Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:20 - ಕನ್ನಡ ಸಮಕಾಲಿಕ ಅನುವಾದ

20 ನಿಮಗೆ ಹಿತಕರವಾದುದ್ದೆಲ್ಲವನ್ನೂ ಬೋಧಿಸಲು ನಾನು ಹಿಂಜರಿಯಲಿಲ್ಲ. ಬಹಿರಂಗದಲ್ಲಿಯೂ ಮನೆಮನೆಗಳಲ್ಲಿಯೂ ನಾನು ನಿಮಗೆ ಬೋಧಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವುದಕ್ಕೂ, ಸಭೆಯಲ್ಲಿಯೂ, ಮನೆಮನೆಯಲ್ಲಿಯೂ, ಉಪದೇಶಿಸುವದಕ್ಕೂ ಹಿಂತೆಗೆಯದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಿಮಗೆ ಹಿತಕರವಾದುದೆಲ್ಲವನ್ನು ಬಹಿರಂಗದಲ್ಲೂ ಮನೆಗಳಲ್ಲೂ ಹಿಂಜರಿಯದೆ ಬೋಧಿಸಿದ್ದೇನೆ ಹಾಗೂ ಕಲಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವದಕ್ಕೂ ಸಭೆಯಲ್ಲಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗಿಯದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಿಮಗೆ ಒಳ್ಳೆಯದನ್ನೇ ಯಾವಾಗಲೂ ಮಾಡಿದೆನು. ನಾನು ನಿಮಗೆ ಯೇಸುವಿನ ಕುರಿತಾದ ಸುವಾರ್ತೆಯನ್ನು ಬಹಿರಂಗವಾಗಿ ಜನರೆದುರಿನಲ್ಲಿ ತಿಳಿಸಿದೆನು ಮತ್ತು ನಿಮ್ಮ ಮನೆಗಳಲ್ಲಿಯೂ ಸಹ ಬೋಧಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಮಿಯಾ ತುಮ್ಚ್ಯಾ ಲೊಕಾಂಚ್ಯಾ ಇದ್ರಾಕ್ ತುಮ್ಚ್ಯಾ ಘರಾಕ್ನಿ ಯೆವ್ನ್ ತುಮ್ಕಾ ಮಜ್ಜತ್‍ಕಾರಿ ಹೊವ್ನ್ ಹೊತ್ತೊ, ಅನಿ ತುಮ್ಕಾ ಶಿಕಾಪಾಕರುಕ್ ಫಾಟಿ ಸರ್ಕುಕ್ನಾ ಹೆ ತುಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:20
18 ತಿಳಿವುಗಳ ಹೋಲಿಕೆ  

ಏಕೆಂದರೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ಬೋಧಿಸುವುದರಲ್ಲಿ ನಾನು ಹಿಂಜರಿಯಲಿಲ್ಲ.


ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು.


ದಿನದಿನವೂ ಅವರು ದೇವಾಲಯಗಳಲ್ಲಿ ಮತ್ತು ಮನೆಯಿಂದ ಮನೆಗೆ ಹೋಗಿ ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದನ್ನೂ ಬೋಧಿಸುವುದನ್ನೂ ನಿಲ್ಲಿಸಲೇ ಇಲ್ಲ.


ಈ ಕ್ರಿಸ್ತ ಯೇಸುವನ್ನೇ ನಾವು ಸಾರುವವರಾಗಿದ್ದೇವೆ; ಪ್ರತಿಯೊಬ್ಬರೂ ಕ್ರಿಸ್ತ ಯೇಸುವಿನಲ್ಲಿ ಪರಿಪಕ್ವತೆಯುಳ್ಳವರಾಗಿ ಸಮರ್ಪಿಸುವಂತೆ, ಪ್ರತಿಯೊಬ್ಬರನ್ನೂ ಎಚ್ಚರಿಸಿ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬರಿಗೂ ಬೋಧಿಸುತ್ತಿದ್ದೇವೆ.


ಆದ್ದರಿಂದ ನಾನು ಮೂರು ವರ್ಷಗಳ ಕಾಲ ಹಗಲುರಾತ್ರಿ ಕಣ್ಣೀರಿಡುತ್ತಾ ಎಡಬಿಡದೆ ನಿಮ್ಮನ್ನು ಎಚ್ಚರಿಸುತ್ತಾ ಇದ್ದೇನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡು ಎಚ್ಚರವಾಗಿರಿ.


ಏಕೆಂದರೆ ನಾನು ಪಡೆದುಕೊಂಡಿದ್ದರಲ್ಲಿ ಬಹು ಪ್ರಾಮುಖ್ಯವಾದದ್ದನ್ನೇ ನಿಮಗೆ ಕೊಟ್ಟಿದ್ದೇನೆ. ಅದೇನೆಂದರೆ, ಪವಿತ್ರ ವೇದದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತರು,


ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಯೆಹೋವ ದೇವರು ನನಗೆ ಆಜ್ಞಾಪಿಸಿದ ಆಜ್ಞಾವಿಧಿಗಳನ್ನೂ ನಿಮಗೆ ಬೋಧಿಸಿದ್ದೇನೆ.


ಹೀಗಿರುವುದರಿಂದ ಪ್ರಿಯರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟನೆಯಿಂದಾಗಲಿ, ವಿದ್ಯೆಯಿಂದಾಗಲಿ, ಪ್ರವಾದನೆಯಿಂದಾಗಲಿ, ಉಪದೇಶದಿಂದಾಗಲಿ ಮಾತನಾಡದೆ, ಅನ್ಯಭಾಷೆಗಳಿಂದ ಮಾತನಾಡುವವನಾಗಿದ್ದರೆ, ನನ್ನಿಂದ ನಿಮಗೇನು ಪ್ರಯೋಜನ?


ಸರ್ವರ ಪ್ರಯೋಜನಕ್ಕಾಗಿ ಪವಿತ್ರಾತ್ಮರ ವರಗಳನ್ನು ಪ್ರತಿಯೊಬ್ಬರಿಗೆ ಕೊಡಲಾಗಿದೆ.


ಪ್ರತಿದಿನವೂ ದೇವಾಲಯದಲ್ಲಿ ಒಮ್ಮನಸ್ಸಿನಿಂದ ಸಭೆ ಕೂಡಿಬರುವುದನ್ನು ಕ್ರಮವಾಗಿ ಮುಂದುವರೆಸಿದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಆನಂದದಿಂದಲೂ ಸರಳ ಹೃದಯದಿಂದಲೂ ಊಟಮಾಡುತ್ತಿದ್ದರು.


ಸಾಮ್ಯವಿಲ್ಲದೆ ಯೇಸು ಅವರಿಗೆ ಏನೂ ಹೇಳುತ್ತಿರಲಿಲ್ಲ. ಆದರೆ ಯೇಸು ತಮ್ಮ ಶಿಷ್ಯರೊಡನೆ ಏಕಾಂತವಾಗಿದ್ದಾಗ ಮಾತ್ರ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.


ಕಡೆಯದಾಗಿ ನನ್ನ ಪ್ರಿಯರೇ, ಕರ್ತನಲ್ಲಿ ಆನಂದಿಸಿರಿ. ಬರೆದದ್ದನ್ನೇ ನಿಮಗೆ ಬರೆಯುವುದರಲ್ಲಿ ನನಗೆ ಬೇಸರವಿಲ್ಲ, ಅದು ನಿಮಗೆ ಸುರಕ್ಷಿತವೇ.


ತನ್ನ ಹೆಂಡತಿಯ ಪೂರ್ಣ ತಿಳುವಳಿಕೆಯಿಂದ, ಬಂದ ಹಣದಲ್ಲಿ ಒಂದು ಭಾಗವನ್ನು ತನಗಾಗಿ ಇಟ್ಟುಕೊಂಡು, ಉಳಿದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿಟ್ಟನು.


“ಯೆಹೋವ ದೇವರು ಹೀಗೆ ಹೇಳುತ್ತಾನೆ: ಯೆಹೋವ ದೇವರು ಆಲಯದ ಅಂಗಳದಲ್ಲಿ ನಿಂತುಕೊಂಡು, ಯೆಹೋವ ದೇವರ ಆಲಯದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು. ಒಂದು ಮಾತಾದರೂ ಕಡಿಮೆ ಮಾಡಬೇಡ.


ಆಗ ಪ್ರವಾದಿಯಾದ ಯೆರೆಮೀಯನು ಅವರಿಗೆ, “ನಾನು ಕೇಳಿದ್ದೇನೆ, ನಿಮ್ಮ ಮಾತುಗಳ ಪ್ರಕಾರ ನಿಮ್ಮ ದೇವರಾದ ಯೆಹೋವ ದೇವರಿಗೆ ಪ್ರಾರ್ಥನೆ ಮಾಡುತ್ತೇನೆ. ಯೆಹೋವ ದೇವರು ನಿಮಗೆ ಯಾವ ಉತ್ತರವನ್ನು ಕೊಡುವರೋ, ಅದನ್ನು ನಿಮಗೆ ತಿಳಿಸುವೆನು. ಒಂದು ಮಾತನ್ನಾದರೂ ನಿಮ್ಮಿಂದ ಹಿಂದೆಗೆಯುವುದಿಲ್ಲ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು