Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:25 - ಕನ್ನಡ ಸಮಕಾಲಿಕ ಅನುವಾದ

25 ಆದರೆ ಅವರು ಅವನನ್ನು ಹೊಡೆಯುವುದಕ್ಕೆ ಬಾರುಕೋಲನ್ನು ಚಾಚಿದಾಗ ಪೌಲನು ಅಲ್ಲಿ ನಿಂತಿದ್ದ ಶತಾಧಿಪತಿಗೆ, “ಅಪರಾಧಿಯೆಂದು ಸಿದ್ಧವಾಗುವ ಮೊದಲೇ ರೋಮ್ ಪೌರನನ್ನು ಕೊರಡೆಗಳಿಂದ ಹೊಡೆಯುವುದು ನ್ಯಾಯವಾದದ್ದೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರು ಪೌಲನನ್ನು ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು; “ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ, ಕೊರಡೆಗಳಿಂದ ಹೊಡಿಸುವುದು ನಿಮಗೆ ನ್ಯಾಯವೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹೊಡೆಯುವುದಕ್ಕಾಗಿ ಅವನನ್ನು ಬಾರುಗಳಿಂದ ಕಟ್ಟುತ್ತಿದ್ದಾಗ ಪೌಲನು, ಹತ್ತಿರವೇ ನಿಂತಿದ್ದ ಶತಾಧಿಪತಿಯನ್ನು ನೋಡಿ, “ರೋಮಿನ ಪೌರನನ್ನು ಚಾವಟಿಯಿಂದ ಹೊಡೆಯುವುದು, ಅದೂ ವಿಚಾರಣೆಮಾಡದೆ ಹೊಡೆಯಿಸುವುದು, ನ್ಯಾಯಸಮ್ಮತವೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರು ಪೌಲನನ್ನು ಬೊಗ್ಗಿಸಿ ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು - ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ ಕೊರಡೆಗಳಿಂದ ಹೊಡಿಸುವದು ನಿಮಗೆ ನ್ಯಾಯವೋ? ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಸೈನಿಕರು ಹೊಡೆಯುವುದಕ್ಕಾಗಿ ಪೌಲನನ್ನು ಕಟ್ಟುತ್ತಿರಲು ಅಲ್ಲಿದ್ದ ರೋಮ್ ಅಧಿಕಾರಿಗೆ ಪೌಲನು, “ಅಪರಾಧಿಯೆಂದು ತೀರ್ಪಾಗಿಲ್ಲದ ರೋಮ್ ಪ್ರಜೆಯೊಬ್ಬನನ್ನು ಹೊಡೆಯಲು ನಿಮಗೆ ಹಕ್ಕಿದೆಯೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಪಾವ್ಲುಕ್ ಮಾರುಕ್ ಸಿಪಾಯಿಯಾ ಭಾಂದಿತ್ ರಾತಾನಾ ಥೈ ಹೊತ್ತ್ಯಾ ರೊಮತ್ಲ್ಯಾ ಅಧಿಕಾರಿಕ್ ಪಾವ್ಲುನ್, “ಚುಕ್ದಾರಿ ಮನುನ್ ನಿರ್ಧಾರ್ ಹೊವ್ಕ್ ನಸಲ್ಲ್ಯಾ ರೊಮಾಚ್ಯಾ ಮಾನ್ಸಾಕ್ ಮಾರುಕ್ ತುಮ್ಕಾ ಹಕ್ಕ್ ಹಾಯ್ ಕಾಯ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:25
13 ತಿಳಿವುಗಳ ಹೋಲಿಕೆ  

ಆದರೆ ಪೌಲನು ಅಧಿಕಾರಿಗಳಿಗೆ, “ನಾವು ರೋಮ್ ಪೌರರಾಗಿದ್ದು ಯಾವ ನ್ಯಾಯವಿಚಾರಣೆ ಮಾಡದೇ ಬಹಿರಂಗವಾಗಿ ನಮ್ಮನ್ನು ಛಡಿಯಿಂದ ಹೊಡೆಸಿ, ನಮ್ಮನ್ನು ಸೆರೆಮನೆಗೆ ತಳ್ಳಿದ್ದಾರೆ. ಈಗ ರಹಸ್ಯವಾಗಿ ನಮ್ಮನ್ನು ಕಳುಹಿಸಿಬಿಡಬೇಕೆಂದಿದ್ದಾರೋ? ಇಲ್ಲ, ಅವರು ತಾವೇ ಬಂದು ನಮ್ಮನ್ನು ಹೊರಗೆ ಕರೆದುಕೊಂಡು ಹೋಗಲಿ,” ಎಂದನು.


“ಆಪಾದಿತನು ಆಪಾದನೆ ಹೊರಿಸುವವರ ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಹೊರಿಸಲಾದ ಆಪಾದನೆಗಳಿಗೆ ಪ್ರತಿವಾದ ಮಾಡಿಕೊಳ್ಳುವ ಮೊದಲು ಯಾವ ಮನುಷ್ಯನನ್ನೂ ಒಪ್ಪಿಸಿಕೊಡುವುದು ರೋಮ್ ಪದ್ಧತಿಯಲ್ಲ ಎಂದು ನಾನು ಅವರಿಗೆ ಹೇಳಿದೆನು.


ಆದರೆ ಶತಾಧಿಪತಿಯು ಪೌಲನನ್ನು ಉಳಿಸಬೇಕೆಂದು ಬಯಸಿ, ಸೈನಿಕರು ಹಾಗೆ ಮಾಡದಂತೆ ನೋಡಿಕೊಂಡು, ಈಜಲು ಬಲ್ಲವರು ಮೊದಲು ಸಮುದ್ರದಲ್ಲಿ ಜಿಗಿದು ಭೂಮಿಯನ್ನು ತಲುಪಬೇಕೆಂದು ಆಜ್ಞಾಪಿಸಿದನು.


ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು, “ಈ ಯುವಕನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿರಿ. ಏಕೆಂದರೆ ಇವನಿಗೆ ತಿಳಿಸಲು ಏನೋ ವಿಷಯವಿದೆಯಂತೆ,” ಎಂದನು.


ಮರುದಿನ ನಾವು ಸೀದೋನಿಗೆ ತಲುಪಿದೆವು. ಪೌಲನಿಗೆ ಯೂಲ್ಯನು ದಯೆತೋರಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗುವುದಕ್ಕೂ ಅವರಿಂದ ಉಪಚಾರವನ್ನು ಹೊಂದುವುದಕ್ಕೂ ಅನುಮತಿಸಿದನು.


ನಾವು ಇಟಲಿಗೆ ಸಮುದ್ರ ಪ್ರಯಾಣ ಮಾಡಬೇಕೆಂದು ತೀರ್ಮಾನವಾದ ಮೇಲೆ ಪೌಲನನ್ನೂ ಇತರ ಕೈದಿಗಳನ್ನೂ ಯೂಲ್ಯನೆಂಬ ಹೆಸರಿನ ಒಬ್ಬ ಶತಾಧಿಪತಿಗೆ ಒಪ್ಪಿಸಿದರು. ಅವನು ಚಕ್ರವರ್ತಿಯ ದಳಕ್ಕೆ ಸೇರಿದವನು.


ಕೈಸರೈಯದಲ್ಲಿ ಕೊರ್ನೇಲ್ಯ ಎಂಬುವನಿದ್ದನು. “ಇಟಲಿಯ ದಳ” ಎಂದು ಹೆಸರಿನ ದಳಕ್ಕೆ ಅವನು ಶತಾಧಿಪತಿ.


ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಸಂಭವಿಸಿದ್ದೆಲ್ಲವನ್ನೂ ಕಂಡು ಬಹಳವಾಗಿ ಭಯಪಟ್ಟು, “ನಿಜವಾಗಿಯೂ ಈತನು ದೇವಪುತ್ರನಾಗಿದ್ದನು,” ಎಂದರು.


ಅದಕ್ಕೆ ಶತಾಧಿಪತಿಯು, “ಸ್ವಾಮೀ, ನನ್ನ ಮನೆಯೊಳಗೆ ನೀವು ಬರುವಷ್ಟು ಯೋಗ್ಯತೆ ನನಗಿಲ್ಲ. ಆದರೆ, ನೀವು ಒಂದು ಮಾತು ಮಾತ್ರ ಹೇಳಿರಿ, ಆಗ ನನ್ನ ಸೇವಕ ಗುಣಹೊಂದುವನು.


ಆದರೆ ಜನರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಏಕೆಂದರೆ ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.


ಶತಾಧಿಪತಿ ಈ ಮಾತುಗಳನ್ನು ಕೇಳಿದಾಗ, ಸಹಸ್ರಾಧಿಪತಿಯ ಬಳಿಗೆ ಹೋಗಿ ಇದನ್ನು ವರದಿ ಮಾಡಿ, “ಇವನು ರೋಮ್ ಪೌರನು. ಈಗ ನೀನೇನು ಮಾಡಬೇಕೆಂದಿದ್ದೀ?” ಎಂದು ಅವನನ್ನು ಪ್ರಶ್ನಿಸಿದನು.


ಈ ಪೌಲನನ್ನು ಯೆಹೂದ್ಯರು ಬಂಧಿಸಿ, ಇವನನ್ನು ಕೊಲ್ಲಬೇಕೆಂದಿದ್ದರು. ಆದರೆ ನಾನು ಸೈನಿಕರೊಂದಿಗೆ ಹೋಗಿ ಇವನನ್ನು ಬಿಡಿಸಿದೆನು. ಇವನು ರೋಮ್ ಪೌರ ಎಂದು ನನಗೆ ಗೊತ್ತಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು