Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:3 - ಕನ್ನಡ ಸಮಕಾಲಿಕ ಅನುವಾದ

3 ಇಲ್ಲಿ ಮೂರು ತಿಂಗಳುಗಳ ಕಾಲ ಇದ್ದ ಮೇಲೆ, ಅವನು ಸಿರಿಯಕ್ಕೆ ಪ್ರಯಾಣ ಮಾಡಬೇಕೆಂದು ಯೋಚಿಸುತ್ತಿದ್ದಾಗ ಅವನಿಗೆ ವಿರೋಧವಾಗಿ ಯೆಹೂದ್ಯರು ಒಳಸಂಚು ಮಾಡಿದ್ದು ಅವನಿಗೆ ತಿಳಿದು ಬಂದದ್ದರಿಂದ ಮಕೆದೋನ್ಯ ಮಾರ್ಗವಾಗಿ ಹಿಂತಿರುಗಿ ಹೋಗಲು ನಿರ್ಣಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಲ್ಲಿ ಮೂರು ತಿಂಗಳು ಕಳೆದ ನಂತರ ಸಿರಿಯ ದೇಶಕ್ಕೆ ಸಮುದ್ರಮಾರ್ಗವಾಗಿ ಹೋಗಬೇಕೆಂದಿದ್ದಾಗ ಅವನಿಗೆ ವಿರುದ್ಧವಾಗಿ ಯೆಹೂದ್ಯರು ಒಳಸಂಚುಮಾಡಿದ್ದು ಅವನಿಗೆ ತಿಳಿದು ಬಂದ್ದುದರಿಂದ ಅವನು ಮಕೆದೋನ್ಯದ ಮಾರ್ಗವಾಗಿ ಹಿಂತಿರುಗಿ ಹೋಗುವುದಕ್ಕೆ ತೀರ್ಮಾನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಲ್ಲಿ ಅವನು ಮೂರು ತಿಂಗಳು ಕಳೆದನು. ಬಳಿಕ ಸಿರಿಯಕ್ಕೆ ನೌಕಾಯಾನ ಮಾಡಲು ಸಿದ್ಧನಾಗುತ್ತಿದ್ದಾಗ , ಯೆಹೂದ್ಯರು ಅವನ ವಿರುದ್ಧ ಒಳಸಂಚು ಮಾಡುತ್ತಿರುವುದಾಗಿ ತಿಳಿದುಬಂದಿತು. ಆದುದರಿಂದ ಅವನು ಮಕೆದೋನಿಯದ ಮಾರ್ಗವಾಗಿ ಹಿಂದಿರುಗಲು ನಿರ್ಧರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅಲ್ಲಿ ಮೂರು ತಿಂಗಳು ಕಳೆದ ಮೇಲೆ ಸಿರಿಯ ದೇಶಕ್ಕೆ ಸಮುದ್ರಮಾರ್ಗವಾಗಿ ಹೋಗಬೇಕೆಂದಿದ್ದಾಗ ಅವನಿಗೆ ವಿರುದ್ಧವಾಗಿ ಯೆಹೂದ್ಯರಲ್ಲಿ ಒಳಸಂಚು ಹುಟ್ಟಿದ್ದರಿಂದ ಅವನು ಮಕೆದೋನ್ಯದ ಮೇಲೆ ಹಿಂತಿರುಗಿ ಹೋಗುವದಕ್ಕೆ ತೀರ್ಮಾನಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಲ್ಲಿ ಅವನು ಮೂರು ತಿಂಗಳವರೆಗೆ ಇದ್ದನು. ಅವನು ಸಿರಿಯಕ್ಕೆ ನೌಕಾಯಾನ ಮಾಡಲು ಸಿದ್ಧನಾಗಿದ್ದನು. ಆದರೆ ಕೆಲವು ಯೆಹೂದ್ಯರು ಅವನಿಗೆ ವಿರೋಧವಾಗಿ ಯೋಜನೆ ಮಾಡಿದರು. ಆದ್ದರಿಂದ ಪೌಲನು ಸಿರಿಯಕ್ಕೆ ಮಕೆದೋನಿಯದ ಮೂಲಕ ಹಿಂತಿರುಗಿ ಹೋಗಲು ನಿರ್ಧರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಪಾವ್ಲು ಥೈ ತಿನ್ ಮ್ಹೈನೆ ಪತರ್ ಹೊತ್ತೊ, ತೊ ಸಿರಿಯಾ ಮನ್ತಲ್ಯಾ ಶಾರಾಕ್ ಜಾವ್ಕ್ ತಯಾರ್ ಹೊವ್ನ್ ರ್‍ಹಾತಾ, ಹೊಲ್ಯಾರ್ ಉಲ್ಲ್ಯಾ ಜುದೆವಾಂಚ್ಯಾ ಲೊಕಾನಿ ತೆಕಾ ವಿರೊಧ್ ಹೊವ್ನ್ ಯವ್ಜನ್ ಕರ್‍ಲ್ಯಾನಿ, ತೆಚ್ಯಾಸಾಟ್ನಿ ಪಾವ್ಲುನ್ ಸಿರಿಯಾ ಮನ್ತಲ್ಲ್ಯಾ ಶಾರಾಕ್ ಮೆಸೆದೊನಿಯಾಕ್ನಾ ಪಾಟಿ ಪರ್ತುನ್ ಜಾವ್ಚೆ ಮನುನ್ ನಿರ್ಧಾರ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:3
19 ತಿಳಿವುಗಳ ಹೋಲಿಕೆ  

ಯೆಹೂದ್ಯರ ಒಳಸಂಚುಗಳಿಂದ ನಾನು ಕಠಿಣ ಪರೀಕ್ಷೆಗಳಿಗೆ ಒಳಗಾಗಿದ್ದರೂ ಬಹಳ ದೀನತೆಯಿಂದಲೂ ಕಣ್ಣೀರಿನಿಂದಲೂ ಕರ್ತ ಯೇಸುವಿನ ಸೇವೆ ಮಾಡಿದೆನು.


ಊರಿಂದೂರಿಗೆ ಪ್ರಯಾಣ ಮಾಡುತ್ತಲೇ ಇದ್ದೆನು, ನದಿಗಳಿಂದ ಅಪಾಯ, ದಾರಿಗಳ್ಳರಿಂದ ಅಪಾಯ, ನನ್ನ ಸ್ವಂತ ಜನರಿಂದ ಅಪಾಯ, ಯೆಹೂದ್ಯರಲ್ಲದವರಿಂದ ಅಪಾಯ, ಪಟ್ಟಣಗಳಲ್ಲಿ ಅಪಾಯ, ಹೊರ ಪ್ರದೇಶಗಳಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ ಮತ್ತು ಸುಳ್ಳು ಸಹೋದರರಿಂದ ಅಪಾಯಗಳನ್ನೆಲ್ಲಾ ನಾನು ಎದುರಿಸಿದೆನು.


ತಮಗೆ ದಯೆತೋರಿ ಪೌಲನನ್ನು ಕೂಡಲೇ ಯೆರೂಸಲೇಮಿಗೆ ವರ್ಗಾಯಿಸಬೇಕೆಂದು ಫೆಸ್ತನನ್ನು ಬೇಡಿಕೊಂಡರು. ಏಕೆಂದರೆ ಪೌಲನು ಹಿಂದಿರುಗುವಾಗ ಮಾರ್ಗದಲ್ಲೇ ಅವನನ್ನು ಕೊಲ್ಲಬೇಕೆಂದು ಹೊಂಚುಹಾಕಿಕೊಂಡಿದ್ದರು.


ನಾವು ಮಕೆದೋನ್ಯಕ್ಕೆ ಬಂದಿದ್ದಾಗ ನಮ್ಮ ದೇಹಕ್ಕೆ ವಿಶ್ರಾಂತಿ ದೊರೆಯಲಿಲ್ಲ. ಎಲ್ಲಾ ವಿಧದಲ್ಲಿಯೂ ಒತ್ತಡಗಳು: ಹೊರಗೆ ಹೋರಾಟ, ಒಳಗೆ ಅಂಜಿಕೆ.


ಆಮೇಲೆ ಸಿರಿಯಾ ಮತ್ತು ಕಿಲಿಕ್ಯ ಪ್ರಾಂತಗಳಿಗೆ ಬಂದೆನು.


ಈ ಭರವಸೆಯಿಂದ, ನಾನು ನಿಮ್ಮನ್ನು ಮೊದಲು ಸಂದರ್ಶಿಸಿ, ನಿಮಗೆ ಎರಡರಷ್ಟು ಉಪಯುಕ್ತತೆಯನ್ನು ಹೊಂದುವಂತೆ ಯೋಚನೆ ಮಾಡಿದ್ದೆನು.


ಸೈಪ್ರಸ್ ಹತ್ತಿರ ಬಂದು ಅದರ ದಕ್ಷಿಣಕ್ಕೆ ಪ್ರಯಾಣಮಾಡಿ ಸಿರಿಯಕ್ಕೆ ಹೋದೆವು. ನಮ್ಮ ನೌಕೆಯಲ್ಲಿದ್ದ ಸರಕುಗಳನ್ನು ಇಳಿಸಬೇಕಾಗಿದ್ದ ಟೈರ್ ಎಂಬಲ್ಲಿ ಬಂದು ಇಳಿದೆವು.


ಇದೆಲ್ಲ ಸಂಭವಿಸಿದ ನಂತರ ಮಕೆದೋನ್ಯ ಮತ್ತು ಅಖಾಯ ಮಾರ್ಗವಾಗಿ ಯೆರೂಸಲೇಮಿಗೆ ಹೋಗಲು ಪೌಲನು ಮನಸ್ಸಿನಲ್ಲಿ ನಿರ್ಧರಿಸಿದನು. ಅವನು, “ಅಲ್ಲಿಗೆ ಹೋದ ನಂತರ ನಾನು ರೋಮ್ ಪಟ್ಟಣವನ್ನು ಸಂದರ್ಶಿಸಬೇಕು,” ಎಂದನು.


ಇನ್ನು ಕೆಲವು ದಿನ ಪೌಲನು ಅಲ್ಲಿಯೇ ಉಳಿದುಕೊಂಡನು. ಅನಂತರ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಕೆಂಖ್ರೆಯ ಎಂಬ ಸ್ಥಳದಲ್ಲಿ ತಲೆ ಕೂದಲನ್ನು ಕ್ಷೌರಮಾಡಿಸಿಕೊಂಡು ತಾನು ಹೊತ್ತ ಹರಕೆ ಪೂರೈಸಿದ ಮೇಲೆ ಸಿರಿಯಕ್ಕೆ ನೌಕೆ ಪ್ರಯಾಣಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲರು ಅವನ ಜೊತೆಯಲ್ಲಿ ಹೊರಟರು.


ಆ ರಾತ್ರಿಯಲ್ಲಿ ಪೌಲನಿಗೆ ಒಂದು ದರ್ಶನವಾಯಿತು. ಅದರಲ್ಲಿ ಮಕೆದೋನ್ಯದವನೊಬ್ಬನು ನಿಂತುಕೊಂಡು, “ಮಕೆದೋನ್ಯ ದಾಟಿ ಬಂದು ನಮಗೆ ಸಹಾಯಮಾಡು,” ಎಂದು ಅವನನ್ನು ಬೇಡಿಕೊಂಡನು.


“ಏಕೆಂದರೆ ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ. ಬೇಟೆಗಾರನ ಹಾಗೆ ಹೊಂಚುಹಾಕುತ್ತಾರೆ; ಪಕ್ಷಿಗಳನ್ನು ಬಲೆಗೆ ಬೀಳಿಸುವ ಮನುಷ್ಯರಂತೆ ಕಾಯುತ್ತಿದ್ದಾರೆ ಮತ್ತು ಜನರನ್ನು ಹಿಡಿಯಲು ಬಲೆ ಹಾಕುತ್ತಾರೆ.


ಒಂದು ವೇಳೆ ಅವರು ನಿನಗೆ, “ನಮ್ಮೊಂದಿಗೆ ಬಾ, ಜನರ ರಕ್ತಕ್ಕಾಗಿ ಒಳಸಂಚು ಮಾಡೋಣ, ನಿರಪರಾಧಿಯ ರಕ್ತಕ್ಕಾಗಿ;


ನಾವು ಯೆರೂಸಲೇಮಿಗೆ ಹೋದ ಮೊದಲನೆಯ ತಿಂಗಳ, ಹನ್ನೆರಡನೆಯ ದಿವಸದಲ್ಲಿ ಅಹಾವ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದುದರಿಂದ, ದೇವರು ಶತ್ರುವಿನ ಕೈಗೂ, ಮಾರ್ಗದಲ್ಲಿ ಹೊಂಚುಹಾಕುವವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟರು.


ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.


ಅಲ್ಲಿಂದ ಮಕೆದೋನ್ಯ ಪ್ರಾಂತದ ಪ್ರಮುಖ ಪಟ್ಟಣವಾದ ಫಿಲಿಪ್ಪಿಗೆ ಬಂದೆವು. ಇದು ರೋಮಿನ ಪ್ರವಾಸ ಸ್ಥಳವಾಗಿತ್ತು. ನಾವು ಆ ಪಟ್ಟಣದಲ್ಲಿ ಕೆಲವು ದಿನ ಉಳಿದುಕೊಂಡೆವು.


ಗಲಭೆಯು ಶಾಂತಗೊಂಡ ನಂತರ ಪೌಲನು ಶಿಷ್ಯರನ್ನು ಕರೆಕಳುಹಿಸಿ ಅವರಿಗೆ ಧೈರ್ಯ ಹೇಳಿ, ಅವರನ್ನು ಬೀಳ್ಕೊಟ್ಟು ಮಕೆದೋನ್ಯಕ್ಕೆ ಪ್ರಯಾಣಮಾಡಿದನು.


ಆ ಪ್ರದೇಶದಲ್ಲೆಲ್ಲಾ ಜನರಿಗೆ ಅನೇಕ ಪ್ರೋತ್ಸಾಹದ ಮಾತುಗಳನ್ನು ಹೇಳುತ್ತಾ ಪ್ರಯಾಣಮಾಡಿ ಗ್ರೀಸ್ ತಲುಪಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು