರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿವಸ ಸುಮಾರು ಮೂರುಸಾವಿರ ಜನರು ಅವರಲ್ಲಿ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಪೇತ್ರನು ಹೇಳಿದ್ದನ್ನು ಸ್ವೀಕರಿಸಿಕೊಂಡ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿನ ಸುಮಾರು ಮೂರುಸಾವಿರ ಜನರು ವಿಶ್ವಾಸಿಗಳ ಗುಂಪಿಗೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ತೆಂಚ್ಯಾತ್ಲ್ಯಾ ಲೈ ಲೊಕಾನಿ ಪೆದ್ರು ಸಾಂಗ್ತಲೆ ವಿಶ್ವಾಸ್ ಕರ್‍ಲ್ಯಾನಿ ಅನಿ ಬಾಲ್ತಿಮ್ ಘೆಟ್ಲ್ಯಾನಿ, ತ್ಯಾ ದಿಸಿ ಸುಮಾರ್ ತಿನ್ ಹಜಾರ್ ಲೊಕಾ ದೆವಾಚ್ಯಾ ಲೊಂಕಾಂಚ್ಯಾ ತಾಂಡ್ಯಾಕ್ ಮಿಳ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:41
21 ತಿಳಿವುಗಳ ಹೋಲಿಕೆ  

ಆದರೆ ಸಂದೇಶವನ್ನು ಕೇಳಿದವರಲ್ಲಿ ಅನೇಕರು ನಂಬಿದರು. ಅವರ ಸಂಖ್ಯೆ ಸುಮಾರು ಐದು ಸಾವಿರಕ್ಕೇರಿತು.


ಅವರು ದೇವರಿಗೆ ಸ್ತೋತ್ರ ಮಾಡುತ್ತಾ, ಜನರೆಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ರಕ್ಷಣೆ ಹೊಂದಿದವರನ್ನು ಕರ್ತ ಯೇಸುವು ಪ್ರತಿದಿನವೂ ಅವರೊಂದಿಗೆ ಸೇರಿಸುತ್ತಿದ್ದರು.


ಜನರು ಇದನ್ನು ಕೇಳಿದಾಗ ಅವರಿಗೆ ಹೃದಯದಲ್ಲಿ ಅಲಗು ನೆಟ್ಟಂತಾಗಿ, “ಸಹೋದರರೇ, ನಾವೇನು ಮಾಡಬೇಕು?” ಎಂದು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ ಕೇಳಿದರು.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವರು ನಾನು ಮಾಡುವ ಕ್ರಿಯೆಗಳನ್ನು ತಾವು ಸಹ ಮಾಡುವರು. ಇವುಗಳಿಗಿಂತ ಮಹತ್ತಾದವುಗಳನ್ನು ಅವರು ಮಾಡುವರು. ಏಕೆಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.


ಯೆಹೂದ್ಯರಲ್ಲದವರು ಇದನ್ನು ಕೇಳಿದಾಗ, ಬಹಳ ಹರ್ಷಗೊಂಡು ಕರ್ತದೇವರ ವಾಕ್ಯವನ್ನು ಘನಪಡಿಸಿದರು. ನಿತ್ಯಜೀವಕ್ಕೆ ನೇಮಕರಾದ ಎಲ್ಲರೂ ವಿಶ್ವಾಸವನ್ನಿಟ್ಟರು.


ನೀವು ನಿಮ್ಮ ಸೈನ್ಯವನ್ನು ಒಟ್ಟುಗೂಡಿಸುವ ದಿನದಲ್ಲಿ ನಿಮ್ಮ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಮುಂಜಾನೆಯ ಉದರದಿಂದ ಬರುವ ಇಬ್ಬನಿಯಂತೆ ನಿಮ್ಮ ಯೋಧರು ನಿಮ್ಮ ಕಡೆ ಇಳಿದು ಬರುವರು.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಸೇರಿದ್ದರು. ಅವರ ನಡುವೆ ಪೇತ್ರನು ಎದ್ದು ನಿಂತು, ಹೀಗೆಂದನು:


ನೀವು ಬಹು ಹಿಂಸೆಯಿಂದಲೂ ಪವಿತ್ರಾತ್ಮ ಪ್ರೇರಿತ ಆನಂದದಿಂದಲೂ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತ ಯೇಸುವನ್ನೂ ಅನುಸರಿಸುವವರಾಗಿದ್ದೀರಿ.


ಆ ಪ್ರವಾದಿಯ ಮಾತನ್ನು ಕೇಳದಿರುವ ಪ್ರತಿಯೊಬ್ಬನು ತನ್ನ ಜನರೊಳಗಿಂದ ಸಂಪೂರ್ಣವಾಗಿ ತೆಗೆಯಲಾಗುವುದು.’


ಇದಾದನಂತರ, ಯೋಸೇಫನು ತನ್ನ ತಂದೆ ಯಾಕೋಬನನ್ನು ಅವನ ಕುಟುಂಬದವರೆಲ್ಲರನ್ನೂ, ಒಟ್ಟು ಎಪ್ಪತ್ತೈದು ಜನರನ್ನು ಕರೆಕಳುಹಿಸಿದನು.


ಅಲ್ಲಿ ನೌಕೆಯಲ್ಲಿ ನಾವೆಲ್ಲಾ ಒಟ್ಟು ಇನ್ನೂರ ಎಪ್ಪತ್ತಾರು ಜನರಿದ್ದೆವು.


ಪ್ರತಿಯೊಬ್ಬನೂ ಮೇಲಧಿಕಾರಿಗಳಿಗೆ ಅಧೀನನಾಗಿರಬೇಕು, ಏಕೆಂದರೆ ದೇವರು ನೇಮಿಸಿದ ಅಧಿಕಾರದ ಹೊರತು ಬೇರೆ ಯಾವದೂ ಇರುವುದಿಲ್ಲ. ಇರುವ ಅಧಿಕಾರಗಳು ದೇವರಿಂದಲೇ ನೇಮಕಗೊಂಡಿವೆ.


ಅಂದರೆ, ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು, ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ, ಆ ನಾವೆಯೊಳಗೆ ಎಂಟೇ ಜನರು ನೀರಿನಿಂದ ಸಂರಕ್ಷಣೆ ಹೊಂದಿದರು.


ಎರಡನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ಸಮುದ್ರದ ಮೇಲೆ ಸುರಿಯಲು, ಅದು ಸತ್ತ ಮನುಷ್ಯನ ರಕ್ತದಂತಾಯಿತು, ಸಕಲ ಜೀವಿಗಳೂ ಸತ್ತವು.


ಸೀಮೋನ ಪೇತ್ರನು ಹೋಗಿ ನೂರೈವತ್ತಮೂರು ದೊಡ್ಡ ಮೀನುಗಳಿಂದ ತುಂಬಿದ ಬಲೆಯನ್ನು ದಡಕ್ಕೆ ಎಳೆದನು. ಅಷ್ಟು ಮೀನುಗಳಿದ್ದರೂ ಬಲೆಯು ಹರಿದಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು