Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:9 - ಕನ್ನಡ ಸಮಕಾಲಿಕ ಅನುವಾದ

9 ಒಂದು ಕಿಟಿಕಿಯಲ್ಲಿ ಯೂತಿಖ ಎಂಬ ಹೆಸರಿನ ಒಬ್ಬ ಯುವಕನು ಕುಳಿತುಕೊಂಡಿದ್ದನು. ಪೌಲನು ಬಹಳ ಹೊತ್ತು ಬೋಧಿಸುತ್ತಲೇ ಇದ್ದುದರಿಂದ ಅವನಿಗೆ ಗಾಢನಿದ್ರೆ ಹತ್ತಿತು. ನಿದ್ರಿಸುತ್ತಿದ್ದ ಅವನು ಮೂರನೇ ಅಂತಸ್ತಿನಿಂದ ಕೆಳಕ್ಕೆ ಬಿದ್ದನು. ಅವನನ್ನು ಎತ್ತಿಕೊಂಡಾಗ ಅವನು ಸತ್ತೇ ಹೋಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೂತಿಖನೆಂಬ ಒಬ್ಬ ಯೌವನಸ್ಥನು ಕಿಟಿಕಿಯ ಹೊಸ್ತಿಲಿನಲ್ಲಿ ಕುಳಿತುಕೊಂಡು ಗಾಢನಿದ್ರೆಯಿಂದ ತೂಕಡಿಸುತ್ತಿದ್ದನು. ಪೌಲನು ಇನ್ನೂ ಬೋಧನೆ ಮಾಡುತ್ತಾ ಇದ್ದಾಗ ಆ ಯೌವನಸ್ಥನು ಗಾಢವಾದ ನಿದ್ರೆಯಿಂದ ತೂಕಡಿಸಿ ಮೂರನೆಯ ಅಂತಸ್ತಿನಿಂದ ಕೆಳಕ್ಕೆ ಬಿದ್ದುಬಿಟ್ಟನು; ಅವನನ್ನು ಎಬ್ಬಿಸಲು ಹೋದಾಗ ಅವನು ಸತ್ತುಹೋಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯುತಿಕ ಎಂಬ ಯುವಕನು ಕಿಟಕಿಯಲ್ಲಿ ಕುಳಿತುಕೊಂಡಿದ್ದನು. ಪೌಲನು ದೀರ್ಘಕಾಲ ಮಾತನಾಡುತ್ತಲೇ ಇದ್ದುದರಿಂದ ಯುತಿಕನಿಗೆ ಗಾಢನಿದ್ರೆ ಹತ್ತಿತು; ತೂಕಡಿಕೆ ಹೆಚ್ಚಾಗಿ ಅವನು ಮೂರನೆಯ ಅಂತಸ್ತಿನಿಂದ ನೆಲಕ್ಕೆ ಬಿದ್ದುಬಿಟ್ಟನು. ಅವನನ್ನು ಎತ್ತಿ ನೋಡುವಾಗ ಅವನು ಸತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೂತಿಖನೆಂಬ ಒಬ್ಬ ಯೌನವಸ್ಥನು ಕಿಟಿಕಿಯಲ್ಲಿ ಕೂತುಕೊಂಡು ಗಾಢನಿದ್ರೆಯಿಂದ ತೂಕಡಿಸಿದನು. ಪೌಲನು ಇನ್ನೂ ಪ್ರಸಂಗ ಮಾಡುತ್ತಾ ಇದ್ದಾಗ ಆ ಯೌವನಸ್ಥನು ನಿದ್ರೆಯಿಂದ ತೂಕಡಿಕೆ ಹೆಚ್ಚಾಗಿ ಮೂರನೆಯ ಅಂತಸ್ತಿನಿಂದ ಕೆಳಕ್ಕೆ ಬಿದ್ದನು; ಅವನನ್ನು ಎತ್ತಿನೋಡುವಾಗ ಸತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯುತಿಕ ಎಂಬ ಯುವಕನು ಕಿಟಕಿಯಲ್ಲಿ ಕುಳಿತುಕೊಂಡಿದ್ದನು. ಪೌಲನು ಮಾತಾಡುತ್ತಲೇ ಇದ್ದನು. ಇತ್ತ ಯುವಕನು ಗಾಢವಾಗಿ ನಿದ್ರಿಸುತ್ತಾ ಮೂರನೆ ಅಂತಸ್ತಿನಿಂದ ಕೆಳಗಡೆ ಬಿದ್ದುಬಿಟ್ಟನು. ಜನರು ಕೆಳಗಿಳಿದು ಹೋಗಿ ಅವನನ್ನು ಎತ್ತಿ ನೋಡಿದಾಗ ಅವನು ಸತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಯುತಿಕ್ ಮನ್ತಲೊ ದಾಂಡ್ಗೊ ಝಿಲ್ಗೊ ಕಿಡ್ಕಿರ್ ಬಸುನ್ ನಿಜೆನ್ ಝಮುನ್ಗೆತ್ ಹೊತ್ತೊ, ಪಾವ್ಲು ಬೊಲಿತ್ ರ್‍ಹಾತಾನಾಚ್ ತೊ ಝಿಲ್ಗೊ ತಿನ್ವಾ ಮಾಳ್ಗಿ ವೈನಾ ಪಡ್ಲೊ, ಲೊಕಾನಿ ಖಾಲ್ತಿ ಉತ್ರುನ್ ತೆಕಾ ಉಕ್ಲುನ್ ಬಗಲ್ಲ್ಯಾ ತನ್ನಾ ತೊ ಮರುನ್ ಪಡಲೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:9
9 ತಿಳಿವುಗಳ ಹೋಲಿಕೆ  

ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವುದನ್ನು ಕಂಡಾನು.


ಅದೇ ಸಮಯದಲ್ಲಿ ಅಂತಿಯೋಕ್ಯ ಮತ್ತು ಇಕೋನ್ಯದಿಂದ ಕೆಲವು ಜನ ಯೆಹೂದ್ಯರು ಬಂದು ಜನಸಮೂಹವನ್ನು ತಮ್ಮ ಕಡೆಗೆ ಒಲಿಸಿಕೊಂಡು, ಪೌಲನ ಮೇಲೆ ಕಲ್ಲೆಸೆಯಲು, ಅವನು ಸತ್ತನೆಂದು ಭಾವಿಸಿ ಅವನನ್ನು ಊರ ಹೊರಗೆ ಎಳೆದು ಹಾಕಿದರು.


ಆಗ ಅಶುದ್ಧಾತ್ಮವು ಕೂಗಿ ಬಾಲಕನನ್ನು ಕ್ರೂರವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂದಿತು. ಅವನು ಸತ್ತವನ ಹಾಗೆ ಬಿದ್ದಿದ್ದರಿಂದ ಅನೇಕರು, “ಅವನು ಸತ್ತಿದ್ದಾನೆ,” ಎಂದರು.


ಅವನು ಅವಳಿಗೆ, “ನಿನ್ನ ಮಗನನ್ನು ನನಗೆ ಕೊಡು,” ಎಂದು ಹೇಳಿ, ಅವನನ್ನು ಅವಳ ಮಡಿಲಿನಿಂದ ಎತ್ತಿಕೊಂಡು, ತಾನು ವಾಸವಾಗಿದ್ದ ಮಾಳಿಗೆಯ ಕೋಣೆಗೆ ಹೋಗಿ, ಅವನನ್ನು ಮಂಚದ ಮೇಲೆ ಮಲಗಿಸಿದನು.


ವಾರದ ಮೊದಲನೆಯ ದಿನ ನಾವು ರೊಟ್ಟಿ ಮುರಿಯಲು ಒಂದಾಗಿ ಕೂಡಿಬಂದೆವು. ಪೌಲನು ಅಲ್ಲಿ ಬೋಧನೆ ಮಾಡಿದನು. ಮರುದಿನ ಅವನು ಹೊರಡಬೇಕಾದ್ದರಿಂದ ಮಧ್ಯರಾತ್ರಿಯವರೆಗೆ ಮಾತನಾಡುತ್ತಲೇ ಇದ್ದನು.


ನಾವು ಸಭೆ ಸೇರಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳು ಉರಿಯುತ್ತಿದ್ದವು.


ಆದರೆ ಪೌಲನು ಕೆಳಗೆ ಹೋಗಿ, ಆ ಯುವಕನನ್ನು ತಬ್ಬಿಕೊಂಡು, “ಗಾಬರಿಗೊಳ್ಳಬೇಡಿ, ಅವನ ಜೀವ ಅವನಲ್ಲಿದೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು