Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:26 - ಕನ್ನಡ ಸಮಕಾಲಿಕ ಅನುವಾದ

26 ಅದೇ ಸಮಯದಲ್ಲಿ ಅವನು ಪೌಲನು ತನಗೇನಾದರು ಹಣ ಕೊಡುವನೋ ಎಂಬುದಾಗಿಯೂ ನಿರೀಕ್ಷಿಸಿ, ಆಗಾಗ್ಗೆ ಅವನನ್ನು ಕರೆಯಿಸಿ ಅವನೊಂದಿಗೆ ಮಾತನಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅದೇ ಸಮಯದಲ್ಲಿ ಅವನು ಪೌಲನು ತನಗೇನಾದರೂ ಹಣಕೊಡುವನೋ ಎಂಬುದಾಗಿಯೂ ನಿರೀಕ್ಷಿಸಿ, ಆಗಾಗ್ಗೆ ಅವನನ್ನು ಕರೆಯಿಸಿ, ಅವನೊಂದಿಗೆ ಸಲ್ಲಾಪಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇದಲ್ಲದೆ, ಪೌಲನು ತನಗೆ ಹಣವನ್ನು ಕೊಡಬಹುದೆಂಬ ನಿರೀಕ್ಷೆ ಅವನದಾಗಿತ್ತು. ಈ ಕಾರಣದಿಂದಲೇ ಅವನನ್ನು ಪದೇ ಪದೇ ಕರೆಯಿಸಿ, ಅವನೊಡನೆ ಮಾತುಕತೆ ನಡೆಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇದಲ್ಲದೆ ತನಗೆ ಪೌಲನಿಂದ ಹಣ ಸಿಕ್ಕೀತೆಂಬ ನಿರೀಕ್ಷೆ ಅವನಿಗಿದ್ದ ಕಾರಣ ಅವನನ್ನು ಬಾರಿಬಾರಿಗೂ ಕರಿಸಿ ಅವನ ಸಂಗಡ ಸಲ್ಲಾಪಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದರೆ ಪೌಲನು ಲಂಚ ಕೊಡಬಹುದೆಂದು ಅವನು ನಿರೀಕ್ಷಿಸಿಕೊಂಡಿದ್ದರಿಂದ ಅವನು ಅನೇಕ ಸಲ ಪೌಲನನ್ನು ಕರೆಯಿಸಿ ಅವನೊಂದಿಗೆ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಪಾವ್ಲುಕ್ನಾ ಅಪ್ನಾಕ್ ಪೈಸೆ ಗಾವ್ತಾ ಕಾಯ್ಕಿ ಮನುನ್ ತೆನಿ ಬರೊಸೊ ಕರುನ್ ಲೈಂದಾ ಪಾವ್ಲುಕ್ ಬಲ್ವುನ್ ತೆಚ್ಯಾ ವಾಂಗ್ಡಾ ಬೊಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:26
29 ತಿಳಿವುಗಳ ಹೋಲಿಕೆ  

ನ್ಯಾಯದ ಮಾರ್ಗಗಳನ್ನು ತಿರುಗಿಸಿಬಿಡುವುದಕ್ಕೆ ದುಷ್ಟನು ಗುಪ್ತವಾಗಿ ಲಂಚವನ್ನು ತೆಗೆದುಕೊಳ್ಳುತ್ತಾನೆ.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಅಂಥವರಿಗೆ ಬಹುಕಾಲದ ಹಿಂದೆಯೇ ದೇವರ ತೀರ್ಪು ಸಿದ್ಧಪಡಿಸಲಾಗಿದೆ. ಅವರಿಗಾಗುವ ವಿನಾಶವು ತೂಕಡಿಸುವುದಿಲ್ಲ.


ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ: ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,


“ಅನೇಕ ವರ್ಷಗಳ ನಂತರ ದಾನಧರ್ಮಗಳನ್ನೂ ಕಾಣಿಕೆಗಳನ್ನೂ ನನ್ನ ಸ್ವದೇಶದವರಿಗೆ ಕೊಡಲು ಬಂದೆನು.


ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವಂತೆ ಆಡಳಿತಗಾರರು ಉಡುಗೊರೆಗಳನ್ನು ಕೇಳುತ್ತಾರೆ. ನ್ಯಾಯಾಧಿಪತಿಗಳು ಲಂಚವನ್ನು ತೆಗೆದುಕೊಳ್ಳುತ್ತಾರೆ. ಶಕ್ತಿಶಾಲಿ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರೆಲ್ಲರೂ ಒಟ್ಟಾಗಿ ಒಳಸಂಚುಮಾಡುತ್ತಾರೆ.


ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ. ಅದರ ಪ್ರವಾದಿಗಳು ಹಣಕ್ಕೆ ಶಕುನ ಹೇಳುತ್ತಾರೆ. ಆದರೂ ಯೆಹೋವ ದೇವರ ಮೇಲೆ ಆತುಕೊಂಡು, “ಯೆಹೋವ ದೇವರು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವುದಿಲ್ಲ,” ಎನ್ನುತ್ತಾರೆ.


ಅವರು ಮಿತಿಮೀರಿ ಕುಡಿಯುತ್ತಾರೆ. ಅವರು ಯಾವಾಗಲೂ ವ್ಯಭಿಚಾರ ಮಾಡುವವರಾಗಿದ್ದಾರೆ. ಅವರನ್ನು ಆಳುವವರು ಅವಮಾನ ಕಾರ್ಯಗಳಲ್ಲಿ ಇಷ್ಟಪಡುತ್ತಾರೆ.


ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು. ಅವರು ನಿನ್ನ ವಾಕ್ಯಗಳನ್ನು ಕೇಳುವರು. ಆದರೆ ಅವರು ಅವುಗಳನ್ನು ಪಾಲಿಸುವುದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು. ಆದರೆ ಅವರ ಹೃದಯವು ಅನ್ಯಾಯದ ಲಾಭದ ಕಡೆಗೆ ಹೋಗುವುದು.


ಅಲ್ಲಿಯ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ಪ್ರಾಣಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿದ್ದಾರೆ.


ಹೌದು, ಎಂದಿಗೂ ಸಾಕೆನ್ನದ ಹೊಟ್ಟೆಬಾಕ ನಾಯಿಗಳು ಮತ್ತು ಅವರು ಗ್ರಹಿಕೆ ಇಲ್ಲದ ಕುರುಬರು, ಅವರೆಲ್ಲರೂ ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ, ಪ್ರತಿಯೊಬ್ಬನೂ ತನ್ನ ಲಾಭ ಸಿಕ್ಕುವ ಕಡೆಗೂ ತಿರುಗಿಕೊಳ್ಳುವನು.


ನೀತಿಯಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈಚಾಚಿದೆ. ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ಕಾಣದಂತೆ ಕಣ್ಣು ಮುಚ್ಚಿಕೊಳ್ಳುವವರೇ ಉನ್ನತ ಸ್ಥಳದಲ್ಲಿ ವಾಸಿಸುವರು.


ನಿನ್ನ ಪ್ರಭುಗಳು ಎದುರುಬೀಳುವವರೂ, ಕಳ್ಳರ ಜೊತೆಗಾರರೂ ಆಗಿದ್ದಾರೆ. ಪ್ರತಿಯೊಬ್ಬನೂ ಲಂಚ ಪ್ರಿಯನೂ, ಬಹುಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ. ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವುದಿಲ್ಲ.


ನ್ಯಾಯದಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ, ಆದರೆ ಲಂಚಕೋರ ಅಧಿಕಾರಿ ದೇಶವನ್ನು ಕೆಡವಿ ಹಾಕುತ್ತಾನೆ.


ಅನೇಕರು ಅಧಿಪತಿಯಿಂದ ಸಹಾಯ ಪಡೆಯುತ್ತಾರೆ. ಕಾಣಿಕೆಗಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.


ಕೊಡುವವನ ಕಣ್ಣಿಗೆ ಲಂಚವು ಆಕರ್ಷಣೆಯಾಗಿದೆ; ಪ್ರತಿ ತಿರುವಿನಲ್ಲಿಯೂ ಯಶಸ್ಸು ಬರುತ್ತದೆ ಎಂದು ಅವರು ಭಾವಿಸುತ್ತಾರೆ.


ದೇವರಿಲ್ಲದವರ ಸಹವಾಸ ಬಂಜರು, ಬೆಂಕಿಯು ಲಂಚಕೋರರ ಮನೆಗಳನ್ನು ಸುಟ್ಟುಹಾಕುವುದು.


ಆದಕಾರಣ ಯೆಹೋವ ದೇವರ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡೆಯಿರಿ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಬಳಿಯಲ್ಲಿ ಅನ್ಯಾಯವಾದರೂ, ಮುಖದಾಕ್ಷಿಣ್ಯವಾದರೂ, ಲಂಚ ತೆಗೆದುಕೊಳ್ಳುವುದಾದರೂ ಇಲ್ಲ,” ಎಂದನು.


ನಾನು ಇಲ್ಲಿದ್ದೇನೆ. ಯೆಹೋವ ದೇವರ ಮುಂದೆಯೂ, ಅವರ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿ ಕೊಡಿರಿ. ನಾನು ಯಾರ ಎತ್ತನ್ನಾದರೂ, ಕತ್ತೆಯನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ, ತಿರುಗಿಕೊಡುತ್ತೇನೆ,” ಎಂದನು.


ಆದರೆ ಅವರು ಸಮುಯೇಲನ ಮಾರ್ಗದಲ್ಲಿ ನಡೆಯದೆ, ಅಪ್ರಾಮಾಣಿಕತೆಯಿಂದ ಹಣ ಸಂಪಾದಿಸಿ, ಲಂಚವನ್ನು ತೆಗೆದುಕೊಂಡು, ನ್ಯಾಯವನ್ನು ತಪ್ಪಿಸುತ್ತಿದ್ದರು.


ನೀವು ನ್ಯಾಯವನ್ನು ಕೆಡಿಸಬಾರದು. ನೀವು ಮುಖದಾಕ್ಷಿಣ್ಯ ನೋಡಬಾರದು, ಇಲ್ಲವೆ ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.


“ಲಂಚವನ್ನು ತೆಗೆದುಕೊಳ್ಳಬಾರದು. ಏಕೆಂದರೆ ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.


ಇದಲ್ಲದೆ ಮೋಶೆಯೂ ಎಲೀಯನೂ ಅವರಿಗೆ ಕಾಣಿಸಿಕೊಂಡು ಯೇಸುವಿನೊಂದಿಗೆ ಮಾತನಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು