Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:15 - ಕನ್ನಡ ಸಮಕಾಲಿಕ ಅನುವಾದ

15 ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಿದೆಯೆಂದು ಈ ಜನರು ಎದುರುನೋಡುವಂತೆಯೇ ದೇವರಲ್ಲಿ ನನಗೂ ನಿರೀಕ್ಷೆಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ ನೀತಿವಂತರಿಗೂ ಮತ್ತು ಅನೀತಿವಂತರಿಗೂ ಪುನರುತ್ಥಾನವಾಗುವುದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮಾನವರು ಸಜ್ಜನರಾಗಿರಲಿ, ದುರ್ಜನರಾಗಿರಲಿ, ಪುನರುತ್ಥಾನ ಹೊಂದುವರೆಂದು ಇವರಂತೆಯೇ ನಾನು ದೇವರಲ್ಲಿ ನಂಬಿಕೆಯುಳ್ಳವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಾಗುವದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈ ಯೆಹೂದ್ಯರಿಗೆ ದೇವರಲ್ಲಿ ಯಾವ ನಿರೀಕ್ಷೆಯಿದೆಯೋ ಅದೇ ನಿರೀಕ್ಷೆ ನನಗೂ ಇದೆ. ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಾಗುತ್ತದೆ ಎಂಬುದೇ ಆ ನಿರೀಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಹ್ಯಾ ಲೊಕಾಕ್ನಿ ದೆವಾಚೆರ್ ಹೊತ್ತೊ ಬರೊಸೊಚ್ ಮಾಕಾಬಿ ಹಾಯ್, ನಿತಿವಂತ್ ಹೊತ್ಯಾಕ್ನಿಬಿ ಅನಿ ನಿತಿವಂತ್ ನ್ಹಯ್ ಅಸಲ್ಲ್ಯಾಕ್ನಿ ಬಿ ಪರ್ತುನ್ ಜಿವ್ ಹೊತಲೆ ಹಾಯ್ ಮನ್ತಲೊಚ್ ತೊ ಬರೊಸೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:15
16 ತಿಳಿವುಗಳ ಹೋಲಿಕೆ  

ಭೂಮಿಯ ಧೂಳಿನೊಳಗೆ ನಿದ್ರೆ ಮಾಡುವವರಲ್ಲಿ ಅನೇಕರು ಎಚ್ಚತ್ತು, ಕೆಲವರು ನಿತ್ಯಜೀವವನ್ನೂ ಮತ್ತು ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಧನ್ಯರೂ ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಯೇಸುಕ್ರಿಸ್ತರೊಂದಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷಗಳ ಕಾಲ ಆಳುವರು.


ಹೀಗೆ ಕ್ರಿಸ್ತ ಯೇಸು ಎಲ್ಲವನ್ನೂ ತಮಗೆ ಅಧೀನ ಮಾಡಿಕೊಳ್ಳುವ ತಮ್ಮ ಶಕ್ತಿಯ ಪ್ರಕಾರ, ಮಹಿಮೆಯುಳ್ಳ ತಮ್ಮ ದೇಹಕ್ಕೆ ಸಮವಾಗಿ ಸಾರೂಪ್ಯವಾಗುವಂತೆ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸುವರು.


‘ಇಂದು ನಾನು ನಿಮ್ಮ ಮುಂದೆ ನ್ಯಾಯವಿಚಾರಣೆಗೆ ನಿಂತಿರುವುದು ಸತ್ತವರ ಪುನರುತ್ಥಾನಕ್ಕೆ ಸಂಬಂಧಿಸಿದ್ದು,’ ಎಂದು ಅವರ ಮಧ್ಯದಲ್ಲಿ ನಿಂತು ಕೂಗಿದ್ದನ್ನು ಬಿಟ್ಟರೆ ಬೇರೆ ಏನನ್ನೂ ಇವರು ಹೇಳಲಾರರು,” ಎಂದನು.


“ಹೀಗೆ ಇವರು ನಿತ್ಯವಾದ ಶಿಕ್ಷೆಗೆ ಒಳಗಾಗುವರು. ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು,” ಎಂದು ಹೇಳುವೆನು.


ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವುದಕ್ಕೆ ಆಗದಿರುವುದರಿಂದ, ನೀನು ಧನ್ಯನಾಗುವೆ. ಏಕೆಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವುದು.”


ಮಾರ್ಥಳು ಯೇಸುವಿಗೆ, “ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನು ಪುನಃ ಎದ್ದು ಬರುವನೆಂದು ನಾನು ಬಲ್ಲೆನು,” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು