Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:26 - ಕನ್ನಡ ಸಮಕಾಲಿಕ ಅನುವಾದ

26 ಆದಕಾರಣ ನಾನು ಎಲ್ಲಾ ಮನುಷ್ಯರ ರಕ್ತದ ಹೊಣೆಯಿಂದ ವಿಮುಕ್ತನಾಗಿದ್ದೇನೆ ಎಂದು ಈ ದಿನ ಸಾಕ್ಷಿಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದಕಾರಣ ನಾನು ಈ ಹೊತ್ತು ಖಂಡಿತವಾಗಿ ಹೇಳುತ್ತೇನೆ, ನಿಮ್ಮಲ್ಲಿ ಯಾರಾದರೂ ನಾಶವಾದರೆ ಅದು ನನ್ನ ತಪ್ಪಿನಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇಂತಿರಲು ನಾನು ನಿಮಗೆ ಸಾರಿ ಹೇಳುವುದೇನೆಂದರೆ - “ನಿಮ್ಮಲ್ಲಿ ಯಾರಾದರು ನಾಶವಾದರೆ, ಅದಕ್ಕೆ ನಾನು ಹೊಣೆಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದಕಾರಣ ನಾನು ಈಹೊತ್ತು ಪ್ರಮಾಣವಾಗಿ ಹೇಳುತ್ತೇನೆ, ನಿಮ್ಮಲ್ಲಿ ಯಾರಾದರೂ ನಾಶವಾದರೆ ಅದು ನನ್ನ ದೋಷವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದ್ದರಿಂದ ಇಂದು ನಾನು ನಿಮಗೆ ದೃಢವಾಗಿ ಹೇಳಬಹುದಾದ ಒಂದು ಸಂಗತಿಯೇನೆಂದರೆ, ನಿಮ್ಮಲ್ಲಿ ಯಾರಾದರೂ ರಕ್ಷಣೆ ಹೊಂದಿಲ್ಲದಿದ್ದರೆ ಅದಕ್ಕೆ ನಾನು ಹೊಣೆಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತಸೆ ಹೊವ್ನ್, ಮಿಯಾ ಖರೆಚ್ ಸಾಂಗ್ತಾ ತುಮ್ಚ್ಯಾತ್ ಕೊನ್‍ತರಿಬಿ ನಾಸ್ ಹೊವ್ನ್ ಗೆಲ್ಯಾಕ್ ಮಿಯಾ ತೆಕಾ ಹೊನೆಗಾರ್ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:26
14 ತಿಳಿವುಗಳ ಹೋಲಿಕೆ  

ಆದರೆ ಯೆಹೂದ್ಯರು ಪೌಲನನ್ನು ವಿರೋಧಿಸಿ ದೂಷಿಸಿದಾಗ, ಅವನು ಅವರನ್ನು ಪ್ರತಿಭಟಿಸುವಂತೆ ತನ್ನ ಬಟ್ಟೆಗಳನ್ನು ಝಾಡಿಸಿ, “ನಿಮ್ಮ ರಕ್ತವು ನಿಮ್ಮ ತಲೆಯ ಮೇಲೆ ಇರಲಿ. ನಿಮ್ಮ ವಿನಾಶಕ್ಕೆ ನೀವೇ ಹೊಣೆ. ಅದಕ್ಕೆ ನಾನು ಜವಾಬ್ದಾರನಲ್ಲ, ಇಂದಿನಿಂದ ನಾನು ಶುದ್ಧಮನಸ್ಸುಳ್ಳವನಾಗಿ ಯೆಹೂದ್ಯರಲ್ಲದವರ ಬಳಿಗೆ ಹೋಗುತ್ತೇನೆ,” ಎಂದನು.


ಯೇಸು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾಗ ಅವರ ಸಂಗಡ ಇದ್ದ ಜನರೇ ಈ ವಿಷಯವನ್ನು ಸಾರುತ್ತಿದ್ದರು.


ಅವರು ತಮಗೆ ಸಾಧ್ಯವಾದಷ್ಟು ಕೊಟ್ಟಿದ್ದಾರೆ. ಮಾತ್ರವಲ್ಲದೇ ತಮ್ಮ ಶಕ್ತಿ ಮೀರಿ ಕೊಟ್ಟಿದ್ದಾರೆ ಎಂಬುದಕ್ಕೆ ನಾನೇ ಸಾಕ್ಷಿಯಾಗಿದ್ದೇನೆ.


ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳ ಕೊಡಿರಿ. ನಾವು ಯಾರಿಗೂ ಅನ್ಯಾಯ ಮಾಡಲಿಲ್ಲ, ಯಾರಿಗೂ ನಾವು ಕೇಡು ಬಗೆಯಲಿಲ್ಲ, ನಾವು ಸ್ವಂತ ಲಾಭಕ್ಕಾಗಿ ಯಾರನ್ನೂ ದುಡಿಸಿಕೊಳ್ಳಲಿಲ್ಲ.


ನಿಮಗೆ ಶ್ರಮೆ ಪಡಿಸಬಾರದೆಂದು ನಾನು ಕೊರಿಂಥಕ್ಕೆ ಹಿಂದಿರುಗಿ ಬರಲಿಲ್ಲ. ಇದಕ್ಕೆ ದೇವರೇ ಸಾಕ್ಷಿ.


ಅವರು ದೇವರಿಗಾಗಿ ಆಸಕ್ತರು ಎಂಬುದಾಗಿ ನಾನು ಸಾಕ್ಷಿಕೊಡುತ್ತೇನೆ. ಆದರೆ ಅವರ ಆಸಕ್ತಿಯು ಜ್ಞಾನಕ್ಕೆ ಅನುಸಾರವಾದದ್ದು ಅಲ್ಲ.


ಇದನ್ನು ಕಣ್ಣಾರೆ ಕಂಡವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವಾದದ್ದು, ನೀವು ಸಹ ನಂಬುವಂತೆ ತಾನು ಹೇಳಿರುವುದು ಸತ್ಯವೆಂದು ಅವನು ಬಲ್ಲನು.


ಈಗಲೂ ಪರಲೋಕದಲ್ಲಿ ನನಗೆ ಒಬ್ಬ ಸಾಕ್ಷಿ ಇದ್ದಾರೆ; ಹೌದು, ನನ್ನ ವಕೀಲರು ಉನ್ನತದಲ್ಲಿದ್ದಾರೆ.


ದಾವೀದನು ಅದನ್ನು ಕೇಳಿದಾಗ, “ನೇರನ ಮಗನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಯೆಹೋವ ದೇವರ ಮುಂದೆ ನಿರಪರಾಧಿಯಾಗಿದ್ದೇವೆ.


ಅವಸರದಿಂದ ಯಾರ ಮೇಲೆಯೂ ಹಸ್ತವನ್ನಿಟ್ಟು, ಸಭಾ ಹಿರಿಯರನ್ನಾಗಿ ನೇಮಿಸಬೇಡ. ಇತರರ ಪಾಪಗಳಲ್ಲಿ ಪಾಲುಗಾರನಾಗಬೇಡ. ನಿನ್ನನ್ನು ಶುದ್ಧನಾಗಿ ಕಾಪಾಡಿಕೋ.


ನಾನು ಈ ಹೊತ್ತು ಅದನ್ನು ನಿಮಗೆ ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಯೆಹೋವ ದೇವರ ಶಬ್ದವನ್ನಾದರೂ ಅವರು ಯಾವುದರ ವಿಷಯವಾಗಿ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೋ ಅದರಲ್ಲಿ ಯಾವುದನ್ನಾದರೂ ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು