Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:29 - ಕನ್ನಡ ಸಮಕಾಲಿಕ ಅನುವಾದ

29 ನಾನು ಹೋದ ನಂತರ ಕ್ರೂರ ತೋಳಗಳು ನಿಮ್ಮ ಮಧ್ಯದಲ್ಲಿ ಪ್ರವೇಶಿಸಿ ಮಂದೆಯನ್ನು ಹಾಳುಮಾಡದೆ ಬಿಡುವುದಿಲ್ಲ ಎಂದು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವುದೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನಾನು ಹೋದ ಬಳಿಕ ಕ್ರೂರವಾದ ತೋಳಗಳು ನಿಮ್ಮ ಮಧ್ಯೆ ನುಗ್ಗುವುವು ಎಂದು ನಾನು ಬಲ್ಲೆ. ಅವು ಮಂದೆಗೆ ಹಾನಿಮಾಡದೆ ಬಿಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನಾನು ಹೊರಟುಹೋದ ಮೇಲೆ ಬೇರೆಯವರು ನಿಮ್ಮ ಸಭೆಗೆ ಬರುತ್ತಾರೆಂದು ನನಗೆ ಗೊತ್ತಿದೆ. ಕ್ರೂರವಾದ ತೋಳಗಳಂತಿರುವ ಅವರು ಮಂದೆಯನ್ನು ನಾಶಮಾಡಲು ಪ್ರಯತ್ನಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಮಿಯಾ ಸೊಡುನ್ ಗೆಲ್ಲ್ಯಾ ಮಾನಾ ಕ್ರುರ್ ಝುಲ್ ಕುತ್ರಿ ತುಮ್ಚ್ಯಾಕ್ಡೆ ಯೆತಾತ್ ಅನಿ ತೆನಿ ಬಕ್ರ್ಯಾಂಚ್ಯಾ ತಾಂಡ್ಯಾಕ್ನಿ ಸೊಡಿನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:29
18 ತಿಳಿವುಗಳ ಹೋಲಿಕೆ  

“ಕುರಿಯ ವೇಷಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆ. ಏಕೆಂದರೆ ಅವರು ಒಳಗೆ ಕ್ರೂರವಾದ ತೋಳಗಳಾಗಿದ್ದಾರೆ.


ಆದರೆ ಆ ಕಾಲದಲ್ಲಿ ಸುಳ್ಳು ಪ್ರವಾದಿಗಳು ಸಹ ಜನರಲ್ಲಿ ಕಾಣಿಸಿಕೊಂಡರು. ಅದೇ ಪ್ರಕಾರ ನಿಮ್ಮಲ್ಲಿಯೂ ಈಗ ಸುಳ್ಳು ಬೋಧಕರು ಕಾಣಿಸಿಕೊಳ್ಳುವರು. ಅಂಥವರು ಹಾನಿಕರವಾದ ಸುಳ್ಳು ಬೋಧನೆಗಳನ್ನು ರಹಸ್ಯವಾಗಿ ಸಭೆಯೊಳಗೆ ತರುವರು. ತಮ್ಮನ್ನು ಕೊಂಡುಕೊಂಡ ಸಾರ್ವಭೌಮ ಕರ್ತ ಆಗಿರುವವರನ್ನೇ ಅಲ್ಲಗಳೆಯುವರು. ಹೀಗೆ ಅವರು ತಮ್ಮ ಮೇಲೆ ವಿನಾಶವನ್ನು ತಾವೇ ಬರಮಾಡಿಕೊಳ್ಳುವರು.


ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.


ಕೂಲಿಯಾಳು ಕುರಿಗಳ ಕುರುಬನಲ್ಲ; ಅವನು ತೋಳ ಬರುವುದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಹಿಂಡನ್ನು ಚದರಿಸುತ್ತದೆ.


ಹೋಗಿರಿ! ತೋಳಗಳ ಮಧ್ಯದಲ್ಲಿ ಕುರಿಮರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ.


“ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದ್ದರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


“ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಕಷ್ಟ! ಖಡ್ಗವು ಅವನ ತೋಳಿನ ಮೇಲೆಯೂ, ಅವನ ಬಲಗಣ್ಣಿನ ಮೇಲೆಯೂ ಇರುವುದು. ಅವನ ತೋಳು ಪೂರ್ತಿಯಾಗಿ ಒಣಗುವುದು. ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವುದು.”


“ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಕಷ್ಟ!” ಎಂದು ಯೆಹೋವ ದೇವರು ಹೇಳುತ್ತಾರೆ.


ಅವಳ ಪ್ರಮುಖರು ಗರ್ಜಿಸುವ ಸಿಂಹಗಳು. ಅವಳ ನ್ಯಾಯಾಧಿಪತಿಗಳು ಸಂಜೆಯ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.


ಚೀಯೋನೇ, ಕಣ್ಣೆತ್ತು, ಉತ್ತರ ದಿಕ್ಕಿನಿಂದ ಬರುವವರನ್ನು ನೋಡು, ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡು ಎಲ್ಲಿ?


ಅಲ್ಲಿಯ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ಪ್ರಾಣಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿದ್ದಾರೆ.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನಿಶ್ಚಯವಾಗಿ ನನ್ನ ಮಂದೆಯು ಕೊಳ್ಳೆಯಾದುದರಿಂದಲೂ ನನ್ನ ಮಂದೆಯು ಕುರುಬನಿಲ್ಲದೆ ಕಾಡುಮೃಗಗಳಿಗೆಲ್ಲಾ ಆಹಾರವಾದದ್ದರಿಂದಲೂ ನನ್ನ ಕುರುಬರು ನನ್ನ ಮಂದೆಯನ್ನು ಹುಡುಕದೆ ಇದ್ದುದರಿಂದಲೂ ಕುರುಬರು ತಮ್ಮನ್ನು ಮೇಯಿಸಿಕೊಂಡರೇ ಹೊರತು ತಮ್ಮ ಕುರಿಗಳನ್ನು ಮೇಯಿಸದೆ ಇದ್ದುದರಿಂದಲೂ


ಅವರು ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವುದು, ಆದರೆ ಅನೇಕರು ವಂಚನೆಯ ನುಡಿಗಳಿಂದ ಅವರನ್ನು ಸೇರಿಕೊಳ್ಳುವರು.


“ಚಿಕ್ಕ ಹಿಂಡೇ, ಭಯಪಡಬೇಡ, ಏಕೆಂದರೆ ನಿಮ್ಮ ತಂದೆಯು ತಮ್ಮ ರಾಜ್ಯವನ್ನು ನಿಮಗೆ ಕೊಡುವುದಕ್ಕೆ ಮೆಚ್ಚಿದ್ದಾರೆ.


ಅವರು ಉಪಹಾರ ಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ, “ಯೋಹಾನನ ಮಗ ಸೀಮೋನನೇ, ನೀನು ಇವರಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಯೇಸುವಿಗೆ, “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ,” ಎಂದನು. ಅದಕ್ಕೆ ಯೇಸು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು,” ಎಂದು ಹೇಳಿದರು.


ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ, ಆದರೆ ದೇವರ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆ ಮಾಡಿರಿ.


“ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರು,” ಎಂದು ಅಪೊಸ್ತಲರು ನಿಮಗೆ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು