Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:25 - ಕನ್ನಡ ಸಮಕಾಲಿಕ ಅನುವಾದ

25 ನೀತಿ, ದಮೆ, ಬರಲಿಕ್ಕಿರುವ ನ್ಯಾಯವಿಚಾರಣೆಯ ಬಗ್ಗೆ ಪೌಲನು ವಿವರಿಸಿದಾಗ, ಫೇಲಿಕ್ಸ್ ಹೆದರಿಕೊಂಡವನಾಗಿ, “ಈಗ ಇಷ್ಟೇ ಸಾಕು! ಸದ್ಯಕ್ಕೆ ನೀನು ಹೋಗಬಹುದು. ಅನಂತರ ನಾನು ಸಮಯ ಸಿಕ್ಕಿದಾಗ ನಿನ್ನನ್ನು ಪುನಃ ಕರೆಯಿಸುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಪೌಲನು ನೀತಿ, ಶಮೆದಮೆ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; “ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆದರೆ ನೀತಿನಿಯಮ, ಇಂದ್ರಿಯನಿಗ್ರಹ, ಬರಲಿರುವ ದೈವತೀರ್ಪಿನ ದಿನ ಇವುಗಳನ್ನು ಪ್ರಸ್ತಾಪಿಸಿದಾಗ ಫೆಲಿಕ್ಸನು ದಿಗಿಲುಗೊಂಡನು. “ಸದ್ಯಕ್ಕೆ, ನೀನು ಹೋಗಬಹುದು; ಸಮಯ ಒದಗಿದಾಗ ನಿನ್ನನ್ನು ಕರೆಯಿಸುತ್ತೇನೆ,” ಎಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಪೌಲನು ಸುನೀತಿ ದಯೆ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ - ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರಿಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದರೆ ನೀತಿಯಬಾಳ್ವೆ, ಇಂದ್ರಿಯನಿಗ್ರಹ ಮತ್ತು ಮುಂದೆ ಬರಲಿರುವ ನ್ಯಾಯತೀರ್ಪುಗಳ ಬಗ್ಗೆ ಪೌಲನು ಮಾತಾಡಿದಾಗ ಅವನು ಭಯಗೊಂಡು, “ಈಗ ನೀನು ಹೋಗು! ನನಗೆ ಹೆಚ್ಚು ಸಮಯವಿರುವಾಗ ನಿನ್ನನ್ನು ಕರೆಯಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಖರೆ ಪಾವ್ಲು ಥೈತ್ನಾ ಜಾವ್ನ್ ಖರೆಪಾನಾಚ್ಯಾ ವಿಶಯಾತ್ ಚರ್ಚಾ ಕರುನ್ ಸ್ವನಿಯಂತ್ರನ್ ಅನಿ ಪಿಡೆ ಯೆತಲ್ಲ್ಯಾ ಝಡ್ತಿಚ್ಯಾ ದಿಸಾಚ್ಯಾ ವಿಶಯಾತ್ ಬೊಲ್ತಾನಾ ಫೆಲಿಕ್ಸಾನ್ ಭಿಂವ್ನ್, “ಅತ್ತಾ ತಿಯಾ ಜಾ! ಮಾಕಾ ಅವಕಾಸ್ ಗಾವಲ್ಲ್ಯಾ ತನ್ನಾ ತುಕಾ ಬಲ್ವುತಾ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:25
99 ತಿಳಿವುಗಳ ಹೋಲಿಕೆ  

ಆ ಸಹಾಯಕರು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ವಿಷಯಗಳಲ್ಲಿ ಲೋಕದವರಿಗೆ ಮನವರಿಕೆಯನ್ನು ಮಾಡುವರು.


ಆದರೆ ಕ್ರಿಸ್ತ ಯೇಸುವನ್ನು ನಿಮ್ಮ ಹೃದಯಗಳಲ್ಲಿ “ಕರ್ತದೇವರು” ಎಂದು ಪ್ರತಿಷ್ಠೆ ಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವದಿಂದಲೂ ಗೌರವದಿಂದಲೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧವಾಗಿರಿ.


ಜ್ಞಾನಕ್ಕೆ ಸ್ವಯಂ ನಿಯಂತ್ರಣವನ್ನೂ ಸ್ವಯಂ ನಿಯಂತ್ರಣಕ್ಕೆ ತಾಳ್ಮೆಯನ್ನೂ


ಸಾತ್ವಿಕತೆ, ಸಂಯಮ ಇಂಥವುಗಳೇ. ಇವುಗಳಿಗೆ ವಿರೋಧವಾಗಿ ಯಾವ ನಿಯಮವೂ ಇಲ್ಲ.


ಜೀವಿಸುವವರಿಗೂ ಸತ್ತವರಿಗೂ ನ್ಯಾಯಾಧೀಶರಾಗಿ ದೇವರಿಂದ ನೇಮಕವಾದವರು ಯೇಸುವೇ ಎಂದು ನಾವು ಜನರಿಗೆ ಬೋಧಿಸಿ ಸಾಕ್ಷಿ ಕೊಡಬೇಕೆಂದೂ ಕ್ರಿಸ್ತ ಯೇಸು ನಮಗೆ ಆಜ್ಞಾಪಿಸಿದ್ದಾರೆ.


ಪ್ರಿಯ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತ ಯೇಸು ಹೇಗೆ ನೀತಿವಂತರಾಗಿದ್ದಾರೋ ಹಾಗೆಯೇ ನೀತಿಯನ್ನು ಅನುಸರಿಸುವವರು ನೀತಿವಂತರಾಗಿದ್ದಾರೆ.


ದೇವರು ಒಬ್ಬರೇ ಎಂದು ನೀನು ನಂಬುತ್ತೀ, ಅದು ಒಳ್ಳೆಯದು, ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.


ಒಂದೇ ಸಾರಿ ಸಾಯುವುದೂ ತರುವಾಯ ನ್ಯಾಯತೀರ್ಪು ಪಡೆಯುವುದೂ ಮನುಷ್ಯರಿಗಾಗಿ ನೇಮಕವಾಗಿದೆ.


ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರುವೆವು ಎಂಬ ವಾಗ್ದಾನವು ಇನ್ನೂ ಉಳಿದಿರಲು ನಿಮ್ಮಲ್ಲಿ ಯಾರಾದರೂ ಅದನ್ನು ಹೊಂದದೆ ಇರಬಾರದು ಎಂದು ಎಚ್ಚರವಹಿಸೋಣ.


ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ, “ಈ ಹೊತ್ತು” ಎಂಬುದು ಇರುವವರೆಗೆ ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.


ಆದರೆ ಸಮಸ್ತವೂ ಪಾಪದ ಅಧೀನಕ್ಕೆ ಒಳಗಾಯಿತು ಎಂದು ಪವಿತ್ರ ವೇದ ಸ್ಪಷ್ಟೀಕರಿಸುತ್ತದೆ. ಇದು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬರಿಗೂ ಮಾಡಿದ ವಾಗ್ದಾನವು ಅವರ ನಂಬಿಕೆಯ ಆಧಾರವಾಗಿ ಕೊಡಲಾಗುತ್ತದೆ.


ಏಕೆಂದರೆ, ನಾವೆಲ್ಲರೂ ನಮ್ಮ ದೇಹದ ಮೂಲಕ ನಡೆಸಿದ ಒಳ್ಳೆಯದಕ್ಕಾಗಲಿ, ಕೆಟ್ಟದ್ದಕ್ಕಾಗಲಿ ಸಿಗಬೇಕಾದ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿಕೊಳ್ಳಲೇಬೇಕು.


ಇವರು ದೇವರ ಮಕ್ಕಳೆಂಬುದೂ ಅವರು ಸೈತಾನನ ಮಕ್ಕಳೆಂಬುದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರ ಮಗುವಲ್ಲ.


ದೇವರ ಮುಂದೆಯೂ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸಲು ಕರ್ತ ಆಗಿರುವ ಕ್ರಿಸ್ತ ಯೇಸುವಿನ ಮುಂದೆಯೂ ಅವರ ಪ್ರತ್ಯಕ್ಷತೆ ಹಾಗೂ ಅವರ ರಾಜ್ಯದ ಮುಂದೆಯೂ ನಾನು ನಿನಗೆ ಆಜ್ಞಾಪಿಸಿ ಹೇಳುವುದೇನೆಂದರೆ:


ಏಕೆಂದರೆ ದೇವರು ಹೇಳಿದ ಹಾಗೆ, “ಪ್ರಸನ್ನತೆಯ ಕಾಲದಲ್ಲಿ ನಿನ್ನ ಪ್ರಾರ್ಥನೆಯನ್ನು ನಾನು ಲಾಲಿಸಿದೆನು. ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದೆನು,” ಇಗೋ, ಇದೇ ದೇವರ ಮೆಚ್ಚುಗೆಯ ಕಾಲ, ಈಗಲೇ ರಕ್ಷಣೆಯ ದಿನ.


ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.


ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಿದೆಯೆಂದು ಈ ಜನರು ಎದುರುನೋಡುವಂತೆಯೇ ದೇವರಲ್ಲಿ ನನಗೂ ನಿರೀಕ್ಷೆಯಿದೆ.


ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ, ಅವರಲ್ಲಿ ಕೆಲವರು ಪರಿಹಾಸ್ಯ ಮಾಡಿದರು. ಇತರರು, “ನಾವು ಇನ್ನೊಮ್ಮೆ ಈ ವಿಷಯದ ಮೇಲೆ ನೀನು ಮಾತನಾಡುವುದನ್ನು ಕೇಳುತ್ತೇವೆ,” ಎಂದರು.


ಪೌಲನು ತನ್ನ ವಾಡಿಕೆಯಂತೆ ಮೂರು ಸಬ್ಬತ್ ದಿನಗಳಂದು ಅವರ ಬಳಿ ಹೋಗಿ, ಅವರಲ್ಲಿ ಪವಿತ್ರ ವೇದಗಳ ಬಗ್ಗೆ ವಾದಿಸಿ,


ಜನರು ಇದನ್ನು ಕೇಳಿದಾಗ ಅವರಿಗೆ ಹೃದಯದಲ್ಲಿ ಅಲಗು ನೆಟ್ಟಂತಾಗಿ, “ಸಹೋದರರೇ, ನಾವೇನು ಮಾಡಬೇಕು?” ಎಂದು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ ಕೇಳಿದರು.


ದೀಕ್ಷಾಸ್ನಾನಗಳ ಬೋಧನೆಯೂ ಹಸ್ತಾರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಮುಂತಾದವುಗಳನ್ನು ಪುನಃ ಅಸ್ತಿವಾರವನ್ನಾಗಿ ಹಾಕದೆ, ನಾವು ಪರಿಪೂರ್ಣತೆಗೆ ಹೋಗೋಣ.


“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಯೆಹೋವ ದೇವರ ಆಲಯವನ್ನು ಕಟ್ಟುವ ಕಾಲವು ಇನ್ನೂ ಬಂದಿಲ್ಲ,’ ಎಂದು ಈ ಜನರು ಅಂದುಕೊಳ್ಳುತ್ತಾರೆ.”


ನಾನು ಕೇಳಿದಾಗ ನನ್ನ ಹೃದಯ ಬಡಿದುಕೊಂಡಿತು; ಆ ಶಬ್ದಕ್ಕೆ ನನ್ನ ತುಟಿಗಳು ಕದಲಿದವು; ನನ್ನ ಎಲುಬುಗಳು ಕ್ಷಯಗೊಂಡವು; ನನ್ನ ಕಾಲುಗಳು ನಡುಗಿದವು; ಆದರೂ ನಮ್ಮ ಮೇಲೆ ದಾಳಿಮಾಡುವ ಜನರ ಮೇಲೆ ನಾಶನ ಬರುವುದನ್ನು ನೋಡಲು ತಾಳ್ಮೆಯಿಂದ ಕಾದಿರುವೆನು.


ಕುದುರೆಗಳು ಬಂಡೆಯ ಮೇಲೆ ಓಡುವುದುಂಟೇ? ಎತ್ತುಗಳಿಂದ ಅಲ್ಲಿ ಉಳುವನೋ? ನಿಮ್ಮ ನ್ಯಾಯವನ್ನು ವಿಷವನ್ನಾಗಿ, ನೀತಿ ಫಲವನ್ನು ಕಹಿಯನ್ನಾಗಿ ಬದಲಾಯಿಸಿದ್ದೀರಿ.


ಆದರೆ ನ್ಯಾಯವು ನೀರಿನಂತೆಯೂ ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ.


ನಿಮಗಾಗಿ ನೀತಿಯ ಬೀಜವನ್ನು ಬಿತ್ತಿರಿ. ಪ್ರೀತಿಯ ಫಲವನ್ನು ಕೊಯ್ಯಿರಿ. ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ. ಏಕೆಂದರೆ ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವವರೆಗೂ ಯೆಹೋವ ದೇವರನ್ನು ಹುಡುಕುವ ಸಮಯ ಇದೇ.


ಅವರು ಮಾತುಗಳನ್ನಾಡಿ ಒಡಂಬಡಿಕೆಯನ್ನು ಮಾಡುವುದಕ್ಕೆ ಸುಳ್ಳು ಪ್ರಮಾಣವನ್ನು ಮಾಡುತ್ತಾರೆ. ಆದ್ದರಿಂದ ನ್ಯಾಯತೀರ್ಪು ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ.


ನಮ್ಮ ಅರಸನ ಹಬ್ಬದ ದಿವಸಗಳಲ್ಲಿ ರಾಜಕುಮಾರರು ದ್ರಾಕ್ಷಾರಸವನ್ನು ಕುಡಿದು ಮತ್ತರಾಗುತ್ತಾರೆ. ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.


ಭೂಮಿಯ ಧೂಳಿನೊಳಗೆ ನಿದ್ರೆ ಮಾಡುವವರಲ್ಲಿ ಅನೇಕರು ಎಚ್ಚತ್ತು, ಕೆಲವರು ನಿತ್ಯಜೀವವನ್ನೂ ಮತ್ತು ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.”


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನೂ ಸುಲಿಗೆಯನ್ನೂ ಬಿಡಿರಿ. ನ್ಯಾಯವನ್ನೂ ನೀತಿಯನ್ನೂ ನಡೆಸಿರಿ. ನನ್ನ ಜನರನ್ನು ಓಡಿಸಬೇಡಿರಿ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


“ನನ್ನ ವಾಕ್ಯ ಬೆಂಕಿಗೆ ಸಮಾನ, ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ.” ಇದು ಯೆಹೋವ ದೇವರಾದ ನನ್ನ ನುಡಿ.


ಏಕೆಂದರೆ ಯೆಹೋವನಾದ ನಾನು ನ್ಯಾಯವನ್ನು ಪ್ರೀತಿಮಾಡುತ್ತೇನೆ. ಸುಲಿಗೆಯನ್ನೂ ಅನ್ಯಾಯವನ್ನೂ ಹಗೆಮಾಡುತ್ತೇನೆ. ನನ್ನ ನಿಷ್ಠೆಯಲ್ಲಿ ನಾನು ನನ್ನ ಜನರಿಗೆ ಪ್ರತಿಫಲ ನೀಡುತ್ತೇನೆ ಮತ್ತು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.


ಯೆಹೋವ ದೇವರು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ, ಆತನು ಸಮೀಪದಲ್ಲಿರುವಾಗ, ಆತನಿಗೆ ಬಿನ್ನಹ ಮಾಡಿರಿ.


“ನಿಮ್ಮ ವ್ಯಾಜ್ಯವನ್ನು ತನ್ನಿರಿ” ಎಂದು ಯೆಹೋವ ದೇವರು ಹೇಳುತ್ತಾರೆ. “ನಿಮ್ಮ ಬಲವಾದ ನ್ಯಾಯಗಳನ್ನು ತನ್ನಿರಿ,” ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ.


ನಿಶ್ಚಿಂತೆಯುಳ್ಳ ಸ್ತ್ರೀಯರೇ, ನೀವು ನಡುಗಿರಿ. ನಿರ್ಭೀತ ಪುತ್ರಿಯರೇ, ಕಳವಳಗೊಳ್ಳಿರಿ. ನಿಮ್ಮ ಬಟ್ಟೆಯನ್ನು ಕಿತ್ತುಹಾಕಿ, ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.


ಪ್ರೀತಿಯಲ್ಲಿ ಸಿಂಹಾಸನವು ಸ್ಥಾಪಿತವಾಗುವುದು. ನ್ಯಾಯತೀರಿಸುವವನೂ, ನ್ಯಾಯವನ್ನು ಹುಡುಕುವವನೂ, ನೀತಿಗೋಸ್ಕರ ತ್ವರೆಪಡುವವನೂ, ದಾವೀದನ ಗುಡಾರದಲ್ಲಿ ಅದರ ಮೇಲೆ ನಂಬಿಗಸ್ತಿಕೆಯಲ್ಲಿ ಕೂತುಕೊಳ್ಳುವನು.


ನಂಬಿಗಸ್ತಿಕೆಯ ಪಟ್ಟಣವು ವ್ಯಭಿಚಾರದ ಪಟ್ಟಣವಾಗಿದೆಯಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆಯಾಗಿತ್ತು. ಆದರೆ ಈಗ ಕೊಲೆಗಾರರಿಂದ ತುಂಬಿದೆ.


ಇದಲ್ಲದೆ ಆ ದೃಶ್ಯವು ಎಷ್ಟೋ ಭಯಂಕರವಾದದ್ದರಿಂದ ಮೋಶೆಯು, “ನಾನು ಭಯದಿಂದಲೂ ನಡುಕದಿಂದಲೂ ತುಂಬಿದವನಾಗಿದ್ದೇನೆ!” ಎಂದು ಹೇಳಿದನು.


ಹೀಗಿರುವಾಗ ನಮ್ಮಲ್ಲಿ ಪ್ರತಿಯೊಬ್ಬರೂ ತಮ್ಮ ಬಗ್ಗೆ ದೇವರಿಗೆ ಲೆಕ್ಕ ಒಪ್ಪಿಸಬೇಕು.


ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು.


ನಾನು ಸಾರುವ ಸುವಾರ್ತೆಯ ಪ್ರಕಾರ ದೇವರು ಕ್ರಿಸ್ತ ಯೇಸುವಿನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ವಿಚಾರಿಸುವ ದಿನದಲ್ಲಿ ಇವೆಲ್ಲಾ ಸಂಭವಿಸುವುದು.


ಆಗ ಅಗ್ರಿಪ್ಪನು ಪೌಲನಿಗೆ, “ಅಲ್ಪ ಸಮಯದಲ್ಲಿಯೇ ನನ್ನನ್ನು ಕ್ರಿಸ್ತ ವಿಶ್ವಾಸಿಯನ್ನಾಗಿ ಮಾಡಬೇಕೆಂದಿದ್ದೀಯಾ?” ಎಂದನು.


ಆದರೆ ಪೌಲನು ದೇವರ ವಾಕ್ಯವನ್ನು ಬೆರೋಯದಲ್ಲಿ ಬೋಧಿಸುತ್ತಿದ್ದಾನೆಂಬುದು ಥೆಸಲೋನಿಕದಲ್ಲಿದ್ದ ಯೆಹೂದ್ಯರಿಗೆ ತಿಳಿದುಬಂದಾಗ ಅವರು ಅಲ್ಲಿಗೂ ಬಂದು, ಜನಸಮೂಹವನ್ನು ಪ್ರಚೋದಿಸಿ ಗಲಭೆ ಎಬ್ಬಿಸಿದರು.


ಎದ್ದೇಳು ಪಟ್ಟಣದೊಳಗೆ ಹೋಗು, ನೀನು ಏನು ಮಾಡಬೇಕು ಎಂಬುದನ್ನು ಅಲ್ಲಿ ನಿನಗೆ ತಿಳಿಸಲಾಗುವುದು,” ಎಂದು ಕರ್ತ ಯೇಸು ಹೇಳಿದರು.


“ಆದರೆ ಅವರು ಅದನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟು ಹೋದರು.


ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಹತನಾದನು.


ಯೆಹೋವ ದೇವರು ಹೇಳುವುದೇನೆಂದರೆ: ನ್ಯಾಯವನ್ನೂ, ನೀತಿಯನ್ನೂ ನಡೆಸಿರಿ. ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಪರದೇಶಸ್ಥನಿಗೆ, ದಿಕ್ಕಿಲ್ಲದವನಿಗೆ ಮತ್ತು ವಿಧವೆಗೆ ಉಪದ್ರವವನ್ನಾದರೂ, ಬಲಾತ್ಕಾರವನ್ನಾದರೂ ಮಾಡಬೇಡಿರಿ. ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲಬೇಡಿರಿ.


ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯೇ. ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಕಟಾಕ್ಷಿಸುವವನು ಎಂಥವನೆಂದರೆ: ದೀನನೂ, ಮನಮುರಿದವನೂ, ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


“ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಹಿಮದಂತೆ ಬೆಳ್ಳಗಾಗುವುವು. ರಕ್ತದಂತೆ ಕಡುಕೆಂಪಾಗಿದ್ದರೂ ಉಣ್ಣೆಯಂತೆ ಆಗುವುವು.


ಏಕೆಂದರೆ ಒಳ್ಳೆಯದಾಗಿರಲಿ, ಕೆಟ್ಟದ್ದಾಗಿರಲಿ, ದೇವರು ಆ ಎಲ್ಲಾ ಕಾರ್ಯಗಳನ್ನೂ ಪ್ರತಿಯೊಂದು ರಹಸ್ಯವನ್ನೂ ನ್ಯಾಯವಿಚಾರಣೆಗೆ ತರುವರು.


ಯುವಕನೇ, ನಿನ್ನ ಯೌವನದಲ್ಲಿ ಸಂತೋಷಪಡು. ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ. ನೀನು ನಿನ್ನ ಮನಸ್ಸಿಗೆ ಬಂದಂತೆಯೂ ನಿನ್ನ ಕಣ್ಣಿನ ನೋಟದಂತೆಯೂ ನಡೆ. ಆದರೆ ಈ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯವಿಚಾರಿಸುವರು ಎಂದು ತಿಳಿದುಕೋ.


ದೇಶದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯ ನಿರಾಕರಿಸಿದ್ದನ್ನೂ ನೀನು ನೋಡಿದರೆ, ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಮತ್ತೊಬ್ಬ ಉನ್ನತ ಅಧಿಕಾರಿಗಳು ಇದ್ದಾರೆ.


ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು. ಏಕೆಂದರೆ ನೀತಿಯಿಂದ ಸಿಂಹಾಸನವು ಸ್ಥಾಪಿಸಲಾಗುತ್ತದೆ.


ನಿಮ್ಮ ಭಯದಿಂದ ನನ್ನ ಶರೀರವು ನಡುಗುತ್ತದೆ; ನಿಮ್ಮ ನಿಯಮಗಳಿಗೆ ನಾನು ಭಯಭಕ್ತಿಯುಳ್ಳವನಾಗಿದ್ದೇನೆ.


ಯೆಹೋವ ದೇವರು ಆಳಿಕೆ ಮಾಡುತ್ತಾರೆ. ರಾಷ್ಟ್ರಗಳು ನಡುಗಲಿ. ಅವರು ಕೆರೂಬಿಗಳ ಮಧ್ಯದಲ್ಲಿ ಕೂತಿದ್ದಾರೆ. ಭೂಮಿಯು ಕದಲಲಿ.


ಅರಸನು ನಿಮ್ಮ ಜನರಿಗೆ ನೀತಿಯಿಂದಲೂ ನಿಮ್ಮ ಬಾಧೆಪಟ್ಟ ಪ್ರಜೆಗೆ ನ್ಯಾಯದಿಂದಲೂ ತೀರ್ಪುಮಾಡಲಿ.


ನೀವು ನೀತಿಯನ್ನು ಪ್ರೀತಿಸುತ್ತೀರಿ, ಅನೀತಿಯನ್ನು ದ್ವೇಷಿಸುತ್ತೀರಿ. ಆದ್ದರಿಂದ ದೇವರೇ, ನಿಮ್ಮ ದೇವರು, ನಿಮ್ಮ ಸಂಗಡಿಗರಿಗಿಂತ ನಿಮ್ಮನ್ನು ಉನ್ನತಗೊಳಿಸಿ ಆನಂದ ತೈಲದಿಂದ ಅಭಿಷೇಕಿಸಿದ್ದಾರೆ.


ಏಕೆಂದರೆ ಯೆಹೋವ ದೇವರು ನೀತಿಯುಳ್ಳವರು. ಅವರು ನ್ಯಾಯವನ್ನು ಪ್ರೀತಿಸುತ್ತಾರೆ; ಯಥಾರ್ಥರು ಅವರ ಮುಖವನ್ನು ದೃಷ್ಟಿಸುವರು.


ನಾನು ನೀತಿಯನ್ನು ನನ್ನ ಬಟ್ಟೆಯಂತೆ ಧರಿಸಿದ್ದೆನು; ನನ್ನ ನ್ಯಾಯವು ನಿಲುವಂಗಿಯ ಹಾಗೆಯೂ ಪೇಟದ ಹಾಗೆಯೂ ಇರುತ್ತಿತ್ತು.


ಆಗ ಯೆಹೂದ ಮತ್ತು ಬೆನ್ಯಾಮೀನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿದರು. ಅದು ಒಂಬತ್ತನೆಯ ತಿಂಗಳ, ಇಪ್ಪತ್ತನೆಯ ದಿವಸವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಆ ಕಾರ್ಯಕ್ಕೋಸ್ಕರವೂ, ಮಳೆಗೋಸ್ಕರವೂ ನಡುಗಿ ಕುಳಿತುಕೊಂಡಿದ್ದರು.


ಆದಕಾರಣ ನಮ್ಮ ಒಡೆಯನಾದ ನಿನ್ನ ಯೋಚನೆಯ ಪ್ರಕಾರವಾಗಿಯೂ, ನಮ್ಮ ದೇವರ ಆಜ್ಞೆಗೆ ಭಯಪಡುವವರ ಯೋಚನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ, ಅವರಿಂದ ಹುಟ್ಟಿದವರನ್ನೂ ಕಳುಹಿಸಿಬಿಡಲು, ಈಗಲೇ ನಮ್ಮ ದೇವರ ಮುಂದೆ ಒಡಂಬಡಿಕೆ ಮಾಡಿಕೊಂಡು, ದೇವರ ನಿಯಮದ ಪ್ರಕಾರ ನಡೆಯೋಣ.


ಈ ಸ್ಥಳವೂ ಅದರ ನಿವಾಸಿಗಳೂ ನಾಶಕ್ಕೂ ಶಾಪಕ್ಕೂ ಗುರಿಯಾಗುವರೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ, ನಿನ್ನ ಹೃದಯವು ಮೃದುವಾಗಿ ನೀನು ನಿನ್ನನ್ನು ಯೆಹೋವ ದೇವರ ಮುಂದೆ ತಗ್ಗಿಸಿಕೊಂಡೆ. ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಸಮ್ಮುಖದಲ್ಲಿ ಕಣ್ಣೀರು ಸುರಿಸಿದ್ದರಿಂದ ನಾನು ನಿನ್ನ ಮೊರೆಯನ್ನು ಕೇಳಿದೆನು.


ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ, ಅವನು ತನ್ನ ವಸ್ತ್ರಗಳನ್ನು ಹರಿದು, ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು, ಉಪವಾಸಮಾಡುತ್ತಾ ದೀನತೆಯಿಂದ ನಡೆದನು.


ಇಸ್ರಾಯೇಲಿನ ದೇವರೂ, ಇಸ್ರಾಯೇಲಿನ ಬಂಡೆಯಾದವರೂ ನನಗೆ ಮಾತನಾಡಿದ್ದು: ‘ಮನುಷ್ಯರ ಮೇಲೆ ನೀತಿಯಿಂದ ಆಳುವವನು, ದೇವರ ಭಯದಿಂದ ಆಳುವವನು.


ಆದ್ದರಿಂದ ಈಗ ನಿಲ್ಲಿರಿ. ಯೆಹೋವ ದೇವರು ನಿಮಗೂ, ನಿಮ್ಮ ಪಿತೃಗಳಿಗೂ ಮಾಡಿದ ಸಮಸ್ತ ನೀತಿಯುಳ್ಳ ಕ್ರಿಯೆಗಳ ವಿಷಯ ಯೆಹೋವ ದೇವರ ಮುಂದೆ ನಿಮಗೆ ನ್ಯಾಯ ಹೇಳುತ್ತೇನೆ.


ಅದೇ ಸಮಯದಲ್ಲಿ ಅವನು ಪೌಲನು ತನಗೇನಾದರು ಹಣ ಕೊಡುವನೋ ಎಂಬುದಾಗಿಯೂ ನಿರೀಕ್ಷಿಸಿ, ಆಗಾಗ್ಗೆ ಅವನನ್ನು ಕರೆಯಿಸಿ ಅವನೊಂದಿಗೆ ಮಾತನಾಡುತ್ತಿದ್ದನು.


ಆಗ ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು, “ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇವೆ,” ಎಂದು ಬಾರೂಕನಿಗೆ ಹೇಳಿದರು.


ಆದರೆ, ಅವನು ಅತಿಥಿ ಸತ್ಕಾರ ಮಾಡುವವನೂ ಒಳ್ಳೆಯದನ್ನು ಪ್ರೀತಿಸುವವನೂ ಸ್ವಯಂನಿಯಂತ್ರವುಳ್ಳವನೂ ನ್ಯಾಯವಂತನೂ ಪರಿಶುದ್ಧನೂ ಶಿಸ್ತುಳ್ಳವನಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು