Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:18 - ಕನ್ನಡ ಸಮಕಾಲಿಕ ಅನುವಾದ

18 ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು ನನ್ನಲ್ಲಿ ನಂಬಿಕೆಯಿಡುವದರಿಂದ ಪಾಪಪರಿಹಾರವನ್ನೂ ಪವಿತ್ರರಾದವರಲ್ಲಿ ಹಕ್ಕನ್ನೂ ಹೊಂದುವಂತೆ ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀನು ಅವರಿಗೆ ಸತ್ಯವನ್ನು ತಿಳಿಸಿ ಅವರನ್ನು ಕತ್ತಲೆಯಿಂದ ಬೆಳಕಿಗೆ ಬರುವಂತೆಯೂ ಸೈತಾನನ ಅಧಿಕಾರಕ್ಕೆ ವಿಮುಖರಾಗಿ ದೇವರ ಕಡೆಗೆ ತಿರುಗಿಕೊಳ್ಳುವಂತೆಯೂ ಮಾಡಬೇಕು. ಆಗ ಅವರ ಪಾಪಗಳು ಕ್ಷಮಿಸಲ್ಪಡುತ್ತವೆ. ನನ್ನಲ್ಲಿ ನಂಬಿಕೆ ಇಡುವುದರ ಮೂಲಕ ಪವಿತ್ರರಾದ ಜನರೊಂದಿಗೆ ಅವರು ಪಾಲು ಹೊಂದುವರು’ ಎಂದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತಿಯಾ ತೆಂಕಾ ಖರೆಪಾನ್ ಕಳ್ವುನ್ ಕಾಳ್ಕಾಕ್ನಾ ಉಜ್ಜೊಡಾತ್ ಯೆಯ್ ಸಾರ್ಕೆ ಅನಿ ಮ್ಹಾರ್ವಾಚ್ಯಾ ಅಧಿಕಾರಾಕ್ನಾ ಪರ್ತುನ್ ದೆವಾಕ್ಡೆ ಯೆಯ್ ಸಾರ್ಕೆ ಕರುಚೆ, ತನ್ನಾ ತೆಂಚೊ ಪಾಪ್ ಮಾಪಿ ಹೊತಾ, ಮಾಜ್ಯಾ ವರ್‍ತಿ ವಿಶ್ವಾಸ್ ಥವ್ತಲ್ಯಾ ಪವಿತ್ರ್ ಹೊಲ್ಲ್ಯಾ ಲೊಕಾಂಚ್ಯಾ ವಾಂಗ್ಡಾ ತೆನಿಬಿ ವಾಟೊ ಘೆತಾತ್, ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:18
90 ತಿಳಿವುಗಳ ಹೋಲಿಕೆ  

ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ದೇವರು ನಿಮ್ಮ ಮನೋನೇತ್ರಗಳನ್ನು ಬೆಳಗಿಸಲಿ ಎಂದು ಬೇಡಿಕೊಳ್ಳುತ್ತಿದ್ದೇನೆ. ಆಗ ಮಾತ್ರವೇ ನೀವು ದೇವರ ಕರೆಯ ನಿರೀಕ್ಷೆಯನ್ನೂ, ಪರಿಶುದ್ಧರಲ್ಲಿ ಅವರಿಗಿರುವ ವಾರಸುತನದ ಮಹಿಮೆಯನ್ನೂ ನೀವು ತಿಳಿದುಕೊಳ್ಳುವಿರಿ.


ನೀವು ಹಿಂದೊಮ್ಮೆ ಕತ್ತಲೆಯಾಗಿದ್ದಿರಿ. ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿದ್ದೀರಿ. ಬೆಳಕಿನ ಮಕ್ಕಳಾಗಿ ಬಾಳಿರಿ.


“ಆದಕಾರಣ ನಾನು ದೇವರಿಗೂ ಅವರ ಕೃಪಾವಾಕ್ಯಕ್ಕೂ ಈಗ ನಿಮ್ಮನ್ನು ಒಪ್ಪಿಸಿಕೊಡುತ್ತೇನೆ. ಆ ವಾಕ್ಯವು ನಿಮ್ಮಲ್ಲಿ ಭಕ್ತಿವೃದ್ಧಿ ಮಾಡಿ, ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಕೊಡಲು ಸಾಮರ್ಥ್ಯವುಳ್ಳದ್ದು.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.


ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವರು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ. ಅವರು ಜೀವದ ಬೆಳಕನ್ನು ಹೊಂದಿರುವರು,” ಎಂದು ಹೇಳಿದರು.


ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ವಾಸಿಸುವವರಿಗೆ ಪ್ರಕಾಶಿಸಿ, ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವಂತೆ ಮಾಡುವೆ.”


ಅವರು ತಮ್ಮ ಹೃದಯ ಕಠಿಣತ್ವದ ಅಜ್ಞಾನದಿಂದ ತಮ್ಮ ಕತ್ತಲು ಕವಿದ ತಿಳುವಳಿಕೆಯಲ್ಲಿ, ದೇವರ ಜೀವದಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡವರಾಗಿದ್ದಾರೆ.


ಆಗ, ಕುರುಡರ ಕಣ್ಣು ಕಾಣುವುದು. ಕಿವುಡರ ಕಿವಿಗಳು ಕೇಳಿಸುವುವು.


ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಲ್ಲದವರೊಂದಿಗೆ ಸೇರಿ ಒಂದಾಗಿ ಪಾಲುಗಾರರಾಗಬೇಡಿರಿ. ನೀತಿಗೂ ಅನೀತಿಗೂ ಸಮಾನವೆಲ್ಲಿ? ಅಥವಾ ಬೆಳಕಿಗೂ ಕತ್ತಲೆಗೂ ಅನ್ಯೋನ್ಯತೆಯೇನು?


ಈ ಲೋಕದ ದೇವರು ನಂಬದವರ ಮನಸ್ಸನ್ನು ಕುರುಡುಮಾಡಿರುತ್ತಾನೆ. ಆದ್ದರಿಂದ ದೇವರ ಸ್ವರೂಪವಾಗಿರುವ ಕ್ರಿಸ್ತ ಯೇಸುವಿನ ಸುವಾರ್ತೆಯ ಮಹಿಮೆಯ ಬೆಳಕನ್ನು ಅವರು ಕಾಣಲಾರರು.


ಪಾಪದಲ್ಲಿ ಮುಂದುವರೆಯುವವರು ಸೈತಾನನಿಗೆ ಸೇರಿದವರು. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ದೇವಪುತ್ರ ಯೇಸು ಸೈತಾನನ ಕೆಲಸಗಳನ್ನು ಲಯ ಮಾಡುವುದಕ್ಕೋಸ್ಕರವೇ ಪ್ರತ್ಯಕ್ಷರಾದರು.


ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.


ನಾವು ದೇವರ ಮಕ್ಕಳೆಂದೂ ಲೋಕವೆಲ್ಲವು ಕೆಡುಕನ ನಿಯಂತ್ರಣದಲ್ಲಿ ಇದೆ ಎಂದೂ ನಮಗೆ ಗೊತ್ತಿದೆ.


ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.


ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ನಮ್ಮ ಕರ್ತ ಯೇಸುವಿನಲ್ಲಿ ವಿಶ್ವಾಸವಿಡಬೇಕೆಂದು ಯೆಹೂದ್ಯರಿಗೂ ಗ್ರೀಕರಿಗೂ ಖಚಿತವಾಗಿ ಸಾಕ್ಷಿ ಹೇಳಿದ್ದೇನೆ.


ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವರೊಳಗೆ ಆತನ ಹೆಸರಿನಲ್ಲಿ ಪಶ್ಚಾತ್ತಾಪಪಟ್ಟು ಮತ್ತು ಪಾಪಗಳ ಕ್ಷಮಾಪಣೆ ಸಾರಬೇಕೆಂತಲೂ ಬರೆಯಲಾಗಿದೆ.


ಅಶುದ್ಧವಾದದ್ದು ಅದರಲ್ಲಿ ಸೇರುವುದಿಲ್ಲ. ಅಸಹ್ಯವಾದದ್ದನ್ನೂ ವಂಚಕವಾದದ್ದನ್ನೂ ನಡೆಸುವವನು ಅದರಲ್ಲಿ ಪ್ರವೇಶಿಸಲಾರನು. ಕುರಿಮರಿಯ ಜೀವ ಪುಸ್ತಕದಲ್ಲಿ ಯಾರ ಯಾರ ಹೆಸರುಗಳು ಬರೆದಿವೆಯೋ ಅವರು ಮಾತ್ರ ಸೇರುವರು.


ಏಕೆಂದರೆ, “ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ.” ಆದರೆ ಈಗ ನೀವು ತಿರುಗಿ ನಿಮ್ಮ ಆತ್ಮಗಳ ಕುರುಬ ಹಾಗೂ ಸಭಾಧ್ಯಕ್ಷರೂ ಆಗಿರುವ ಕ್ರಿಸ್ತ ಯೇಸುವಿನ ಬಳಿಗೆ ಬಂದಿದ್ದೀರಿ.


ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವರು, ದೇವರು ಇದ್ದಾರೆಂತಲೂ ತಮ್ಮನ್ನು ಜಾಗ್ರತೆಯಿಂದ ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾರೆಂತಲೂ ನಂಬಬೇಕು.


ಕರ್ತದೇವರು ನಮಗೆ ಆಜ್ಞಾಪಿಸಿದ್ದು ಇಂತಿದೆ: “ ‘ಭೂಲೋಕದ ಕಟ್ಟಕಡೆಯವರೆಗೆ ನೀನು ರಕ್ಷಣೆಯನ್ನು ತರುವಂತೆ ನಾನು ಯೆಹೂದ್ಯರಲ್ಲದವರಿಗೆ ನಿನ್ನನ್ನು ಬೆಳಕನ್ನಾಗಿ ನೇಮಿಸಿರುವೆನು.’ ”


ದೇವರು ಅವರಿಗೂ ನಮಗೂ ಮಧ್ಯದಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡದೆ, ವಿಶ್ವಾಸದ ಮೂಲಕ ಅವರ ಹೃದಯಗಳನ್ನು ಶುದ್ಧೀಕರಿಸಿದರು.


ಯೇಸು ಇಸ್ರಾಯೇಲಿಗೆ ಪಶ್ಚಾತ್ತಾಪವನ್ನೂ ಪಾಪಗಳ ಕ್ಷಮಾಪಣೆಯನ್ನೂ ಕೊಡಲು ಸಾಧ್ಯವಾಗುವಂತೆ ದೇವರು ಯೇಸುವನ್ನು ತಮ್ಮ ಬಲಗಡೆಯಲ್ಲಿ ಅಧಿಪತಿಯನ್ನಾಗಿಯೂ ರಕ್ಷಕನನ್ನಾಗಿಯೂ ಉನ್ನತಿಗೇರಿಸಿದ್ದಾರೆ.


ನಾನು ಈ ಲೋಕದಲ್ಲಿರುವಾಗ ಲೋಕದ ಬೆಳಕಾಗಿದ್ದೇನೆ,” ಎಂದರು.


ಆ ತೀರ್ಪು ಏನೆಂದರೆ: ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.


ಆ ದಿನದಲ್ಲಿ ಕಿವುಡರು ಗ್ರಂಥದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ, ಅಂಧಕಾರದೊಳಗಿಂದಲೂ ಕಾಣುವುವು.


ಪ್ರಿಯ ಮಕ್ಕಳೇ, ಕ್ರಿಸ್ತ ಯೇಸುವಿನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲಾಗಿರುವುದರಿಂದ ನಾನು ನಿಮಗೆ ಬರೆಯುತ್ತೇನೆ.


ಈ ನಿರೀಕ್ಷೆಯು ಲಯ, ಕಳಂಕ, ಕ್ಷಯಗಳಿಲ್ಲದ ಬಾಧ್ಯತೆಯಾಗಿದೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.


ನೀವು ಸತ್ಯದಿಂದ ಇವರನ್ನು ಸಮರ್ಪಿಸಿರಿ. ನಿಮ್ಮ ವಾಕ್ಯವೇ ಸತ್ಯವು.


ನೀನು ಜನರ ಪಾಪಕ್ಷಮಾಪಣೆಯ ಮೂಲಕ ರಕ್ಷಣೆ ಹೊಂದುವ ತಿಳುವಳಿಕೆಯನ್ನು ಕೊಡುವೆ,


ಕ್ರಿಸ್ತ ಯೇಸುವಿನ ದಾಸನೂ ಯಾಕೋಬನ ಸಹೋದರನೂ ಆಗಿರುವ ಯೂದನು, ತಂದೆಯಾದ ದೇವರಿಗೆ ಪ್ರಿಯರಾದವವರಿಗೂ ಕ್ರಿಸ್ತ ಯೇಸು ಸುರಕ್ಷತೆಯನ್ನೂ ಅವರ ಕರೆಯುವಿಕೆಯನ್ನೂ ಹೊಂದಿದವರಿಗೆ ಬರೆಯುವ ಪತ್ರ:


ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಏಕೆಂದರೆ ಕ್ರಿಸ್ತ ಯೇಸುವು ಒಂದೇ ಬಲಿ ಅರ್ಪಣೆಯಿಂದ ಪವಿತ್ರವಾಗುವವರನ್ನು ನಿರಂತರ ಪರಿಪೂರ್ಣರನ್ನಾಗಿ ಮಾಡಿದ್ದಾರೆ.


ಅಬ್ರಹಾಮನ ಆಶೀರ್ವಾದವು ಕ್ರಿಸ್ತ ಯೇಸುವಿನ ಮೂಲಕ ಯೆಹೂದ್ಯರಲ್ಲದವರಿಗೆ ಉಂಟಾಗಿ, ನಂಬಿಕೆಯ ಮೂಲಕ ವಾಗ್ದಾನದ ಪವಿತ್ರಾತ್ಮರನ್ನು ನಾವು ಪಡೆದುಕೊಳ್ಳುವುದಕ್ಕಾಗಿಯೇ ದೇವರು ನಮ್ಮನ್ನು ವಿಮೋಚಿಸಿದರು.


ತರುವಾಯ ಅವರು ಪವಿತ್ರ ವೇದಗಳನ್ನು ಅರ್ಥಮಾಡಿಕೊಳ್ಳುವಂತೆ ಯೇಸು ಅವರ ಬುದ್ಧಿಯನ್ನು ತೆರೆದರು.


ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡರಾದ ಜನರನ್ನು ಕರೆ.


ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡೆಸುವೆನು. ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ, ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವುದಿಲ್ಲ.


ಕತ್ತಲೆಯಲ್ಲಿ ನಡೆಯುವ ಈ ಜನರಿಗೆ ಮಹಾ ಬೆಳಕು ಕಾಣಿಸಿತು, ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಉದಯಿಸಿತು.


ನಿಮ್ಮ ನಿಯಮದೊಳಗಿನ ಅದ್ಭುತಗಳನ್ನು ಕಾಣುವಂತೆ ನನ್ನ ಕಣ್ಣುಗಳನ್ನು ತೆರೆಯಿರಿ.


ಈ ರೀತಿಯಾಗಿ, ಸೈತಾನನ ಚಿತ್ತವನ್ನು ನೆರವೇರಿಸಲು ಗುಲಾಮರಾಗಿರುವವರು, ಅವನ ಬಲೆಯಿಂದ ಬಿಡುಗಡೆಹೊಂದಿ ಸ್ವಸ್ಥಮನಸ್ಸುಳ್ಳವರಾಗಿ ತಪ್ಪಿಸಿಕೊಳ್ಳುವರು.


ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದ್ದೀರಿ. ಈ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಇದು ದೇವರ ದಾನವೇ.


ದೇವರ ಚಿತ್ತಾನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವ ಅವರ ಉದ್ದೇಶದ ಪ್ರಕಾರ ಕ್ರಿಸ್ತನಲ್ಲಿ ನಮ್ಮನ್ನು ಮೊದಲೇ ಆರಿಸಿಕೊಂಡರು.


ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.


“ಕರ್ತದೇವರ ಆತ್ಮರು ನನ್ನ ಮೇಲೆ ಇದ್ದಾರೆ, ಅವರು ನನ್ನನ್ನು ಬಡವರಿಗೆ ಸುವಾರ್ತೆ ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವುದಕ್ಕೂ, ಕುರುಡರಿಗೆ ದೃಷ್ಟಿ ಕೊಡುವುದಕ್ಕೂ, ಜಜ್ಜಿ ಹೋದವರನ್ನು ಬಿಡಿಸಿ ಕಳುಹಿಸುವುದಕ್ಕೂ,


ಅದು ಯೆಹೂದ್ಯರಲ್ಲದವರಿಗೆ ಪ್ರಕಟಣೆಯ ಬೆಳಕೂ, ನಿಮ್ಮ ಪ್ರಜೆಯಾದ ಇಸ್ರಾಯೇಲರ ಮಹಿಮೆಯೂ ಆಗಿದೆ.”


ಕತ್ತಲಲ್ಲಿ ವಾಸಿಸಿದ ಈ ಸ್ಥಳಗಳ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣ ಛಾಯೆಯ ಈ ಪ್ರದೇಶದಲ್ಲಿ ವಾಸಿಸುವವರಿಗೆ ಬೆಳಕು ಉದಯಿಸಿತು.”


ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ.


ಆತನೇ ಈಗ ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವಲ್ಲವೇ, ನನ್ನ ರಕ್ಷಣೆಯು ಭೂಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಸರ್ವಜನಾಂಗಗಳಿಗೂ ಬೆಳಕನ್ನಾಗಿ ಮಾಡುವೆನು.”


ಯೆಹೋವ ದೇವರು ಕುರುಡರ ಕಣ್ಣುಗಳನ್ನು ತೆರೆಯುತ್ತಾರೆ. ಅವರು ದೀನರನ್ನು ಎತ್ತುತ್ತಾರೆ. ನೀತಿವಂತರನ್ನು ಪ್ರೀತಿಸುತ್ತಾರೆ.


ಹೀಗೆ ಒಂದೇ ಸಾರಿ ಎಲ್ಲಾ ಕಾಲಕ್ಕೂ ಕ್ರಿಸ್ತ ಯೇಸು ತಮ್ಮ ದೇಹವನ್ನು ಸಮರ್ಪಿಸಿದ್ದರ ಮೂಲಕ ದೇವರ ಚಿತ್ತವನ್ನು ನೆರವೇರಿಸಿ, ನಮ್ಮನ್ನು ಶುದ್ಧರನ್ನಾಗಿ ಮಾಡಿದ್ದಾರೆ.


ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ.


ಆದ್ದರಿಂದ ಹೀಗೆ ಹೇಳಲಾಗಿದೆ: “ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”


ದೇವರಿಗೆ ಸೇರಿದವರಾದ ನಾವು ವಿಮೋಚನೆಯಾಗುವ ತನಕ ನಮ್ಮ ಸ್ವರ್ಗೀಯ ವಾರಸುತನವನ್ನು ಹೊಂದುವೆವು ಎಂಬುವುದಕ್ಕೆ ಈ ಪವಿತ್ರಾತ್ಮ ದೇವರೇ ನಮಗೆ ಹೊಣೆಯಾಗಿದ್ದಾರೆ. ದೇವರ ಮಹಿಮೆಯ ನಿಮಿತ್ಯವಾಗಿ ನಾವು ಅವರನ್ನು ಸ್ತುತಿಸೋಣ.


ದೇವರ ಕೃಪಾ ಐಶ್ವರ್ಯಕ್ಕೆ ಅನುಸಾರವಾಗಿ ಕ್ರಿಸ್ತನಲ್ಲಿ ನಮಗೆ ಅವರ ರಕ್ತದ ಮೂಲಕ ಪಾಪಗಳ ಕ್ಷಮಾಪಣೆಯಾಗಿ ವಿಮೋಚನೆಯಾಯಿತು.


ಇದೊಂದನ್ನು ಮಾತ್ರ ನಿಮ್ಮಿಂದ ತಿಳಿಯಬಯಸುತ್ತೇನೆ. ನೀವು ಪವಿತ್ರ ಆತ್ಮರನ್ನು ಹೊಂದಿದ್ದು ನಿಯಮದ ಕ್ರಿಯೆಯಿಂದಲೋ? ಇಲ್ಲವೆ ಕೇಳಿದ್ದನ್ನು ನಂಬಿದ್ದರಿಂದಲೋ?


ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ.


ಕ್ರಿಸ್ತ ಯೇಸುವಿನಲ್ಲಿ ಪ್ರತ್ಯೇಕವಾಗಿ, ಪವಿತ್ರರಾಗುವುದಕ್ಕೆ ಕರೆಹೊಂದಿದ ಕೊರಿಂಥದಲ್ಲಿರುವ ದೇವರ ಸಭೆಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟ ಸಕಲ ಜನರಿಗೂ ಬರೆಯುವ ಪತ್ರ:


ನಾವು ಈಗ ಮಕ್ಕಳಾಗಿರುವುದಾದರೆ, ಬಾಧ್ಯರಾಗಿರುತ್ತೇವೆ; ದೇವರಿಗೆ ಬಾಧ್ಯರು ಮತ್ತು ಕ್ರಿಸ್ತ ಯೇಸುವಿನೊಂದಿಗೆ ಸಹಬಾಧ್ಯರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನ ಶ್ರಮೆಗಳಲ್ಲಿ ನಿಜವಾಗಿಯೂ ಪಾಲುಗಾರರಾಗಿದ್ದರೆ, ಅವರ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ಕ್ರಿಸ್ತ ಯೇಸು ಶ್ರಮೆಹೊಂದಿ, ಸತ್ತವರೊಳಗಿಂದ ಜೀವಂತರಾಗಿ ಮೊದಲು ಎದ್ದು ತಮ್ಮ ಜನರಿಗೂ ಯೆಹೂದ್ಯರಲ್ಲದವರಿಗೂ ಬೆಳಕಿನ ಸಂದೇಶವನ್ನು ತರುವರು ಎಂದು ಪ್ರವಾದಿಗಳು ಮತ್ತು ಮೋಶೆಯು ಹೇಳಿದ್ದಾರೆ,” ಎಂದನು.


ಯೇಸುವಿನಲ್ಲಿ ನಂಬಿಕೆಯನ್ನಿಡುವ ಪ್ರತಿಯೊಬ್ಬನು ಅವರ ಹೆಸರಿನ ಮುಖಾಂತರ ಪಾಪಗಳ ಕ್ಷಮಾಪಣೆ ಹೊಂದುವನು ಎಂದು ಅವರ ಬಗ್ಗೆ ಎಲ್ಲಾ ಪ್ರವಾದಿಗಳು ಸಾಕ್ಷಿಕೊಟ್ಟಿದ್ದಾರೆ,” ಎಂದನು.


ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.


ಯೇಸು, “ಕುರುಡರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನಾನು ನ್ಯಾಯತೀರ್ಪು ಮಾಡುವುದಕ್ಕಾಗಿ ಈ ಲೋಕಕ್ಕೆ ಬಂದಿದ್ದೇನೆ,” ಎಂದರು.


ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು,” ಎಂದರು.


ಯೇಸು ಆಕೆಗೆ, “ದೇವರ ವರವನ್ನೂ, ‘ಕುಡಿಯುವುದಕ್ಕೆ ನೀರು ಕೊಡು,’ ಎಂದು ಕೇಳುವ ನಾನು ಯಾರೆಂಬುದನ್ನೂ ನೀನು ತಿಳಿದಿದ್ದರೆ ನೀನೇ ನನ್ನಿಂದ ನೀರನ್ನು ಕೇಳುತ್ತಿದ್ದೆ. ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆನು,” ಎಂದು ಹೇಳಿದರು.


ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.


ಯೇಸು ಅವನಿಗೆ, “ಸೈತಾನನೇ, ತೊಲಗು. ಏಕೆಂದರೆ, ‘ನಿನ್ನ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.


“ಆದ್ದರಿಂದ ಅಗ್ರಿಪ್ಪ ರಾಜರೇ, ಆ ಪರಲೋಕದ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.


ನಿಷ್ಪ್ರಯೋಜಕವಾದ ಕತ್ತಲೆಯ ಕಾರ್ಯಗಳೊಂದಿಗೆ ಪಾಲುಗಾರರಾಗಿರದೆ ಅವುಗಳನ್ನು ಬೆಳಕಿಗೆ ತನ್ನಿರಿ.


ಏಕೆಂದರೆ, ನಾವು ಹೋರಾಡುವುದು ನರಮಾನವರೊಂದಿಗಲ್ಲ, ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಗಳ ಮೇಲೆಯೂ ಆಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು