Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:42 - ಕನ್ನಡ ಸಮಕಾಲಿಕ ಅನುವಾದ

42 ಅವರೆಲ್ಲರು ಅಪೊಸ್ತಲರ ಬೋಧನೆಯಲ್ಲಿ, ಅನ್ಯೋನ್ಯತೆಯಲ್ಲಿ, ರೊಟ್ಟಿ ಮುರಿಯುವುದರಲ್ಲಿ, ಪ್ರಾರ್ಥನೆ ಮಾಡುವುದರಲ್ಲಿ ತಮ್ಮನ್ನು ಸಮರ್ಪಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಅಂದಿನಿಂದ ಅವರು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮುರಿಯುವ ಸಹಭೋಜನದಲ್ಲಿ ಪಾಲ್ಗೊಳ್ಳುತ್ತಿದ್ದರು ಹಾಗೂ ಪ್ರಾರ್ಥನಾಕೂಟಗಳಲ್ಲಿ ಭಾಗವಹಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಇವರು ಅಪೊಸ್ತಲರ ಬೋಧನೆಯನ್ನು ಕೇಳುವದರಲ್ಲಿಯೂ ಸಹೋದರರ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಇವರೆಲ್ಲರೂ ಅಪೊಸ್ತಲರ ಬೋಧನೆಯನ್ನು ಕೇಳುವುದರಲ್ಲಿಯೂ ಸಹೋದರರ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿಯುವುದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ತೆನಿ ಅಪೊಸ್ತಲಾಂಚಿ ಶಿಕಾಪಾ ಆಯಿಕ್ತಲ್ಯಾತ್, ಭಾವ್ ಭೆನಿಯಾಂಚ್ಯಾ ಎಕ್ವಟ್ಟಾತ್ ಅನಿ ಎಕ್ ಹೊವ್ನ್ ಜೆವಾನ್ ಕರ್‍ತಲ್ಯಾತ್ ಅನಿ ಮಾಗ್ನೆ ಕರ್‍ತಲ್ಯಾತ್ ಅಪ್ಲೊ ಎಳ್ ಖರಚ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:42
35 ತಿಳಿವುಗಳ ಹೋಲಿಕೆ  

ಸಭೆಯಾಗಿ ಸೇರುವುದನ್ನು ಕೆಲವರಿಗೆ ರೂಢಿಯಾಗಿ ಬಿಟ್ಟಂತೆ, ನಾವು ಹಾಗೆ ಮಾಡದಿರೋಣ. ಕರ್ತ ಯೇಸುವಿನ ಪ್ರತ್ಯಕ್ಷತೆಯ ದಿನವು ಸಮೀಪಿಸುತ್ತಾ ಬರುತ್ತದೆ ಎಂದು ನೀವು ತಿಳಿದಿರುವುದರಿಂದ ಒಬ್ಬರನ್ನೊಬ್ಬರು ಪ್ರೋತ್ಸಾಹಗೊಳಿಸುವುದನ್ನು ಇನ್ನೂ ಹೆಚ್ಚಾಗಿ ಮಾಡಿರಿ.


ಅಲ್ಲಿ ಕೆಲವು ಮಹಿಳೆಯರು, ಯೇಸುವಿನ ತಾಯಿ ಮರಿಯಳು, ಯೇಸುವಿನ ಸಹೋದರರು, ಇವರೆಲ್ಲರು ನಿತ್ಯವೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿ ಸೇರುತ್ತಿದ್ದರು.


ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರಬೇಕೆಂದು, ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡವೂ ಅವರ ಮಗನಾದ ಕ್ರಿಸ್ತ ಯೇಸುವಿನ ಸಂಗಡವೂ ಇರುವಂಥದ್ದು.


ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.


ಪ್ರತಿದಿನವೂ ದೇವಾಲಯದಲ್ಲಿ ಒಮ್ಮನಸ್ಸಿನಿಂದ ಸಭೆ ಕೂಡಿಬರುವುದನ್ನು ಕ್ರಮವಾಗಿ ಮುಂದುವರೆಸಿದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಆನಂದದಿಂದಲೂ ಸರಳ ಹೃದಯದಿಂದಲೂ ಊಟಮಾಡುತ್ತಿದ್ದರು.


ವಾರದ ಮೊದಲನೆಯ ದಿನ ನಾವು ರೊಟ್ಟಿ ಮುರಿಯಲು ಒಂದಾಗಿ ಕೂಡಿಬಂದೆವು. ಪೌಲನು ಅಲ್ಲಿ ಬೋಧನೆ ಮಾಡಿದನು. ಮರುದಿನ ಅವನು ಹೊರಡಬೇಕಾದ್ದರಿಂದ ಮಧ್ಯರಾತ್ರಿಯವರೆಗೆ ಮಾತನಾಡುತ್ತಲೇ ಇದ್ದನು.


ನೀವು ಪವಿತ್ರಾತ್ಮ ದೇವರಲ್ಲಿ ಎಲ್ಲಾ ಸಮಯಗಳಲ್ಲಿಯೂ ಸಕಲ ವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಕರ್ತನ ಜನರೆಲ್ಲರಿಗಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರವಾಗಿರಿ.


ಪ್ರಿಯರೇ, ನೀವಾದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯಲ್ಲಿ ನಿಮ್ಮನ್ನು ನಿರ್ಮಿಸಿಕೊಂಡವರಾಗಿ ಪರಿಶುದ್ಧಾತ್ಮ ದೇವರಲ್ಲಿ ಪ್ರಾರ್ಥಿಸಿರಿ.


ಎಚ್ಚರವಾಗಿದ್ದು ಕೃತಜ್ಞತೆ ಉಳ್ಳವರಾಗಿ ಪ್ರಾರ್ಥನೆಯಲ್ಲಿ ನಿರತರಾಗಿರಿ.


ನೀವು ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿ ಮುಂದುವರೆದು ನೆಲೆಗೊಂಡು, ಸುವಾರ್ತೆಯ ನಿರೀಕ್ಷೆಯಿಂದ ತೊಲಗಿ ಹೋಗದಿರಿ. ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲಾದ ಈ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾದೆನು.


ನೀನಾದರೋ, ಕಲಿತು ನಿಶ್ಚಯಗೊಂಡವುಗಳಲ್ಲಿ ಮುಂದುವರಿಯುತ್ತಿರು. ನಿನಗೆ ಕಲಿಸಿಕೊಟ್ಟವರು ಯಾರೆಂಬುದು ನಿನಗೆ ತಿಳಿದಿದೆ.


ಕ್ರಿಸ್ತ ಯೇಸು ಎಂಬ ಮುಖ್ಯ ಮೂಲೆಗಲ್ಲಿನೊಂದಿಗೆ ಅಪೊಸ್ತಲರು ಹಾಗೂ ಪ್ರವಾದಿಗಳೆಂಬ ಅಸ್ತಿವಾರದ ಮೇಲೆ ನೀವು ಕಟ್ಟಲಾಗಿದ್ದೀರಿ.


ಅಲ್ಲಿದ್ದ ಶಿಷ್ಯರು ವಿಶ್ವಾಸದಲ್ಲಿ ಮುಂದುವರಿಯಲು, “ನಾವು ಅನೇಕ ಸಂಕಟಗಳಿಂದ ದೇವರ ರಾಜ್ಯದೊಳಗೆ ಸೇರಬೇಕು,” ಎಂದು ಹೇಳಿ ದೃಢಪಡಿಸಿದರು.


ನಾವಾದರೋ ಪ್ರಾರ್ಥನೆ ಮಾಡುವುದರಲ್ಲಿಯೂ ದೇವರ ವಾಕ್ಯ ಬೋಧಿಸುವುದರಲ್ಲಿಯೂ ನಿರತರಾಗಿರುವೆವು,” ಎಂದು ಹೇಳಿದರು.


ಹೀಗೆ ಪ್ರಾರ್ಥನೆ ಮಾಡಿದ ತರುವಾಯ ಅವರು ನೆರೆದಿದ್ದ ಸ್ಥಳವು ಕಂಪನಗೊಂಡಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ಧೈರ್ಯದಿಂದ ದೇವರ ವಾಕ್ಯವನ್ನು ಸಾರತೊಡಗಿದರು.


ನೀವು ಕರ್ತದೇವರ ಪಾತ್ರೆಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯಲಾರಿರಿ. ನೀವು ಕರ್ತದೇವರ ಪಂಕ್ತಿಯಲ್ಲಿಯೂ ದೆವ್ವಗಳ ಪಂಕ್ತಿಯಲ್ಲಿಯೂ ಭಾಗಿಗಳಾಗಿರಲಾರಿರಿ.


ನಿರೀಕ್ಷೆಯಲ್ಲಿ ಸಂತೋಷವುಳ್ಳವರೂ ಸಂಕಟಗಳಲ್ಲಿ ಸಹನೆಯುಳ್ಳವರೂ ಪ್ರಾರ್ಥನೆಯಲ್ಲಿ ದೃಢಮನಸ್ಸುಳ್ಳವರೂ ಆಗಿ ಮುಂದುವರಿಯಿರಿ.


ನಾವಾದರೋ ಹಿಂಜರಿದು ನಾಶವಾಗುವವರಲ್ಲ, ನಂಬುವವರಾಗಿ ಆ ರಕ್ಷಣೆಯನ್ನು ಹೊಂದುವವರಾಗಿದ್ದೇವೆ.


ಅವನು ಅಲ್ಲಿಗೆ ಬಂದು ದೇವರ ಕೃಪೆಯನ್ನು ಕಂಡು ಹರ್ಷಭರಿತನಾಗಿ, ಅವರೆಲ್ಲರೂ ಕರ್ತನಿಗೆ ಹೃದಯಪೂರ್ವಕವಾಗಿ ಭಯಭಕ್ತಿ ಉಳ್ಳವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸಿದನು.


ನೀವು ಎಲ್ಲದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು, ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶಗಳನ್ನು ಬಿಗಿಯಾಗಿ ಅನುಸರಿಸುತ್ತಿರೆಂದು ನಿಮ್ಮನ್ನು ಹೊಗಳುತ್ತೇನೆ.


ಅನಂತರ ಪೌಲನು ಮೇಲಂತಸ್ತಿಗೆ ಹೋಗಿ ವಿಶ್ವಾಸಿಗಳೊಂದಿಗೆ ರೊಟ್ಟಿ ಮುರಿದು ಊಟಮಾಡಿ, ಬೆಳಗಾಗುವವರೆಗೆ ಅವರೊಡನೆ ಮಾತನಾಡಿ, ಅಲ್ಲಿಂದ ಹೊರಟನು.


ಅವರು ನಮ್ಮಿಂದ ಹೊರಟು ಹೋದರು. ಆದರೆ ಅವರು ನಮ್ಮವರಾಗಿರಲಿಲ್ಲ. ಏಕೆಂದರೆ ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ತೋರಿಬಂತು.


ಕ್ರಿಸ್ತ ಯೇಸುವಿನ ಕೃಪೆಯಲ್ಲಿ ನಿಮ್ಮನ್ನು ಕರೆದ ದೇವರನ್ನು ನೀವು ಇಷ್ಟು ಬೇಗನೆ ಬಿಟ್ಟು ಬೇರೆ ಸುವಾರ್ತೆಯ ಕಡೆಗೆ ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.


ಬಿಡುಗಡೆ ಹೊಂದಿದ, ಪೇತ್ರ ಮತ್ತು ಯೋಹಾನರು ವಿಶ್ವಾಸಿಗಳ ಬಳಿಗೆ ಹೋಗಿ, ತಮಗೆ ಮುಖ್ಯಯಾಜಕರೂ ಹಿರಿಯರೂ ಹೇಳಿದ್ದೆಲ್ಲವನ್ನೂ ವರದಿಮಾಡಿದರು.


ಆಗ ಆ ಇಬ್ಬರು ಶಿಷ್ಯರು ದಾರಿಯಲ್ಲಿ ನಡೆದವುಗಳನ್ನೂ ರೊಟ್ಟಿ ಮುರಿಯುವುದರಲ್ಲಿ ಅವರು ಹೇಗೆ ಯೇಸುವಿನ ಗುರುತು ಹಿಡಿದರೆಂದೂ ವಿವರಿಸಿದರು.


ಯೇಸು ಆ ಇಬ್ಬರು ಶಿಷ್ಯರೊಂದಿಗೆ ಊಟಕ್ಕೆ ಕುಳಿತುಕೊಂಡಿರಲು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ, ಮುರಿದು ಅವರಿಗೆ ಕೊಟ್ಟರು.


ಹೀಗಿರುವುದರಿಂದ ಪ್ರಿಯರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟನೆಯಿಂದಾಗಲಿ, ವಿದ್ಯೆಯಿಂದಾಗಲಿ, ಪ್ರವಾದನೆಯಿಂದಾಗಲಿ, ಉಪದೇಶದಿಂದಾಗಲಿ ಮಾತನಾಡದೆ, ಅನ್ಯಭಾಷೆಗಳಿಂದ ಮಾತನಾಡುವವನಾಗಿದ್ದರೆ, ನನ್ನಿಂದ ನಿಮಗೇನು ಪ್ರಯೋಜನ?


ಏಕೆಂದರೆ, ನೀವು ಮೊದಲನೆಯ ದಿನದಿಂದ ಇಂದಿನವರೆಗೂ ಸುವಾರ್ತೆಯಲ್ಲಿ ಸಹಭಾಗಿಗಳಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು