Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:40 - ಕನ್ನಡ ಸಮಕಾಲಿಕ ಅನುವಾದ

40 ಸಹಸ್ರಾಧಿಪತಿಯ ಅಪ್ಪಣೆ ಪಡೆದುಕೊಂಡು, ಪೌಲನು ಮೆಟ್ಟಲುಗಳ ಮೇಲೆ ನಿಂತುಕೊಂಡು ಜನಸಮೂಹಕ್ಕೆ ಸುಮ್ಮನಿರುವಂತೆ ಸನ್ನೆಮಾಡಲು, ಅವರು ಬಹು ನಿಶ್ಶಬ್ದರಾದಾಗ ಅವನು ಹೀಬ್ರೂ ಭಾಷೆಯಲ್ಲಿ ಅವರಿಗೆ ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಸಹಸ್ರಾಧಿಪತಿಯು ಅಪ್ಪಣೆ ಕೊಡಲು, ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡು, ಜನರಿಗೆ ಕೈಸನ್ನೆ ಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ ಮಾತನಾಡಲು ಪ್ರಾರಂಭಿಸಿದನು.,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಸೈನ್ಯಾಧಿಪತಿ ಅಪ್ಪಣೆ ಕೊಡಲು, ಪೌಲನು ಮೆಟ್ಟಲಿನ ಮೇಲೆ ನಿಂತು ಜನರನ್ನು ನೋಡಿ ಮೌನವಾಗಿರುವಂತೆ ಕೈಸನ್ನೆ ಮಾಡಿದನು. ಆಗ ನಿಶ್ಯಬ್ದ ಉಂಟಾಯಿತು. ಅನಂತರ ಅವರನ್ನು ಸಂಬೋಧಿಸಿ ಹಿಬ್ರುಭಾಷೆಯಲ್ಲಿ ಮಾತಾಡುತ್ತಾ ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಸಹಸ್ರಾಧಿಪತಿಯು ಅಪ್ಪಣೆ ಕೊಡಲು ಪೌಲನು ಮೆಟ್ಲುಗಳ ಮೇಲೆ ನಿಂತುಕೊಂಡು ಜನರಿಗೆ ಕೈಸನ್ನೆಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಜನರೊಂದಿಗೆ ಮಾತಾಡಲು ಸೇನಾಧಿಪತಿ ಪೌಲನಿಗೆ ಅಪ್ಪಣೆಕೊಟ್ಟನು. ಆದ್ದರಿಂದ ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡನು. ಬಳಿಕ, ಮೌನವಾಗಿರುವಂತೆ ಜನರಿಗೆ ಕೈಸನ್ನೆ ಮಾಡಿದನು. ಜನರು ಮೌನವಾದರು. ಆಗ ಪೌಲನು ಅವರೊಂದಿಗೆ ಯೆಹೂದ್ಯರ ಭಾಷೆಯಲ್ಲಿ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಸೆನಾಧಿಪತಿನ್ ತೆಕಾ ಅವಕಾಸ್ ದಿತಾನಾ ಪಾವ್ಲುನ್, ಪಾಯ್ರಿಯಾ ವೈನಿ ಇಬೆ ರ್‍ಹಾವ್ನ್; ಲೊಕಾಕ್ನಿ ಗಪ್‍ರಾವ್ಕ್ ಸಾಂಗುನ್, ಲೊಕಾ ಶಾಂತ್ ಹೊಲ್ಲ್ಯಾ ತನ್ನಾ, ಹಿಬ್ರು ಬಾಶೆನ್ ಬೊಲುಕ್ ಶುರು ಕರ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:40
16 ತಿಳಿವುಗಳ ಹೋಲಿಕೆ  

ಸುಮ್ಮನಿರಬೇಕೆಂದು ಪೇತ್ರನು ಅವರಿಗೆ ಕೈಸನ್ನೆ ಮಾಡಿ ಕರ್ತದೇವರು ಹೇಗೆ ತನ್ನನ್ನು ಸೆರೆಮನೆಯಿಂದ ಬಿಡಿಸಿ ಹೊರಗೆ ಕರೆದುಕೊಂಡು ಬಂದರು ಎಂಬುದನ್ನು ವಿವರಿಸಿದನು. “ಇದನ್ನು ಯಾಕೋಬನಿಗೆ ಹಾಗೂ ಸಹೋದರರಿಗೆ ತಿಳಿಸಿರಿ,” ಎಂದು ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.


ನಾವೆಲ್ಲರೂ ನೆಲದ ಮೇಲೆ ಬಿದ್ದೆವು. ಆಗ, ‘ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿ,’ ಎಂದು ಹೀಬ್ರೂ ಭಾಷೆಯಲ್ಲಿ ಹೇಳುವ ವಾಣಿಯನ್ನು ಕೇಳಿದೆನು.


ಅವನು ತಮ್ಮೊಂದಿಗೆ ಹೀಬ್ರೂ ಭಾಷೆಯಲ್ಲಿ ಮಾತನಾಡುವುದನ್ನು ಕೇಳಿದಾಗ ಅವರು ಮತ್ತಷ್ಟು ನಿಶ್ಶಬ್ದರಾದರು. ಆಗ ಪೌಲನು:


ಯೆರೂಸಲೇಮಿನಲ್ಲಿ “ಕುರಿಬಾಗಿಲು” ಎಂಬ ಸ್ಥಳದ ಬಳಿ ಒಂದು ಕೊಳವಿದೆ. ಇದನ್ನು ಹೀಬ್ರೂ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ. ಅದಕ್ಕೆ ಐದು ಮಂಟಪಗಳಿದ್ದವು.


ಪೌಲನನ್ನು ಮೆಟ್ಟಲುಗಳವರೆಗೆ ತೆಗೆದುಕೊಂಡು ಹೋದಾಗ ಜನರ ರೋಷ ಇನ್ನೂ ಬಲವಾದುದ್ದರಿಂದ ಸೈನಿಕರು ಅವನನ್ನು ಹೊತ್ತುಕೊಂಡು ಹೋಗಬೇಕಾಯಿತು.


ಆದರೆ ಯೆಹೂದ್ಯರು ಅಲೆಕ್ಸಾಂದ್ರ ಎಂಬುವನನ್ನು ಮುಂದಕ್ಕೆ ತಳ್ಳಿದರು. ಜನಸಮೂಹದಲ್ಲಿದ್ದ ಕೆಲವರು ಅವನಿಗೆ ವಿಷಯ ತಿಳಿಸಿದರು. ಆಗ ಅಲೆಕ್ಸಾಂದ್ರನು, ಜನರ ಎದುರಿನಲ್ಲಿ ವಾದಿಸಲಿಕ್ಕಾಗುವಂತೆ ಕೈಸನ್ನೆ ಮಾಡಿದನು.


ಆಗ ಅವು ಅವರನ್ನು ಹೀಬ್ರೂ ಭಾಷೆಯಲ್ಲಿ ಹರ್ಮಗೆದೋನ್ ಎಂಬ ಹೆಸರಿನ ಸ್ಥಳಕ್ಕೆ ಸೇರಿಸಿದವು.


ಹೀಬ್ರೂ ಭಾಷೆಯಲ್ಲಿ, ಅಬದ್ದೋನ್ ಎಂದೂ ಗ್ರೀಕ್ ಭಾಷೆಯಲ್ಲಿ, ಅಪೊಲ್ಲುವೋನ್ ಎಂಬ ಹೆಸರಿನ ಪಾತಾಳ ಲೋಕದ ದೂತನು ಅವರ ಅರಸನು.


ಪೌಲನು ಎದ್ದು ನಿಂತು, ಕೈಸನ್ನೆ ಮಾಡಿ ಹೀಗೆ ಹೇಳಿದನು: “ಇಸ್ರಾಯೇಲ್ ಜನರೇ, ದೇವರಲ್ಲಿ ಭಯಭಕ್ತಿಯುಳ್ಳವರೇ, ಕೇಳಿರಿ!


ಆ ದಿನಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚುತ್ತಲೇ ಇತ್ತು. ಅವರಲ್ಲಿ ಗ್ರೀಕ್ ಮಾತನಾಡುವ ಯೆಹೂದ್ಯರು, ಹೀಬ್ರೂ ಭಾಷೆ ಮಾತನಾಡುವ ಯೆಹೂದ್ಯರ ವಿರೋಧವಾಗಿ ಗೊಣಗುಟ್ಟುತ್ತಿದ್ದರು. ಏಕೆಂದರೆ, “ಅನುದಿನದ ಉಪಚಾರದಲ್ಲಿ ಅವರು ತಮ್ಮ ವಿಧವೆಯರನ್ನು ಅಲಕ್ಷ್ಯಮಾಡುತ್ತಿದ್ದಾರೆ,” ಎಂದರು.


ಈ ಫಲಕವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು. ಏಕೆಂದರೆ ಯೇಸುವನ್ನು ಶಿಲುಬೆಗೇರಿಸಿದ ಆ ಸ್ಥಳವು ಪಟ್ಟಣಕ್ಕೆ ಸಮೀಪವಾಗಿತ್ತು. ಇದು ಹೀಬ್ರೂ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆಯಲಾಗಿತ್ತು.


ಯೇಸು ತಮ್ಮ ಶಿಲುಬೆಯನ್ನು ತಾವೇ ಹೊತ್ತುಕೊಂಡು “ತಲೆಬುರುಡೆಯ ಸ್ಥಳ” ಎಂಬ ಸ್ಥಳಕ್ಕೆ ಹೋದರು. ಅದು ಅರಮಾಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಅರ್ಥ.


ಪಿಲಾತನು ಆ ಮಾತುಗಳನ್ನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದನು. ಹೀಬ್ರೂ ಭಾಷೆಯಲ್ಲಿ “ಗಬ್ಬಥಾ” ಎಂದು ಕರೆಯಲಾದ “ಕಲ್ಲು ಹಾಸಿದ ಕಟ್ಟೆ” ಎಂಬ ಕಟ್ಟೆಯ ಮೇಲಿದ್ದ ನ್ಯಾಯಾಸನದ ಮೇಲೆ ಕುಳಿತುಕೊಂಡನು.


ಯೇಸುವಿನ ಶಿಲುಬೆಯ ಮೇಲ್ಗಡೆಯಲ್ಲಿ ಒಂದು ಲಿಖಿತ ಹೀಗಿತ್ತು: ಈತನು ಯೆಹೂದ್ಯರ ಅರಸನು.


ಆಗ ಅವರು ತ್ವರೆಪಟ್ಟು ಪ್ರತಿಯೊಬ್ಬರು ತಮ್ಮ ಹೊರ ಉಡುಪುಗಳನ್ನು ತೆಗೆದು, ಮೆಟ್ಟಿಲುಗಳ ಮೇಲೆ ಹಾಸಿ, ಇವನನ್ನು ಕುಳ್ಳಿರಿಸಿ, ತುತೂರಿಗಳನ್ನು ಊದಿ, “ಯೇಹುವು ಅರಸನಾಗಿದ್ದಾನೆ,” ಎಂದು ಆರ್ಭಟಿಸಿದರು.


ಯೆರೂಸಲೇಮಿನಲ್ಲಿದ್ದ ಪ್ರತಿಯೊಬ್ಬರಿಗೂ ಈ ವಿಷಯ ತಿಳಿಯಿತು, ಹೀಗೆ ಆ ಹೊಲವನ್ನು ಅವರು ತಮ್ಮ ಭಾಷೆಯಲ್ಲಿ “ಅಕೆಲ್ದಮಾ” ಎಂದು ಕರೆದರು. “ರಕ್ತದ ಹೊಲ” ಎಂದು ಅದರ ಅರ್ಥ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು