Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:35 - ಕನ್ನಡ ಸಮಕಾಲಿಕ ಅನುವಾದ

35 “ನಿನ್ನ ಮೇಲೆ ಆರೋಪ ಹೊರಿಸಿದವರು ಇಲ್ಲಿಗೆ ಬಂದು ತಲುಪಿದ ತರುವಾಯ ನಿನ್ನ ವಿಚಾರಣೆ ಮಾಡುತ್ತೇನೆ,” ಎಂದು ಹೇಳಿ, ಪೌಲನನ್ನು ಹೆರೋದನ ಅರಮನೆಯಲ್ಲಿ ಕಾವಲಲ್ಲಿಡಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 “ನಿನ್ನ ಮೇಲೆ ತಪ್ಪು ಹೊರಿಸುವವರು ಬಂದ ನಂತರ, ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ” ಎಂದು ಹೇಳಿ, ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬುದಾಗಿ ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 “ನಿನ್ನ ಮೇಲೆ ತಪ್ಪು ಹೊರಿಸಿದವರು ಬಂದ ಮೇಲೆ ನಿನ್ನ ವಿಚಾರಣೆ ಮಾಡುತ್ತೇನೆ,” ಎಂದು ಹೇಳಿ ಪೌಲನನ್ನು ಹೆರೋದನ ಅರಮನೆಯಲ್ಲಿ ಕಾವಲಿನಲ್ಲಿ ಇಡಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನಿನ್ನ ಮೇಲೆ ತಪ್ಪುಹೊರಿಸುವವರು ಬಂದನಂತರ ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ ಎಂದು ಹೇಳಿ ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬದಾಗಿ ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ರಾಜ್ಯಪಾಲನು, “ನಿನಗೆ ವಿರೋಧವಾಗಿರುವ ಯೆಹೂದ್ಯರು ಇಲ್ಲಿಗೆ ಬಂದಾಗ, ನಾನು ನಿನ್ನ ವಿಚಾರಣೆ ಮಾಡುತ್ತೇನೆ” ಎಂದು ಹೇಳಿದನು. ಬಳಿಕ ರಾಜ್ಯಪಾಲನು ಪೌಲನನ್ನು ಅರಮನೆಯೊಳಗೆ ಇರಿಸಬೇಕೆಂದು ಆಜ್ಞಾಪಿಸಿದನು. (ಈ ಕಟ್ಟಡವನ್ನು ಹೆರೋದನು ಕಟ್ಟಿಸಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ರಾಜ್ಯ್ ಪಾಲಾನ್ “ತುಕಾ ವಿರೊಧ್ ಹೊವ್ನ್ ಹೊತ್ತಿ ಜುದೆವಾಂಚಿ ಲೊಕಾ ಹಿತ್ತೆ ಯೆಲ್ಲ್ಯಾ ತನ್ನಾ ಮಿಯಾ ಇಚಾರ್ನೆ ಕರ್‍ತಾ”, ಮನುನ್ ಸಾಂಗ್ಲ್ಯಾನ್, ಮಾನಾ ಪಾವ್ಲುಕ್ ಹೆರೊದಾಚ್ಯಾ ಘರಾತ್ ಥವ್ಚೆ ಮನುನ್ ಹುಕುಮ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:35
14 ತಿಳಿವುಗಳ ಹೋಲಿಕೆ  

ಆದರೂ ಪೌಲನ ವಿರೋಧವಾಗಿ ಒಂದು ಒಳಸಂಚು ನಡೆದಿದೆ ಎಂದು ನನಗೆ ರಹಸ್ಯ ಸುದ್ದಿ ಬಂದದ್ದರಿಂದ, ಕೂಡಲೇ ಇವನನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ಇವನಿಗೆ ವಿರೋಧವಾದ ಆರೋಪಣೆಯನ್ನು ನಿಮಗೆ ಸಲ್ಲಿಸಬೇಕೆಂದು ಇವನ ವಿರೋಧಿಗಳಿಗೆ ಅಪ್ಪಣೆ ಕೊಟ್ಟಿದ್ದೇನೆ.


“ಆಪಾದಿತನು ಆಪಾದನೆ ಹೊರಿಸುವವರ ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಹೊರಿಸಲಾದ ಆಪಾದನೆಗಳಿಗೆ ಪ್ರತಿವಾದ ಮಾಡಿಕೊಳ್ಳುವ ಮೊದಲು ಯಾವ ಮನುಷ್ಯನನ್ನೂ ಒಪ್ಪಿಸಿಕೊಡುವುದು ರೋಮ್ ಪದ್ಧತಿಯಲ್ಲ ಎಂದು ನಾನು ಅವರಿಗೆ ಹೇಳಿದೆನು.


ತರುವಾಯ ರಾಜ್ಯಪಾಲನ ಸೈನಿಕರು ಯೇಸುವನ್ನು ರಾಜಭವನದೊಳಕ್ಕೆ ತೆಗೆದುಕೊಂಡುಹೋಗಿ ಸೈನ್ಯದ ಪೂರ್ಣತಂಡವನ್ನು ಯೇಸುವಿನ ಸುತ್ತಲೂ ಕೂಡಿಸಿದರು.


ಈ ಮಾರ್ಗದ ವಿಷಯದ ಬಗ್ಗೆ ಬಹು ಸೂಕ್ಷ್ಮವಾಗಿ ತಿಳಿದುಕೊಂಡಿದ್ದ ಫೇಲಿಕ್ಸನು ವಿಚಾರಣೆಯನ್ನು ಮುಂದಕ್ಕೆ ಹಾಕಿದನು. ಅನಂತರ ಅವನು, “ಸಹಸ್ರಾಧಿಪತಿ ಲೂಸ್ಯನು ಬಂದ ಮೇಲೆ ನಿನ್ನ ಈ ವ್ಯಾಜ್ಯ ತೀರ್ಮಾನಿಸುತ್ತೇನೆ,” ಎಂದು ಹೇಳಿದನು.


ಆದರೆ ಏಷ್ಯಾ ಪ್ರಾಂತದ ಕೆಲವು ಜನ ಯೆಹೂದ್ಯರು ಅಲ್ಲಿಗೆ ಬಂದಿದ್ದರು. ಅವರಿಗೆ ನನ್ನ ಮೇಲೆ ಏನಾದರೂ ವಿರೋಧವಿದ್ದರೆ, ಅವರು ನಿಮ್ಮ ಸನ್ನಿಧಿಯಲ್ಲಿ ಈಗ ಬಂದು ನನ್ನ ಮೇಲೆ ಅಪರಾಧ ಹೊರಿಸಲಿ.


ರಾಜ್ಯಪಾಲನು ಪೌಲನಿಗೆ ಮಾತನಾಡಬೇಕೆಂದು ಸನ್ನೆಮಾಡಿದಾಗ, ಪೌಲನು ಕೊಟ್ಟ ಉತ್ತರವಿದು: “ಅನೇಕ ವರ್ಷಗಳಿಂದ ತಾವು ಈ ದೇಶದ ಮೇಲೆ ನ್ಯಾಯಾಧೀಶರಾಗಿರುವುದನ್ನು ನಾನು ಬಲ್ಲೆ. ಆದ್ದರಿಂದ ನಾನು ಸಂತೋಷದಿಂದ ನನ್ನ ಪ್ರತಿವಾದವನ್ನು ತಮ್ಮ ಮುಂದಿಡುತ್ತೇನೆ.


ಐದು ದಿನಗಳ ನಂತರ ಮಹಾಯಾಜಕ ಅನನೀಯನು ಕೆಲವು ಹಿರಿಯರೊಂದಿಗೆ ಕೈಸರೈಯಕ್ಕೆ ಬಂದನು. ತನ್ನೊಂದಿಗೆ ಟೆರ್ಟುಲಸ್ ಎಂಬ ವಕೀಲನನ್ನು ಕರೆದುಕೊಂಡು ಬಂದು, ರಾಜ್ಯಪಾಲನಿಗೆ ಪೌಲನ ವಿರೋಧವಾಗಿ ದೂರುಗಳನ್ನಿಟ್ಟರು.


ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ರೋಮನ್ ರಾಜ್ಯಪಾಲನ ನಿವಾಸಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಅಶುದ್ಧವಾಗದಂತೆ ಪಸ್ಕದ ಊಟಮಾಡುವುದಕ್ಕೆ ಅಡ್ಡಿಯಾದೀತೆಂದು ಅವರು ರಾಜ್ಯಪಾಲನ ನಿವಾಸದ ಒಳಗೆ ಹೋಗಲಿಲ್ಲ.


ಜ್ಞಾನಿಗಳು ತನಗೆ ಮೋಸಮಾಡಿದರೆಂದು ತಿಳಿದ ಹೆರೋದನು ಬಹಳ ಕೋಪಗೊಂಡನು, ಜ್ಞಾನಿಗಳಿಂದ ಸೂಕ್ಷ್ಮವಾಗಿ ವಿಚಾರಿಸಿಕೊಂಡ ಪ್ರಕಾರವೇ, ಬೇತ್ಲೆಹೇಮ್ ಮತ್ತು ಅದರ ಸುತ್ತಮುತ್ತಲ ಪ್ರದೇಶದಲ್ಲಿದ್ದ ಎರಡು ವರ್ಷದೊಳಗಿನ ಎಲ್ಲಾ ಗಂಡು ಮಕ್ಕಳನ್ನು ಕೊಂದುಹಾಕಿಸಿದನು.


ಇದನ್ನು ಕೇಳಿ ಹೆರೋದ ರಾಜನು ಮತ್ತು ಯೆರೂಸಲೇಮಿನ ಜನರೆಲ್ಲರು ಕಳವಳಗೊಂಡರು.


ಹೆರೋದ ರಾಜನ ಕಾಲದಲ್ಲಿ, ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಜನಿಸಿದಾಗ, ಪೂರ್ವ ದೇಶದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು,


ಹೀಗೆ ಹಗ್ಗಗಳಿಂದ ಯೆರೆಮೀಯನನ್ನು ಎಳೆದು, ಅವನನ್ನು ಬಾವಿಯೊಳಗಿಂದ ಎತ್ತಿದನು. ಆಮೇಲೆ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ಉಳಿದನು.


ಪೌಲನನ್ನು ಕಾವಲಿನಲ್ಲಿಡಬೇಕೆಂತಲೂ ಅವನ ಸ್ನೇಹಿತರು ಅವನನ್ನು ಸಂದರ್ಶಿಸಲು ಅಡ್ಡಿಮಾಡಬಾರದೆಂತಲೂ ಶತಾಧಿಪತಿಗೆ ಆಜ್ಞೆಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು