Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:10 - ಕನ್ನಡ ಸಮಕಾಲಿಕ ಅನುವಾದ

10 ಹಾಗೆಯೇ ನಾನು ಯೆರೂಸಲೇಮಿನಲ್ಲಿ ಮಾಡಿದೆನು. ಮುಖ್ಯಯಾಜಕರ ಅಧಿಕಾರ ಪಡೆದು ಅನೇಕ ಭಕ್ತರನ್ನು ಸೆರೆಮನೆಗೆ ಹಾಕಿಸಿದೆನು. ಅವರನ್ನು ಮರಣದಂಡನೆಗೆ ಒಪ್ಪಿಸುವಾಗ, ಅವರಿಗೆ ವಿರುದ್ಧವಾಗಿ ಮತ ಚಲಾಯಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆರೂಸಲೇಮಿನಲ್ಲಿ ಹಾಗೆಯೇ ಮಾಡಿದ್ದೆನು. ಮುಖ್ಯಯಾಜಕರಿಂದ, ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇರಿಸಿ, ಅವರಿಗೆ ಮರಣದ ತೀರ್ಪಾದಾಗ, ನಾನು ಅದಕ್ಕೆ ಸಮ್ಮತಿಯನ್ನು ಸೂಚಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಂತೆಯೇ ಜೆರುಸಲೇಮಿನಲ್ಲೇ ಈ ಕಾರ್ಯವನ್ನು ಆರಂಭಿಸಿದೆ . ಮುಖ್ಯ ಯಾಜಕರಿಂದ ಅಧಿಕಾರ ಪಡೆದು ದೇವಜನರಲ್ಲಿ ಅನೇಕರನ್ನು ನಾನು ಸೆರೆಮನೆಗೆ ತಳ್ಳಿದೆ. ಅವರಿಗೆ ಮರಣದಂಡನೆ ವಿಧಿಸಿದಾಗ ನಾನೂ ಅದನ್ನು ಅನುಮೋದಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆರೂಸಲೇವಿುನಲ್ಲಿ ಹಾಗೆಯೇ ನಡಿಸಿದೆನು. ಮಹಾಯಾಜಕರಿಂದ ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇಡಿಸಿ ಅವರಿಗೆ ಮರಣದ ತೀರ್ಪಾದಾಗ ನನ್ನ ಸಮ್ಮತಿಯನ್ನು ಸೂಚಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಜೆರುಸಲೇಮಿನಲ್ಲಿ ವಿಶ್ವಾಸಿಗಳ ವಿರೋಧವಾಗಿ ಅನೇಕ ಕಾರ್ಯಗಳನ್ನು ಮಾಡಿದೆ. ಈ ವಿಶ್ವಾಸಿಗಳಲ್ಲಿ ಅನೇಕರನ್ನು ಸೆರೆಮನೆಗೆ ಹಾಕಲು ಮಹಾಯಾಜಕರು ನನಗೆ ಅಧಿಕಾರವನ್ನು ಕೊಟ್ಟರು. ಯೇಸುವಿನ ಶಿಷ್ಯರನ್ನು ಕೊಂದಾಗ ಅದಕ್ಕೆ ನಾನೂ ನನ್ನ ಸಮ್ಮತಿಯನ್ನು ಸೂಚಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆರುಜಲೆಮಾತ್ ದೆವಾಚ್ಯಾ ಲೊಕಾಕ್ನಿ ವಿರೊಧ್ ಹೊವ್ನ್ ಲೈ ಕಾಮಾ ಕರಲ್ಲೊ ಹ್ಯಾ ದೆವಾಚ್ಯಾ ಲೊಕಾಕ್ನಿ ಬಂದಿಖಾನ್ಯಾತ್ ಘಾಲುಕ್ ಮುಖ್ಯ್ ಯಾಜಕಾನಿ ಮಾಕಾ ಅಧಿಕಾರ್ ದಿಲ್ಯಾನಿ, ಜೆಜುಚ್ಯಾ ಸಿಸಾಕ್ನಿ ಜಿವಾನಿ ಮಾರಲ್ಲ್ಯಾ ತನ್ನಾ ಮಿಯಾ ತೆಕಾ ಒಪ್ಗಿ ದಿಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:10
17 ತಿಳಿವುಗಳ ಹೋಲಿಕೆ  

ಆದರೆ ಸೌಲನು ಸಭೆಯನ್ನು ಹಾಳುಮಾಡಲು ಪ್ರಾರಂಭಿಸಿದನು. ಅವನು ಮನೆಮನೆಗಳಿಗೆ ಹೋಗಿ ಸ್ತ್ರೀಪುರುಷರನ್ನು ಹೊರಗೆಳೆದು ಅವರನ್ನು ಸೆರೆಮನೆಯಲ್ಲಿ ಹಾಕಿಸಿದನು.


ಅವನ ಮಾತುಗಳನ್ನು ಕೇಳಿದವರಿಗೆ ಅತ್ಯಾಶ್ಚರ್ಯವಾಯಿತು. ಅವರು, “ಈ ಹೆಸರನ್ನು ಹೇಳುವವರೆಲ್ಲರಿಗೆ ಯೆರೂಸಲೇಮಿನಲ್ಲಿ ತೊಂದರೆಕೊಟ್ಟು ಗೊಂದಲವೆಬ್ಬಿಸಿದವನು ಇವನೇ ಅಲ್ಲವೇ? ಅಂಥವರನ್ನು ಸೆರೆಹಿಡಿದು ಮುಖ್ಯಯಾಜಕರ ಬಳಿಗೆ ಎಳೆದೊಯ್ಯಲು ಇಲ್ಲಿಗೆ ಬಂದವನಲ್ಲವೇ?” ಎಂದು ಪ್ರಶ್ನಿಸಿಕೊಂಡರು.


ನಾನಾದರೋ ಅಪೊಸ್ತಲರಲ್ಲಿ ಕನಿಷ್ಠನು, ಅಪೊಸ್ತಲನೆನಿಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ, ಏಕೆಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿದೆನು.


ಸೌಲನು ಯೆರೂಸಲೇಮಿಗೆ ಬಂದು, ಶಿಷ್ಯರ ಜೊತೆಯಲ್ಲಿರಲು ಪ್ರಯತ್ನಿಸಿದನು. ಆದರೆ ಅವನು ನಿಜವಾಗಿಯೂ ಶಿಷ್ಯನೆಂದು ನಂಬದೆ ಅವರು ಅವನಿಗೆ ಭಯಪಟ್ಟಿದ್ದರು.


ಸೌಲನು ಸ್ತೆಫನನ ಕೊಲೆಗೆ ಸಮ್ಮತಿಸಿದ್ದನು. ಆ ದಿನವೇ ಯೆರೂಸಲೇಮಿನ ಸಭೆಗೆ ವಿರೋಧವಾಗಿ ಮಹಾಹಿಂಸೆ ಪ್ರಾರಂಭವಾಯಿತು, ಅಪೊಸ್ತಲರನ್ನು ಬಿಟ್ಟು ಉಳಿದವರೆಲ್ಲರೂ ಯೂದಾಯ ಮತ್ತು ಸಮಾರ್ಯ ಪ್ರಾಂತಗಳಿಗೆ ಚದರಿಹೋದರು.


ಅವನನ್ನು ಪಟ್ಟಣದ ಹೊರಗೆ ಎಳೆದುಕೊಂಡು ಹೋಗಿ ಅವನ ಮೇಲೆ ಕಲ್ಲೆಸೆಯಲು ಪ್ರಾರಂಭಿಸಿದರು. ಆ ಸಮಯದಲ್ಲಿ ಸಾಕ್ಷಿಗಳು ತಮ್ಮ ಬಟ್ಟೆಗಳನ್ನು ಸೌಲ ಎಂಬ ಹೆಸರಿನ ಒಬ್ಬ ಯುವಕನ ಪಾದಗಳ ಬಳಿಯಲ್ಲಿಟ್ಟಿದ್ದರು.


ಆ ಸ್ತ್ರೀಯು ಪರಿಶುದ್ಧರ ರಕ್ತವನ್ನೂ ಮತ್ತು ಯೇಸುವಿನ ಸಾಕ್ಷಿಗಳಾಗಿದ್ದವರ ರಕ್ತವನ್ನೂ ಕುಡಿದಿರುವುದನ್ನು ನಾನು ಕಂಡೆನು. ಆಕೆಯನ್ನು ನಾನು ಕಂಡಾಗ, ಬಹು ಆಶ್ಚರ್ಯಗೊಂಡೆನು.


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು, ಎಫೆಸದಲ್ಲಿರುವ ಭಕ್ತರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ ಬರೆಯುತ್ತಿರುವುದು:


ನಾನು ಯೆಹೂದ್ಯ ವಿಶ್ವಾಸದಲ್ಲಿದ್ದಾಗ ನನ್ನ ಹಿಂದಿನ ನಡತೆಯನ್ನು ನೀವು ಕೇಳಿದ್ದೀರಷ್ಟೇ. ನಾನು ದೇವರ ಸಭೆಯನ್ನು ಮಿತಿಮೀರಿ ಹಿಂಸೆಪಡಿಸಿ ಹಾಳುಮಾಡಲು ಯತ್ನಿಸುತ್ತಿದ್ದೆನು.


ಪೇತ್ರನು ಆಕೆಯ ಕೈಯನ್ನು ಹಿಡಿದು ಆಕೆ ಎದ್ದು ನಿಂತುಕೊಳ್ಳುವಂತೆ ಮಾಡಿದನು. ಅನಂತರ ದೇವಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ಆಕೆಯನ್ನು ಅವರಿಗೆ ಒಪ್ಪಿಸಿಕೊಟ್ಟನು.


ಪೇತ್ರನು ಬೇರೆ ಬೇರೆ ಕಡೆಗಳಲ್ಲಿ ಪ್ರಯಾಣಮಾಡಿದ ತರುವಾಯ ಲುದ್ದದಲ್ಲಿಯ ದೇವಭಕ್ತರನ್ನು ಸಂದರ್ಶಿಸಲು ಹೋದನು.


ಭೂಲೋಕದಲ್ಲಿರುವ ದೇವಜನರ ಕುರಿತು, “ಇವರೇ ನನಗೆ ಶ್ರೇಷ್ಠರು. ಇವರಲ್ಲಿಯೇ ನನ್ನ ಎಲ್ಲಾ ಆನಂದವು,” ಎಂದು ಹೇಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು