Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:28 - ಕನ್ನಡ ಸಮಕಾಲಿಕ ಅನುವಾದ

28 ಅವರು ಏಕೆ ಪೌಲನ ಮೇಲೆ ದೋಷಾರೋಪಣೆ ಮಾಡುತ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಅಪೇಕ್ಷಿಸಿ ಇವನನ್ನು ಅವರ ನ್ಯಾಯಸಭೆಯ ಮುಂದೆ ಕರೆದುಕೊಂಡು ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದಲ್ಲದೆ ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿಯಲಪೇಕ್ಷಿಸಿ, ಅವನನ್ನು ಅವರ ಹಿರೀಸಭೆಗೆ ಕರೆದುಕೊಂಡು ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇವನ ಮೇಲೆ ಅವರು ಹೊರಿಸಿರುವ ಆಪಾದನೆಗಳು ಏನೆಂದು ತಿಳಿದುಕೊಳ್ಳುವ ಉದ್ದೇಶದಿಂದ ನಾನು ಇವನನ್ನು ಅವರ ನ್ಯಾಯಸಭೆಯಲ್ಲಿ ಹಾಜರುಪಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇದಲ್ಲದೆ ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿಯಲಪೇಕ್ಷಿಸಿ ಅವನನ್ನು ಅವರ ಹಿರೀಸಭೆಗೆ ಕರೆದುಕೊಂಡು ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅವರು ಇವನ ಮೇಲೆ ಹೊರಿಸುತ್ತಿರುವ ಆಪಾದನೆಗಳಿಗೆ ಕಾರಣವನ್ನು ತಿಳಿದುಕೊಳ್ಳಲು ನಾನು ನ್ಯಾಯಸಭೆಯ ಮುಂದೆ ನಿಲ್ಲಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತೆನಿ ಹೆಚ್ಯಾ ವರ್‍ತಿ ಘಾಲುಲಾಗಲ್ಯಾ ಚುಕೆಕ್ನಿ ಕಾರನ್ ಕಳ್ವುನ್ ಘೆವ್ಚೆ ಮನುನ್ ಮಿಯಾ ಝಡ್ತಿ ಕರ್‍ತಲ್ಯಾ ತಾಂಡ್ಯಾಚ್ಯಾ ಇದ್ರಾಕ್ ಹೆಕಾ ಇಬೆ ಕರ್‍ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:28
4 ತಿಳಿವುಗಳ ಹೋಲಿಕೆ  

ಯೆಹೂದ್ಯರು ಪೌಲನ ವಿರುದ್ಧ ಏಕೆ ದೋಷಾರೋಪಣೆ ಮಾಡುತ್ತಿದ್ದಾರೆ ಎಂಬುದಕ್ಕೆ ನಿಜಸಂಗತಿಯನ್ನು ಕಂಡುಹಿಡಿಯಲು ಸಹಸ್ರಾಧಿಪತಿಯು ಅಪೇಕ್ಷೆಪಟ್ಟನು. ಮರುದಿನ ಪೌಲನನ್ನು ಬಿಡುಗಡೆ ಮಾಡಿ, ಮುಖ್ಯಯಾಜಕರೂ ನ್ಯಾಯಸಭೆಯೂ ಕೂಡಿಬರಬೇಕೆಂದು ಅಪ್ಪಣೆಮಾಡಿದನು. ಆಮೇಲೆ ಪೌಲನನ್ನು ತಂದು ಅವರ ಎದುರಿನಲ್ಲಿ ನಿಲ್ಲಿಸಿದರು.


ಆದರೆ ನಾನು ನಿಮಗೆ ಹೇಳುವುದೇನೆಂದರೆ: ತನ್ನ ಸಹೋದರನ ಮೇಲೆ ಕೋಪಿಸಿಕೊಳ್ಳುವ ಪ್ರತೀ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು. ಮಾತ್ರವಲ್ಲದೆ, ಯಾವನಾದರೂ ತನ್ನ ಸಹೋದರನನ್ನು ‘ಬುದ್ಧಿ ಇಲ್ಲದವನೇ’ ಎಂದರೂ ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು. ಯಾರನ್ನಾದರೂ, ‘ಮೂರ್ಖಾ,’ ಎನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ಪೌಲನು ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ನನ್ನ ಸಹೋದರರೇ, ಇಂದಿನವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ನಾನು ದೇವರ ಮುಂದೆ ನಡೆದುಕೊಂಡಿದ್ದೇನೆ,” ಎಂದನು.


ಜನಸಮೂಹವು ಪೌಲನನ್ನು ಎಳೆದು ತುಂಡುತುಂಡಾಗಿ ಮಾಡುವರೇನೋ ಎಂದು ಸಹಸ್ರಾಧಿಪತಿಗೆ ಬಹಳ ಭಯವಾಯಿತು. ಸೈನಿಕರ ಗುಂಪುಗಳು ಕೆಳಗಿಳಿದು ಹೋಗಿ ಬಲಪ್ರಯೋಗದಿಂದ ಪೌಲನನ್ನು ಎತ್ತಿಕೊಂಡು ಸೈನಿಕ ಪಾಳ್ಯದೊಳಗೆ ಬರಬೇಕೆಂದು ಅವನು ಸೈನಿಕರಿಗೆ ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು