Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:23 - ಕನ್ನಡ ಸಮಕಾಲಿಕ ಅನುವಾದ

23 ಮರುದಿನ ಅಗ್ರಿಪ್ಪನು ಹಾಗೂ ಬೆರ್ನಿಕೆಯು ಮಹಾ ವೈಭವದಿಂದ ಸೈನ್ಯಾಧಿಕಾರಿಗಳೊಂದಿಗೂ ಪಟ್ಟಣದ ಗಣ್ಯವ್ಯಕ್ತಿಗಳೊಂದಿಗೂ ಆಸ್ಥಾನವನ್ನು ಪ್ರವೇಶಿಸಿದರು. ಫೆಸ್ತನ ಆಜ್ಞೆಯಂತೆ ಪೌಲನನ್ನು ಕರೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮರುದಿನ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಂಗಣದೊಳಗೆ ಸೇರಿಬಂದಾಗ ಫೆಸ್ತನು ಅಪ್ಪಣೆ ಕೊಡಲು, ಪೌಲನನ್ನು ಕರತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಮಾರನೆಯ ದಿನ ಅಗ್ರಿಪ್ಪ ಮತ್ತು ಬೆರ್ನಿಸ್ ಮಹಾಸಡಗರದಿಂದ ಆಗಮಿಸಿದರು. ಸೇನಾಧಿಪತಿಗಳ ಹಾಗೂ ಪುರಪ್ರಮುಖರ ಸಮೇತ ಆಸ್ಥಾನವನ್ನು ಪ್ರವೇಶಿಸಿದರು. ಫೆಸ್ತನ ಆಜ್ಞೆಯ ಪ್ರಕಾರ ಪೌಲನನ್ನು ಹಾಜರುಪಡಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮರುದಿನ ಅಗ್ರಿಪ್ಪರಾಜನೂ ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಸ್ಥಾನದೊಳಗೆ ಸೇರಿದಾಗ ಫೆಸ್ತನು ಅಪ್ಪಣೆಕೊಡಲು ಪೌಲನನ್ನು ಕರತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಮರುದಿನ ಅಗ್ರಿಪ್ಪ ರಾಜ ಮತ್ತು ಬೆರ್ನಿಕೆ ರಾಣಿ ವೈಭವದ ಬಟ್ಟೆಗಳನ್ನು ಧರಿಸಿಕೊಂಡು ಸೇನಾಧಿಕಾರಿಗಳೊಡನೆ ಹಾಗೂ ಸೆಜರೇಯದ ಪ್ರಮುಖರೊಡನೆ ನ್ಯಾಯಾಲಯದೊಳಗೆ ಬಂದರು. ಪೌಲನನ್ನು ಒಳಗೆ ಕರೆದುಕೊಂಡು ಬರಬೇಕೆಂದು ಫೆಸ್ತನು ಸೈನಿಕರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ದುಸ್ರ್ಯಾಂದಿಸಿ ಅಗ್ರಿಪ್ಪರಾಜಾ, ಅನಿ ಬೆರ್ನಿಕೆ ರಾನಿ ಆಡಂಬರಾಚೆ ಕಪ್ಡೆನೆಸುನ್ ಘೆವ್ನ್ ಸೈನಿಕಾಂಚ್ಯಾ ಅಧಿಕಾರ್ಯ್ಯಾಚ್ಯಾ ವಾಂಗ್ಡಾ ಅನಿ ಸೆಜರೆಯಾತ್ಲ್ಯಾ ಪ್ರಮುಖ್ ಲೊಕಾಂಚ್ಯಾ ವಾಂಗ್ಡಾ ಝಡ್ತಿ ಕರ್‍ತಲ್ಯಾ ಜಾಗ್ಯಾರ್ ಯೆಲೆ, ತನ್ನಾ ಪಾವ್ಲುಕ್ ಭುತ್ತುರ್ ಹಾನುಚೆ ಮನುನ್ ಫೆಸ್ತಾನ್ ಸೈನಿಕಾಕ್ನಿ ಹುಕುಮ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:23
18 ತಿಳಿವುಗಳ ಹೋಲಿಕೆ  

ರಾಜನು ಎದ್ದೇಳಲು ಅವನೊಂದಿಗೆ ರಾಜ್ಯಪಾಲನೂ ಬೆರ್ನಿಕೆಯೂ ಅವರೊಂದಿಗೆ ಕುಳಿತಿದ್ದವರೆಲ್ಲರೂ ಎದ್ದರು.


ಕೆಲವು ದಿನಗಳ ನಂತರ ಫೆಸ್ತನನ್ನು ಅಭಿನಂದಿಸಲು ರಾಜ ಅಗ್ರಿಪ್ಪನು ಬೆರ್ನಿಕೆಯಳೊಂದಿಗೆ ಕೈಸರೈಯಕ್ಕೆ ಬಂದನು.


ಏಕೆಂದರೆ ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಯಿಂದ ಬಂದವುಗಳಲ್ಲ, ಲೋಕದಿಂದ ಬಂದವುಗಳಾಗಿವೆ.


“ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯರ ಪ್ರಭಾವವೆಲ್ಲಾ ಹೊಲದ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು. ಅದರ ಹೂವು ಉದುರಿ ಹೋಗುವುದು.


ಸೂರ್ಯನು ಉದಯಿಸಿದ ತರುವಾಯ ಉಷ್ಣತೆಯಿಂದ ಗಿಡ ಬಾಡಲು, ಅದರ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುವುದಷ್ಟೆ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿಗಳಲ್ಲಿ ಬಾಡಿಹೋಗುವನು.


ಲೋಕದ ವಸ್ತುಗಳನ್ನು ಉಪಯೋಗಿಸುವವರು ಅದರಲ್ಲಿಯೇ ಮಗ್ನರಾಗದಿರಲಿ. ಏಕೆಂದರೆ ಈಗಿರುವ ಪ್ರಪಂಚ ಗತಿಸಿಹೋಗುತ್ತಿದೆ.


ನೇಮಕವಾದ ದಿನ ಹೆರೋದನು ತನ್ನ ರಾಜವಸ್ತ್ರಗಳನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತುಕೊಂಡು ಜನರನ್ನುದ್ದೇಶಿಸಿ ಬಹಿರಂಗ ಭಾಷಣ ಮಾಡಿದನು.


ಆದರೆ ಕರ್ತ ಯೇಸುವು ಅವನಿಗೆ, “ಹೋಗು! ಯೆಹೂದ್ಯರಲ್ಲದವರಿಗೂ ಅವರ ಅರಸುಗಳಿಗೂ ಇಸ್ರಾಯೇಲ್ ದೇಶಕ್ಕೂ ನನ್ನ ಹೆಸರನ್ನು ಪ್ರಸಿದ್ಧಿಪಡಿಸಲು ಅವನು ನಾನು ಆಯ್ದುಕೊಂಡ ಸಾಧನವಾಗಿದ್ದಾನೆ.


ಆಗ ಅರಸನು, “ನಾನು ನನ್ನ ಪರಾಕ್ರಮದ ಬಲದಿಂದಲೂ, ನನ್ನ ಮಹಿಮೆಯ ಕೀರ್ತಿಗಾಗಿಯೂ ಕಟ್ಟಿಸಿದ ಮಹಾ ಬಾಬಿಲೋನು ಇದಲ್ಲವೇ?” ಎಂದನು.


ನಾನು ಈ ದೇಶವನ್ನು ಹಾಳುಪಾಳುಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವುದು. ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅದರ ಮೂಲಕ ಹಾದು ಹೋಗುವುದಿಲ್ಲ.


ಪರಾಕ್ರಮಶಾಲಿಗಳ ಖಡ್ಗಗಳಿಂದ ಜನಾಂಗಗಳಲ್ಲಿ ಭಯಂಕರರಾಗಿರುವ ನಿನ್ನ ಸಮೂಹವನ್ನು ನಾನು ಬೀಳುವಂತೆ ಮಾಡುವೆನು. ಅವರು ಈಜಿಪ್ಟಿನ ಮಹತ್ತನ್ನು ಕೆಡಿಸುವರು. ಅದರ ಜನಸಮೂಹವೆಲ್ಲಾ ಹಾಳಾಗುವುದು.


ನಾನು ಈಜಿಪ್ಟಿನ ನೊಗಗಳನ್ನು ಮುರಿಯುವಾಗ ತಹಪನೇಸಿನಲ್ಲಿ ಹಗಲು ಕತ್ತಲಾಗುವುದು. ಅದರ ಶಕ್ತಿಯ ಮದವು ಅಡಗಿಹೋಗುವುದು. ಅದನ್ನು ಮೇಘವು ಮುಚ್ಚುವುದು. ಅದರ ಪುತ್ರಿಯರು ಸೆರೆಗೆ ಹೋಗುವರು.


ಆದಕಾರಣ ನಾನು ಇತರ ಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶಪಡಿಸಿಕೊಳ್ಳುವರು. ನಾನು ಬಲಿಷ್ಠರ ಅಹಂಕಾರವನ್ನು ನಿಲ್ಲಿಸುತ್ತೇನೆ. ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವುವು.


ನಿನ್ನ ವೈಭವವೂ, ನಿನ್ನ ವೀಣೆಗಳ ಸ್ವರವೂ ಸಮಾಧಿಗೆ ಇಳಿದಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ.


ಹೀಗಿರುವುದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ವೈಭವ, ಸಮೂಹ, ಕೋಲಾಹಲ, ಉಲ್ಲಾಸಪಡುವುದು ಇವೆಲ್ಲವೂ ಅದರಲ್ಲಿ ಬೀಳುವುವು.


“ವ್ಯರ್ಥಗಳಲ್ಲಿ ವ್ಯರ್ಥ! ವ್ಯರ್ಥಗಳಲ್ಲಿ ವ್ಯರ್ಥ!” ಎಂದು ಪ್ರಸಂಗಿ ಹೇಳುತ್ತಾನೆ. “ಸಮಸ್ತವೂ ವ್ಯರ್ಥ! ಎಲ್ಲವೂ ವ್ಯರ್ಥ.”


ಅವನು ನೂರ ಎಂಬತ್ತು ದಿವಸಗಳವರೆಗೆ ತನ್ನ ಘನವುಳ್ಳ ರಾಜ್ಯದ ಐಶ್ವರ್ಯವನ್ನೂ ತನ್ನ ವೈಭವ ಹಾಗು ಆಡಂಬರವನ್ನು ತೋರಿಸಿದನು.


ಕೊನೆಗೆ ಅನುಕೂಲವಾದ ಸಮಯ ಸಿಕ್ಕಿತು. ತನ್ನ ಜನ್ಮ ದಿನದಂದು ಹೆರೋದನು ತನ್ನ ಉನ್ನತ ಅಧಿಕಾರಿಗಳಿಗೆ, ಸೇನಾಧಿಪತಿಗಳಿಗೆ ಹಾಗೂ ಗಲಿಲಾಯದ ಪ್ರಮುಖರಿಗೆ ಔತಣವನ್ನು ಏರ್ಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು