Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:19 - ಕನ್ನಡ ಸಮಕಾಲಿಕ ಅನುವಾದ

19 “ಆದ್ದರಿಂದ ಅಗ್ರಿಪ್ಪ ರಾಜರೇ, ಆ ಪರಲೋಕದ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ ಮೊದಲು ದಮಸ್ಕದವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಇಂತಿರಲು, ಅಗ್ರಿಪ್ಪ ರಾಜರೇ, ನನಗೆ ಲಭಿಸಿದ ಈ ಸ್ವರ್ಗೀಯ ದರ್ಶನಕ್ಕೆ ಅವಿಧೇಯನಾಗಿ ನಡೆಯಲು ನನ್ನಿಂದಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪೌಲನು ಮಾತನ್ನು ಮುಂದುವರಿಸಿ ಹೀಗೆಂದನು: “ರಾಜನಾದ ಅಗ್ರಿಪ್ಪನೇ, ನಾನು ಪರಲೋಕದ ಈ ದರ್ಶನವನ್ನು ಕಂಡ ಮೇಲೆ ಅದಕ್ಕೆ ವಿಧೇಯನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಕಶ್ಯಾಕ್ ಮಟ್ಲ್ಯಾರ್, ಪಾವ್ಲು ಬೊಲುನ್ಗೆತ್ ರಾತಾನಾ ಅಶೆ ಸಾಂಗ್ಲ್ಯಾನ್, ಅಗ್ರಿಪ್ಪ್ ರಾಜಾ, ಮಾಕಾ ಸರ್‍ಗಾಚೆ ದರ್ಶನ್ ಗಾವ್ಲೆ, ತೆ ಬಗಲ್ಲ್ಯಾ ಮಾನಾ ತೆಕಾ ಅವ್ಮಾನ್ ಕರುಕ್ನಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:19
13 ತಿಳಿವುಗಳ ಹೋಲಿಕೆ  

ಸಾರ್ವಭೌಮ ಯೆಹೋವ ದೇವರು ನನ್ನ ಕಿವಿಯನ್ನು ತೆರೆದಿದ್ದಾರೆ, ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ.


ದೇವರು ತಮ್ಮ ಪುತ್ರನನ್ನು ನನ್ನಲ್ಲಿ ಪ್ರಕಟಿಸಿ, ಯೆಹೂದ್ಯರಲ್ಲದವರಲ್ಲಿ ಸುವಾರ್ತೆಯನ್ನು ಸಾರಬೇಕೆಂದು ಮನಸ್ಸು ಮಾಡಿದರು. ಕೂಡಲೇ ದೇವರ ಪುತ್ರ ಆಗಿರುವವರ ಪ್ರಕಟಣೆಯ ತರುವಾಯ ನಾನು ಯಾವ ಮನುಷ್ಯರನ್ನು ವಿಚಾರಿಸಲಿಲ್ಲ.


“ಆಗ ನಾನು ಆತನನ್ನು ಕುರಿತು ಏನೂ ಹೇಳುವುದಿಲ್ಲ. ಆತನ ಹೆಸರಿನಲ್ಲಿ ಇನ್ನು ಮಾತನಾಡುವುದೇ ಇಲ್ಲ,” ಎಂದು ಅಂದುಕೊಂಡೆನು. ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲಾಗಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು. ಬಿಗಿ ಹಿಡಿದು ದಣಿದೆನು. ನನ್ನಿಂದ ಆಗದೆ ಹೋಯಿತು.


ಆದರೆ ಯೋನನು ಯೆಹೋವ ದೇವರ ಸಮ್ಮುಖದಿಂದ ತಾರ್ಷೀಷಿಗೆ ಓಡಿಹೋಗುವುದಕ್ಕೆ ಎದ್ದು, ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು, ಪ್ರಯಾಣದ ದರವನ್ನು ಕೊಟ್ಟು, ಯೆಹೋವ ದೇವರ ಸಮ್ಮುಖದಿಂದ ತಪ್ಪಿಸಿಕೊಂಡು ಹೋಗಲು, ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ತಾರ್ಷೀಷಿಗೆ ಹೋಗುವುದಕ್ಕೆ ಅದನ್ನು ಹತ್ತಿದನು.


ಹೀಗೆ ದೇವರಾತ್ಮರು ನನ್ನನ್ನು ಎತ್ತಿಕೊಂಡು ಹೋದರು. ನಾನು ಕಹಿತನ ಮತ್ತು ಕೋಪದ ಆತ್ಮದಿಂದ ಮುನ್ನಡೆದೆನು. ಆದರೆ ಯೆಹೋವ ದೇವರ ಕೈ ನನ್ನ ಮೇಲೆ ಬಲವಾಗಿತ್ತು.


“ಅಗ್ರಿಪ್ಪ ರಾಜರೇ, ಯೆಹೂದ್ಯರು ಮಾಡಿದ ಎಲ್ಲಾ ಆಪಾದನೆಗಳಿಗೆ ವಿರುದ್ಧವಾಗಿ ಇಂದು ನನ್ನ ಪ್ರತಿವಾದ ಮಾಡಲು ತಮ್ಮ ಎದುರಿನಲ್ಲಿರುವುದು ನನ್ನ ಭಾಗ್ಯವೆಂದೇ ತಿಳಿಯುತ್ತೇನೆ.


ಆಗ, “ಯಾರನ್ನು ಕಳುಹಿಸಲಿ, ಯಾರು ನಮಗೋಸ್ಕರ ಹೋಗುವರು?” ಎಂಬ ಯೆಹೋವ ದೇವರ ನುಡಿಯನ್ನು ನಾನು ಕೇಳಿ, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿರಿ,” ಎಂದೆನು.


ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.


ಆದರೆ ಮೊದಲು ದಮಸ್ಕದಲ್ಲಿದ್ದವರಿಗೂ ಆಮೇಲೆ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಗಳಲ್ಲಿ ಇದ್ದವರಿಗೂ ಯೆಹೂದ್ಯರಲ್ಲದವರಿಗೂ ನಾನು ಬೋಧಿಸಿದೆನು. ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು, ಪಶ್ಚಾತ್ತಾಪಕ್ಕೆ ಯೋಗ್ಯ ಕೃತ್ಯಗಳನ್ನು ನಡೆಸಬೇಕೆಂದು ನಾನು ಘೋಷಿಸಿದೆನು.


ನಾನು ಆಜ್ಞೆಯನ್ನು ಹೊಂದಿದ ಪ್ರಕಾರ ಮಾಡಿದೆನು. ನನ್ನ ಸರಕುಗಳನ್ನು ಹಗಲಿನಲ್ಲಿಯೇ ಹೊರಗೆ ತಂದೆನು. ಸಂಜೆಯಲ್ಲಿ ನನ್ನ ಕೈಯಿಂದಲೇ ಗೋಡೆಯನ್ನು ಕೊರೆದೆನು. ಅದನ್ನು ನಾನು ಮುಸ್ಸಂಜೆಯಲ್ಲಿ ಹೊರಗೆ ತಂದು, ಅವರ ಕಣ್ಣುಗಳ ಮುಂದೆ ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು