Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:16 - ಕನ್ನಡ ಸಮಕಾಲಿಕ ಅನುವಾದ

16 ಈ ಒಳಸಂಚು ಪೌಲನ ಸಹೋದರಿಯ ಮಗನಿಗೆ ತಿಳಿಯಲು ಅವನು ಸೈನಿಕ ಪಾಳ್ಯದೊಳಗೆ ಹೋಗಿ ಪೌಲನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರು ಹೊಂಚು ಹಾಕಿಕೊಂಡಿರುವುದನ್ನು, ಪೌಲನ ಸೋದರಳಿಯನು ಕೇಳಿ ಕೋಟೆಯೊಳಗೆ ಬಂದು ಪೌಲನಿಗೆ ಆ ವಾರ್ತೆಯನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಈ ಒಳಸಂಚು ಪೌಲನ ಸೋದರಿಯ ಮಗನ ಕಿವಿಗೆ ಬಿದ್ದಿತು. ಅವನು ಕೋಟೆಯೊಳಗೆ ಹೋಗಿ ಅದನ್ನು ಪೌಲನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರು ಹೊಂಚಿಕೊಂಡಿರುವದನ್ನು ಪೌಲನ ಸೋದರಳಿಯನು ಕೇಳಿ ಕೋಟೆಯೊಳಗೆ ಬಂದು ಪೌಲನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಈ ಯೋಜನೆಯ ಬಗ್ಗೆ ಪೌಲನ ಸೋದರಳಿಯನಿಗೆ ತಿಳಿಯಿತು. ಅವನು ಸೈನ್ಯದ ಕೋಟೆಯೊಳಗೆ ಹೋಗಿ ಈ ಯೋಜನೆಯ ಬಗ್ಗೆ ಪೌಲನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ಹಿ ಯೆವ್ಚನ್ ಪಾವ್ಲುಚ್ಯಾ ಭೆನಿಚ್ಯಾ ಲೆಕಾಕ್ ಗೊತ್ತ್ ಹೊಲಿ, ತೆನಿ ಸೈನಿಕಾಂಚ್ಯಾ ಕೊಟೆತ್ ಜಾವ್ನ್ ಹೆ ಸಗ್ಳೆ ಪಾವ್ಲುಕ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:16
12 ತಿಳಿವುಗಳ ಹೋಲಿಕೆ  

ಜನಸಮೂಹವು ಪೌಲನನ್ನು ಎಳೆದು ತುಂಡುತುಂಡಾಗಿ ಮಾಡುವರೇನೋ ಎಂದು ಸಹಸ್ರಾಧಿಪತಿಗೆ ಬಹಳ ಭಯವಾಯಿತು. ಸೈನಿಕರ ಗುಂಪುಗಳು ಕೆಳಗಿಳಿದು ಹೋಗಿ ಬಲಪ್ರಯೋಗದಿಂದ ಪೌಲನನ್ನು ಎತ್ತಿಕೊಂಡು ಸೈನಿಕ ಪಾಳ್ಯದೊಳಗೆ ಬರಬೇಕೆಂದು ಅವನು ಸೈನಿಕರಿಗೆ ಆಜ್ಞಾಪಿಸಿದನು.


ಏಕೆಂದರೆ ಇಹಲೋಕ ಜ್ಞಾನವು ದೇವರ ದೃಷ್ಟಿಯಲ್ಲಿ ಮೂರ್ಖತನವಾಗಿದೆ, ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, “ದೇವರು ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿಯೇ ಹಿಡಿಯುವರು,” ಎಂದೂ


ಮರುದಿನ ಪೌಲನೊಂದಿಗೆ ಮುಂದೆ ಹೋಗಲು ಕುದುರೆಸವಾರರನ್ನು ಬಿಟ್ಟು, ಸೈನಿಕರು ಅವರ ಪಾಳ್ಯಕ್ಕೆ ಹಿಂದಿರುಗಿದರು.


ಜನಸಮೂಹದಲ್ಲಿದ್ದ ಇತರರು ವಿವಿಧ ರೀತಿಯಿಂದ ಕೂಗುತ್ತಿರಲು ಗಲಭೆಯ ನಿಮಿತ್ತ ಸಹಸ್ರಾಧಿಪತಿಗೆ ಸತ್ಯಾಂಶ ತಿಳಿಯಲಾಗಲಿಲ್ಲ. ಆದ್ದರಿಂದ ಪೌಲನನ್ನು ಸೈನಿಕ ಪಾಳ್ಯದೊಳಗೆ ತೆಗೆದುಕೊಂಡು ಹೋಗಲು ಆಜ್ಞಾಪಿಸಿದನು.


ಕರ್ತದೇವರು ಆಜ್ಞಾಪಿಸದೆ ಇರುವಾಗ, ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?


ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.


ದೇವರು ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿಯೇ ಹಿಡಿಯುತ್ತಾರೆ, ಮತ್ತು ಕುತಂತ್ರಿಯ ಯೋಜನೆಗಳನ್ನು ನಿರರ್ಥಕಮಾಡುತ್ತಾರೆ.


ಯೋನಾತಾನನೂ, ಅಹೀಮಾಚನೂ ಏನ್ ರೋಗೆಲ್ ಎಂಬಲ್ಲಿ ಇದ್ದರು. ಒಬ್ಬ ಸೇವಕಿ ಹೋಗಿ ಅವರಿಗೆ ತಿಳಿಸಬೇಕಾಗಿತ್ತು. ಅನಂತರ ಅವರು ಹೋಗಿ ಅರಸನಾದ ದಾವೀದನಿಗೆ ಹೇಳಬೇಕಾಗಿತ್ತು. ಏಕೆಂದರೆ ಪಟ್ಟಣದಲ್ಲಿ ಪ್ರವೇಶಿಸುವುದನ್ನು ಬೇರೆಯವರು ನೋಡುವ ಗಂಡಾಂತರಕ್ಕೆ ಒಳಗಾಗಲು ಅಪೇಕ್ಷಿಸಿರಲಿಲ್ಲ.


ಸೈನಿಕರು ಪೌಲನನ್ನು ಅವರ ಪಾಳ್ಯದೊಳಗೆ ಒಯ್ಯುತ್ತಿದ್ದಾಗ, ಅವನು ಸಹಸ್ರಾಧಿಪತಿಗೆ, “ನಾನು ನಿನ್ನೊಡನೆ ಸ್ವಲ್ಪ ಮಾತನಾಡುವುದಕ್ಕೆ ಅಪ್ಪಣೆಯಾದೀತೇ?” ಎಂದು ಕೇಳಲು, ಅದಕ್ಕೆ ಅವನು, “ನಿನಗೆ ಗ್ರೀಕ್ ಭಾಷೆಯೂ ಗೊತ್ತಿದೆಯೋ?”


ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು, “ಈ ಯುವಕನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿರಿ. ಏಕೆಂದರೆ ಇವನಿಗೆ ತಿಳಿಸಲು ಏನೋ ವಿಷಯವಿದೆಯಂತೆ,” ಎಂದನು.


ಪೌಲನನ್ನು ಕಾವಲಿನಲ್ಲಿಡಬೇಕೆಂತಲೂ ಅವನ ಸ್ನೇಹಿತರು ಅವನನ್ನು ಸಂದರ್ಶಿಸಲು ಅಡ್ಡಿಮಾಡಬಾರದೆಂತಲೂ ಶತಾಧಿಪತಿಗೆ ಆಜ್ಞೆಕೊಟ್ಟನು.


ದುಷ್ಟನೇ, ನೀತಿವಂತನ ನಿವಾಸಕ್ಕೆ ಹೊಂಚು ಹಾಕಬೇಡ; ಅವನ ವಿಶ್ರಾಂತಿಯ ಸ್ಥಳವನ್ನು ಸೂರೆಮಾಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು