Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:18 - ಕನ್ನಡ ಸಮಕಾಲಿಕ ಅನುವಾದ

18 ನಾನು ಇದನ್ನು ಮಾಡುತ್ತಾ ದೇವಾಲಯದಲ್ಲಿದ್ದಾಗ ನಾನು ಶುದ್ಧಾಚಾರ ಮಾಡುತ್ತಿರುವುದನ್ನು ಇವರು ಕಂಡರು. ನನ್ನೊಂದಿಗೆ ಜನರ ಗುಂಪು ಇರಲಿಲ್ಲ. ನಾನು ಗೊಂದಲವನ್ನೆಬ್ಬಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ಶುದ್ಧಮಾಡಿಕೊಂಡವನಾಗಿ, ಅವುಗಳನ್ನು ಒಪ್ಪಿಸುತ್ತಿರುವಲ್ಲಿ, ಇವರು ನನ್ನನ್ನು ದೇವಾಲಯದಲ್ಲಿ ಕಂಡರು; ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಗದ್ದಲವೂ ಇರಲಿಲ್ಲ. ನನ್ನನ್ನು ಕಂಡವರು ಆಸ್ಯಸೀಮೆಯಿಂದ ಬಂದ ಕೆಲವು ಯೆಹೂದ್ಯರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಶುದ್ಧಾಚಾರದ ವಿಧಿಯನ್ನು ಮುಗಿಸಿಕೊಂಡು, ನನ್ನೀ ಕಾರ್ಯದಲ್ಲಿ ನಿರತನಾಗಿದ್ದಾಗ ಇವರು ನನ್ನನ್ನು ಮಹಾದೇವಾಲಯದಲ್ಲಿ ಕಂಡರು. ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಯಾವ ಗಲಭೆಗೂ ಅವಕಾಶವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾನು ಶುದ್ಧಮಾಡಿಕೊಂಡವನಾಗಿ ಅವುಗಳನ್ನು ಒಪ್ಪಿಸುತ್ತಿರುವಲ್ಲಿ ನನ್ನನ್ನು ದೇವಾಲಯದಲ್ಲಿ ಕಂಡರು. ನನ್ನ ಬಳಿಯಲ್ಲಿ ಜನರ ಗುಂಪು ಇರಲಿಲ್ಲ, ಗದ್ದಲವೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನು ಈ ಕಾರ್ಯದಲ್ಲಿ ನಿರತನಾಗಿದ್ದಾಗ ಕೆಲವು ಮಂದಿ ಯೆಹೂದ್ಯರು ನನ್ನನ್ನು ದೇವಾಲಯದಲ್ಲಿ ಕಂಡರು. ನಾನು ಶುದ್ಧಾಚಾರದ ವಿಧಿಯನ್ನು ಮುಗಿಸಿದ್ದೆನು. ನಾನು ಯಾವ ಗಲಭೆಯನ್ನೂ ಮಾಡಿರಲಿಲ್ಲ. ನನ್ನ ಸುತ್ತಲೂ ಯಾವ ಜನರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಿಯಾ ಹೆ ಕಾಮಾ ಕರಿತ್ ರಾತಾನಾ ಥೊಡ್ಯಾ ಲೊಕಾನಿ ಮಾಕಾ ದೆವಾಚ್ಯಾ ಗುಡಿತ್ ಬಗ್ಲ್ಯಾನಿ, ಕಶೆ ನಿತಳ್ ರಾವ್ಚೆ ಮನುನ್ ಮಿಯಾ ಸಾಂಗಲೊ ಕಸ್ಲೊ ಧಾಂದಲ್ ಬಿ ಕರುಕ್ ನತ್ತೊ. ಮಾಜ್ಯಾ ಅಜುಭಾಜುಕ್ ಖಲಿಬಿ ಲೊಕಾ ನತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:18
7 ತಿಳಿವುಗಳ ಹೋಲಿಕೆ  

ಈ ಕಾರಣದಿಂದಲೇ ಯೆಹೂದ್ಯರು ನನ್ನನ್ನು ದೇವಾಲಯದಲ್ಲಿ ಬಂಧಿಸಿ ಕೊಲ್ಲಲು ಪ್ರಯತ್ನಿಸಿದರು.


ದೇವಾಲಯದಲ್ಲಾಗಲಿ, ಸಭಾಮಂದಿರದಲ್ಲಾಗಲಿ, ಪಟ್ಟಣದ ಯಾವುದೇ ಸ್ಥಳದಲ್ಲಾಗಲಿ ನಾನು ವಾಗ್ವಾದ ಮಾಡುತ್ತಿದ್ದುದ್ದನ್ನು ಅಥವಾ ಜನರ ಗುಂಪನ್ನು ಕೂಡಿಸುವುದನ್ನು ಇವರು ಕಂಡಿಲ್ಲ.


ಪಾರ್ಥಿಯರು, ಮೇದ್ಯರು ಹಾಗೂ ಏಲಾಮ್ಯರು, ಮೆಸೊಪೊಟೇಮಿಯ, ಯೂದಾಯ, ಕಪ್ಪದೋಕ್ಯ, ಪೊಂತ, ಏಷ್ಯಾ,


ಆದರೆ, “ಬಿಡುಗಡೆ ಹೊಂದಿದವರು” ಎಂಬ ಯೆಹೂದ್ಯ ಸಭಾಮಂದಿರಕ್ಕೆ ಸೇರಿದವರಿಂದ ವಿರೋಧ ಉಂಟಾಯಿತು. ಅವರು ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಮತ್ತು ಏಷ್ಯಾ ಪ್ರಾಂತಗಳಿಂದ ಬಂದ ಯೆಹೂದ್ಯರಾಗಿದ್ದರು. ಅವರು ಸ್ತೆಫನನೊಂದಿಗೆ ತರ್ಕಿಸುವುದಕ್ಕೆ ಪ್ರಾರಂಭಿಸಿದರು.


ನೀನು ಇವರನ್ನು ಕರೆದುಕೊಂಡು ಹೋಗಿ, ಅವರೊಂದಿಗೆ ನಿನ್ನನ್ನು ಶುದ್ಧಿಮಾಡಿಕೊಂಡು, ಅವರು ತಮ್ಮ ಕ್ಷೌರ ಮಾಡಿಸಿಕೊಳ್ಳುವ ಖರ್ಚನ್ನು ನೀನೇ ಪೂರೈಸು. ಆಗ ನಿನ್ನ ವಿಷಯದಲ್ಲಿ ಕೇಳಿರುವ ಸಂಗತಿಗಳು ನಿಜವಲ್ಲ ಮತ್ತು ನೀನು ಮೋಶೆಯ ನಿಯಮಕ್ಕನುಸಾರವಾಗಿ ನಡೆದುಕೊಳ್ಳುತ್ತೀ ಎಂದು ಎಲ್ಲರಿಗೂ ತಿಳಿದುಬರುವುದು.


ನೀನು ನನ್ನನ್ನು ಪ್ರಶ್ನಿಸುವುದೇಕೆ? ನಾನು ಅವರಿಗೆ ಏನು ಮಾತನಾಡಿದ್ದೇನೆಂದು ಕೇಳಿದವರನ್ನೇ ಪ್ರಶ್ನಿಸು, ನಾನು ಹೇಳಿದ್ದನ್ನು ಅವರು ತಿಳಿದಿದ್ದಾರೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು