Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:25 - ಕನ್ನಡ ಸಮಕಾಲಿಕ ಅನುವಾದ

25 “ನಿಮ್ಮ ಮಧ್ಯದಲ್ಲಿ ನಾನು ದೇವರ ರಾಜ್ಯದ ಬಗ್ಗೆ ಬೋಧಿಸುತ್ತಾ ಇದ್ದೆನು. ನಿಮ್ಮಲ್ಲಿ ಯಾರೂ ನನ್ನ ಮುಖವನ್ನು ಇನ್ನೊಮ್ಮೆ ಕಾಣಲಾರಿರಿ ಎಂದು ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇಗೋ, ಇಷ್ಟು ದಿನ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ನೋಡುವುದಿಲ್ಲವೆಂದು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇಗೋ, ಇಷ್ಟು ದಿನ ದೇವರ ಸಾಮ್ರಾಜ್ಯವನ್ನು ಪ್ರಕಟಿಸುತ್ತಾ ನಿಮ್ಮ ಮಧ್ಯೆ ಸಂಚರಿಸಿದ ನನ್ನ ಮುಖವನ್ನು ಇನ್ನು ಮುಂದೆ ನೀವು ಯಾರೂ ಕಾಣಲಾರಿರಿ ಎಂದು ನಾನು ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇಗೋ, ಇಷ್ಟು ದಿವಸ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ಈಗ ನನಗೆ ಕಿವಿಗೊಡಿ. ನಿಮ್ಮಲ್ಲಿ ಒಬ್ಬರಾಗಲಿ ನನ್ನನ್ನು ಮತ್ತೆಂದಿಗೂ ನೋಡುವುದಿಲ್ಲವೆಂದು ನನಗೆ ಗೊತ್ತಿದೆ. ನಿಮ್ಮೊಂದಿಗೆ ಇದ್ದ ಸಮಯದಲ್ಲೆಲ್ಲಾ ದೇವರ ರಾಜ್ಯದ ವಿಷಯವಾದ ಸುವಾರ್ತೆಯನ್ನು ನಾನು ನಿಮಗೆ ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 “ಅತ್ತಾ ಮಾಜ್ಯಾಕ್ಡೆ ಆಯ್ಕಾ ತುಮ್ಚೊ ಎಕ್ಲೊಬಿ ಮಾಕಾ ಅನಿ ಕನ್ನಾಬಿ ಬಗಿನಾಸಿ ಮನ್ತಲೆ ಮಾಕಾ ಗೊತ್ತ್ ಹಾಯ್, ತುಮ್ಚ್ಯಾ ವಾಂಗ್ಡಾ ಹೊತ್ತ್ಯಾ ವೆಳಾರುಚ್ ದೆವಾಚ್ಯಾ ವಿಶಯಾಚೆ ಖಬರ್ ಮಿಯಾ ತುಮ್ಕಾ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:25
13 ತಿಳಿವುಗಳ ಹೋಲಿಕೆ  

ಅವನು ಧೈರ್ಯದಿಂದ ಯಾವ ಅಡ್ಡಿ ಆತಂಕಗಳಿಲ್ಲದೇ ದೇವರ ರಾಜ್ಯವನ್ನು ಪ್ರಕಟಿಸುತ್ತಾ, ಕರ್ತ ಆಗಿರುವ ಯೇಸುಕ್ರಿಸ್ತರ ವಿಷಯವಾಗಿ ಉಪದೇಶ ಮಾಡುತ್ತಾ ಇದ್ದನು.


“ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ,” ಎಂದು ಅವನು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ದುಃಖಗೊಂಡು, ಅವನೊಂದಿಗೆ ನೌಕೆಯವರೆಗೆ ಹೋದರು.


ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ, ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರಲ್ಲಿದ್ದ ಸಕಲ ವಿಧವಾದ ವ್ಯಾಧಿಗಳನ್ನೂ ಸಕಲ ವಿಧವಾದ ಬೇನೆಗಳನ್ನೂ ಗುಣಪಡಿಸುತ್ತಾ ಬಂದರು.


ನಿಮಗಾಗಿಯೂ ಲವೊದಿಕೀಯದವರಿಗಾಗಿಯೂ ವೈಯಕ್ತಿಕವಾಗಿ ಭೇಟಿಯಾಗದವರಿಗಾಗಿಯೂ ನಾನು ಎಷ್ಟು ಶ್ರಮಿಸುತ್ತಿದ್ದೇನೆ ಎಂಬುದನ್ನು ನೀವು ತಿಳಿದಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.


ಆಗ ಕ್ರಿಸ್ತ ಯೇಸುವಿನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ.


ಈಗಲಾದರೋ ಈ ಪ್ರದೇಶದಲ್ಲಿ ನನಗೆ ಅವಕಾಶವಿಲ್ಲದಿರುವುದರಿಂದಲೂ ಅನೇಕ ವರ್ಷಗಳಿಂದ ನಿಮ್ಮನ್ನು ಸಂದರ್ಶಿಸಬೇಕೆಂಬ ಹಂಬಲವಿರುವುದರಿಂದಲೂ


ಆದರೆ ಫಿಲಿಪ್ಪನು ದೇವರ ರಾಜ್ಯದ ಶುಭವರ್ತಮಾನವನ್ನೂ ಕ್ರಿಸ್ತ ಯೇಸುವಿನ ಹೆಸರನ್ನೂ ಪ್ರಕಟಿಸಿದಾಗ ಅಲ್ಲಿಯ ಸ್ತ್ರೀ ಪುರುಷರು ಅದನ್ನು ನಂಬಿ ದೀಕ್ಷಾಸ್ನಾನವನ್ನು ಹೊಂದಿದರು.


“ಮೋಶೆಯ ನಿಯಮವೂ ಪ್ರವಾದನೆಗಳೂ ಯೋಹಾನನವರೆಗೆ ಇದ್ದವು. ಅಂದಿನಿಂದ, ದೇವರ ರಾಜ್ಯವು ಸಾರಲಾಗಿದೆ. ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಿದ್ದಾನೆ.


ಯೇಸು ಅವನಿಗೆ, “ಸತ್ತವರೇ ತಮ್ಮವರಲ್ಲಿ ಸತ್ತುಹೋದವರನ್ನು ಸಮಾಧಿ ಮಾಡಿಕೊಳ್ಳಲಿ, ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು,” ಎಂದರು.


ಯೇಸು ಅವರಿಗೆ, “ಆದಕಾರಣ ಪರಲೋಕ ರಾಜ್ಯದ ಶಿಷ್ಯನಾಗಿರುವ ಪ್ರತಿಯೊಬ್ಬ ನಿಯಮ ಬೋಧಕನು, ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ,” ಎಂದರು.


ಯಾರಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ, ಕೆಡುಕನು ಬಂದು ಅವರ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದುಹಾಕುತ್ತಾನೆ, ಇದೇ ದಾರಿಯ ಪಕ್ಕದಲ್ಲಿ ಬಿತ್ತಲಾಗಿರುವ ಬೀಜವಾಗಿರುವದು.


ನೀವು ಹೋಗುತ್ತಾ, ‘ಪರಲೋಕ ರಾಜ್ಯವು ಸಮೀಪವಾಯಿತು,’ ಎಂದು ಸಾರಿ ಹೇಳಿರಿ.


ಅಂದಿನಿಂದ ಯೇಸು, “ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಬೋಧಿಸತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು